ETV Bharat / state

ಘನತ್ಯಾಜ್ಯ ನಿರ್ವಹಣೆ ಕುರಿತು ಶಿವಮೊಗ್ಗದಲ್ಲಿ ನ್ಯಾ. ಸುಭಾಷ್ ಅಡಿ ಸಭೆ

ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್‍ಗಳು ಘನತ್ಯಾಜ್ಯ ನಿರ್ವಹಣೆ ಕುರಿತು, ಸಮಗ್ರವಾದ ಬೈಲಾ ಮತ್ತು ಮೈಕ್ರೋ ಪ್ಲಾನ್ ರೂಪಿಸಬೇಕೆಂದು ರಾಷ್ಟ್ರೀಯ ಹಸಿರು ಪೀಠದ ಅಧ್ಯಕ್ಷ ನ್ಯಾ. ಸುಭಾಷ್ ಅಡಿ ಸೂಚನೆ ನೀಡಿದರು.

author img

By

Published : Nov 9, 2019, 8:21 PM IST

ಘನತ್ಯಾಜ್ಯ ನಿರ್ವಹಣೆ ಕುರಿತು ಶಿವಮೊಗ್ಗದಲ್ಲಿ ಸಭೆ

ಶಿವಮೊಗ್ಗ: ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್‍ಗಳು ಘನತ್ಯಾಜ್ಯ ನಿರ್ವಹಣೆ ಕುರಿತು, ಸಮಗ್ರವಾದ ಬೈಲಾ ಮತ್ತು ಮೈಕ್ರೋ ಪ್ಲಾನ್ ರೂಪಿಸಬೇಕೆಂದು ರಾಷ್ಟ್ರೀಯ ಹಸಿರು ಪೀಠದ ಅಧ್ಯಕ್ಷ ನ್ಯಾ. ಸುಭಾಷ್ ಅಡಿ ಸೂಚನೆ ನೀಡಿದರು. ಘನತ್ಯಾಜ್ಯ ನಿರ್ವಹಣೆ ಹಾಗೂ ರಾಷ್ಟ್ರೀಯ ಹಸಿರು ಪೀಠದ ಆದೇಶಗಳ ಅನುಷ್ಠಾನದ ಕುರಿತು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಮನೆ ಮನೆಯಿಂದ ಕಸ ಸಂಗ್ರಹಣೆ ಹಾಗೂ ಮೂಲದಲ್ಲಿಯೇ ಹಸಿಕಸ ಮತ್ತು ಒಣಕಸ ಪ್ರತ್ಯೇಕಿಸುವಿಕೆಯನ್ನು, ಶೇಕಡಾ 100ರಷ್ಟು ಕಾನೂನು ಪ್ರಕಾರ ಮಾಡಬೇಕಾಗಿದೆ ಎಂದರು. ಇದಕ್ಕಾಗಿ ಸೂಕ್ತ ಬೈಲಾವನ್ನು ಪ್ರತಿಯೊಂದು ಸ್ಥಳೀಯ ಸಂಸ್ಥೆಗಳು ರೂಪಿಸಬೇಕೆಂದು ಹೇಳಿದರು. ಕಸ ಸಂಗ್ರಹಣೆ ವಾಹನ, ಮಾನವ ಸಂಪನ್ಮೂಲ, ಕಸ ವಿಲೇವಾರಿ ಘಟಕ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಎಲ್ಲಾ ಸ್ಥಳೀಯ ಸಂಸ್ಥೆಗಳು ಹೊಂದಿರಬೇಕು. ಕಸ ಸಂಗ್ರಹಣಾ ವಾಹನಕ್ಕೆ ಜಿಪಿಎಸ್ ಮತ್ತು ಜಿಯೋ ಫೆನ್ಸಿಂಗ್ ಅಳವಡಿಸಬೇಕು ಎಂದು ಹೇಳಿದರು. ಹಾಗೂ ಪ್ರತಿ ಮನೆಯಲ್ಲಿ ತ್ಯಾಜ್ಯ ಸಂಗ್ರಹಿಸಿರುವ ಕುರಿತು ಖಾತ್ರಿಪಡಿಸಲು ಕಾರ್ಡ್ ಸ್ಕ್ಯಾನಿಂಗ್ ವ್ಯವಸ್ಥೆ ಇರಬೇಕು ಎಂದು ತಿಳಿಸಿದರು.

ಘನತ್ಯಾಜ್ಯ ನಿರ್ವಹಣೆ ಕುರಿತು ಶಿವಮೊಗ್ಗದಲ್ಲಿ ಸಭೆ

ಶಿವಮೊಗ್ಗದಲ್ಲಿ 35 ವಾರ್ಡ್‍ಗಳ ಪೈಕಿ 30 ವಾರ್ಡ್‍ಗಳಲ್ಲಿ ಕಸ ನೇರವಾಗಿ ಸಂಗ್ರಹಿಸಲಾಗುತ್ತಿದ್ದು, 6 ವಾರ್ಡ್‍ಗಳಲ್ಲಿ ಮೂಲದಲ್ಲಿಯೇ ವಿಂಗಡನೆ ಮಾಡಲಾಗುತ್ತಿದೆ ಎಂದರು. ಇನ್ನುಳಿದ ಎಲ್ಲಾ ವಾರ್ಡ್‍ಗಳಲ್ಲಿ ಒಂದುವರೆ ತಿಂಗಳ ಒಳಗಾಗಿ ಮೂಲದಲ್ಲಿಯೇ ಕಸ ವಿಂಗಡನೆ ಮಾಡುವುದಾಗಿ ಅಧಿಕಾರಿಗಳು ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಶಿವಮೊಗ್ಗ: ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್‍ಗಳು ಘನತ್ಯಾಜ್ಯ ನಿರ್ವಹಣೆ ಕುರಿತು, ಸಮಗ್ರವಾದ ಬೈಲಾ ಮತ್ತು ಮೈಕ್ರೋ ಪ್ಲಾನ್ ರೂಪಿಸಬೇಕೆಂದು ರಾಷ್ಟ್ರೀಯ ಹಸಿರು ಪೀಠದ ಅಧ್ಯಕ್ಷ ನ್ಯಾ. ಸುಭಾಷ್ ಅಡಿ ಸೂಚನೆ ನೀಡಿದರು. ಘನತ್ಯಾಜ್ಯ ನಿರ್ವಹಣೆ ಹಾಗೂ ರಾಷ್ಟ್ರೀಯ ಹಸಿರು ಪೀಠದ ಆದೇಶಗಳ ಅನುಷ್ಠಾನದ ಕುರಿತು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಮನೆ ಮನೆಯಿಂದ ಕಸ ಸಂಗ್ರಹಣೆ ಹಾಗೂ ಮೂಲದಲ್ಲಿಯೇ ಹಸಿಕಸ ಮತ್ತು ಒಣಕಸ ಪ್ರತ್ಯೇಕಿಸುವಿಕೆಯನ್ನು, ಶೇಕಡಾ 100ರಷ್ಟು ಕಾನೂನು ಪ್ರಕಾರ ಮಾಡಬೇಕಾಗಿದೆ ಎಂದರು. ಇದಕ್ಕಾಗಿ ಸೂಕ್ತ ಬೈಲಾವನ್ನು ಪ್ರತಿಯೊಂದು ಸ್ಥಳೀಯ ಸಂಸ್ಥೆಗಳು ರೂಪಿಸಬೇಕೆಂದು ಹೇಳಿದರು. ಕಸ ಸಂಗ್ರಹಣೆ ವಾಹನ, ಮಾನವ ಸಂಪನ್ಮೂಲ, ಕಸ ವಿಲೇವಾರಿ ಘಟಕ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಎಲ್ಲಾ ಸ್ಥಳೀಯ ಸಂಸ್ಥೆಗಳು ಹೊಂದಿರಬೇಕು. ಕಸ ಸಂಗ್ರಹಣಾ ವಾಹನಕ್ಕೆ ಜಿಪಿಎಸ್ ಮತ್ತು ಜಿಯೋ ಫೆನ್ಸಿಂಗ್ ಅಳವಡಿಸಬೇಕು ಎಂದು ಹೇಳಿದರು. ಹಾಗೂ ಪ್ರತಿ ಮನೆಯಲ್ಲಿ ತ್ಯಾಜ್ಯ ಸಂಗ್ರಹಿಸಿರುವ ಕುರಿತು ಖಾತ್ರಿಪಡಿಸಲು ಕಾರ್ಡ್ ಸ್ಕ್ಯಾನಿಂಗ್ ವ್ಯವಸ್ಥೆ ಇರಬೇಕು ಎಂದು ತಿಳಿಸಿದರು.

ಘನತ್ಯಾಜ್ಯ ನಿರ್ವಹಣೆ ಕುರಿತು ಶಿವಮೊಗ್ಗದಲ್ಲಿ ಸಭೆ

ಶಿವಮೊಗ್ಗದಲ್ಲಿ 35 ವಾರ್ಡ್‍ಗಳ ಪೈಕಿ 30 ವಾರ್ಡ್‍ಗಳಲ್ಲಿ ಕಸ ನೇರವಾಗಿ ಸಂಗ್ರಹಿಸಲಾಗುತ್ತಿದ್ದು, 6 ವಾರ್ಡ್‍ಗಳಲ್ಲಿ ಮೂಲದಲ್ಲಿಯೇ ವಿಂಗಡನೆ ಮಾಡಲಾಗುತ್ತಿದೆ ಎಂದರು. ಇನ್ನುಳಿದ ಎಲ್ಲಾ ವಾರ್ಡ್‍ಗಳಲ್ಲಿ ಒಂದುವರೆ ತಿಂಗಳ ಒಳಗಾಗಿ ಮೂಲದಲ್ಲಿಯೇ ಕಸ ವಿಂಗಡನೆ ಮಾಡುವುದಾಗಿ ಅಧಿಕಾರಿಗಳು ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು.

Intro:ಶಿವಮೊಗ್ಗ,

ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟಿನಿಂದ ಜಾರಿಗೆ ಆದೇಶ
ಘನತ್ಯಾಜ್ಯ ನಿರ್ವಹಣೆಗೆ ಮೈಕ್ರೋ ಯೋಜನೆ ಮತ್ತು ಬೈಲಾ ರೂಪಿಸಿ: ನ್ಯಾ.ಸುಭಾಷ್ ಅಡಿ

ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್‍ಗಳು ಘನತ್ಯಾಜ್ಯ ನಿರ್ವಹಣೆ ಕುರಿತು ಸಮಗ್ರವಾದ ಬೈಲಾ ಮತ್ತು ಮೈಕ್ರೋ ಪ್ಲಾನ್ ರೂಪಿಸಬೇಕು ಎಂದು ರಾಷ್ಟ್ರೀಯ ಹಸಿರು ಪೀಠದ ಅಧ್ಯಕ್ಷ ನ್ಯಾ.ಸುಭಾಷ್ ಅಡಿ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಘನತ್ಯಾಜ್ಯ ನಿರ್ವಹಣೆ ಕುರಿತು ರಾಷ್ಟ್ರೀಯ ಹಸಿರು ಪೀಠದ ಆದೇಶಗಳ ಅನುಷ್ಟಾನ ಕುರಿತು ಅಧಿಕಾರಿಗಳ ಸಭೆ ನಡೆಸಿದರು.

ಮನೆ ಮನೆಯಿಂದ ಕಸ ಸಂಗ್ರಹಣೆ, ಮೂಲದಲ್ಲೇ ಹಸಿಕಸ ಮತ್ತು ಒಣಕಸ ಪ್ರತ್ಯೇಕಿಸುವಿಕೆ ಕಾರ್ಯವನ್ನು ಶೇ.100ರಷ್ಟು ಕಾನೂನು ಪ್ರಕಾರ ಮಾಡಬೇಕಾಗಿದೆ. ಇದಕ್ಕಾಗಿ ಸೂಕ್ತ ಬೈಲಾ ಪ್ರತಿಯೊಂದು ಸ್ಥಳೀಯ ಸಂಸ್ಥೆಗಳು ರೂಪಿಸಬೇಕು. ಕಸ ಸಂಗ್ರಹಣೆ ವಾಹನ, ಮಾನವ ಸಂಪನ್ಮೂಲ, ಕಸ ವಿಲೇವಾರಿ ಘಟಕ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಎಲ್ಲಾ ಸ್ಥಳೀಯ ಸಂಸ್ಥೆಗಳು ಹೊಂದಿರಬೇಕು. ಎಲ್ಲಾ ಕಸ ಸಂಗ್ರಹಣಾ ವಾಹನಕ್ಕೆ ಜಿಪಿಎಸ್ ಮತ್ತು ಜಿಯೋ ಫೆನ್ಸಿಂಗ್ ಅಳವಡಿಸಬೇಕು. ಪ್ರತಿ ಮನೆಯಲ್ಲಿ ತ್ಯಾಜ್ಯ ಸಂಗ್ರಹಿಸಿರುವ ಕುರಿತು ಖಾತ್ರಿಪಡಿಸಲು ಕಾರ್ಡ್ ಸ್ಕ್ಯಾನಿಂಗ್ ವ್ಯವಸ್ಥೆ ಇರಬೇಕು ಎಂದು ಹೇಳಿದರು.

ಸಭೆಯ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರತಿನಿತ್ಯ ಒಟ್ಟು 9ನಗರ ಸ್ಥಳೀಯ ಸಂಸ್ಥೆಗಳಲ್ಲಿ ಒಟ್ಟು 293.30 ಟನ್ ಕಸವನ್ನು ಸಂಗ್ರಹಿಸಲಾಗುತ್ತಿದ್ದು, ಇದರಲ್ಲಿ 159.25ಟನ್ ಕಸವನ್ನು ಘನತ್ಯಾಜ್ಯ ನಿರ್ವಹಣೆ ಮಾರ್ಗಸೂಚಿ ಪ್ರಕಾರ ವಿಲೇವಾರಿ ಮಾಡಲಾಗುತ್ತಿದೆ. ಒಟ್ಟು 185ವಾರ್ಡ್‍ಗಳಲ್ಲಿ ಕಸವನ್ನು ಮನೆಗಳಿಂದ ಸಂಗ್ರಹಿಸಲಾಗುತ್ತಿದ್ದು, 148ವಾರ್ಡ್‍ಗಳಲ್ಲಿ ಕಸವನ್ನು ಮೂಲದಲ್ಲಿಯೇ ವಿಂಗಡನೆ ಮಾಡಲಾಗುತ್ತಿದೆ. ವಾಹನ ಖರೀದಿ ಇತ್ಯಾದಿ ಮೂಲಸೌಕರ್ಯ ಕಲ್ಪಿಸಲು 53.21 ಕೋಟಿ ಮೊತ್ತಕ್ಕೆ ಡಿಪಿಆರ್ ಸಿದ್ಧಪಡಿಸಲಾಗಿದೆ. ಶಿವಮೊಗ್ಗದಲ್ಲಿ 35ವಾರ್ಡ್‍ಗಳ ಪೈಕಿ 30ವಾರ್ಡ್‍ಗಳಲ್ಲಿ ಕಸ ನೇರವಾಗಿ ಸಂಗ್ರಹಿಸಲಾಗುತ್ತಿದ್ದು, 6ವಾರ್ಡ್‍ಗಳಲ್ಲಿ ಮೂಲದಲ್ಲಿಯೇ ವಿಂಗಡನೆ ಮಾಡಲಾಗುತ್ತಿದೆ. ಇನ್ನುಳಿದ ಎಲ್ಲಾ ವಾರ್ಡ್‍ಗಳಲ್ಲಿ ಒಂದುವರೆ ತಿಂಗಳ ಒಳಗಾಗಿ ಮೂಲದಲ್ಲಿಯೇ ಕಸ ವಿಂಗಡನೆ ಮಾಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗ Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.