ETV Bharat / state

ಖಾಲಿ ಇರುವ ಸಚಿವ ಸ್ಥಾನ ತುಂಬುವ ಕುರಿತು ವರಿಷ್ಠರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ: ಕೆ. ಎಸ್. ಈಶ್ವರಪ್ಪ

ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆಯ ಪ್ರಶ್ನೆಯೇ ಇಲ್ಲ. ಅವರು ಉತ್ತಮವಾಗಿ ಕೆಲಸ ಮಾಡ್ತಾ ಇದ್ದಾರೆ. ಸಚಿವ ಸಂಪುಟದಲ್ಲಿ ಸ್ಥಾನ ಖಾಲಿ ಇದೆ. ಅದಕ್ಕೆ ಚರ್ಚೆ ನಡೆಯುತ್ತಿದೆ. ರಾಜ್ಯಾಧ್ಯಕ್ಷರ ಸ್ಥಾನ ಖಾಲಿ ಇಲ್ಲ ಎಂದು ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೆ. ಎಸ್ ಈಶ್ವರಪ್ಪ ತಿಳಿಸಿದ್ದಾರೆ.

author img

By

Published : Jan 24, 2022, 4:48 PM IST

Updated : Jan 24, 2022, 5:35 PM IST

k-s-eshwarappa
ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೆ. ಎಸ್ ಈಶ್ವರಪ್ಪ

ಶಿವಮೊಗ್ಗ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸಚಿವ ಸ್ಥಾನ ತುಂಬುವ ಕುರಿತು ಪಕ್ಷದ ವರಿಷ್ಠರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಖಾತೆ ಸಚಿವ ಕೆ. ಎಸ್ ಈಶ್ವರಪ್ಪ ತಿಳಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕ್ಯಾಬಿನೆಟ್ ವಿಸ್ತರಣೆ ಕುರಿತು ಈಗ ಚರ್ಚೆ ನಡೆಯುತ್ತಿರುವುದು ಸ್ವಾಭಾವಿಕ. ಸದ್ಯ ನಾಲ್ಕು ಪೋಸ್ಟ್ ಖಾಲಿ ಇವೆ. ಚುನಾವಣೆಗೆ ಒಂದು ವರ್ಷ ಮೂರು ಬಾಕಿಯಿದೆ. ರಾಷ್ಟ್ರೀಯ ನಾಯಕರು ಈ ಕುರಿತು ಚರ್ಚೆ ಮಾಡಿ, ಯಾರಿಗೆ ಯಾವ ಸ್ಥಾನ ಕೊಟ್ಟರೆ ಒಳ್ಳೆಯದು ಎಂದು ಚಿಂತನೆ ಮಾಡ್ತಾರೆ‌ ಎಂದರು.

ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೆ. ಎಸ್ ಈಶ್ವರಪ್ಪ ಮಾತನಾಡಿದರು

ರಾಜ್ಯದ ಹಿತದೃಷ್ಟಿ, ಜಿಲ್ಲೆ, ಎಲ್ಲಾ ಸಮಾಜವನ್ನು ಪರಿಗಣಿಸಿ ಈ ನಾಲ್ಕು ಸ್ಥಾನಗಳನ್ನು ತುಂಬ್ತಾರೆ. ವರಿಷ್ಠರ ತೀರ್ಮಾನದ ಕುರಿತು ಯಾವುದೇ ಗೊಂದಲ ಇಲ್ಲ. ಒಂದು ಹುದ್ದೆ ಇದ್ದಾಗ ರಾಜಕೀಯ ಆಕಾಂಕ್ಷಿಗಳು ಸಹ ಇರೋದು ಸ್ವಾಭಾವಿಕವಾಗಿದೆ.

ನಾನು ಮಂತ್ರಿ ಅಗ್ಬೇಕು ಅಂತ ಎಲ್ಲಾ ಎಂಎಲ್ಎ, ಎಂಎಲ್ಸಿ ಯೋಚನೆ ಮಾಡ್ತಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ. ಕೇಂದ್ರದ ನಾಯಕರು ಯಾರಿಗೆ ಘೋಷಣೆ ಮಾಡ್ತಾರೋ ಅವರು ಒಪ್ಕೋತ್ತಾರೆ. ಉಳಿದ ಬಿಜೆಪಿ ನಾಯಕರು ಅವರಿಗೆ ಸಹಕಾರ ಕೊಡ್ತಾರೆ. ನಮ್ಮ ಪಕ್ಷದಲ್ಲಿ ಹಿಂದಿನಿಂದಲೂ ಅದೇ ನಡೆದುಕೊಂಡು ಬಂದಿದೆ. ಮುಂದೆ ಕೂಡ ತುಂಬಾ ಚೆನ್ನಾಗಿ ನಡೆಯುತ್ತೆ ಎಂದರು.

ರಾಜ್ಯದ ಅಧ್ಯಕ್ಷರ ಬದಲಾವಣೆ ಚರ್ಚೆ ಬಿಲ್​​ಕುಲ್ ಇಲ್ಲ.. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಪ್ರಶ್ನೆಯೇ ಇಲ್ಲ. ಅವರು ಉತ್ತಮವಾಗಿ ಕೆಲಸ ಮಾಡ್ತಾ ಇದ್ದಾರೆ. ಸಚಿವ ಸಂಪುಟದಲ್ಲಿ ಸ್ಥಾನ ಖಾಲಿ ಇರುವುದರಿಂದ ಅದಕ್ಕೆ ಚರ್ಚೆ ಮಾಡ್ತಾರೆ. ರಾಜ್ಯಾಧ್ಯಕ್ಷರ ಸ್ಥಾನ ಖಾಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆಯ ಪ್ರಶ್ನೆಯೇ ಉದ್ಭವವಾಗಲ್ಲ. ಮುಂದಿನ ಚುನಾವಣೆ ದೃಷ್ಟಿಯಿಂದ ನಳಿನ್​ ಕುಮಾರ್​ ಕಟೀಲ್ ಅವರು ಕೆಲಸ ಮಾಡ್ತಿದ್ದಾರೆ. ಬೂತ್ ಹಾಗೂ ಪೇಜ್ ಮಟ್ಟದ ಕಮಿಟಿಯನ್ನು ಸಹ ಮಾಡಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಎಲ್ಲಾ ಚುನಾವಣೆಯಲ್ಲೂ ಅವರು ಅಧ್ಯಕ್ಷರಾದ ಮೇಲೆ ಗೆದ್ದಿದ್ದೇವೆ. ಉಪಚುನಾವಣೆ, ಗ್ರಾ. ಪಂ ಚುನಾವಣೆ, ಪಾಲಿಕೆ ಚುನಾವಣೆ ಹಾಗು ಎಂಎಲ್ಸಿ ಚುನಾವಣೆಯಲ್ಲಿ ಗೆದ್ದಿದ್ದೇವೆ. ಹೀಗೆ ಹಲವು ಚುನಾವಣೆಯಲ್ಲಿ ಉತ್ತಮ ಸಾಧನೆಯನ್ನು, ಬಹುಮತವನ್ನು ಬಿಜೆಪಿ ಪಡೆದಿದೆ. ನಳೀನ್ ಕುಮಾರ್ ಸಂಘಟನಾ ಚತುರ. ಒಳ್ಳೆಯ ಕೆಲಸ ಮಾಡ್ತಿದ್ದಾರೆ. ಬದಲಾವಣೆಯ ಪ್ರಶ್ನೆ ಇಲ್ಲ ಎಂದರು.

ಪಕ್ಷ ಏನು ಜವಾಬ್ದಾರಿ ಕೊಟ್ಟರೂ ಹಿಂದಿನಿಂದಲೂ ಮಾಡಿಕೊಂಡು ಬಂದಿದ್ದೇನೆ. ಈಗ ಮಂತ್ರಿಯಾಗು ಎಂದರು, ಮಂತ್ರಿ ಆಗಿದ್ದೀನಿ. ಹಿಂದೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡು ಅಂದಾಗ ಕೊಟ್ಟು, ರಾಜ್ಯಾಧ್ಯಕ್ಷ ಸಹ ಆಗಿದ್ದೇನೆ. ಈಗಲೂ ಸಹ ಕೇಂದ್ರ ಹಾಗೂ ರಾಜ್ಯದ ನಾಯಕರು, ಪರಿವಾರದವರು ಹೇಳಿದ್ದಕ್ಕೆ ನಾನು ತಯಾರಾಗಿದ್ದೇನೆ. ವರಿಷ್ಟರು, ಪರಿವಾರದವರು ಏನು ಸ್ಥಾನ ತಗೋಬೇಕು ಅಂತಾ ಹೇಳ್ತಾರೋ ಅದಕ್ಕೆ ನಾನು ಸಿದ್ಧ ಎಂದು ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದರು.

ಮಂತ್ರಿ ಸ್ಥಾನಕ್ಕಿಂತಲೂ ಪಕ್ಷದ ಜವಾಬ್ದಾರಿ ನನಗೆ ತುಂಬಾ ಖುಷಿ ತಂದಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬರಬೇಕು. ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಗೆದ್ದು, ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದರು.

ಸಿಎಂ ಬೊಮ್ಮಾಯಿ ಉತ್ತಮ ಕೆಲಸ ಮಾಡ್ತಿದ್ದಾರೆ; ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯವನ್ನು ಸುತ್ತುತ್ತಿದ್ದಾರೆ. ಕೆಲಸಗಳು ನಡೆಯುತ್ತಿವೆ. ಕೋವಿಡ್ ನಿಯಂತ್ರಣಕ್ಕೂ ಉತ್ತಮ ಕೆಲಸ ಮಾಡ್ತಿದ್ದಾರೆ ಎಂದು ತಿಳಿಸಿದರು.

ಓದಿ: ಕೊರೊನಾ ಲಸಿಕೆ ಮೊದಲ ಡೋಸ್.. ಶೇ.100 ರಷ್ಟು ಸಾಧನೆ: ಸಚಿವ ಡಾ. ಕೆ. ಸುಧಾಕರ್

ಶಿವಮೊಗ್ಗ: ರಾಜ್ಯ ಸಚಿವ ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸಚಿವ ಸ್ಥಾನ ತುಂಬುವ ಕುರಿತು ಪಕ್ಷದ ವರಿಷ್ಠರು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಖಾತೆ ಸಚಿವ ಕೆ. ಎಸ್ ಈಶ್ವರಪ್ಪ ತಿಳಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕ್ಯಾಬಿನೆಟ್ ವಿಸ್ತರಣೆ ಕುರಿತು ಈಗ ಚರ್ಚೆ ನಡೆಯುತ್ತಿರುವುದು ಸ್ವಾಭಾವಿಕ. ಸದ್ಯ ನಾಲ್ಕು ಪೋಸ್ಟ್ ಖಾಲಿ ಇವೆ. ಚುನಾವಣೆಗೆ ಒಂದು ವರ್ಷ ಮೂರು ಬಾಕಿಯಿದೆ. ರಾಷ್ಟ್ರೀಯ ನಾಯಕರು ಈ ಕುರಿತು ಚರ್ಚೆ ಮಾಡಿ, ಯಾರಿಗೆ ಯಾವ ಸ್ಥಾನ ಕೊಟ್ಟರೆ ಒಳ್ಳೆಯದು ಎಂದು ಚಿಂತನೆ ಮಾಡ್ತಾರೆ‌ ಎಂದರು.

ಗ್ರಾಮೀಣಾಭಿವೃದ್ದಿ ಖಾತೆ ಸಚಿವ ಕೆ. ಎಸ್ ಈಶ್ವರಪ್ಪ ಮಾತನಾಡಿದರು

ರಾಜ್ಯದ ಹಿತದೃಷ್ಟಿ, ಜಿಲ್ಲೆ, ಎಲ್ಲಾ ಸಮಾಜವನ್ನು ಪರಿಗಣಿಸಿ ಈ ನಾಲ್ಕು ಸ್ಥಾನಗಳನ್ನು ತುಂಬ್ತಾರೆ. ವರಿಷ್ಠರ ತೀರ್ಮಾನದ ಕುರಿತು ಯಾವುದೇ ಗೊಂದಲ ಇಲ್ಲ. ಒಂದು ಹುದ್ದೆ ಇದ್ದಾಗ ರಾಜಕೀಯ ಆಕಾಂಕ್ಷಿಗಳು ಸಹ ಇರೋದು ಸ್ವಾಭಾವಿಕವಾಗಿದೆ.

ನಾನು ಮಂತ್ರಿ ಅಗ್ಬೇಕು ಅಂತ ಎಲ್ಲಾ ಎಂಎಲ್ಎ, ಎಂಎಲ್ಸಿ ಯೋಚನೆ ಮಾಡ್ತಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ. ಕೇಂದ್ರದ ನಾಯಕರು ಯಾರಿಗೆ ಘೋಷಣೆ ಮಾಡ್ತಾರೋ ಅವರು ಒಪ್ಕೋತ್ತಾರೆ. ಉಳಿದ ಬಿಜೆಪಿ ನಾಯಕರು ಅವರಿಗೆ ಸಹಕಾರ ಕೊಡ್ತಾರೆ. ನಮ್ಮ ಪಕ್ಷದಲ್ಲಿ ಹಿಂದಿನಿಂದಲೂ ಅದೇ ನಡೆದುಕೊಂಡು ಬಂದಿದೆ. ಮುಂದೆ ಕೂಡ ತುಂಬಾ ಚೆನ್ನಾಗಿ ನಡೆಯುತ್ತೆ ಎಂದರು.

ರಾಜ್ಯದ ಅಧ್ಯಕ್ಷರ ಬದಲಾವಣೆ ಚರ್ಚೆ ಬಿಲ್​​ಕುಲ್ ಇಲ್ಲ.. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಯ ಪ್ರಶ್ನೆಯೇ ಇಲ್ಲ. ಅವರು ಉತ್ತಮವಾಗಿ ಕೆಲಸ ಮಾಡ್ತಾ ಇದ್ದಾರೆ. ಸಚಿವ ಸಂಪುಟದಲ್ಲಿ ಸ್ಥಾನ ಖಾಲಿ ಇರುವುದರಿಂದ ಅದಕ್ಕೆ ಚರ್ಚೆ ಮಾಡ್ತಾರೆ. ರಾಜ್ಯಾಧ್ಯಕ್ಷರ ಸ್ಥಾನ ಖಾಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆಯ ಪ್ರಶ್ನೆಯೇ ಉದ್ಭವವಾಗಲ್ಲ. ಮುಂದಿನ ಚುನಾವಣೆ ದೃಷ್ಟಿಯಿಂದ ನಳಿನ್​ ಕುಮಾರ್​ ಕಟೀಲ್ ಅವರು ಕೆಲಸ ಮಾಡ್ತಿದ್ದಾರೆ. ಬೂತ್ ಹಾಗೂ ಪೇಜ್ ಮಟ್ಟದ ಕಮಿಟಿಯನ್ನು ಸಹ ಮಾಡಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಎಲ್ಲಾ ಚುನಾವಣೆಯಲ್ಲೂ ಅವರು ಅಧ್ಯಕ್ಷರಾದ ಮೇಲೆ ಗೆದ್ದಿದ್ದೇವೆ. ಉಪಚುನಾವಣೆ, ಗ್ರಾ. ಪಂ ಚುನಾವಣೆ, ಪಾಲಿಕೆ ಚುನಾವಣೆ ಹಾಗು ಎಂಎಲ್ಸಿ ಚುನಾವಣೆಯಲ್ಲಿ ಗೆದ್ದಿದ್ದೇವೆ. ಹೀಗೆ ಹಲವು ಚುನಾವಣೆಯಲ್ಲಿ ಉತ್ತಮ ಸಾಧನೆಯನ್ನು, ಬಹುಮತವನ್ನು ಬಿಜೆಪಿ ಪಡೆದಿದೆ. ನಳೀನ್ ಕುಮಾರ್ ಸಂಘಟನಾ ಚತುರ. ಒಳ್ಳೆಯ ಕೆಲಸ ಮಾಡ್ತಿದ್ದಾರೆ. ಬದಲಾವಣೆಯ ಪ್ರಶ್ನೆ ಇಲ್ಲ ಎಂದರು.

ಪಕ್ಷ ಏನು ಜವಾಬ್ದಾರಿ ಕೊಟ್ಟರೂ ಹಿಂದಿನಿಂದಲೂ ಮಾಡಿಕೊಂಡು ಬಂದಿದ್ದೇನೆ. ಈಗ ಮಂತ್ರಿಯಾಗು ಎಂದರು, ಮಂತ್ರಿ ಆಗಿದ್ದೀನಿ. ಹಿಂದೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡು ಅಂದಾಗ ಕೊಟ್ಟು, ರಾಜ್ಯಾಧ್ಯಕ್ಷ ಸಹ ಆಗಿದ್ದೇನೆ. ಈಗಲೂ ಸಹ ಕೇಂದ್ರ ಹಾಗೂ ರಾಜ್ಯದ ನಾಯಕರು, ಪರಿವಾರದವರು ಹೇಳಿದ್ದಕ್ಕೆ ನಾನು ತಯಾರಾಗಿದ್ದೇನೆ. ವರಿಷ್ಟರು, ಪರಿವಾರದವರು ಏನು ಸ್ಥಾನ ತಗೋಬೇಕು ಅಂತಾ ಹೇಳ್ತಾರೋ ಅದಕ್ಕೆ ನಾನು ಸಿದ್ಧ ಎಂದು ಸಚಿವ ಈಶ್ವರಪ್ಪ ಸ್ಪಷ್ಟಪಡಿಸಿದರು.

ಮಂತ್ರಿ ಸ್ಥಾನಕ್ಕಿಂತಲೂ ಪಕ್ಷದ ಜವಾಬ್ದಾರಿ ನನಗೆ ತುಂಬಾ ಖುಷಿ ತಂದಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬರಬೇಕು. ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ ಗೆದ್ದು, ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದರು.

ಸಿಎಂ ಬೊಮ್ಮಾಯಿ ಉತ್ತಮ ಕೆಲಸ ಮಾಡ್ತಿದ್ದಾರೆ; ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯವನ್ನು ಸುತ್ತುತ್ತಿದ್ದಾರೆ. ಕೆಲಸಗಳು ನಡೆಯುತ್ತಿವೆ. ಕೋವಿಡ್ ನಿಯಂತ್ರಣಕ್ಕೂ ಉತ್ತಮ ಕೆಲಸ ಮಾಡ್ತಿದ್ದಾರೆ ಎಂದು ತಿಳಿಸಿದರು.

ಓದಿ: ಕೊರೊನಾ ಲಸಿಕೆ ಮೊದಲ ಡೋಸ್.. ಶೇ.100 ರಷ್ಟು ಸಾಧನೆ: ಸಚಿವ ಡಾ. ಕೆ. ಸುಧಾಕರ್

Last Updated : Jan 24, 2022, 5:35 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.