ETV Bharat / state

ಶಿವಮೊಗ್ಗದಲ್ಲಿ ಕನ್ನಡ ಧ್ವಜ ಹಾರಿಸದ್ದಕ್ಕೆ ಧಿಕ್ಕಾರ: ಕರವೇ ಕಾರ್ಯಕರ್ತರು ಪೊಲೀಸ್​ ವಶಕ್ಕೆ - Karave activists shouted in shimoga not hoisting the Kannada flag.

ಕನ್ನಡ ಧ್ವಜಕ್ಕೆ ಮಾನ್ಯತೆ ನೀಡಿಲ್ಲ ಹಾಗೂ ರಾಷ್ಟ್ರ ಧ್ವಜದ ಜೊತೆ ಕನ್ನಡದ ಬಾವುಟ ಹಾರಿಸಿಲ್ಲ ಎಂಬ ಕಾರಣಕ್ಕೆ ಕರವೇ ಕಾರ್ಯಕರ್ತರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಈ ವೇಳೆ ಪೊಲೀಸರು ಕೆಲವರನ್ನು ವಶಕ್ಕೆ ಪಡೆದರು.

ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಕರವೇ ಕಾರ್ಯಕರ್ತರು
author img

By

Published : Nov 1, 2019, 4:46 PM IST

ಶಿವಮೊಗ್ಗ: ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡ ನಾಡಿನ ಧ್ವಜ ಹಾರಿಸದ ಸಚಿವರ ವಿರುದ್ಧ ಕರವೇ ಕಾರ್ಯಕರ್ತರು ಧಿಕ್ಕಾರ ಕೂಗಿದ ಘಟನೆ ನಗರದಲ್ಲಿ ನಡೆದಿದೆ.

ಕನ್ನಡ ರಾಜ್ಯೋತ್ಸವದ ವೇಳೆ ಕನ್ನಡದ ಧ್ವಜ ಹಾರಿಸದೆ ಕನ್ನಡಕ್ಕೆ ಅವಮಾನ ಮಾಡಿದ್ದಾರೆ. ರಾಜ್ಯ ಸರ್ಕಾರ ಕನ್ನಡವನ್ನು ಹಾಗೂ ಕನ್ನಡ ಧ್ವಜವನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದರು. ಎಲ್ಲಾ ಕಡೆ ರಾಷ್ಟ್ರಧ್ವಜದ ಜೊತೆಗೆ ಕನ್ನಡ ನಾಡಿನ ಹಳದಿ ಕೆಂಪು ಬಾವುಟ ಹಾರಿಸಲಾಗಿದ್ದರೂ ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ರಾಜ್ಯಧ್ವಜ ಹಾರಿಸದೆ ಇರುವುದು ಖಂಡನೀಯ ಎಂದು ಕರವೇ ಕಾರ್ಯಕರ್ತರು ಸಚಿವ ಈಶ್ವರಪ್ಪನವರಿಗೆ ಡಿಎಆರ್ ಸಭಾಂಗಣದಲ್ಲಿ ಪ್ರಶ್ನಿಸಿದರು.

ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಕರವೇ ಕಾರ್ಯಕರ್ತರು

ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಕರವೇ ಕಾರ್ಯಕರ್ತರನ್ನು ತಡೆಯಲು ಯತ್ನಿಸಿದಾಗ ಆಕ್ರೋಶಗೊಂಡು ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗಿದರು.

ಕನ್ನಡ ರಾಜ್ಯೋತ್ಸವದ ವೇಳೆ ಕನ್ನಡ ಧ್ವಜ ಹಾರಿಸಬೇಕು ಎಂದು ಮನವಿ ಕೊಡಲು ಬಂದ ಕರವೇ ಕಾರ್ಯಕರ್ತರು ಕೊನೆಗೆ ಸಚಿವ ಈಶ್ವರಪ್ಪ ಹಾಗೂ ಸರ್ಕಾರಕ್ಕೆ ಧಿಕ್ಕಾರ ಹಾಕುತ್ತಾ ಮುಂದೆ ಸಾಗಿದರು. ನಂತರ ಪೊಲೀಸರು ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದು ಜೀಪ್​ನಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಗೆ ಕಳುಹಿಸಿದರು.

ಶಿವಮೊಗ್ಗ: ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡ ನಾಡಿನ ಧ್ವಜ ಹಾರಿಸದ ಸಚಿವರ ವಿರುದ್ಧ ಕರವೇ ಕಾರ್ಯಕರ್ತರು ಧಿಕ್ಕಾರ ಕೂಗಿದ ಘಟನೆ ನಗರದಲ್ಲಿ ನಡೆದಿದೆ.

ಕನ್ನಡ ರಾಜ್ಯೋತ್ಸವದ ವೇಳೆ ಕನ್ನಡದ ಧ್ವಜ ಹಾರಿಸದೆ ಕನ್ನಡಕ್ಕೆ ಅವಮಾನ ಮಾಡಿದ್ದಾರೆ. ರಾಜ್ಯ ಸರ್ಕಾರ ಕನ್ನಡವನ್ನು ಹಾಗೂ ಕನ್ನಡ ಧ್ವಜವನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿದರು. ಎಲ್ಲಾ ಕಡೆ ರಾಷ್ಟ್ರಧ್ವಜದ ಜೊತೆಗೆ ಕನ್ನಡ ನಾಡಿನ ಹಳದಿ ಕೆಂಪು ಬಾವುಟ ಹಾರಿಸಲಾಗಿದ್ದರೂ ಶಿವಮೊಗ್ಗ ಜಿಲ್ಲೆಯಲ್ಲಿ ಮಾತ್ರ ರಾಜ್ಯಧ್ವಜ ಹಾರಿಸದೆ ಇರುವುದು ಖಂಡನೀಯ ಎಂದು ಕರವೇ ಕಾರ್ಯಕರ್ತರು ಸಚಿವ ಈಶ್ವರಪ್ಪನವರಿಗೆ ಡಿಎಆರ್ ಸಭಾಂಗಣದಲ್ಲಿ ಪ್ರಶ್ನಿಸಿದರು.

ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಕರವೇ ಕಾರ್ಯಕರ್ತರು

ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಕರವೇ ಕಾರ್ಯಕರ್ತರನ್ನು ತಡೆಯಲು ಯತ್ನಿಸಿದಾಗ ಆಕ್ರೋಶಗೊಂಡು ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗಿದರು.

ಕನ್ನಡ ರಾಜ್ಯೋತ್ಸವದ ವೇಳೆ ಕನ್ನಡ ಧ್ವಜ ಹಾರಿಸಬೇಕು ಎಂದು ಮನವಿ ಕೊಡಲು ಬಂದ ಕರವೇ ಕಾರ್ಯಕರ್ತರು ಕೊನೆಗೆ ಸಚಿವ ಈಶ್ವರಪ್ಪ ಹಾಗೂ ಸರ್ಕಾರಕ್ಕೆ ಧಿಕ್ಕಾರ ಹಾಕುತ್ತಾ ಮುಂದೆ ಸಾಗಿದರು. ನಂತರ ಪೊಲೀಸರು ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆದು ಜೀಪ್​ನಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಗೆ ಕಳುಹಿಸಿದರು.

Intro:ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡ ನಾಡಿನ ಧ್ವಜ ಹಾರಿಸದ ಸಚಿವರಿಗೆ ಕರವೇ ಧಿಕ್ಕಾರ ಹಾಕಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕನ್ನಡ ರಾಜ್ಯೋತ್ಸವದ ವೇಳೆ ಕನ್ನಡದ ಧ್ವಜ ಹಾರಿಸದೆ ಕನ್ನಡಕ್ಕೆ ಅವಮಾನ ಮಾಡಿದ್ದಾರೆ. ರಾಜ್ಯ ಸರ್ಕಾರ ಕನ್ನಡವನ್ನು ಹಾಗೂ ಕನ್ನಡ ಧ್ವಜವನ್ನು ನಿರ್ಲಕ್ಷಿಸುತ್ತಿದ್ದಾರೆ. ಇಂದು ಎಲ್ಲಾ ಕಡೆ ರಾಷ್ಟ್ರಧ್ವಜದ ಜೊತೆಗೆ ಕನ್ನಡ ನಾಡಿನ ಹಳದಿ ಕೆಂಪು ಬಾವುಟ ಹಾರಿಸಲಾಗಿದ್ದರು ಜಿಲ್ಲೆಯಲ್ಲಿ ಮಾತ್ರ ರಾಷ್ಟ್ರಧ್ವಜ ಹಾರಿಸದೆ ಇರುವುದು ಖಂಡನೀಯ ಎಂದು ಕರವೇ ಕಾರ್ಯಕರ್ತರು ಸಚಿವ ಈಶ್ವರಪ್ಪನವರಿಗೆ ಡಿಎಆರ್ ಸಭಾಂಗಣದಲ್ಲಿ ಪ್ರಶ್ನೆ ಮಾಡುತ್ತಿದ್ದಂತಯೇ ಪೊಲೀಸರು


Body:ಮಧ್ಯ ಪ್ರವೇಶ ಮಾಡಿ ಕರವೇ ಕಾರ್ಯಕರ್ತರನ್ನು ತಡೆಯಲು ಯತ್ನ ಮಾಡಿದರು. ಈ ವೇಳೆ ಕರವೇ ಕಾರ್ಯಕರ್ತರು ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗಿದರು. ಈ ವೇಳೆ ಪೊಲೀಸರು ಕರವೇ ಕಾರ್ಯಕರ್ತರನ್ನು ಸಭಾಂಗಣ ದಿಂದ ಹೊರಗೆ ಕರೆದು ಕೊಂಡು ಹೋಗಲು ಯತ್ನ ಮಾಡಿದರು ಮತ್ತೆ ಕಾರ್ಯಕರ್ತರು ಧಿಕ್ಕಾರ ಹಾಕುತ್ತಲೆ ಇದ್ದರು.


Conclusion:ಕನ್ನಡ ರಾಜ್ಯೋತ್ಸವದ ವೇಳೆ ಕನ್ನಡ ಧ್ವಜ ಹಾರಿಸಬೇಕು ಎಂದು ಮನವಿ ಕೊಡಲು ಬಂದ ಕರವೇ ಕಾರ್ಯಕರ್ತರು ಕೊನೆಗೆ ಸಚಿವ ಈಶ್ವರಪ್ಪ ಹಾಗೂ ಸರ್ಕಾರಕ್ಕೆ ಧಿಕ್ಕಾರ ಹಾಕುತ್ತಾ ಸಾಗಿದರು. ನಂತ್ರ ಪೊಲೀಸರು ಕರವೇ ಕಾರ್ಯಕರ್ತರನ್ನು ತಮ್ಮ ಜೀಪ್ ನಲ್ಲಿ ಕರೆದು ಕೊಂಡು ದೊಡ್ಡಪೇಟೆ ಪೊಲೀಸ್ ಠಾಣೆಗೆ ಕರೆದು ಕೊಂಡು ಹೋದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.