ಶಿವಮೊಗ್ಗ: ತೀರ್ಥಹಳ್ಳಿಯ ಕಲ್ಲುಕೊಪ್ಪದ ಶೇಖರಪ್ಪ ಎಂಬುವವರ ಮನೆಯಲ್ಲಿ ಅವಿತು ಕುಳಿತಿದ್ದ ಕಾಳಿಂಗ ಸರ್ಪವೊಂದನ್ನು ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.
ಶೇಖರಪ್ಪ ಎಂಬುವರ ಮನೆಯಲ್ಲಿ ಏಕಾಏಕಿ ಕಾಣಿಸಿಕೊಂಡ ಕಾಳಿಂಗ ಸರ್ಪವನ್ನು ಮನೆಯಿಂದ ಹೊರಹಾಕಲು ಮೊದಲು ಸಾಕಷ್ಟು ಪ್ರಯತ್ನ ಮಾಡಲಾಯಿತು. ಅದು ಸಾಧ್ಯವಾಗದೇ ಹೋದಾಗ ಉರಗ ತಜ್ಞ ಬೆಳ್ಳೂರು ನಾಗರಾಜ್ ಅವರನ್ನು ಸ್ಥಳಕ್ಕೆ ಕರೆಯಿಸಿ ಕಾಳಿಂಗವನ್ನು ಹಿಡಿದು ಕಾಡಿಗೆ ಬಿಡಲಾಯಿತು.