ETV Bharat / state

ಸಿಗಂದೂರು ದೇವಾಲಯ ಇನ್ಮುಂದೆ ಡಿಸಿ ಉಸ್ತುವಾರಿಯಲ್ಲಿರಲಿದೆ: ಈಶ್ವರಪ್ಪ

author img

By

Published : Oct 29, 2020, 9:02 PM IST

ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದ ಆಡಳಿತ ವಿವಾದ ಕುರಿತಾಗಿ, ಪಾರದರ್ಶಕ ಆಡಳಿತ ಮಾಡಬೇಕು ಎಂದು ಸಚಿವ ಈಶ್ವರಪ್ಪ ಸಮ್ಮುಖದಲ್ಲಿ ಮೊದಲ ಸಭೆ ನಡೆದಿದೆ.

eeshwarappa
eeshwarappa

ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಾಲಯದ ಆಡಳಿತ ವಿವಾದದ ಹಿನ್ನೆಲೆಯಲ್ಲಿ ರಚನೆಯಾಗಿದ್ದ ಮೇಲ್ವಿಚಾರಣಾ ಹಾಗೂ ಸಲಹಾ ಸಮಿತಿಯ ಮೊದಲ ಸಭೆ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಿತು.

ಸಭೆಯಿಂದ ಮಾಧ್ಯಮದವರನ್ನು ಹೊರಗೆ ಇಟ್ಟು ನಡೆಸಲಾಯಿತು. ಸಭೆಯ ಬಳಿಕ ಮಾತನಾಡಿದ ಸಚಿವ ಈಶ್ವರಪ್ಪ, ಸಿಗಂದೂರು ದೇವಾಲಯದ ಹಣದ ವ್ಯವಹಾರವನ್ನು ಜಿಲ್ಲಾಧಿಕಾರಿಗಳು ನೋಡಿಕೊಳ್ಳಲಿದ್ದಾರೆ. ದೇವಾಲಯದಲ್ಲಿ ಇದ್ದ ಗೊಂದಲ ನಿವಾರಣೆ ಮಾಡಿ, ಪಾರದರ್ಶಕ ಆಡಳಿತ ನಡೆಸಲು ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ದೇವಾಲಯದಲ್ಲಿ ಹಿಂದೆ ಯಾವ ರೀತಿ ಪೂಜೆ‌ ಕಾರ್ಯಗಳು,‌ ಸೇವೆಗಳು ನಡೆಯುತ್ತಿತ್ತೋ, ಮುಂದೆಯೂ ಸಹ ಹಾಗೆ ಮುಂದುವರೆಯಲಿದೆ. ಆದರೆ, ಇನ್ಮುಂದೆ ದೇವಾಲಯಕ್ಕೆ ಬರುವ ಹರಕೆ ಸೇರಿದಂತೆ ಎಲ್ಲದಕ್ಕೂ‌ ರಶೀದಿ ನೀಡಲಾಗುತ್ತದೆ. ಇದಕ್ಕಾಗಿ ಜಿಲ್ಲಾಧಿಕಾರಿಗಳು ಒಬ್ಬರನ್ನು ನೇಮಕ ಮಾಡಲಿದ್ದಾರೆ ಎಂದರು.

ಸಿಗಂದೂರು ದೇವಾಲಯಕ್ಕೆ ಡಿಸಿ ಉಸ್ತುವಾರಿ

ಈ ಹಿಂದೆ ಇದ್ದ ಟ್ರಸ್ಟ್ ಹಾಗೆಯೆ ಇರಲಿದೆ. ಈಗ ಹೊಸ ಸಮಿತಿ ರಚನೆ ಮಾಡಿ ಅದರ ಮೂಲಕ ದೇವಾಲಯದ ಉಸ್ತುವಾರಿ ಮಾಡಲಾಗುವುದು.‌ ಸದ್ಯ ಈಗ ದೇವಾಲಯದಲ್ಲಿ‌ ಇರುವ ನೌಕರರನ್ನೇ ಬಳಸಿಕೊಂಡು ದೇವತಾ ಕಾರ್ಯ ನಡೆಸಲಾಗುವುದು ಎಂದರು.‌

ಧರ್ಮದರ್ಶಿ ರಾಮಪ್ಪ ಹಾಗೂ ಅರ್ಚಕ ಶೇಷಗಿರಿ ಭಟ್ಟರನ್ನು ಬಳಸಿಕೊಂಡೇ ದೇವಾಲಯದ ಆಡಳಿತ, ಪೂಜೆ ನಡೆಯಲಿದೆ. ಇನ್ನು ಮುಂದೆ ಪ್ರತೀ ತಿಂಗಳು ಮೇಲ್ವಿಚಾರಣಾ ಹಾಗೂ ಸಲಹಾ ಸಮಿತಿ ಸಭೆ ನಡೆಯುತ್ತದೆ.‌ ಇವೆಲ್ಲವೂ ತಾತ್ಕಾಲಿಕವಾಗಿ ಇರಲಿದೆ. ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರ್ಪಡೆ ಮಾಡುವುದು ಮುಗಿದು ಹೋದ ಅಧ್ಯಾಯ ಎಂದರು.

ದೇವಾಲಯದ ಭೂಮಿ ಒತ್ತುವರಿ ಮಾಡಿದ್ದರ ಬಗ್ಗೆ ಗಮನ ಹರಿಸಲಾಗುವುದು. ಮುಂದಿನ ಸಭೆ ಶಿವಮೊಗ್ಗ, ಸಾಗರ, ದೇವಾಲಯ ಸೇರಿದಂತೆ ಎಲ್ಲಿ ಬೇಕಾದರೂ ಸಹ ನಡೆಯಬಹುದು ಎಂದರು.

ಇನ್ನು ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಸಾಗರ ಶಾಸಕ ಹರತಾಳು ಹಾಲಪ್ಪ, ಡಿಸಿ ಕೆ.ಬಿ.ಶಿವಕುಮಾರ, ದೇವಾಲಯದ ಧರ್ಮದರ್ಶಿ ರಾಮಪ್ಪ, ಅರ್ಚಕ‌ ಶೇಷಗಿರಿ ಭಟ್ಟ, ಸಾಗರ ಉಪವಿಭಾಗಧಿಕಾರಿ ನಾಗರಾಜ್‌ ಸೇರಿ ಇತರರು ಹಾಜರಿದ್ದರು.

ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಾಲಯದ ಆಡಳಿತ ವಿವಾದದ ಹಿನ್ನೆಲೆಯಲ್ಲಿ ರಚನೆಯಾಗಿದ್ದ ಮೇಲ್ವಿಚಾರಣಾ ಹಾಗೂ ಸಲಹಾ ಸಮಿತಿಯ ಮೊದಲ ಸಭೆ ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಿತು.

ಸಭೆಯಿಂದ ಮಾಧ್ಯಮದವರನ್ನು ಹೊರಗೆ ಇಟ್ಟು ನಡೆಸಲಾಯಿತು. ಸಭೆಯ ಬಳಿಕ ಮಾತನಾಡಿದ ಸಚಿವ ಈಶ್ವರಪ್ಪ, ಸಿಗಂದೂರು ದೇವಾಲಯದ ಹಣದ ವ್ಯವಹಾರವನ್ನು ಜಿಲ್ಲಾಧಿಕಾರಿಗಳು ನೋಡಿಕೊಳ್ಳಲಿದ್ದಾರೆ. ದೇವಾಲಯದಲ್ಲಿ ಇದ್ದ ಗೊಂದಲ ನಿವಾರಣೆ ಮಾಡಿ, ಪಾರದರ್ಶಕ ಆಡಳಿತ ನಡೆಸಲು ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ದೇವಾಲಯದಲ್ಲಿ ಹಿಂದೆ ಯಾವ ರೀತಿ ಪೂಜೆ‌ ಕಾರ್ಯಗಳು,‌ ಸೇವೆಗಳು ನಡೆಯುತ್ತಿತ್ತೋ, ಮುಂದೆಯೂ ಸಹ ಹಾಗೆ ಮುಂದುವರೆಯಲಿದೆ. ಆದರೆ, ಇನ್ಮುಂದೆ ದೇವಾಲಯಕ್ಕೆ ಬರುವ ಹರಕೆ ಸೇರಿದಂತೆ ಎಲ್ಲದಕ್ಕೂ‌ ರಶೀದಿ ನೀಡಲಾಗುತ್ತದೆ. ಇದಕ್ಕಾಗಿ ಜಿಲ್ಲಾಧಿಕಾರಿಗಳು ಒಬ್ಬರನ್ನು ನೇಮಕ ಮಾಡಲಿದ್ದಾರೆ ಎಂದರು.

ಸಿಗಂದೂರು ದೇವಾಲಯಕ್ಕೆ ಡಿಸಿ ಉಸ್ತುವಾರಿ

ಈ ಹಿಂದೆ ಇದ್ದ ಟ್ರಸ್ಟ್ ಹಾಗೆಯೆ ಇರಲಿದೆ. ಈಗ ಹೊಸ ಸಮಿತಿ ರಚನೆ ಮಾಡಿ ಅದರ ಮೂಲಕ ದೇವಾಲಯದ ಉಸ್ತುವಾರಿ ಮಾಡಲಾಗುವುದು.‌ ಸದ್ಯ ಈಗ ದೇವಾಲಯದಲ್ಲಿ‌ ಇರುವ ನೌಕರರನ್ನೇ ಬಳಸಿಕೊಂಡು ದೇವತಾ ಕಾರ್ಯ ನಡೆಸಲಾಗುವುದು ಎಂದರು.‌

ಧರ್ಮದರ್ಶಿ ರಾಮಪ್ಪ ಹಾಗೂ ಅರ್ಚಕ ಶೇಷಗಿರಿ ಭಟ್ಟರನ್ನು ಬಳಸಿಕೊಂಡೇ ದೇವಾಲಯದ ಆಡಳಿತ, ಪೂಜೆ ನಡೆಯಲಿದೆ. ಇನ್ನು ಮುಂದೆ ಪ್ರತೀ ತಿಂಗಳು ಮೇಲ್ವಿಚಾರಣಾ ಹಾಗೂ ಸಲಹಾ ಸಮಿತಿ ಸಭೆ ನಡೆಯುತ್ತದೆ.‌ ಇವೆಲ್ಲವೂ ತಾತ್ಕಾಲಿಕವಾಗಿ ಇರಲಿದೆ. ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರ್ಪಡೆ ಮಾಡುವುದು ಮುಗಿದು ಹೋದ ಅಧ್ಯಾಯ ಎಂದರು.

ದೇವಾಲಯದ ಭೂಮಿ ಒತ್ತುವರಿ ಮಾಡಿದ್ದರ ಬಗ್ಗೆ ಗಮನ ಹರಿಸಲಾಗುವುದು. ಮುಂದಿನ ಸಭೆ ಶಿವಮೊಗ್ಗ, ಸಾಗರ, ದೇವಾಲಯ ಸೇರಿದಂತೆ ಎಲ್ಲಿ ಬೇಕಾದರೂ ಸಹ ನಡೆಯಬಹುದು ಎಂದರು.

ಇನ್ನು ಸಭೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಸಾಗರ ಶಾಸಕ ಹರತಾಳು ಹಾಲಪ್ಪ, ಡಿಸಿ ಕೆ.ಬಿ.ಶಿವಕುಮಾರ, ದೇವಾಲಯದ ಧರ್ಮದರ್ಶಿ ರಾಮಪ್ಪ, ಅರ್ಚಕ‌ ಶೇಷಗಿರಿ ಭಟ್ಟ, ಸಾಗರ ಉಪವಿಭಾಗಧಿಕಾರಿ ನಾಗರಾಜ್‌ ಸೇರಿ ಇತರರು ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.