ETV Bharat / state

ಜೋಗಕ್ಕೆ ತೆರಳುವ ದಾರಿಯಲ್ಲಿ ಹೊಂಡ ಗುಂಡಿ: ಬೇಸತ್ತ ಸ್ಥಳೀಯರಿಂದ ವಿನೂತನ ಪ್ರತಿಭಟನೆ

author img

By

Published : Oct 11, 2019, 5:11 AM IST

ಶಿವಮೊಗ್ಗ ಜಿಲ್ಲೆಯಲ್ಲಿರುವ ಜೋಗ ಜಲಪಾತ ಜಗದ್ವಿಖ್ಯಾತ. ಆದರೆ ಇಲ್ಲಿಗೆ ತೆರಳುವ ಮಾರ್ಗಗಳು ಮಾತ್ರ ಭಯಾನಕ. ಹೊಂಡ ಗುಂಡಿಗಳಿಂದ ಕೂಡಿದ ಈ ರಸ್ತೆಯನ್ನು ಸರಿಪಡಿಸುವಂತೆ ಆಗ್ರಹಿಸಿ ಜನರು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.

ಜೋಗಕ್ಕೆ ತೆರಳುವ ದಾರಿಯಲ್ಲಿ ಹೊಂಡ ಗುಂಡಿ: ಬೇಸತ್ತ ಸ್ಥಳೀಯರಿಂದ ವಿನೂತನ ಪ್ರತಿಭಟನೆ

ಶಿವಮೊಗ್ಗ: ಜಗದ್ವಿಖ್ಯಾತ ಜೋಗ ಜಲಪಾತಕ್ಕೆ ತೆರಳುವ ಮಾರ್ಗ ಹೊಂಡ ಗುಂಡಿಗಳಿಂದ ತುಂಬಿದ್ದು ಪ್ರವಾಸಿಗರ, ಜೊತೆಗೆ ಸ್ಥಳೀಯರು ಈ ರಸ್ತೆಯಲ್ಲಿ ಸಾಗಲು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ.

ಜೋಗಕ್ಕೆ ತೆರಳುವ ಸಾಗರ-ತಾಳಗುಪ್ಪ ನಡುವೆ ಗಾಳಿಪುರ ಸೇತುವೆ ಬಳಿ ರಸ್ತೆಯಲ್ಲಿ ಭಾರಿ ಗುಂಡಿಗಳಾಗಿವೆ. ಇವುಗಳಿಂದಾಗಿ ಜಾರಿ ಬಿದ್ದು ಹಲವು ದ್ವಿಚಕ್ರ ವಾಹನ ಸವಾರರು ಗಾಯಗೊಂಡಿದ್ದಾರೆ. ಗುಂಡಿಗಳಿಗೆ ಮುಕ್ತಿ ನೀಡುವಂತೆ ಅಧಿಕಾರಿಗಳಿಗೆ ಎಷ್ಟೇ ಮನವಿ ಮಾಡಿದರು ಪ್ರಯೋಜವಾಗಿಲ್ಲ. ಹಾಗಾಗಿ ಸ್ಥಳೀಯ ಯುವಕರು ಗುಂಡಿ ಮುಂದೆ ನಿಂತು ಡಿಫರೆಂಟ್ ಪ್ರತಿಭಟನೆ ಮಾಡಿದ್ದಾರೆ.

ಗುಂಡಿಗಳಲ್ಲಿ ದೊಡ್ಡ ಕಂಬ ನೆಟ್ಟು, ಅದಕ್ಕೆ ಅಲಂಕಾರ ಮಾಡಿ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿ ಹೊಂಡಗಳಿಂದಾಗಿ ಪದೇ ಪದೇ ಬೈಕ್ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದರು ಅಧಿಕಾರಿಗಳು ಕ್ಯಾರೆ ಅನ್ನುತ್ತಿಲ್ಲ. ಹಾಗಾಗಿ ವಾಹನ ಸವಾರರಿಗೆ ಜಾಗೃತಿ ಮೂಡಿಸಲು ಸ್ಥಳೀಯರು ವಿಭಿನ್ನ ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ 206ರ ಮೂಲಕ ಜೋಗ ಜಲಪಾತಕ್ಕೆ ತಲುಪಬಹುದಾಗಿದೆ. ಹಾಗಾಗಿ ಪ್ರತಿದಿನ ಸಾವಿರಾರು ಪ್ರವಾಸಿಗರು ಈ ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಆದರೆ ರಸ್ತೆಯಲ್ಲಿರುವ ಗುಂಡಿಯಿಂದಾಗಿ ಪ್ರವಾಸಿಗರು ಕಿರಿಕಿರಿ ಅನುಭವಿಸುತ್ತಿದ್ದಾರೆ. ಇದನ್ನು ತಪ್ಪಿಸುವ ಸಲುವಾಗಿ ಯುವಕರು ಶ್ರಮದಾನ ಮಾಡಿ, ಗುಂಡಿಗಳಿಗೆ ಮಣ್ಣು ತುಂಬಿದ್ದರು. ಆದರೆ ಕೆಲವೇ ದಿನದಲ್ಲಿ ರಸ್ತೆ ಮತ್ತೆ ಗುಂಡಿ ಬೀಳುತ್ತಿದೆ. ಇದನ್ನು ಕೂಡಲೇ ಮುಚ್ಚಬೇಕು ಎಂದು ಯುವಕರು ಒತ್ತಾಯಿಸಿದ್ದಾರೆ.

ಶಿವಮೊಗ್ಗ: ಜಗದ್ವಿಖ್ಯಾತ ಜೋಗ ಜಲಪಾತಕ್ಕೆ ತೆರಳುವ ಮಾರ್ಗ ಹೊಂಡ ಗುಂಡಿಗಳಿಂದ ತುಂಬಿದ್ದು ಪ್ರವಾಸಿಗರ, ಜೊತೆಗೆ ಸ್ಥಳೀಯರು ಈ ರಸ್ತೆಯಲ್ಲಿ ಸಾಗಲು ನಿತ್ಯ ನರಕಯಾತನೆ ಅನುಭವಿಸುತ್ತಿದ್ದಾರೆ.

ಜೋಗಕ್ಕೆ ತೆರಳುವ ಸಾಗರ-ತಾಳಗುಪ್ಪ ನಡುವೆ ಗಾಳಿಪುರ ಸೇತುವೆ ಬಳಿ ರಸ್ತೆಯಲ್ಲಿ ಭಾರಿ ಗುಂಡಿಗಳಾಗಿವೆ. ಇವುಗಳಿಂದಾಗಿ ಜಾರಿ ಬಿದ್ದು ಹಲವು ದ್ವಿಚಕ್ರ ವಾಹನ ಸವಾರರು ಗಾಯಗೊಂಡಿದ್ದಾರೆ. ಗುಂಡಿಗಳಿಗೆ ಮುಕ್ತಿ ನೀಡುವಂತೆ ಅಧಿಕಾರಿಗಳಿಗೆ ಎಷ್ಟೇ ಮನವಿ ಮಾಡಿದರು ಪ್ರಯೋಜವಾಗಿಲ್ಲ. ಹಾಗಾಗಿ ಸ್ಥಳೀಯ ಯುವಕರು ಗುಂಡಿ ಮುಂದೆ ನಿಂತು ಡಿಫರೆಂಟ್ ಪ್ರತಿಭಟನೆ ಮಾಡಿದ್ದಾರೆ.

ಗುಂಡಿಗಳಲ್ಲಿ ದೊಡ್ಡ ಕಂಬ ನೆಟ್ಟು, ಅದಕ್ಕೆ ಅಲಂಕಾರ ಮಾಡಿ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿ ಹೊಂಡಗಳಿಂದಾಗಿ ಪದೇ ಪದೇ ಬೈಕ್ ಸವಾರರು ಬಿದ್ದು ಗಾಯಗೊಳ್ಳುತ್ತಿದ್ದರು ಅಧಿಕಾರಿಗಳು ಕ್ಯಾರೆ ಅನ್ನುತ್ತಿಲ್ಲ. ಹಾಗಾಗಿ ವಾಹನ ಸವಾರರಿಗೆ ಜಾಗೃತಿ ಮೂಡಿಸಲು ಸ್ಥಳೀಯರು ವಿಭಿನ್ನ ಪ್ರತಿಭಟನೆ ನಡೆಸಿದರು.

ರಾಷ್ಟ್ರೀಯ ಹೆದ್ದಾರಿ 206ರ ಮೂಲಕ ಜೋಗ ಜಲಪಾತಕ್ಕೆ ತಲುಪಬಹುದಾಗಿದೆ. ಹಾಗಾಗಿ ಪ್ರತಿದಿನ ಸಾವಿರಾರು ಪ್ರವಾಸಿಗರು ಈ ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಆದರೆ ರಸ್ತೆಯಲ್ಲಿರುವ ಗುಂಡಿಯಿಂದಾಗಿ ಪ್ರವಾಸಿಗರು ಕಿರಿಕಿರಿ ಅನುಭವಿಸುತ್ತಿದ್ದಾರೆ. ಇದನ್ನು ತಪ್ಪಿಸುವ ಸಲುವಾಗಿ ಯುವಕರು ಶ್ರಮದಾನ ಮಾಡಿ, ಗುಂಡಿಗಳಿಗೆ ಮಣ್ಣು ತುಂಬಿದ್ದರು. ಆದರೆ ಕೆಲವೇ ದಿನದಲ್ಲಿ ರಸ್ತೆ ಮತ್ತೆ ಗುಂಡಿ ಬೀಳುತ್ತಿದೆ. ಇದನ್ನು ಕೂಡಲೇ ಮುಚ್ಚಬೇಕು ಎಂದು ಯುವಕರು ಒತ್ತಾಯಿಸಿದ್ದಾರೆ.

Intro:ಶಿವಮೊಗ್ಗ,

ಬಿದ್ದು ಗಾಯಗೊಂಡವರಿಗೆ ಲೆಕ್ಕವಿಲ್ಲ. ಜಗದ್ವಿಖ್ಯಾತ ಜೋಗ ಜಲಪಾತದ ಹಾದಿಯಲ್ಲಿ ಬರಿ ಗುಂಡಿಗಳೋ ಗುಂಡಿಗಳು.. ರಸ್ತೆ ಗುಂಡಿ ಮುಂದೆ ಯುವಕರ ಡಿಫರೆಂಟ್ ಪ್ರತಿಭಟನೆ.  

ಸಾಗರ ತಾಳಗುಪ್ಪ ನಡುವೆ ಗಾಳಿಪುರ ಸೇತುವೆ ಬಳಿ ರಸ್ತೆಯಲ್ಲಿ ಭಾರಿ ಗುಂಡಿಗಳಾಗಿವೆ. ಇವುಗಳಿಂದಾಗಿ ಜಾರಿಬಿದ್ದು ಹಲವು ದ್ವಿಚಕ್ರ ವಾಹನ ಸವಾರರು ಗಾಯಗೊಂಡಿದ್ದಾರೆ. ಗುಂಡಿಗಳಿಗೆ ಮುಕ್ತಿ ನೀಡುವಂತೆ ಅಧಿಕಾರಿಗಳಿಗೆ ಎಷ್ಟೆ ಮನವಿ ಮಾಡಿದರು ಪ್ರಯೋಜವಾಗಿಲ್ಲ. ಹಾಗಾಗಿ ಸ್ಥಳೀಯ ಯುವಕರು ಗುಂಡಿ ಮುಂದೆ ನಿಂತು ಡಿಫರೆಂಟ್ ಪ್ರತಿಭಟನೆ ಮಾಡಿದ್ದಾರೆ.

ಗುಂಡಿಗಳಲ್ಲಿ ದೊಡ್ಡ ಕಂಬ ನೆಟ್ಟು, ಅದಕ್ಕೆ ಅಲಂಕಾರ ಮಾಡಿ, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪದೆ ಪದೆ ಬೈಕ್ ಸವಾರು ಬಿದ್ದು ಗಾಯಗೊಳ್ಳುತ್ತಿದ್ದರು ಅಧಿಕಾರಿಗಳು ಕ್ಯಾರೆ ಅನ್ನುತ್ತಿಲ್ಲ. ಹಾಗಾಗಿ ವಾಹನ ಸವಾರರಿಗೆ ಜಾಗೃತಿ ಮೂಡಿಸಲು ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 206ರ ಮೂಲಕ ಜೋಗ ಜಲಪಾತಕ್ಕೆ ತಲುಪಬಹುದಾಗಿದೆ. ಹಾಗಾಗಿ ಪ್ರತಿದಿನ ಸಾವಿರಾರು ಪ್ರವಾಸಿಗರು ಈ ರಸ್ತೆಯಲ್ಲಿ ಓಡಾಡುತ್ತಿದ್ದಾರೆ. ಗುಂಡಿಯಿಂದಾಗಿ ಪ್ರವಾಸಿಗರು ಕಿರಿಕಿರಿ ಅನುಭವಿಸುತ್ತಿದ್ದಾರೆ. ಇದನ್ನು ತಪ್ಪಿಸುವ ಸಲುವಾಗಿ ಯುವಕರು ಶ್ರಮದಾನ ಮಾಡಿ, ಗುಂಡಿಗಳಿಗೆ ಮಣ್ಣು ತುಂಬಿದ್ದರು. ಆದರೆ ಕೆಲವೆ ದಿನದಲ್ಲಿ ರಸ್ತೆ ಮತ್ತೆ ಗುಂಡಿ ಬೀಳುತ್ತಿದೆ. ಇದನ್ನು ಕೂಡಲೆ ಮುಚ್ಚಬೇಕು ಎಂದು ಯುವಕರು ಒತ್ತಾಯಿಸಿದ್ದಾರೆ.

ಮಧುಚಂದ್ರ ಗಾಳಿಪುರ, ಮಂಜು ಪೂಜಾರಿ, ಅಭಿಷೇಕ್, ಸಚಿನ್ ದೊಡ್ಡಮನಿ, ಪ್ರವೀಣ್, ಸುದೀಪ್ ಗಾಳಿಪುರ, ಪ್ರಜ್ವಲ್, ಮಹೇಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.  
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.