ETV Bharat / state

ವಿಚಾರಣೆಗೆ ಠಾಣೆಗೆ ಬಂದಿದ್ದ ವ್ಯಕ್ತಿ ಅನುಮಾನಾಸ್ಪದ ಸಾವು: ಎಸ್ಪಿ ಸ್ಪಷ್ಟನೆ - undefined

ಪೊಲೀಸ್ ಠಾಣೆಗೆ ವಿಚಾರಣೆಗೆಂದು ಕರೆದುಕೊಂಡು ಬಂದಿದ್ದ ವ್ಯಕ್ತಿಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ ಸ್ಪಷ್ಟನೆ ನೀಡಿದ್ದು, ಬಾಲೇಶ್​ ಅವರು ಹೃದಯಾಘಾತದಿಂದ  ಸಾವನ್ನಪ್ಪಿದ್ದು, ವೈದ್ಯರು ಧೃಢೀಕರಿಸಿದ್ದಾರೆ ಎಂದರು.

ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ
author img

By

Published : Jun 7, 2019, 4:08 PM IST

ಶಿವಮೊಗ್ಗ: ಪೊಲೀಸ್ ಠಾಣೆಗೆ ವಿಚಾರಣೆಗೆಂದು ಕರೆದುಕೊಂಡು ಬಂದಿದ್ದ ವ್ಯಕ್ತಿಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ ಸ್ಪಷ್ಟನೆ ಕೊಟ್ಟರು.

ವಿಚಾರಣೆಗೆ ಕರೆ ತಂದಿದ್ದ ವ್ಯಕ್ತಿ ಸಾವು ಪ್ರಕರಣಕ್ಕೆ ಸ್ಪಷ್ಟನೆ ನೀಡಿದ ಎಸ್ಪಿ

ಬಾಲೇಶ್ ಸಾವಿನ ಕುರಿತು ಮಾತನಾಡಿದ ಅವರು, ಬಾಲೇಶ್​ನನ್ನು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿ ಅವರ ಮನೆಗೆ ಕಳುಹಿಸಿ ಕೊಡಲಾಗಿತ್ತು. ಈ ವೇಳೆ ಬಾಲೇಶ್ ಕೈಮರದ ಬಳಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರ ಸಂಬಂಧಿ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮಾರ್ಗ ಮಧ್ಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದನ್ನು ವೈದ್ಯರೇ ಧೃಡೀಕರಿಸಿದ್ದಾರೆ ಎಂದರು.

ಬಾಲೇಶ್​ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.ಈ ಕುರಿತು ದಾಖಲೆಗಳಿವೆ. ಅವರನ್ನು ಯಾವ ಪೊಲೀಸ್ ಠಾಣೆಯಲ್ಲೂ ಸಹ ಥಳಿಸಲಾಗಿಲ್ಲ.ಅವರು ಹೃದಯಘಾತದಿಂದಲೇ ಸಾವನ್ನಪ್ಪಿದ್ದಾರೆ.ಇನ್ನೂ ಅವರ ಸಾವಿನ ಕುರಿತು ಕೆಲವರು ಅನುಮಾನ ವ್ಯಕ್ತಪಡಿಸುತ್ತಿರುವ ಕಾರಣ ಈ ಕುರಿತು ತನಿಖೆಗೆ ಆದೇಶ ಮಾಡಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಬಾಲೇಶ್​ ಹೊಳಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿ ಆಗರದಹಳ್ಳಿ ಕ್ಯಾಂಪ್​ನ ನಿವಾಸಿಯಾಗಿದ್ದು, ಮಟ್ಕಾ ದಂಧೆ ನಡೆಸುತ್ತಿದ್ದರು. ಈ ಕುರಿತು ಠಾಣೆಗೆ ವಿಚಾರಣೆಗೆ ಕರೆಯಿಸಿ ವಾಪಸ್ ಕಳುಹಿಸಿದಾಗ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಶಿವಮೊಗ್ಗ: ಪೊಲೀಸ್ ಠಾಣೆಗೆ ವಿಚಾರಣೆಗೆಂದು ಕರೆದುಕೊಂಡು ಬಂದಿದ್ದ ವ್ಯಕ್ತಿಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ ಸ್ಪಷ್ಟನೆ ಕೊಟ್ಟರು.

ವಿಚಾರಣೆಗೆ ಕರೆ ತಂದಿದ್ದ ವ್ಯಕ್ತಿ ಸಾವು ಪ್ರಕರಣಕ್ಕೆ ಸ್ಪಷ್ಟನೆ ನೀಡಿದ ಎಸ್ಪಿ

ಬಾಲೇಶ್ ಸಾವಿನ ಕುರಿತು ಮಾತನಾಡಿದ ಅವರು, ಬಾಲೇಶ್​ನನ್ನು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿ ಅವರ ಮನೆಗೆ ಕಳುಹಿಸಿ ಕೊಡಲಾಗಿತ್ತು. ಈ ವೇಳೆ ಬಾಲೇಶ್ ಕೈಮರದ ಬಳಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರ ಸಂಬಂಧಿ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರುವಾಗ ಮಾರ್ಗ ಮಧ್ಯೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಇದನ್ನು ವೈದ್ಯರೇ ಧೃಡೀಕರಿಸಿದ್ದಾರೆ ಎಂದರು.

ಬಾಲೇಶ್​ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.ಈ ಕುರಿತು ದಾಖಲೆಗಳಿವೆ. ಅವರನ್ನು ಯಾವ ಪೊಲೀಸ್ ಠಾಣೆಯಲ್ಲೂ ಸಹ ಥಳಿಸಲಾಗಿಲ್ಲ.ಅವರು ಹೃದಯಘಾತದಿಂದಲೇ ಸಾವನ್ನಪ್ಪಿದ್ದಾರೆ.ಇನ್ನೂ ಅವರ ಸಾವಿನ ಕುರಿತು ಕೆಲವರು ಅನುಮಾನ ವ್ಯಕ್ತಪಡಿಸುತ್ತಿರುವ ಕಾರಣ ಈ ಕುರಿತು ತನಿಖೆಗೆ ಆದೇಶ ಮಾಡಲಾಗಿದೆ. ವರದಿ ಬಂದ ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಬಾಲೇಶ್​ ಹೊಳಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿ ಆಗರದಹಳ್ಳಿ ಕ್ಯಾಂಪ್​ನ ನಿವಾಸಿಯಾಗಿದ್ದು, ಮಟ್ಕಾ ದಂಧೆ ನಡೆಸುತ್ತಿದ್ದರು. ಈ ಕುರಿತು ಠಾಣೆಗೆ ವಿಚಾರಣೆಗೆ ಕರೆಯಿಸಿ ವಾಪಸ್ ಕಳುಹಿಸಿದಾಗ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

Intro:ಬಾಲೇಶ್ ರವರು ಹೃದಯಾಘಾತದಿಂದಲೇ ಮೃತ ಪಟ್ಟಿದ್ದಾರೆ, ಇದನ್ನು ವೈದ್ಯರು ಸಹ ಧೃಡಿಕರಣ ಮಾಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ ರವರು ಸ್ಪಷ್ಟಪಡಿಸಿದ್ದಾರೆ. ತಮ್ಮ ಕಚೇರಿಯಲ್ಲಿ ಬಾಲೇಶ್ ಸಾವಿನ ಕುರಿತು ಮಾತನಾಡಿದ ಅವರು, ಬಾಲೇಶ್ ನನ್ನು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿ, ವಾಪಸ್ ಅವರ ಮನೆಗೆ ಕಳುಹಿಸಿ ಕೊಡಲಾಗಿತ್ತು. ಈ ವೇಳೆ ಬಾಲೇಶ್ ರವರು ಕೈಮರದ ಬಳಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರ ಸಂಬಂಧಿ ರವರು ಆಸ್ಪತ್ರೆಗೆ ಕರೆದು ಕೊಂಡು ಬರುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎಂದರು.


Body:ಬಾಲೇಶ್ ರವರಿಗೆ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಈ ಕುರಿತು ದಾಖಲೆಗಳಿವೆ. ಅವರನ್ನು ಯಾವ ಪೊಲೀಸ್ ಠಾಣೆಯಲ್ಲೂ ಸಹ ಥಳಿಸಿಲ್ಲ. ಅವರು ಹೃದಯಘಾತದಿಂದಲೇ ಸಾವನ್ನಪ್ಪಿದ್ದಾರೆ ಎಂದರು. ಇನ್ನೂ ಅವರ ಸಾವಿನ ಕುರಿತು ಕೆಲವರು ಅನುಮಾನ ವ್ಯಕ್ತಪಡಿಸುತ್ತಿರುವ ಕಾರಣ ಈ ಕುರಿತು ತನಿಖೆಗೆ ಆದೇಶ ಮಾಡಲಾಗಿದೆ. ವರದಿ ಬಂದ ನಂತ್ರ ಮುಂದಿನ ಕ್ರಮ ತೆಗೆದು ಕೊಳ್ಳಲಾಗುವುದು ಎಂದರು.


Conclusion:ಬಾಲೇಶ್ ರವರು ಹೊಳಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿ ಆಗರದಹಳ್ಳಿ ಕ್ಯಾಂಪ್ ನ ನಿವಾಸಿಯಾಗಿದ್ದಾರೆ. ಇವರು ಮಟ್ಕಾ ದಂಧೆ ನಡೆಸುತ್ತಿದ್ದರು. ಈ ಕುರಿತು ವಿಚಾರಣೆಗೆ ಕರೆಯಿಸಿ ವಾಪಸ್ ಕಳುಹಿಸಿದಾಗ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡುತ್ತಲೆ ಕಚೇರಿಯಿಂದ ಹೊರಗೆ ಎಸ್ಪಿ ಹೋದರು. ಆದ್ರೆ, ನಿನ್ನೆ ಹೊಳೆಹೊನ್ನೂರು ಪೊಲೀಸ್ ಠಾಣೆಯಿಂದ ಎಸ್ಪಿರವರ ಮುಂದೆ ಬಾಲೇಶ್ ನನ್ನು ಹೆಚ್ಚಿನ ವಿಚಾರಣೆಗೆ ಹಾಜರು ಪಡಿಸಲಾಗಿತ್ತು. ಈ ವೇಳೆ ಕುಸಿದು ಬಿದ್ದು ಮೃತ ಪಟ್ಟಿದ್ದಾರೆ ಎನ್ಬಲಾಗಿತ್ತು.

ಬೈಟ್: ಡಾ.ಅಶ್ವಿನಿ. ಎಸ್ಪಿ.

ಕಿರಣ್ ಕುಮಾರ್. ಶಿವಮೊಗ್ಗ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.