ETV Bharat / state

ಉದ್ಯೋಗ ಖಾತ್ರಿ ಕಾಮಗಾರಿ ವೀಕ್ಷಣೆ ಮಾಡಿದ ಸಚಿವ ಈಶ್ವರಪ್ಪ... ಕೊರೊನಾ ಬಗ್ಗೆ ಜಾಗೃತಿ - ಸಚಿವ ಈಶ್ವರಪ್ಪ

ಶಿಕಾರಿಪುರಲ್ಲಿ ಕೊರೊನಾ ವೈರಸ್ ತಡೆಯುವ ಬಗ್ಗೆ ಅಧಿಕಾರಿಗಳ ಸಭೆಗೆ ತೆರಳಲು ಹೊರಟಿದ್ದ ಸಚಿವ ಕೆ.ಎಸ್.ಈಶ್ವರಪ್ಪ, ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಕಾಮಗಾರಿಯಡಿಯಲ್ಲಿ ಕೆರೆ ಕೆಲಸ ನಡೆಯುತ್ತಿದ್ದ ಅಬ್ಬಲಗೆರೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ‌.

Minister Eshwarappa who inspected the work in shimoga
ಉದ್ಯೋಗ ಖಾತ್ರಿ ಕಾಮಗಾರಿ ವೀಕ್ಷಣೆ ನಡೆಸಿದ ಸಚಿವ ಈಶ್ವರಪ್ಪ.
author img

By

Published : Apr 1, 2020, 3:52 PM IST

ಶಿವಮೊಗ್ಗ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ‌.

ತಾಲೂಕಿನ ಅಬ್ಬಲಗೆರೆ ಗ್ರಾಮದ ಕೆರೆಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿ ನಡೆಯುತ್ತಿದೆ. ಈ ಮಧ್ಯೆ ಶಿಕಾರಿಪುರಲ್ಲಿ ಕೊರೊನಾ ವೈರಸ್ ತಡೆಯುವ ಬಗ್ಗೆ ಅಧಿಕಾರಿಗಳ ಸಭೆಗೆ ತೆರಳಲು ಹೊರಟಿದ್ದ ಸಚಿವರು ಕಾಮಗಾರಿ ವೀಕ್ಷಣೆ ಮಾಡಿದ್ದಾರೆ.

ಭೇಟಿ ನೀಡಿದ ಸಂದರ್ಭದಲ್ಲಿ ಕಾಮಗಾರಿಯಲ್ಲಿ ತೊಡಗಿಕೊಂಡವರನ್ನು ಮಾತನಾಡಿಸಿದ ಅವರು, ಕೆಲಸ ಮಾಡುವಾಗ ಒಬ್ಬರಿಂದ ಒಬ್ಬರು ಅಂತರ ಕಾಯ್ದುಕೊಳ್ಳಿ, ಎಲ್ಲರೂ ಕೈ ತೊಳೆದು ಊಟ ಮಾಡಿ, ನೀರು ಕುಡಿಯಿರಿ ಎಂದು ಸಲಹೆ ನೀಡಿದ್ದಾರೆ.

ಈ ವೇಳೆ ಜಿಲ್ಲಾಧಿಕಾರಿ ಶಿವಕುಮಾರ್, ಜಿ.ಪಂ ಸಿಇಒ ವೈಶಾಲಿ, ಎಸ್ಪಿ ಶಾಂತರಾಜು, ಡಿಹೆಚ್​ಒ ರಾಜೇಶ್ ಸೂರಗಿಹಳ್ಳಿ ಸೇರಿ‌ ಇತರರು ಹಾಜರಿದ್ದರು.

ಶಿವಮೊಗ್ಗ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ‌.

ತಾಲೂಕಿನ ಅಬ್ಬಲಗೆರೆ ಗ್ರಾಮದ ಕೆರೆಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿ ನಡೆಯುತ್ತಿದೆ. ಈ ಮಧ್ಯೆ ಶಿಕಾರಿಪುರಲ್ಲಿ ಕೊರೊನಾ ವೈರಸ್ ತಡೆಯುವ ಬಗ್ಗೆ ಅಧಿಕಾರಿಗಳ ಸಭೆಗೆ ತೆರಳಲು ಹೊರಟಿದ್ದ ಸಚಿವರು ಕಾಮಗಾರಿ ವೀಕ್ಷಣೆ ಮಾಡಿದ್ದಾರೆ.

ಭೇಟಿ ನೀಡಿದ ಸಂದರ್ಭದಲ್ಲಿ ಕಾಮಗಾರಿಯಲ್ಲಿ ತೊಡಗಿಕೊಂಡವರನ್ನು ಮಾತನಾಡಿಸಿದ ಅವರು, ಕೆಲಸ ಮಾಡುವಾಗ ಒಬ್ಬರಿಂದ ಒಬ್ಬರು ಅಂತರ ಕಾಯ್ದುಕೊಳ್ಳಿ, ಎಲ್ಲರೂ ಕೈ ತೊಳೆದು ಊಟ ಮಾಡಿ, ನೀರು ಕುಡಿಯಿರಿ ಎಂದು ಸಲಹೆ ನೀಡಿದ್ದಾರೆ.

ಈ ವೇಳೆ ಜಿಲ್ಲಾಧಿಕಾರಿ ಶಿವಕುಮಾರ್, ಜಿ.ಪಂ ಸಿಇಒ ವೈಶಾಲಿ, ಎಸ್ಪಿ ಶಾಂತರಾಜು, ಡಿಹೆಚ್​ಒ ರಾಜೇಶ್ ಸೂರಗಿಹಳ್ಳಿ ಸೇರಿ‌ ಇತರರು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.