ETV Bharat / state

ಸಿಎಂ ಸ್ಥಾನ ಕಳ್ಕೊಂಡ ನಂತರ ಸಿದ್ದರಾಮಯ್ಯ ಹುಚ್ಚರಾಗಿದ್ದಾರೆ: ಈಶ್ವರಪ್ಪ

author img

By

Published : Apr 5, 2021, 12:13 PM IST

ಸಿಎಂ ಕುರ್ಚಿಯಿಂದ ಇಳಿದ ಬಳಿಕ ಸಿದ್ದರಾಮಯ್ಯಗೆ ತಲೆ ಕೆಟ್ಟು ಹೋಗಿದೆ, ಅವರ ಪಕ್ಷದಲ್ಲಿ ಅವರ ಮಾತಿಗೆ ಬೆಲೆ ಇಲ್ಲ ಎಂದ ಮೇಲೆ ವಿರೋಧ ಪಕ್ಷದ ನಾಯಕ ಸ್ಥಾನದಿಂದ ನೀವು ರಾಜೀನಾಮೆ ನೀಡಿ ಎಂದು ಆಗ್ರಹಿಸುತ್ತೇನೆ ಎಂದರು.

minister Ishwarappa outrage against siddaramaiah
ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದಲ್ಲಿ ಕಸದ ತೊಟ್ಟಿಯಲ್ಲಿರುವ ವಸ್ತು ಇದ್ದಂತೆ ಎಂದು ಸಚಿವ ಕೆ. ಎಸ್ ಈಶ್ವರಪ್ಪ ಹೇಳಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎನ್ನುವ ಸಿದ್ದರಾಮಯ್ಯ ಹೇಳಿಕೆಗೆ ತೀರುಗೇಟು ನೀಡುತ್ತಾ, ಸಿದ್ದರಾಮಯ್ಯನವರಿಗೆ ತಲೆ ಕೆಟ್ಟು ಹೋಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಆಗುತ್ತಿರುವುದನ್ನು ನೋಡಿ ಏನು ಉತ್ತರ ಕೊಡಬೇಕು ಎಂಬುದನ್ನು ನೋಡೋಕೂ ಆಗದೇ, ಕೇಳೋಕೋ ಆಗದೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ನಂತರ ಸಿದ್ದರಾಮಯ್ಯ ಹುಚ್ಚರಾಗಿದ್ದಾರೆ ಎಂದರು.

ನನ್ನ ಇಲಾಖೆಯ ಅಧಿಕಾರಿಗಳು ನನ್ನ ಮಾತು ಕೇಳುತ್ತಿಲ್ಲ ಎನ್ನುತ್ತಿದ್ದಾರಲ್ಲ, ನಾಳೆ ಅಥವಾ ನಾಡಿದ್ದು ನಮ್ಮ ಅಧಿಕಾರಿಗಳು ನಮ್ಮ ರಾಜ್ಯದಲ್ಲಿ ಏನು ಸಾಧನೆ ಮಾಡಿದ್ದಾರೆ ಎನ್ನುವ ಪಟ್ಟಿ ಕೊಡುತ್ತೇನೆ. ಏನ್ ಮಾತನಾಡಬೇಕು ಎಂಬುವ ಕಲ್ಪನೆ ಇಲ್ಲದೆ ಅವರು ಮಾತನಾಡುತ್ತಿದ್ದಾರೆ.

ಕಾಂಗ್ರೆಸ್​ನಲ್ಲಿ ನೀವು ಕಸದ ತೊಟ್ಟಿಯಲ್ಲಿರುವ ವಸ್ತು ಆದಂತೆ ಆಗಿದ್ದೀರಿ. ನೀವು ಕಾಂಗ್ರೆಸ್​ನಲ್ಲಿ ಲೆಕ್ಕದಲ್ಲಿಯೂ ಇಲ್ಲ, ಬುಕ್​ನಲ್ಲಿಯೂ ಇಲ್ಲ, ನಿಮಗೆ ಕಾಂಗ್ರೆಸ್ ಪಕ್ಷದಲ್ಲಿ ಇಷ್ಟೊಂದು ಅಪಮಾನ ಇರಬೇಕಾದರೆ ವಿರೋಧ ಪಕ್ಷದ ನಾಯಕರಾಗಿ ಇರುವುದು ಸರಿಯಲ್ಲ, ಹಾಗಾಗಿ ವಿರೋಧ ಪಕ್ಷದ ನಾಯಕ ಸ್ಥಾನದಿಂದ ನೀವು ರಾಜೀನಾಮೆ ನೀಡಿ ಎಂದು ಆಗ್ರಹಿಸುತ್ತೇನೆ ಎಂದರು.

ಇದನ್ನೂ ಓದಿ:ರಮೇಶ್ ಜಾರಕಿಹೊಳಿಗೆ ಕೊರೊನಾ ಬಂದಿದೆ: ಸಚಿವ ಭೈರತಿ ಬಸವರಾಜ

ಶಿವಮೊಗ್ಗ: ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದಲ್ಲಿ ಕಸದ ತೊಟ್ಟಿಯಲ್ಲಿರುವ ವಸ್ತು ಇದ್ದಂತೆ ಎಂದು ಸಚಿವ ಕೆ. ಎಸ್ ಈಶ್ವರಪ್ಪ ಹೇಳಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎನ್ನುವ ಸಿದ್ದರಾಮಯ್ಯ ಹೇಳಿಕೆಗೆ ತೀರುಗೇಟು ನೀಡುತ್ತಾ, ಸಿದ್ದರಾಮಯ್ಯನವರಿಗೆ ತಲೆ ಕೆಟ್ಟು ಹೋಗಿದೆ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಆಗುತ್ತಿರುವುದನ್ನು ನೋಡಿ ಏನು ಉತ್ತರ ಕೊಡಬೇಕು ಎಂಬುದನ್ನು ನೋಡೋಕೂ ಆಗದೇ, ಕೇಳೋಕೋ ಆಗದೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ನಂತರ ಸಿದ್ದರಾಮಯ್ಯ ಹುಚ್ಚರಾಗಿದ್ದಾರೆ ಎಂದರು.

ನನ್ನ ಇಲಾಖೆಯ ಅಧಿಕಾರಿಗಳು ನನ್ನ ಮಾತು ಕೇಳುತ್ತಿಲ್ಲ ಎನ್ನುತ್ತಿದ್ದಾರಲ್ಲ, ನಾಳೆ ಅಥವಾ ನಾಡಿದ್ದು ನಮ್ಮ ಅಧಿಕಾರಿಗಳು ನಮ್ಮ ರಾಜ್ಯದಲ್ಲಿ ಏನು ಸಾಧನೆ ಮಾಡಿದ್ದಾರೆ ಎನ್ನುವ ಪಟ್ಟಿ ಕೊಡುತ್ತೇನೆ. ಏನ್ ಮಾತನಾಡಬೇಕು ಎಂಬುವ ಕಲ್ಪನೆ ಇಲ್ಲದೆ ಅವರು ಮಾತನಾಡುತ್ತಿದ್ದಾರೆ.

ಕಾಂಗ್ರೆಸ್​ನಲ್ಲಿ ನೀವು ಕಸದ ತೊಟ್ಟಿಯಲ್ಲಿರುವ ವಸ್ತು ಆದಂತೆ ಆಗಿದ್ದೀರಿ. ನೀವು ಕಾಂಗ್ರೆಸ್​ನಲ್ಲಿ ಲೆಕ್ಕದಲ್ಲಿಯೂ ಇಲ್ಲ, ಬುಕ್​ನಲ್ಲಿಯೂ ಇಲ್ಲ, ನಿಮಗೆ ಕಾಂಗ್ರೆಸ್ ಪಕ್ಷದಲ್ಲಿ ಇಷ್ಟೊಂದು ಅಪಮಾನ ಇರಬೇಕಾದರೆ ವಿರೋಧ ಪಕ್ಷದ ನಾಯಕರಾಗಿ ಇರುವುದು ಸರಿಯಲ್ಲ, ಹಾಗಾಗಿ ವಿರೋಧ ಪಕ್ಷದ ನಾಯಕ ಸ್ಥಾನದಿಂದ ನೀವು ರಾಜೀನಾಮೆ ನೀಡಿ ಎಂದು ಆಗ್ರಹಿಸುತ್ತೇನೆ ಎಂದರು.

ಇದನ್ನೂ ಓದಿ:ರಮೇಶ್ ಜಾರಕಿಹೊಳಿಗೆ ಕೊರೊನಾ ಬಂದಿದೆ: ಸಚಿವ ಭೈರತಿ ಬಸವರಾಜ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.