ETV Bharat / state

ಕುಡಿಯುವ ನೀರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ವಹಿಸಲು ಮಧು ಬಂಗಾರಪ್ಪ ಸೂಚನೆ

author img

By

Published : Jun 4, 2023, 5:22 PM IST

ಶಿವಮೊಗ್ಗ ಜಿಲ್ಲೆಯಲ್ಲಿರುವ ವಿವಿಧ ಸಮಸ್ಯೆಗಳ ಬಗ್ಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಚಿವ ಮಧುಬಂಗಾರಪ್ಪ ಸಭೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

minister-madhu-bangarappa-meeting-with-officers-in-shivamogga
ಕುಡಿಯುವ ನೀರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ವಹಿಸಲು ಮಧು ಬಂಗಾರಪ್ಪ ಸೂಚನೆ

ಶಿವಮೊಗ್ಗ : ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸೂಕ್ತ ಕ್ರಮ ವಹಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಏರ್ಪಡಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಹೋಬಳಿವಾರು ನೀರಿನ ಸಮಸ್ಯೆ ಇರುವ ಹಳ್ಳಿಗಳ ಪಟ್ಟಿ ಮಾಡಬೇಕು. ಸಿಇಓ ಅವರು ಸಮಸ್ಯಾತ್ಮಕ ಹಳ್ಳಿಗಳ ವರದಿ ಸಿದ್ಧಪಡಿಸಿ ಕುಡಿಯುವ ನೀರಿಗೆ ಕಿಂಚಿತ್ತೂ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ 2818 ಸರ್ಕಾರಿ ಶಾಲೆಗಳಿವೆ. ಇದರಲ್ಲಿ 0 ಶಿಕ್ಷಕರಿರುವ ಶಾಲೆಗಳು ಒಟ್ಟು 136 ಇವೆ. ಸಾಗರ ತಾಲ್ಲೂಕಿನಲ್ಲೇ 52 ಶಾಲೆಗಳಲ್ಲಿ ಶಿಕ್ಷಕರಿಲ್ಲ. ಮಲೆನಾಡಿನ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರಿಲ್ಲ. ಈ ಕುರಿತು ಡಿಡಿಪಿಐ ಅವರು ಹೆಚ್ಚಿನ ಗಮನ ಹರಿಸಬೇಕು. ಮುಂಬರುವ ವರ್ಗಾವಣೆ ಕೌನ್ಸೆಲಿಂಗ್‍ನಲ್ಲಿ ಈ ಪ್ರದೇಶಗಳಿಗೆ ಶಿಕ್ಷಕರು ವರ್ಗಾವಣೆಯಾಗುವಂತೆ, ಇತರೆಡೆ ನಿಯೋಜನೆಗೊಂಡ ಶಿಕ್ಷಕರನ್ನು ಇಲ್ಲಿ ನಿಯೋಜಿಸುವಂತೆ ಹಾಗೂ ಅತಿಥಿ ಶಿಕ್ಷಕರನ್ನು ಇಲ್ಲಿ ನಿಯೋಜಿಸುವ ಮೂಲಕ ಶಿಕ್ಷಕರನ್ನು ನೇಮಿಸಿ ಶಾಲೆಗಳು ನಡೆಯುವಂತೆ ನೋಡಿಕೊಳ್ಳಬೇಕು. ತಾವು ಸಹ ಸರ್ಕಾರದ ಹಂತದಲ್ಲಿ ಈ ಬಗ್ಗೆ ಕ್ರಮ ವಹಿಸುವುದಾಗಿ ತಿಳಿಸಿದರು.

ಡಿಡಿಪಿಐ ಮಾತನಾಡಿ, 167 ಪ್ರೌಢಶಾಲಾ ಶಿಕ್ಷಕರು, 1009 ಪ್ರಾಥಮಿಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಪ್ರಾಥಮಿಕ ಶಾಲೆಗೆ 1031 ಮತ್ತು ಪ್ರೌಢಶಾಲೆ 108 ಅತಿಥಿ ಶಿಕ್ಷಕರ ನೇಮಕಕ್ಕೆ ಅವಕಾಶ ನೀಡಲಾಗಿದೆ. ಈಗಾಗಲೇ 448 ಅತಿಥಿ ಶಿಕ್ಷಕರ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಶಾಲೆಗಳಲ್ಲಿ ಪಠ್ಯ, ಸಮವಸ್ತ್ರ ವಿತರಣೆಯಾಗಿದೆ ಎಂದು ಮಾಹಿತಿ ನೀಡಿದರು.

ಮಕ್ಕಳ ಭವಿಷ್ಯಕ್ಕಾಗಿ ಪಠ್ಯ ಪರಿಷ್ಕರಣೆ : ಮಕ್ಕಳ ಭವಿಷ್ಯಕ್ಕಾಗಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡುತ್ತಿದ್ದೇವೆ. ಇದನ್ನು ನಾವು ಪ್ರಣಾಳಿಕೆಯಲ್ಲೂ ಸೇರಿಸಿದ್ದೆವು. ಹಾಗಾಗಿ ನೂರಕ್ಕೆ ನೂರು ಪಠ್ಯ ಪುಸ್ತಕ ಪರಿಷ್ಕರಣೆ ಮಾಡುತ್ತೇವೆ. ಈ ಬಗ್ಗೆ ಈಗಾಗಲೇ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಜೊತೆಗೆ ಸಹ ಮಾತನಾಡಿದ್ದೇನೆ ಎಂದರು.

ಶರಾವತಿ ಸಂತ್ರಸ್ತರ ಜೊತೆ ಸರ್ಕಾರ ಇದೆ. ಶರಾವತಿ ಸಂತ್ರಸ್ತ ರೈತರ ಜೊತೆ ಸರ್ಕಾರ ಇರಲಿದೆ ಹಾಗೂ ಸಂತ್ರಸ್ತರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಸಚಿವರು ಭರಸವೆ ನೀಡಿದರು.

ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ತಮ್ಮ ಕ್ಷೇತ್ರದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಸುಮಾರು ರೂ. 250 ಕೋಟಿ ಕಾಮಗಾರಿ ಕೈಗೊಳ್ಳಲಾಗಿದ್ದರೂ ಇದುವರೆಗೆ ಒಂದು ಹನಿ ನೀರು ಬಂದಿಲ್ಲ. ಇಂಜಿನಿಯರ್, ಅಧಿಕಾರಿಗಳ ವಿರುದ್ಧ ತನಿಖೆ ನಡೆಸಬೇಕೆಂದು ಆಗ್ರಹಿಸಿದರು. ಅಂಬ್ಲಿಗೊಳ ಜಲಾಶಯದಲ್ಲಿ ಡೆಡ್ ಸ್ಟೋರೇಜ್‍ಗಿಂತ ಕಡಿಮೆ ನೀರು ಇದೆ. ಕುಡಿಯುವ ನೀರು ಬಿಟ್ಟು ಬೇರೆ ಉದ್ದೇಶಕ್ಕೆ ಬಳಕೆ ಮಾಡುವಂತಿಲ್ಲ. ಆದರೂ ಮುಳುಗಡೆ ಕ್ಷೇತ್ರವಾದ ಸಾಗರಕ್ಕೆ ನೀರು ಕೊಡದೆ ಶಿಕಾರಿಪುರಕ್ಕೆ ನೀರು ನೀಡಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದರು. ಜಿಲ್ಲಾಧಿಕಾರಿಗಳು ಈ ಕುರಿತು ಅಧಿಕಾರಿಗಳಿಂದ ವರದಿ ಪಡೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಾಗರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ 8 ಡಯಾಲಿಸಿಸ್ ಮಷಿನ್ ಕೆಲಸ ಮಾಡುತ್ತಿಲ್ಲ. ಅನುದಾನವಿದ್ದರೂ ಬಳಕೆ ಆಗುತ್ತಿಲ್ಲ. ಇದರಿಂದ ಬಡವರಿಗೆ ತುಂಬಾ ಅನಾನುಕೂಲವಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಜರುಗಿಸಬೇಕು. ಹಾಗೂ ಜನರಿಕ್ ಮಳಿಗೆಯಲ್ಲಿ ಔಷಧಿಗಳು ಲಭ್ಯವಿಲ್ಲ ಎಂದು ದೂರಿದರು. ಸಚಿವರು, ಡಯಾಲಿಸಿಸ್ ಮಷಿನ್, ಜನರಿಕ್ ಔಷಧಿ ಹಾಗೂ ಜನರಿಗೆ ಏನು ತ್ವರಿತವಾಗಿ ಅವಶ್ಯಕತೆಗಳಿವೆ ಎಂಬುದರ ಕುರಿತು ಬುಧವಾರದ ಒಳಗೆ ವರದಿ ನೀಡುವಂತೆ ಡಿಹೆಚ್‍ಓರವರಿಗೆ ತಿಳಿಸಿದರು.

ಡಯಾಲಿಸಿಸ್, 108 ಆಂಬ್ಯುಲೆನ್ಸ್ ಸಮಸ್ಯೆ ಇದೆ. ಜನೆರಿಕ್ ಔಷಧಿಗಳು ಬೇಡಿಕೆಗೆ ತಕ್ಕಂತೆ ಲಭ್ಯವಾಗುತ್ತಿಲ್ಲ ಹಾಗೂ ಡ್ರಗ್ ಲಾಜಿಸ್ಟಿಕ್ ಸಹ ಬೇಡಿಕೆ ಮತ್ತು ಸರಬರಾಜು ವ್ಯತ್ಯಾಸವಾಗುತ್ತಿದೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ ಕೆಎಸ್‍ಆರ್​​ಟಿಸಿ ಬಸ್ ಕೊರತೆ ಇದೆ. ಈ ಬಗ್ಗೆ ಜನರು ಹಲವಾರು ಬಾರಿ ಅಹವಾಲು ನೀಡಿದ್ದಾರೆ. ಹೆಚ್ಚುವರಿ ಬಸ್ ಅವಶ್ಯಕತೆ ಇರುವ ಸ್ಥಳಗಳ ಹಾಗೂ ಮಾರ್ಗಗಳ ವಿಸ್ತರಣೆ ಬಗ್ಗೆ ಪಟ್ಟಿ ಮಾಡಿ ನೀಡುವಂತೆ ತಿಳಿಸಿದರು. ಶಾಸಕಿ ಶಾರದಾ ಪೂರ್ಯಾನಾಯ್ಕ್ ಮಾತನಾಡಿ, ತಮ್ಮ ಕ್ಷೇತ್ರದಲ್ಲೂ ಜನರು ಮಾರ್ಗಗಳ ವಿಸ್ತರಣೆ ಬಗ್ಗೆ ಕೇಳುತ್ತಿದ್ದಾರೆ. ಒಂದೆರಡು ಹಳ್ಳಿಗಳಿಗೆ ಬಸ್ ಹೋಗುವ ಮೂಲಕ ಮಾರ್ಗಗಳ ವಿಸ್ತರಣೆ ಮಾಡುವಂತೆ ತಿಳಿಸಿದರು. ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲೆಗೆ ಸುಮಾರು 50 ಬಸ್‍ಗಳ ಅವಶ್ಯಕತೆ ಇದೆ. ಕೆಎಸ್‍ಆರ್​ಟಿಸಿ ಅವರಿಂದ ಪಟ್ಟಿ ತರಿಸಿ ಹೆಚ್ಚುವರಿ ಬೇಡಿಕೆ ಇರುವ, ಮಾರ್ಗಗಳ ವಿಸ್ತರಣೆ ಬಗ್ಗೆ ಸಚಿವರಿಗೆ ವರದಿ ಸಲ್ಲಿಸಲಾಗುವುದು ಎಂದರು.

ಶರಾವತಿ ಸಂತ್ರಸ್ತರು ತಮ್ಮ ವಿರುದ್ಧದ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನಿಗಾಗಿ ಬೆಂಗಳೂರಿಗೆ ಅಲೆಯುತ್ತಿದ್ದಾರೆ. ಅರಣ್ಯ ಕಾಯ್ದೆ ಇತರೆ ಕಾಯ್ದೆಗಳಡಿ ಸಿಲುಕಿ ಒದ್ದಾಡುತ್ತಿದ್ದು, ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯವರು ಮಾನವೀಯತೆಯಿಂದ ಇವರನ್ನು ನಡೆಸಿಕೊಳ್ಳಬೇಕಿದೆ. ಈ ಸಮಸ್ಯೆಗೆ ಪರಿಹಾರ ಹುಡುಕಬೇಕಿದ್ದು ಅರಣ್ಯ ಮತ್ತು ಕಂದಾಯ ಇಲಾಖೆಯ ಸಹಕಾರ ಅತ್ಯಂತ ಅವಶ್ಯಕವಾಗಿದೆ ಎಂದರು. ಮಳೆ ಹಾನಿ ಸಂಭವಿಸಿ ಮನೆ-ಜಾನುವಾರು-ಜೀವ ಹಾನಿಯಾದಾಗ ಅಧಿಕಾರಿಗಳು ಮಹಜರು ಮಾಡುವ ಸಂದರ್ಭದಲ್ಲಿ ಮಾನವೀಯತೆ ತೋರಬೇಕು. ಹಾನಿಯನ್ನು ಸಮರ್ಪಕವಾಗಿ ನಿರ್ಣಯಿಸಿ ಸೂಕ್ತ ಪರಿಹಾರ ನೀಡಬೇಕು ಎಂದರು.

ಕುಡಿಯುವ ನೀರು, ಮಳೆ ಅಥವಾ ಬೆಳೆ ಹಾನಿಗೆ ಸೂಕ್ತ ಪರಿಹಾರ, ಶಾಲಾ ಮಕ್ಕಳ ಕೊಠಡಿಗಳ ನಿರ್ಮಾಣಕ್ಕೆ ಮೊದಲ ಆದ್ಯತೆ ಸೇರಿದಂತೆ ಜನರಿಗೆ ಅತಿ ಅವಶ್ಯಕವಾಗಿ ಬೇಕಾದ ಸೌಲಭ್ಯಗಳು, ಪರಿಹಾರ ಕುರಿತು ಹೆಚ್ಚಿನ ಗಮನ ಹರಿಸಬೇಕು. ಶಿಕ್ಷಣ, ಆರೋಗ್ಯ ಸೇರಿದಂತೆ ಇತರೆ ಇಲಾಖೆಗಳಲ್ಲಿ ಅಗತ್ಯ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಪಟ್ಟಿ ಮಾಡಿ ವರದಿ ನೀಡಬೇಕೆಂದು ತಿಳಿಸಿದರು.

ನೀರು, ರಸ್ತೆ ಸೇರಿದಂತೆ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರೊಂದಿಗೆ ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ನಿಯಮಾನುಸಾರ ಅನುಷ್ಟಾನಕ್ಕೆ ತರಬೇಕು ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಅರಣ್ಯ ಅಧಿಕಾರಿ ಶಿವಶಂಕರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ನಾಳೆ ಬಿಜೆಪಿ ಪ್ರತಿಭಟನೆ: ಎನ್ ರವಿಕುಮಾರ್

ಶಿವಮೊಗ್ಗ : ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸೂಕ್ತ ಕ್ರಮ ವಹಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಏರ್ಪಡಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಹೋಬಳಿವಾರು ನೀರಿನ ಸಮಸ್ಯೆ ಇರುವ ಹಳ್ಳಿಗಳ ಪಟ್ಟಿ ಮಾಡಬೇಕು. ಸಿಇಓ ಅವರು ಸಮಸ್ಯಾತ್ಮಕ ಹಳ್ಳಿಗಳ ವರದಿ ಸಿದ್ಧಪಡಿಸಿ ಕುಡಿಯುವ ನೀರಿಗೆ ಕಿಂಚಿತ್ತೂ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ 2818 ಸರ್ಕಾರಿ ಶಾಲೆಗಳಿವೆ. ಇದರಲ್ಲಿ 0 ಶಿಕ್ಷಕರಿರುವ ಶಾಲೆಗಳು ಒಟ್ಟು 136 ಇವೆ. ಸಾಗರ ತಾಲ್ಲೂಕಿನಲ್ಲೇ 52 ಶಾಲೆಗಳಲ್ಲಿ ಶಿಕ್ಷಕರಿಲ್ಲ. ಮಲೆನಾಡಿನ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರಿಲ್ಲ. ಈ ಕುರಿತು ಡಿಡಿಪಿಐ ಅವರು ಹೆಚ್ಚಿನ ಗಮನ ಹರಿಸಬೇಕು. ಮುಂಬರುವ ವರ್ಗಾವಣೆ ಕೌನ್ಸೆಲಿಂಗ್‍ನಲ್ಲಿ ಈ ಪ್ರದೇಶಗಳಿಗೆ ಶಿಕ್ಷಕರು ವರ್ಗಾವಣೆಯಾಗುವಂತೆ, ಇತರೆಡೆ ನಿಯೋಜನೆಗೊಂಡ ಶಿಕ್ಷಕರನ್ನು ಇಲ್ಲಿ ನಿಯೋಜಿಸುವಂತೆ ಹಾಗೂ ಅತಿಥಿ ಶಿಕ್ಷಕರನ್ನು ಇಲ್ಲಿ ನಿಯೋಜಿಸುವ ಮೂಲಕ ಶಿಕ್ಷಕರನ್ನು ನೇಮಿಸಿ ಶಾಲೆಗಳು ನಡೆಯುವಂತೆ ನೋಡಿಕೊಳ್ಳಬೇಕು. ತಾವು ಸಹ ಸರ್ಕಾರದ ಹಂತದಲ್ಲಿ ಈ ಬಗ್ಗೆ ಕ್ರಮ ವಹಿಸುವುದಾಗಿ ತಿಳಿಸಿದರು.

ಡಿಡಿಪಿಐ ಮಾತನಾಡಿ, 167 ಪ್ರೌಢಶಾಲಾ ಶಿಕ್ಷಕರು, 1009 ಪ್ರಾಥಮಿಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಪ್ರಾಥಮಿಕ ಶಾಲೆಗೆ 1031 ಮತ್ತು ಪ್ರೌಢಶಾಲೆ 108 ಅತಿಥಿ ಶಿಕ್ಷಕರ ನೇಮಕಕ್ಕೆ ಅವಕಾಶ ನೀಡಲಾಗಿದೆ. ಈಗಾಗಲೇ 448 ಅತಿಥಿ ಶಿಕ್ಷಕರ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಶಾಲೆಗಳಲ್ಲಿ ಪಠ್ಯ, ಸಮವಸ್ತ್ರ ವಿತರಣೆಯಾಗಿದೆ ಎಂದು ಮಾಹಿತಿ ನೀಡಿದರು.

ಮಕ್ಕಳ ಭವಿಷ್ಯಕ್ಕಾಗಿ ಪಠ್ಯ ಪರಿಷ್ಕರಣೆ : ಮಕ್ಕಳ ಭವಿಷ್ಯಕ್ಕಾಗಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡುತ್ತಿದ್ದೇವೆ. ಇದನ್ನು ನಾವು ಪ್ರಣಾಳಿಕೆಯಲ್ಲೂ ಸೇರಿಸಿದ್ದೆವು. ಹಾಗಾಗಿ ನೂರಕ್ಕೆ ನೂರು ಪಠ್ಯ ಪುಸ್ತಕ ಪರಿಷ್ಕರಣೆ ಮಾಡುತ್ತೇವೆ. ಈ ಬಗ್ಗೆ ಈಗಾಗಲೇ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಜೊತೆಗೆ ಸಹ ಮಾತನಾಡಿದ್ದೇನೆ ಎಂದರು.

ಶರಾವತಿ ಸಂತ್ರಸ್ತರ ಜೊತೆ ಸರ್ಕಾರ ಇದೆ. ಶರಾವತಿ ಸಂತ್ರಸ್ತ ರೈತರ ಜೊತೆ ಸರ್ಕಾರ ಇರಲಿದೆ ಹಾಗೂ ಸಂತ್ರಸ್ತರ ಸಮಸ್ಯೆ ಬಗೆಹರಿಸುತ್ತೇವೆ ಎಂದು ಸಚಿವರು ಭರಸವೆ ನೀಡಿದರು.

ಶಾಸಕ ಗೋಪಾಲಕೃಷ್ಣ ಬೇಳೂರು ಮಾತನಾಡಿ, ತಮ್ಮ ಕ್ಷೇತ್ರದಲ್ಲಿ ಜಲಜೀವನ ಮಿಷನ್ ಯೋಜನೆಯಡಿ ಸುಮಾರು ರೂ. 250 ಕೋಟಿ ಕಾಮಗಾರಿ ಕೈಗೊಳ್ಳಲಾಗಿದ್ದರೂ ಇದುವರೆಗೆ ಒಂದು ಹನಿ ನೀರು ಬಂದಿಲ್ಲ. ಇಂಜಿನಿಯರ್, ಅಧಿಕಾರಿಗಳ ವಿರುದ್ಧ ತನಿಖೆ ನಡೆಸಬೇಕೆಂದು ಆಗ್ರಹಿಸಿದರು. ಅಂಬ್ಲಿಗೊಳ ಜಲಾಶಯದಲ್ಲಿ ಡೆಡ್ ಸ್ಟೋರೇಜ್‍ಗಿಂತ ಕಡಿಮೆ ನೀರು ಇದೆ. ಕುಡಿಯುವ ನೀರು ಬಿಟ್ಟು ಬೇರೆ ಉದ್ದೇಶಕ್ಕೆ ಬಳಕೆ ಮಾಡುವಂತಿಲ್ಲ. ಆದರೂ ಮುಳುಗಡೆ ಕ್ಷೇತ್ರವಾದ ಸಾಗರಕ್ಕೆ ನೀರು ಕೊಡದೆ ಶಿಕಾರಿಪುರಕ್ಕೆ ನೀರು ನೀಡಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದರು. ಜಿಲ್ಲಾಧಿಕಾರಿಗಳು ಈ ಕುರಿತು ಅಧಿಕಾರಿಗಳಿಂದ ವರದಿ ಪಡೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಸಾಗರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ 8 ಡಯಾಲಿಸಿಸ್ ಮಷಿನ್ ಕೆಲಸ ಮಾಡುತ್ತಿಲ್ಲ. ಅನುದಾನವಿದ್ದರೂ ಬಳಕೆ ಆಗುತ್ತಿಲ್ಲ. ಇದರಿಂದ ಬಡವರಿಗೆ ತುಂಬಾ ಅನಾನುಕೂಲವಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಜರುಗಿಸಬೇಕು. ಹಾಗೂ ಜನರಿಕ್ ಮಳಿಗೆಯಲ್ಲಿ ಔಷಧಿಗಳು ಲಭ್ಯವಿಲ್ಲ ಎಂದು ದೂರಿದರು. ಸಚಿವರು, ಡಯಾಲಿಸಿಸ್ ಮಷಿನ್, ಜನರಿಕ್ ಔಷಧಿ ಹಾಗೂ ಜನರಿಗೆ ಏನು ತ್ವರಿತವಾಗಿ ಅವಶ್ಯಕತೆಗಳಿವೆ ಎಂಬುದರ ಕುರಿತು ಬುಧವಾರದ ಒಳಗೆ ವರದಿ ನೀಡುವಂತೆ ಡಿಹೆಚ್‍ಓರವರಿಗೆ ತಿಳಿಸಿದರು.

ಡಯಾಲಿಸಿಸ್, 108 ಆಂಬ್ಯುಲೆನ್ಸ್ ಸಮಸ್ಯೆ ಇದೆ. ಜನೆರಿಕ್ ಔಷಧಿಗಳು ಬೇಡಿಕೆಗೆ ತಕ್ಕಂತೆ ಲಭ್ಯವಾಗುತ್ತಿಲ್ಲ ಹಾಗೂ ಡ್ರಗ್ ಲಾಜಿಸ್ಟಿಕ್ ಸಹ ಬೇಡಿಕೆ ಮತ್ತು ಸರಬರಾಜು ವ್ಯತ್ಯಾಸವಾಗುತ್ತಿದೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲೆಯಲ್ಲಿ ಕೆಎಸ್‍ಆರ್​​ಟಿಸಿ ಬಸ್ ಕೊರತೆ ಇದೆ. ಈ ಬಗ್ಗೆ ಜನರು ಹಲವಾರು ಬಾರಿ ಅಹವಾಲು ನೀಡಿದ್ದಾರೆ. ಹೆಚ್ಚುವರಿ ಬಸ್ ಅವಶ್ಯಕತೆ ಇರುವ ಸ್ಥಳಗಳ ಹಾಗೂ ಮಾರ್ಗಗಳ ವಿಸ್ತರಣೆ ಬಗ್ಗೆ ಪಟ್ಟಿ ಮಾಡಿ ನೀಡುವಂತೆ ತಿಳಿಸಿದರು. ಶಾಸಕಿ ಶಾರದಾ ಪೂರ್ಯಾನಾಯ್ಕ್ ಮಾತನಾಡಿ, ತಮ್ಮ ಕ್ಷೇತ್ರದಲ್ಲೂ ಜನರು ಮಾರ್ಗಗಳ ವಿಸ್ತರಣೆ ಬಗ್ಗೆ ಕೇಳುತ್ತಿದ್ದಾರೆ. ಒಂದೆರಡು ಹಳ್ಳಿಗಳಿಗೆ ಬಸ್ ಹೋಗುವ ಮೂಲಕ ಮಾರ್ಗಗಳ ವಿಸ್ತರಣೆ ಮಾಡುವಂತೆ ತಿಳಿಸಿದರು. ಇದಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲೆಗೆ ಸುಮಾರು 50 ಬಸ್‍ಗಳ ಅವಶ್ಯಕತೆ ಇದೆ. ಕೆಎಸ್‍ಆರ್​ಟಿಸಿ ಅವರಿಂದ ಪಟ್ಟಿ ತರಿಸಿ ಹೆಚ್ಚುವರಿ ಬೇಡಿಕೆ ಇರುವ, ಮಾರ್ಗಗಳ ವಿಸ್ತರಣೆ ಬಗ್ಗೆ ಸಚಿವರಿಗೆ ವರದಿ ಸಲ್ಲಿಸಲಾಗುವುದು ಎಂದರು.

ಶರಾವತಿ ಸಂತ್ರಸ್ತರು ತಮ್ಮ ವಿರುದ್ಧದ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನಿಗಾಗಿ ಬೆಂಗಳೂರಿಗೆ ಅಲೆಯುತ್ತಿದ್ದಾರೆ. ಅರಣ್ಯ ಕಾಯ್ದೆ ಇತರೆ ಕಾಯ್ದೆಗಳಡಿ ಸಿಲುಕಿ ಒದ್ದಾಡುತ್ತಿದ್ದು, ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯವರು ಮಾನವೀಯತೆಯಿಂದ ಇವರನ್ನು ನಡೆಸಿಕೊಳ್ಳಬೇಕಿದೆ. ಈ ಸಮಸ್ಯೆಗೆ ಪರಿಹಾರ ಹುಡುಕಬೇಕಿದ್ದು ಅರಣ್ಯ ಮತ್ತು ಕಂದಾಯ ಇಲಾಖೆಯ ಸಹಕಾರ ಅತ್ಯಂತ ಅವಶ್ಯಕವಾಗಿದೆ ಎಂದರು. ಮಳೆ ಹಾನಿ ಸಂಭವಿಸಿ ಮನೆ-ಜಾನುವಾರು-ಜೀವ ಹಾನಿಯಾದಾಗ ಅಧಿಕಾರಿಗಳು ಮಹಜರು ಮಾಡುವ ಸಂದರ್ಭದಲ್ಲಿ ಮಾನವೀಯತೆ ತೋರಬೇಕು. ಹಾನಿಯನ್ನು ಸಮರ್ಪಕವಾಗಿ ನಿರ್ಣಯಿಸಿ ಸೂಕ್ತ ಪರಿಹಾರ ನೀಡಬೇಕು ಎಂದರು.

ಕುಡಿಯುವ ನೀರು, ಮಳೆ ಅಥವಾ ಬೆಳೆ ಹಾನಿಗೆ ಸೂಕ್ತ ಪರಿಹಾರ, ಶಾಲಾ ಮಕ್ಕಳ ಕೊಠಡಿಗಳ ನಿರ್ಮಾಣಕ್ಕೆ ಮೊದಲ ಆದ್ಯತೆ ಸೇರಿದಂತೆ ಜನರಿಗೆ ಅತಿ ಅವಶ್ಯಕವಾಗಿ ಬೇಕಾದ ಸೌಲಭ್ಯಗಳು, ಪರಿಹಾರ ಕುರಿತು ಹೆಚ್ಚಿನ ಗಮನ ಹರಿಸಬೇಕು. ಶಿಕ್ಷಣ, ಆರೋಗ್ಯ ಸೇರಿದಂತೆ ಇತರೆ ಇಲಾಖೆಗಳಲ್ಲಿ ಅಗತ್ಯ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಪಟ್ಟಿ ಮಾಡಿ ವರದಿ ನೀಡಬೇಕೆಂದು ತಿಳಿಸಿದರು.

ನೀರು, ರಸ್ತೆ ಸೇರಿದಂತೆ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರೊಂದಿಗೆ ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ನಿಯಮಾನುಸಾರ ಅನುಷ್ಟಾನಕ್ಕೆ ತರಬೇಕು ಅಧಿಕಾರಿಗಳಿಗೆ ತಿಳಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್, ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಅರಣ್ಯ ಅಧಿಕಾರಿ ಶಿವಶಂಕರ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ನಾಳೆ ಬಿಜೆಪಿ ಪ್ರತಿಭಟನೆ: ಎನ್ ರವಿಕುಮಾರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.