ಶಿವಮೊಗ್ಗ : ಜಿಲ್ಲೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಹಾಗೂ ಆರ್ಟ್ ಆಫ್ ಲೀವಿಂಗ್ನ ಅಂತರ್ಜಲ ಯೋಜನೆಯ ಕುರಿತು ಪಿಡಿಒಗಳ ಪ್ರಗತಿ ಪರಿಶೀಲನಾ ಸಭೆಯನ್ನು ಸಚಿವ ಕೆ ಎಸ್ ಈಶ್ವರಪ್ಪ ನಡೆಸಿದರು.
ಜಿಲ್ಲೆಯ ಕುವೆಂಪು ರಂಗಮಂದಿರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ತಾಲೂಕುವಾರು ಪ್ರಗತಿ ಪರಿಶೀಲನೆ ನಡೆಸಿದರು. ಈ ವೇಳೆ ನರೇಗಾದ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡರು.
ನರೇಗಾದಲ್ಲಿ ಮುಖ್ಯವಾಗಿ ಕೆರೆ ಹೂಳೆತ್ತುವುದು, ವೈಯಕ್ತಿಕ ಕೆಲಸ, ಕೊಟ್ಟಿಗೆ ನಿರ್ಮಾಣ ಸೇರಿ ಇತರೆ ಕಾಮಗಾರಿಗಳ ಮಾಹಿತಿ ಪಡೆದರು. ಈ ವೇಳೆ ಕಾಮಗಾರಿಯಲ್ಲಿ ಪ್ರಗತಿ ತೋರದ ಪಿಡಿಒಗಳು ಹಾಗೂ ತಾಲೂಕು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ, ಯಾಕೆ ಇಷ್ಟೊಂದು ನಿರ್ಲಕ್ಷ್ಯ ತೋರುತ್ತಿದ್ದೀರಿ ಎಂದು ತೀವ್ರ ತರಾಟೆಗೆ ತೆಗೆದುಕೊಂಡರು.
ಈ ಸಭೆಯಲ್ಲಿ ಜಿಪಂ ಅಧ್ಯಕ್ಷೆ ಜ್ಯೋತಿ ಎಸ್ ಕುಮಾರ್, ಜಿಪಂ ಸಿಇಒ ವೈಶಾಲಿ ಸೇರಿ ಇತರೆ ಅಧಿಕಾರಿಗಳು ಹಾಜರಿದ್ದರು.