ETV Bharat / state

ಕಾವೇರಿ ವಿಚಾರವಾಗಿ ಪ್ರಧಾನಿ ಮಧ್ಯಸ್ಥಿಕೆಯಿಂದ ಏನು ಆಗುವುದಿಲ್ಲ: ಸಂಸದ ಬಿ ವೈ ರಾಘವೇಂದ್ರ

ಇಂಡಿಯಾ ಕೂಟದಲ್ಲಿ ತಮಿಳುನಾಡಿನ ಸಿಎಂ ಸ್ಟಾಲಿನ್ ಕೂಡ ಇದ್ದಾರೆ. ಅವರಿಗೆ ರಾಜ್ಯದ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು ಎಂದು ನಾನು ರಾಜ್ಯ ಕಾಂಗ್ರೆಸ್​ ಸರ್ಕಾರಕ್ಕೆ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು.

author img

By ETV Bharat Karnataka Team

Published : Sep 26, 2023, 5:30 PM IST

Updated : Sep 26, 2023, 5:52 PM IST

mp-b-y-raghavendra-reaction-on-cauvery-issue
ಕಾವೇರಿ ವಿಚಾರವಾಗಿ ಪ್ರಧಾನಿ ಮಧ್ಯಸ್ಥಿಕೆಯಿಂದ ಏನು ಆಗುವುದಿಲ್ಲ: ಸಂಸದ ಬಿ ವೈ ರಾಘವೇಂದ್ರ
ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗ: ಬೆಂಗಳೂರು ಬಂದ್​ ಆಗುವ ಪರಿಸ್ಥಿತಿ ಬರಬಾರದಿತ್ತು. ಮೊದಲೇ ಸರಿಯಾದ ಕ್ರಮ ಮತ್ತು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನ್ಯಾಯಾಲಯದಲ್ಲಿ ಸರಿಯಾಗಿ ನಮ್ಮ ಪರವಾಗಿ ವಾದ ಮಂಡಿಸಿದ್ದರೆ ಈ ರೀತಿಯ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು. ಬೆಂಗಳೂರು ಬಂದ್ ವಿಚಾರವಾಗಿ ನಗರದಲ್ಲಿಂದು ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ವರ್ಷಕ್ಕೆ 40 ಟಿಎಂಸಿ ಕುಡಿಯುವ ನೀರು ಬೇಕು. ಆದರೆ ಡ್ಯಾಂನಲ್ಲಿ ನೀರಿನ ಪ್ರಮಾಣ ತುಂಬಾ ಕಡಿಮೆ ಇದೆ ಎಂದರು.

ರೈತರಿಗೆ 100ಕ್ಕೂ ಹೆಚ್ಚು ಟಿಎಂಸಿ ನೀರು ಬೇಕಾಗುತ್ತದೆ. ರಾಜ್ಯದ ಜನರ ಹಿತದೃಷ್ಟಿಯಿಂದ ಸರ್ಕಾರ ಗಂಭೀರವಾದ ನಿಲುವನ್ನು ತೆಗೆದುಕೊಳ್ಳಬೇಕು. ಈಗ ಅವರಲ್ಲೇ ಗೊಂದಲಗಳಿವೆ, ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಸಿಎಂ ಹಾಗೂ ನೀರಾವರಿ ಸಚಿವರಾಗಿರುವ ಡಿ ಕೆ ಶಿವಕುಮಾರ್​ ಅವರು ಅವರ ಕಾರ್ಯಕ್ರಮಗಳಲ್ಲಿ ಗಮನ ಹರಿಸಿದ್ದಾರೆ. ಅವರು ಮೊನ್ನೆ ದೆಹಲಿಗೆ ಬಂದಿದ್ದರು, ಅಲ್ಲಿ ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸಲಾಯಿತು ಎಂದರು.

ಇಂಡಿಯಾ ಕೂಟದಲ್ಲಿ ತಮಿಳುನಾಡಿನ ಸಿಎಂ ಸ್ಟಾಲಿನ್ ಕೂಡ ಇದ್ದಾರೆ. ಅವರಿಗೆ ರಾಜ್ಯದ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು ಎಂದು ನಾನು ರಾಜ್ಯ ಕಾಂಗ್ರೆಸ್​ ಸರ್ಕಾರಕ್ಕೆ ವಿನಂತಿ ಮಾಡಿಕೊಳ್ಳುತ್ತೇನೆ ಎಂದರು. ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಅವರಿಗೆ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರು ಪತ್ರ ಬರೆದಿರುವ ವಿಚಾರವಾಗಿ ಮಾತನಾಡಿ, ಈಗಾಗಲೇ ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್​ ಶೇಖಾವತ್ ಈ ವಿಚಾರವಾಗಿ ಮಧ್ಯೆಪ್ರವೇಶಿಸಿದ್ದಾರೆ ಎಂದು ತಿಳಿಸಿದರು.

ಕಾವೇರಿ ವಿಷಯ ಯಾವುದೇ ಒಬ್ಬ ಮಂತ್ರಿ, ಸರ್ಕಾರದ ಚೌಕಟ್ಟಿನಲ್ಲಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಎರಡ್ಮೂರು ಕಾನೂನು ಬದ್ಧ ಸಮಿತಿಗಳನ್ನು ಮಾಡಿದ್ದಾರೆ. ಅಲ್ಲಿ ಇದರ ಬಗ್ಗೆ ತೀರ್ಮಾನಗಳು ಆಗಬೇಕು. ಯಾರು ವೈಯಕ್ತಿಕವಾಗಿ ಮಧ್ಯಸ್ಥಿಕೆ ವಹಿಸಲು ಬರುವುದಿಲ್ಲ. ಸಮಿತಿಗಳಿಗೆ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ತಮಿಳುನಾಡು ಹೆಚ್ಚಿನ ಪ್ರದೇಶದಲ್ಲಿ ಕೃಷಿ ಚಟುವಟಿಕೆ ಮಾಡುತ್ತ ಹೆಚ್ಚಿನ ಪ್ರಮಾಣದಲ್ಲಿ ನೀರು ಬಳಕೆ ಮಾಡುತ್ತಿದೆ. ಈ ಬಗ್ಗೆ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕು. ಈ ವಿಚಾರವಾಗಿ ಪ್ರಧಾನಮಂತ್ರಿ ಮಧ್ಯಸ್ಥಿಕೆಯಿಂದ ಏನು ಆಗುವುದಿಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರ ಹೆಚ್ಚಿನ ಮದ್ಯದಂಗಡಿ ತೆರೆಯುತ್ತಿರುವ ವಿಚಾರವಾಗಿ ಮಾತನಾಡಿ, ಇರುವಂತಹ ಮದ್ಯದ ಅಂಗಡಿ‌ಗಳನ್ನು ಮುಚ್ಚಬೇಕು ಅಂತಾ ಮಹಿಳಾ ಸಂಘಟನೆಗಳು ಹೋರಾಟ ಮಾಡುತ್ತಿವೆ. ಸಮಾಜದ ವ್ಯವಸ್ಥೆಯನ್ನು ಹಾಳು ಮಾಡುವ ನಿಟ್ಟಿನಲ್ಲಿ ಸರ್ಕಾರ ಇದನ್ನು ಆರನೇ ಗ್ಯಾರಂಟಿಯನ್ನಾಗಿ ಕೊಡುತ್ತಿದೆ. ಈ ಮೂಲಕ ಆದಾಯವನ್ನು ಹೆಚ್ಚಿಸಲು ಮುಂದಾಗಿದ್ದಾರೆ. ಬಡವರು 500 ರೂ. ದುಡಿದಿರುತ್ತಾರೆ, ಅವರಿಂದ ವಾಪಸ್​ ನೂರಿನ್ನೂರು ರೂಪಾಯಿ ಕಿತ್ತುಕೊಂಡು ಸರ್ಕಾರ ನಡೆಸುವ ದುಸ್ಥಿತಿಗೆ ಇವತ್ತು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಕೈಹಾಕಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಕಾವೇರಿ ನೀರು ವಿಚಾರದಲ್ಲಿ ಸರ್ಕಾರದ ವಿರುದ್ಧ ಕಿಡಿಕಾರಿದ ಮಾಜಿ ಸಚಿವ ಜಿ ಟಿ ದೇವೇಗೌಡ

ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗ: ಬೆಂಗಳೂರು ಬಂದ್​ ಆಗುವ ಪರಿಸ್ಥಿತಿ ಬರಬಾರದಿತ್ತು. ಮೊದಲೇ ಸರಿಯಾದ ಕ್ರಮ ಮತ್ತು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ನ್ಯಾಯಾಲಯದಲ್ಲಿ ಸರಿಯಾಗಿ ನಮ್ಮ ಪರವಾಗಿ ವಾದ ಮಂಡಿಸಿದ್ದರೆ ಈ ರೀತಿಯ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು. ಬೆಂಗಳೂರು ಬಂದ್ ವಿಚಾರವಾಗಿ ನಗರದಲ್ಲಿಂದು ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಬೆಂಗಳೂರಿಗೆ ವರ್ಷಕ್ಕೆ 40 ಟಿಎಂಸಿ ಕುಡಿಯುವ ನೀರು ಬೇಕು. ಆದರೆ ಡ್ಯಾಂನಲ್ಲಿ ನೀರಿನ ಪ್ರಮಾಣ ತುಂಬಾ ಕಡಿಮೆ ಇದೆ ಎಂದರು.

ರೈತರಿಗೆ 100ಕ್ಕೂ ಹೆಚ್ಚು ಟಿಎಂಸಿ ನೀರು ಬೇಕಾಗುತ್ತದೆ. ರಾಜ್ಯದ ಜನರ ಹಿತದೃಷ್ಟಿಯಿಂದ ಸರ್ಕಾರ ಗಂಭೀರವಾದ ನಿಲುವನ್ನು ತೆಗೆದುಕೊಳ್ಳಬೇಕು. ಈಗ ಅವರಲ್ಲೇ ಗೊಂದಲಗಳಿವೆ, ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಸಿಎಂ ಹಾಗೂ ನೀರಾವರಿ ಸಚಿವರಾಗಿರುವ ಡಿ ಕೆ ಶಿವಕುಮಾರ್​ ಅವರು ಅವರ ಕಾರ್ಯಕ್ರಮಗಳಲ್ಲಿ ಗಮನ ಹರಿಸಿದ್ದಾರೆ. ಅವರು ಮೊನ್ನೆ ದೆಹಲಿಗೆ ಬಂದಿದ್ದರು, ಅಲ್ಲಿ ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸಲಾಯಿತು ಎಂದರು.

ಇಂಡಿಯಾ ಕೂಟದಲ್ಲಿ ತಮಿಳುನಾಡಿನ ಸಿಎಂ ಸ್ಟಾಲಿನ್ ಕೂಡ ಇದ್ದಾರೆ. ಅವರಿಗೆ ರಾಜ್ಯದ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು ಎಂದು ನಾನು ರಾಜ್ಯ ಕಾಂಗ್ರೆಸ್​ ಸರ್ಕಾರಕ್ಕೆ ವಿನಂತಿ ಮಾಡಿಕೊಳ್ಳುತ್ತೇನೆ ಎಂದರು. ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಅವರಿಗೆ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರು ಪತ್ರ ಬರೆದಿರುವ ವಿಚಾರವಾಗಿ ಮಾತನಾಡಿ, ಈಗಾಗಲೇ ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್​ ಶೇಖಾವತ್ ಈ ವಿಚಾರವಾಗಿ ಮಧ್ಯೆಪ್ರವೇಶಿಸಿದ್ದಾರೆ ಎಂದು ತಿಳಿಸಿದರು.

ಕಾವೇರಿ ವಿಷಯ ಯಾವುದೇ ಒಬ್ಬ ಮಂತ್ರಿ, ಸರ್ಕಾರದ ಚೌಕಟ್ಟಿನಲ್ಲಿಲ್ಲ. ಈ ವಿಚಾರಕ್ಕೆ ಸಂಬಂಧಿಸಿದಂತೆ ಎರಡ್ಮೂರು ಕಾನೂನು ಬದ್ಧ ಸಮಿತಿಗಳನ್ನು ಮಾಡಿದ್ದಾರೆ. ಅಲ್ಲಿ ಇದರ ಬಗ್ಗೆ ತೀರ್ಮಾನಗಳು ಆಗಬೇಕು. ಯಾರು ವೈಯಕ್ತಿಕವಾಗಿ ಮಧ್ಯಸ್ಥಿಕೆ ವಹಿಸಲು ಬರುವುದಿಲ್ಲ. ಸಮಿತಿಗಳಿಗೆ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು. ತಮಿಳುನಾಡು ಹೆಚ್ಚಿನ ಪ್ರದೇಶದಲ್ಲಿ ಕೃಷಿ ಚಟುವಟಿಕೆ ಮಾಡುತ್ತ ಹೆಚ್ಚಿನ ಪ್ರಮಾಣದಲ್ಲಿ ನೀರು ಬಳಕೆ ಮಾಡುತ್ತಿದೆ. ಈ ಬಗ್ಗೆ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕು. ಈ ವಿಚಾರವಾಗಿ ಪ್ರಧಾನಮಂತ್ರಿ ಮಧ್ಯಸ್ಥಿಕೆಯಿಂದ ಏನು ಆಗುವುದಿಲ್ಲ ಎಂದು ಹೇಳಿದರು.

ರಾಜ್ಯ ಸರ್ಕಾರ ಹೆಚ್ಚಿನ ಮದ್ಯದಂಗಡಿ ತೆರೆಯುತ್ತಿರುವ ವಿಚಾರವಾಗಿ ಮಾತನಾಡಿ, ಇರುವಂತಹ ಮದ್ಯದ ಅಂಗಡಿ‌ಗಳನ್ನು ಮುಚ್ಚಬೇಕು ಅಂತಾ ಮಹಿಳಾ ಸಂಘಟನೆಗಳು ಹೋರಾಟ ಮಾಡುತ್ತಿವೆ. ಸಮಾಜದ ವ್ಯವಸ್ಥೆಯನ್ನು ಹಾಳು ಮಾಡುವ ನಿಟ್ಟಿನಲ್ಲಿ ಸರ್ಕಾರ ಇದನ್ನು ಆರನೇ ಗ್ಯಾರಂಟಿಯನ್ನಾಗಿ ಕೊಡುತ್ತಿದೆ. ಈ ಮೂಲಕ ಆದಾಯವನ್ನು ಹೆಚ್ಚಿಸಲು ಮುಂದಾಗಿದ್ದಾರೆ. ಬಡವರು 500 ರೂ. ದುಡಿದಿರುತ್ತಾರೆ, ಅವರಿಂದ ವಾಪಸ್​ ನೂರಿನ್ನೂರು ರೂಪಾಯಿ ಕಿತ್ತುಕೊಂಡು ಸರ್ಕಾರ ನಡೆಸುವ ದುಸ್ಥಿತಿಗೆ ಇವತ್ತು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಕೈಹಾಕಿದೆ ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಕಾವೇರಿ ನೀರು ವಿಚಾರದಲ್ಲಿ ಸರ್ಕಾರದ ವಿರುದ್ಧ ಕಿಡಿಕಾರಿದ ಮಾಜಿ ಸಚಿವ ಜಿ ಟಿ ದೇವೇಗೌಡ

Last Updated : Sep 26, 2023, 5:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.