ಶಿವಮೊಗ್ಗ: ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ ಪುನಶ್ಚೇತನಗೊಳಿಸಲು ಪ್ರಯತ್ನಿಸಲಾಗಿದ್ದು, ಈ ಸಂಬಂಧ ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
VISL ಕಾರ್ಖಾನೆ ಪುನಶ್ಚೇತನ ಬಗ್ಗೆ ಕೇಂದ್ರದಿಂದ ಉತ್ತಮ ಸ್ಪಂದನೆ: ಬಿ.ವೈ.ರಾಘವೇಂದ್ರ
ಎಂಪಿಎಂ ಹಾಗೂ ವಿಐಎಸ್ಎಲ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಬಗ್ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
![VISL ಕಾರ್ಖಾನೆ ಪುನಶ್ಚೇತನ ಬಗ್ಗೆ ಕೇಂದ್ರದಿಂದ ಉತ್ತಮ ಸ್ಪಂದನೆ: ಬಿ.ವೈ.ರಾಘವೇಂದ್ರ MP B.Y. Raghavendra meeting](https://etvbharatimages.akamaized.net/etvbharat/prod-images/768-512-11015644-thumbnail-3x2-vis.jpg?imwidth=3840)
ಇದೇ ರೀತಿ ಎಂಪಿಎಂ ಕಾರ್ಖಾನೆಯನ್ನು ಖಾಸಗಿ ವ್ಯವಸ್ಥೆಯಲ್ಲಿ ನಡೆಸಲು ಈಗಾಗಲೇ ಟೆಂಡರ್ ಕರೆದಿದ್ದು, ಶೀಘ್ರ ಅದು ಒಂದು ಹಂತಕ್ಕೆ ಬರಲಿದೆ. ಈ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಕೈಗಾರಿಕಾ ಕಾರ್ಯದರ್ಶಿ ಗೌರವ್ ಗುಪ್ತ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.
ಶಿವಮೊಗ್ಗ: ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆ ಪುನಶ್ಚೇತನಗೊಳಿಸಲು ಪ್ರಯತ್ನಿಸಲಾಗಿದ್ದು, ಈ ಸಂಬಂಧ ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
ಇದೇ ರೀತಿ ಎಂಪಿಎಂ ಕಾರ್ಖಾನೆಯನ್ನು ಖಾಸಗಿ ವ್ಯವಸ್ಥೆಯಲ್ಲಿ ನಡೆಸಲು ಈಗಾಗಲೇ ಟೆಂಡರ್ ಕರೆದಿದ್ದು, ಶೀಘ್ರ ಅದು ಒಂದು ಹಂತಕ್ಕೆ ಬರಲಿದೆ. ಈ ಹಿನ್ನೆಲೆಯಲ್ಲಿ ಇಂದು ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಕೈಗಾರಿಕಾ ಕಾರ್ಯದರ್ಶಿ ಗೌರವ್ ಗುಪ್ತ ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.