ETV Bharat / state

ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದ ಸಂಸದ

ಎಸ್​ಎಸ್​ಎಲ್​ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಹಾರೈಸಿದ್ದಾರೆ.

author img

By

Published : Jun 25, 2020, 12:10 PM IST

mp by raghavendra
ಸಂಸದ ಬಿವೈ ರಾಘವೇಂದ್ರ

ಶಿವಮೊಗ್ಗ: ರಾಜ್ಯಾದ್ಯಂತ ಎಸ್​​ಎಸ್​ಎಲ್​ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಹಾಗಾಗಿ ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳು ಧೃತಿಗೆಡದೇ ಪರೀಕ್ಷೆ ಬರೆಯಲು ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

ಸಂಸದ ಬಿವೈ ರಾಘವೇಂದ್ರ

ಈ ಹಿನ್ನೆಲೆಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಪೋಷಕರು ಮತ್ತು ಮಕ್ಕಳು ಆತಂಕ ಪಡುವುದು ಬೇಡ . ಎಸ್ಎಸ್​ಎಲ್​ಸಿ ಪ್ರತಿಯೊಬ್ಬರ ಜೀವನದಲ್ಲಿ ಬಹು ಮುಖ್ಯ ಶೈಕ್ಷಣಿಕ ಹಂತ. ಕೊರೊನಾ ಕಾರಣಕ್ಕಾಗಿ ಪೋಷಕರು ಮತ್ತು ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಮಕ್ಕಳಿಗೆ ಸೋಂಕು ಹರಡದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ ಎಂದು ಭರವಸೆ ನೀಡಿದರು.

ಜೊತೆಗೆ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ, ಎಲ್ಲ ವಿದ್ಯಾರ್ಥಿಗಳಿಗೆ ಶುಭವಾಗಲಿ ಎಂದು ಹಾರೈಸಿದ್ದಾರೆ.

ಶಿವಮೊಗ್ಗ: ರಾಜ್ಯಾದ್ಯಂತ ಎಸ್​​ಎಸ್​ಎಲ್​ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಹಾಗಾಗಿ ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳು ಧೃತಿಗೆಡದೇ ಪರೀಕ್ಷೆ ಬರೆಯಲು ಸರ್ಕಾರ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

ಸಂಸದ ಬಿವೈ ರಾಘವೇಂದ್ರ

ಈ ಹಿನ್ನೆಲೆಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಪೋಷಕರು ಮತ್ತು ಮಕ್ಕಳು ಆತಂಕ ಪಡುವುದು ಬೇಡ . ಎಸ್ಎಸ್​ಎಲ್​ಸಿ ಪ್ರತಿಯೊಬ್ಬರ ಜೀವನದಲ್ಲಿ ಬಹು ಮುಖ್ಯ ಶೈಕ್ಷಣಿಕ ಹಂತ. ಕೊರೊನಾ ಕಾರಣಕ್ಕಾಗಿ ಪೋಷಕರು ಮತ್ತು ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಮಕ್ಕಳಿಗೆ ಸೋಂಕು ಹರಡದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ ಎಂದು ಭರವಸೆ ನೀಡಿದರು.

ಜೊತೆಗೆ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ, ಎಲ್ಲ ವಿದ್ಯಾರ್ಥಿಗಳಿಗೆ ಶುಭವಾಗಲಿ ಎಂದು ಹಾರೈಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.