ETV Bharat / state

ಗುಂಪು ಹತ್ಯೆ ವಿರೋಧಿಸಿ ಮುಸ್ಲಿಂ ಮಹಿಳೆಯರಿಂದ ಮೌನ ಪ್ರತಿಭಟನೆ

ಮುಸ್ಲಿಂರ ಮೇಲೆ ನಿಲ್ಲದ ಗುಂಪು ಹತ್ಯೆ, ಮೋಬ್​ ಲಿಂಚಿಂಗ್​​ ವಿರುದ್ಧ ಕಠಿಣ ಕ್ರಮ ಜಾರಿಗೆ ತರಬೇಕೆಂದು ಮುಸ್ಲಿಂ ಸಮುದಾಯದವರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದರು.

author img

By

Published : Jul 20, 2019, 4:45 AM IST

ಮುಸ್ಲಿಂ ಮಹಿಳೆಯರ ಪ್ರತಿಭಟನೆ

ಶಿವಮೊಗ್ಗ: ಗುಂಪು ಹತ್ಯೆಯ ವಿರುದ್ಧ ಕಠಿಣ ಕಾನೂನು ಜಾರಿ ಮತ್ತು ಗುಂಪು ಹತ್ಯೆ ಮಾಡುವರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಶಿವಮೊಗ್ಗದ ಪೀಸ್ ಮುಸ್ಲಿಂ ಮಹಿಳಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಭಾರತ ಜಾತ್ಯತೀತ ರಾಷ್ಟ್ರ ,ಆದರೆ ಇಲ್ಲಿ ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆಗಳು ನಡೆಯುತ್ತಿದೆ. ಸಂವಿಧಾನದಲ್ಲಿ ಎಲ್ಲರೂ ಒಂದೇ ಆಗಿದ್ದರೂ ಸಹ ಕೆಲವು ಸಂಘಟನೆಗಳು ಅಮಾಯಕರ ಮೇಲೆ ಗುಂಪು ಹತ್ಯೆ ಮಾಡಲು ಪ್ರಚೋದನೆ ನೀಡುತ್ತಿವೆ ಎಂದು ಆರೋಪಿಸಿದರು.

ಮೋಬ್​ ಲಿಂಚಿಂಗ್​​ ವಿರೋಧಿಸಿ ಮುಸ್ಲಿಂ ಮಹಿಳೆಯರ ಪ್ರತಿಭಟನೆ

ಈ ಕುರಿತು ಮಾತನಾಡಿದ ಮೆಹೇಕ್ ಶರೀಪ್ ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹಾಗೂ ಬೇರೆ ಬೇರೆ ಕಡೆಗಳಲ್ಲಿ ಇಂತಹ ಘಟನೆಗಳು ನಡೆಯುತ್ತಲೇ ಇವೆ. ನಮ್ಮನ್ನು ನೆಮ್ಮದಿಯಿಂದ ಬದುಕಲು ಬಿಡಿ, ಇಂತಹ ಕೃತ್ಯವನ್ನ ಮಾಡುವವರ ವಿರುದ್ಧ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಶಿವಮೊಗ್ಗ: ಗುಂಪು ಹತ್ಯೆಯ ವಿರುದ್ಧ ಕಠಿಣ ಕಾನೂನು ಜಾರಿ ಮತ್ತು ಗುಂಪು ಹತ್ಯೆ ಮಾಡುವರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಶಿವಮೊಗ್ಗದ ಪೀಸ್ ಮುಸ್ಲಿಂ ಮಹಿಳಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಭಾರತ ಜಾತ್ಯತೀತ ರಾಷ್ಟ್ರ ,ಆದರೆ ಇಲ್ಲಿ ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆಗಳು ನಡೆಯುತ್ತಿದೆ. ಸಂವಿಧಾನದಲ್ಲಿ ಎಲ್ಲರೂ ಒಂದೇ ಆಗಿದ್ದರೂ ಸಹ ಕೆಲವು ಸಂಘಟನೆಗಳು ಅಮಾಯಕರ ಮೇಲೆ ಗುಂಪು ಹತ್ಯೆ ಮಾಡಲು ಪ್ರಚೋದನೆ ನೀಡುತ್ತಿವೆ ಎಂದು ಆರೋಪಿಸಿದರು.

ಮೋಬ್​ ಲಿಂಚಿಂಗ್​​ ವಿರೋಧಿಸಿ ಮುಸ್ಲಿಂ ಮಹಿಳೆಯರ ಪ್ರತಿಭಟನೆ

ಈ ಕುರಿತು ಮಾತನಾಡಿದ ಮೆಹೇಕ್ ಶರೀಪ್ ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹಾಗೂ ಬೇರೆ ಬೇರೆ ಕಡೆಗಳಲ್ಲಿ ಇಂತಹ ಘಟನೆಗಳು ನಡೆಯುತ್ತಲೇ ಇವೆ. ನಮ್ಮನ್ನು ನೆಮ್ಮದಿಯಿಂದ ಬದುಕಲು ಬಿಡಿ, ಇಂತಹ ಕೃತ್ಯವನ್ನ ಮಾಡುವವರ ವಿರುದ್ಧ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Intro:ಶಿವಮೊಗ್ಗ,
ಗುಂಪು ಹತ್ಯೆ, ಮೋಬ್ ಲಿಂಚಿಂಗ್ ವಿರುದ್ಧ ಕಠಿಣ ಕಾನೂನು ಜಾರಿಗೊಳಿಸಿ, ಹಾಗೂ ಗುಂಪು ಹತ್ಯೆ ಮಾಡುವರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಶಿವಮೊಗ್ಗ ದ ಪೀಸ್ ಮುಸ್ಲಿಂ ಮಹಿಳಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ಮಾಡಲಾಯಿತು.


Body:ಭಾರತ ಜಾತ್ಯತೀತ ರಾಷ್ಟ್ರ ,ಆದರೆ ಇಲ್ಲಿ ಅಲ್ಪಸಂಖ್ಯಾತರ ಮೇಲೆ ದಬ್ಬಾಳಿಕೆಗಳು ನಡೆಯುತ್ತಿದೆ. ಸಂವಿಧಾನದಲ್ಲಿ ಎಲ್ಲರೂ ಒಂದೇ ಆಗಿದ್ದರು ಕೆಲವು ಸಂಘಟನೆಗಳು ಅಮಾಯಕರ ಮೇಲೆ ಗುಂಪು ಹತ್ಯೆ ಮಾಡಲು ಪ್ರಚೋದನೆ ನೀಡುತ್ತಿವೆ ಎಂದು ಆರೋಪಿಸಿದರು.
ಈ ಕುರಿತು ಮಾತನಾಡಿದ ಮೆಹೇಕ್ ಷರೀಪ್ ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹಾಗೂ ಬೇರೆ ಬೇರೆ ಕಡೆಗಳಲ್ಲಿ ಇಂತಹ ಘಟನೆಗಳು ನಡೆಯುತ್ತಿವೆ ಹಾಗಾಗಿ ನಮ್ಮ ನೆಮ್ಮದಿಯಿಂದ ಬದುಕಲು ಬಿಡಿ, ಇಂತಹ ಕೃತ್ಯ ವನ್ನ ಮಾಡುವರ ವಿರುದ್ಧ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕ್ರಮ ಕೈಗೊಳ್ಳಲ ಬೇಕು ಎಂದು ಒತ್ತಾಯಿಸಿದರು.
ಬೈಟ್.. ಮೆಹೇಕ್ ಷರೀಫ್ - ಪೀಸ್ ಮುಸ್ಲಿಂ ಮಹಿಳಾ ಘಟಕದ ಸದಸ್ಯೆ
ಭೀಮಾನಾಯ್ಕ ಎಸ್ ಶಿವಮೊಗ್ಗ


Conclusion:

For All Latest Updates

TAGGED:

shimogga
ETV Bharat Logo

Copyright © 2024 Ushodaya Enterprises Pvt. Ltd., All Rights Reserved.