ETV Bharat / state

ಫೆ. 1ರಂದು ಶಿವಮೊಗ್ಗದಲ್ಲಿ ಸಿಎಎ, ಎನ್​ಆರ್​ಸಿ ವಿರುದ್ಧ ಪ್ರತಿಭಟನೆ - ಸ್ವರಾಜ್ ಇಂಡಿಯಾದ ಜಿಲ್ಲಾ ವಕ್ತಾರ ಕೆ.ಪಿ ಶ್ರೀಪಾಲ್​

ಸಿಎಎ, ಎನ್​ಆರ್​ಸಿ ಜಾರಿ ಖಂಡಿಸಿ ಫೆಬ್ರವರಿ 1ರಂದು ಪ್ರತಿಭಟನೆ ಹಾಗೂ ಪರಿವರ್ತನಾ ಸಭೆಯನ್ನು ಬಹುಜನ ಕ್ರಾಂತಿ ಮೋರ್ಚಾ, ದಲಿತ ಸಂಘರ್ಷ ಸಮಿತಿ, ಸಿಟಿಜನ್ ಯುನೈಟೆಡ್ ಮೂಮೆಂಟ್​ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸ್ವರಾಜ್ ಇಂಡಿಯಾದ ಜಿಲ್ಲಾ ವಕ್ತಾರ ಕೆ.ಪಿ.ಶ್ರೀಪಾಲ್​ ತಿಳಿಸಿದರು.

Shivamogga
ಸಿಎಎ, ಎನ್​ಆರ್​ಸಿ ವಿರುದ್ಧ ಪ್ರತಿಭಟನೆ
author img

By

Published : Jan 31, 2020, 12:40 PM IST

ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಸಿಎಎ, ಎನ್​ಆರ್​ಸಿ ಮತ್ತು ಒಂದೇ ಪಕ್ಷದ ಪರವಾಗಿರುವ ಇವಿಎಂ ವಿರುದ್ಧ ಪ್ರತಿಭಟನೆ ಹಾಗೂ ಪರಿವರ್ತನಾ ಸಭೆಯನ್ನು ಫೆಬ್ರವರಿ 1ರಂದು ಹಮ್ಮಿಕೊಳ್ಳಲಾಗಿದೆ ಎಂದು ಸ್ವರಾಜ್ ಇಂಡಿಯಾದ ಜಿಲ್ಲಾ ವಕ್ತಾರ ಕೆ.ಪಿ.ಶ್ರೀಪಾಲ್​ ತಿಳಿಸಿದರು.

ಸಿಎಎ, ಎನ್​ಆರ್​ಸಿ ವಿರುದ್ಧ ಪ್ರತಿಭಟನೆ

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಎ, ಎನ್​ಆರ್​ಸಿ ಜಾರಿ ಖಂಡಿಸಿ ಬಹುಜನ ಕ್ರಾಂತಿ ಮೋರ್ಚಾ, ದಲಿತ ಸಂಘರ್ಷ ಸಮಿತಿ, ಸಿಟಿಜನ್ ಯುನೈಟೆಡ್ ಮೂಮೆಂಟ್​ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಸಂದೇಶ ಮೋಟಾರ್ ಪಕ್ಕದ ಮೈದಾನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬಹುಜನ ಕ್ರಾಂತಿ ಮೋರ್ಚಾದ ರಾಷ್ಟ್ರೀಯ ಸಂಯೋಜಕ ವಾಮನ್ ಮೆಶ್ರಾಮ್, ಆಲ್ ಇಂಡಿಯಾ ಪರ್ಸನಲ್‌ ಲಾ ಬೋರ್ಡ್​ನ ವಕ್ತಾರ ವಮೋಲಾನ ಸಜ್ಜಾದ್ ನೋಮಾನಿ, ಮುಸ್ಲಿಂ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಅಬ್ದುಲ್ ಹಮೀದ್ ಹಜಾರಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಶಿವಮೊಗ್ಗ: ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಸಿಎಎ, ಎನ್​ಆರ್​ಸಿ ಮತ್ತು ಒಂದೇ ಪಕ್ಷದ ಪರವಾಗಿರುವ ಇವಿಎಂ ವಿರುದ್ಧ ಪ್ರತಿಭಟನೆ ಹಾಗೂ ಪರಿವರ್ತನಾ ಸಭೆಯನ್ನು ಫೆಬ್ರವರಿ 1ರಂದು ಹಮ್ಮಿಕೊಳ್ಳಲಾಗಿದೆ ಎಂದು ಸ್ವರಾಜ್ ಇಂಡಿಯಾದ ಜಿಲ್ಲಾ ವಕ್ತಾರ ಕೆ.ಪಿ.ಶ್ರೀಪಾಲ್​ ತಿಳಿಸಿದರು.

ಸಿಎಎ, ಎನ್​ಆರ್​ಸಿ ವಿರುದ್ಧ ಪ್ರತಿಭಟನೆ

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಎ, ಎನ್​ಆರ್​ಸಿ ಜಾರಿ ಖಂಡಿಸಿ ಬಹುಜನ ಕ್ರಾಂತಿ ಮೋರ್ಚಾ, ದಲಿತ ಸಂಘರ್ಷ ಸಮಿತಿ, ಸಿಟಿಜನ್ ಯುನೈಟೆಡ್ ಮೂಮೆಂಟ್​ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಸಂದೇಶ ಮೋಟಾರ್ ಪಕ್ಕದ ಮೈದಾನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬಹುಜನ ಕ್ರಾಂತಿ ಮೋರ್ಚಾದ ರಾಷ್ಟ್ರೀಯ ಸಂಯೋಜಕ ವಾಮನ್ ಮೆಶ್ರಾಮ್, ಆಲ್ ಇಂಡಿಯಾ ಪರ್ಸನಲ್‌ ಲಾ ಬೋರ್ಡ್​ನ ವಕ್ತಾರ ವಮೋಲಾನ ಸಜ್ಜಾದ್ ನೋಮಾನಿ, ಮುಸ್ಲಿಂ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಅಬ್ದುಲ್ ಹಮೀದ್ ಹಜಾರಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.