ಶಿವಮೊಗ್ಗ: ಜನವರಿ 16 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭದ್ರಾವತಿಯ ಬುಳ್ಳಾಪುರದಲ್ಲಿ ಸ್ಥಾಪನೆಯಾಗುತ್ತಿರು ಕ್ಷಿಪ್ರ ಕಾರ್ಯಾಚರಣೆ ಪಡೆ(RAF) ಕೇಂದ್ರದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ.
ಕಾರ್ಯಕ್ರಮದ ರೂಪುರೇಷೆ ಹಾಗೂ ಸ್ಥಳ ಪರಿಶೀಲನೆ ನಡೆಸಲು ಕೇಂದ್ರ ಮೀಸಲು ಪಡೆಯ ಹಿರಿಯ ಅಧಿಕಾರಿಗಳೊಂದಿಗೆ ಸಂಸದ ರಾಘವೇಂದ್ರ ಅವರು ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾ.ಮತ್ತು ಸು.) ಶ್ರೀ ಪ್ರತಾಪ್ ರೆಡ್ಡಿ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು, ಜಿಲ್ಲಾಧಿಕಾರಿ ಶ್ರೀ ಕೆ.ಬಿ. ಶಿವಕುಮಾರ್, ಶಿವಮೊಗ್ಗ ಪೊಲೀಸ್ ಅಧೀಕ್ಷಕರಾದ ಶ್ರೀ ಕೆ.ಎಂ. ಶಾಂತರಾಜು ಹಾಗೂ ಕೇಂದ್ರ ಮೀಸಲು ಪೋಲಿಸ್ ಪಡೆಯ ಐ.ಜಿ.ಪಿ.ಗಳು ಉಪಸ್ಥಿತರಿದ್ದರು.
ಓದಿ :ಮೆಜೆಸ್ಟಿಕ್ನಿಂದ ವಿಮಾನ ನಿಲ್ದಾಣಕ್ಕೆ ರೈಲು ಸಂಚಾರ ಆರಂಭ; ಜಸ್ಟ್ 10 ರೂ.ನಲ್ಲಿ ಏರ್ಪೋರ್ಟ್ ತಲುಪಿ!!
ಸಂಸದ ಶ್ರೀ ಬಿ.ವೈ. ರಾಘವೇಂದ್ರ ಅವರು ಜನಪ್ರತಿನಿಧಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.