ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ತವರು ಜಿಲ್ಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ 'ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಬೆಡ್ ಇಲ್ಲ, ದಯವಿಟ್ಟು ಸಹಕರಿಸಿ' ಎಂಬ ನಾಮಪಲಕ ಹಾಕಲಾಗಿದೆ.
ರಾಜ್ಯಾದ್ಯಂತ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದು, ಆಕ್ಸಿಜನ್ ಬೆಡ್ಗಳ ಕೊರತೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಇಷ್ಟು ದಿನ ನಮ್ಮಲ್ಲಿ ಆಕ್ಸಿಜನ್ ಬೆಡ್ಗಳ ಕೊರತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರೇ ಹೇಳಿಕೆ ನೀಡುತ್ತಿದ್ದರು. ಆದರೆ ಇಂದು ನಗರದ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಮುಂಭಾಗದಲ್ಲಿ ಕೋವಿಡ್ ಆಕ್ಸಿಜನ್ ಬೆಡ್ಗಳಿಲ್ಲ, ದಯವಿಟ್ಟು ಸಹಕರಿಸಿ ಎಂಬ ನಾಮಫಲಕ ಹಾಕಲಾಗಿದೆ.
ಇದರಿಂದಾಗಿ ಮೆಗ್ಗಾನ್ ಆಸ್ಪತ್ರೆಗೆ ಬರುವ ಕೋವಿಡ್ ಸೋಂಕಿತರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿದೆ. ಹಾಗಾಗಿ ಆದಷ್ಟು ಬೇಗ ಆಕ್ಸಿಜನ್ ಬೆಡ್ಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.
ಈ ಕುರಿತು ‘ಈಟಿವಿ ಭಾರತ’ಗೆ ಫೋನ್ ಮೂಲಕ ಪ್ರತಿಕ್ರಿಯಿಸಿದ ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷ ಡಾ.ಶ್ರೀಧರ್ ಎಸ್., ಕೋವಿಡ್ ಆಕ್ಸಿಜನ್ ಬೆಡ್ಗಳು ಇಲ್ಲದಿರುವುದನ್ನು ಖಚಿತಪಡಿಸಿದ್ದಾರೆ.
ಇದನ್ನೂ ಓದಿ: ದೇವರಿಗೆ ಕೇಳಿಸಲಿಲ್ಲ ಮಗನ ಕೂಗು... ಕೊನೆಗೂ ಬದುಕಲಿಲ್ಲ ಯೋಧನ ತಾಯಿ!