ಶಿವಮೊಗ್ಗ : ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪದ ಮೇರೆಗೆ ಹೊಳೆಹೊನ್ನೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ನನ್ನು ಎಸ್ಪಿ ಲಕ್ಷ್ಮಿಪ್ರಸಾದ್ ಅಮಾನತು ಮಾಡಿ ಆದೇಶ ಮಾಡಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣೆಯ ಗಿರಿಧರ್ ಅಮಾನತಾದ ಹೆಡ್ ಕಾನ್ಸ್ಟೇಬಲ್ ಆಗಿದ್ದಾರೆ.
ಗಿರಿಧರ್ 112 ವಾಹನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಭದ್ರಾವತಿ ತಾಲೂಕು ಯಡೇಹಳ್ಳಿ ಗ್ರಾಮಕ್ಕೆ ಕರ್ತವ್ಯಕ್ಕೆ ಹೋದಾಗ ವೀರಶೈವ ಸಮಾಜದವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು ಎಂದು ಆರೋಪಿಸಲಾಗಿತ್ತು.
ಈ ಕುರಿತು ಗ್ರಾಮಸ್ಥರು ಭದ್ರಾವತಿ ಡಿವೈಎಸ್ಪಿ ಹಾಗೂ ಎಸ್ಪಿಗೆ ದೂರು ನೀಡಿದ್ದರು. ದೂರನ್ನು ಪರಿಶೀಲಿಸಿದ ಎಸ್ಪಿ ಲಕ್ಷ್ಮಿಪ್ರಸಾದ್ ಅವರು ಆರೋಪ ಸಾಬೀತಾದ ಹಿನ್ನೆಲೆ ಗಿರಿಧರ್ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಇದೇ ತಿಂಗಳು 25 ರಿಂದ 1-5ನೇ ತರಗತಿ ಆರಂಭ.. ಶೇ 50 ರಷ್ಟು ಮಾತ್ರ ಹಾಜರಾತಿ