ಶಿವಮೊಗ್ಗ: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಇಡೀ ದೇಶವೇ ಲಾಕ್ ಡೌನ್ ಆಗಿದೆ. ಆದರೆ, ಇಂಥಹ ಕಠಿಣ ಪರಿಸ್ಥಿತಿಯಲ್ಲೂ ನಗರದಲ್ಲಿ ತಿಥಿ ಕಾರ್ಯ ಮಾಡಿದ್ದಾರೆ. ಈ ಹಿನ್ನೆಲೆ ಪೊಲೀಸರು ಸರಿಯಾಗೇ ಬಿಸಿ ಮುಟ್ಟಿಸಿದ್ದಾರೆ.
ಶಿವಮೊಗ್ಗ ತುಂಗಾ ನದಿ ದಡದ ಕೊರ್ಲಪಲಯ್ಯನ ಛತ್ರದ ಬಳಿಯ ಮಂಟಪದಲ್ಲಿ ಸುಮಾರು 150 ಜನ ತಿಥಿ ಕಾರ್ಯ ನಡೆಸುತ್ತಿದ್ದರು. ಇದರಲ್ಲಿ ಕೆಲವರಷ್ಟೆ ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ರೆ, ಉಳಿದವರು ಯಾವುದೇ ಮುನ್ನಚ್ಚರಿಕಾ ಕ್ರಮ ತೆಗೆದುಕೊಳ್ಳದೆ ತಿಥಿ ಕಾರ್ಯದಲ್ಲಿ ಭಾಗಿಯಾಗಿದ್ದರು.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಅಲ್ಲಿಂದ ವಾಪಸ್ ಕಳುಹಿಸಿದ್ದಾರೆ.