ETV Bharat / state

ಅತ್ಯಾಚಾರವೆಸಗಿ ಪಶುವೈದ್ಯೆಯ ಕೊಲೆ ಖಂಡಿಸಿ ಎನ್​​ಎಸ್​​ಯುಐನಿಂದ ಪ್ರತಿಭಟನೆ

author img

By

Published : Dec 2, 2019, 5:15 PM IST

ಹೈದರಾಬಾದ್​ನ ಸರ್ಕಾರಿ ಪಶು ವೈದ್ಯೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದನ್ನು ಖಂಡಿಸಿ, ಅತ್ಯಾಚಾರಿಗಳನ್ನು ಶೀಘ್ರವೇ ಗಲ್ಲಿಗೇರಿಸುವಂತೆ ಒತ್ತಾಯಿಸಿ, ಶಿವಮೊಗ್ಗ ಜಿಲ್ಲಾ ಎನ್​​​ಎಸ್​​​ಯುಐ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.

Protest by NSU
ಪ್ರತಿಭಟನಾನಿರತ ವಿದ್ಯಾರ್ಥಿಗಳು

ಶಿವಮೊಗ್ಗ: ಹೈದರಾಬಾದ್​ನ ಪಶು ವೈದ್ಯಾಧಿಕಾರಿ ಮೇಲೆ ನಡೆದ ಅತ್ಯಾಚಾರ ಹಾಗೂ ನಂತರದ ವಿಕೃತ ಕ್ರೌರ್ಯ, ಮಾನವ ಸಮಾಜ ತಲೆ ತಗ್ಗಿಸುವಂತಹ ಘಟನೆಯಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಎನ್ ಎಸ್ ಯುಐ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ಪಶುವೈದ್ಯೆಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ನಡೆಸಿ ಜೀವಂತವಾಗಿ ಸುಟ್ಟುಹಾಕಿದ ನಾಲ್ವರು, ರಕ್ಕಸ ಕೃತ್ಯವೆಸಗಿದ್ದಾರೆ. ಅಲ್ಲದೆ ರಾಜಸ್ಥಾನದ ಜೈಪುರದಲ್ಲಿ‌ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ. ಇತ್ತಿಚೇಗೆ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಎಗ್ಗಿಲ್ಲದೆ ನಡೆಯುತ್ತಿವೆ. ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ. ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಕಾಮಾಂಧರಿಗೆ ಕಾನೂನಿನ ಮೂಲಕ ಕಠಿಣ ಶಿಕ್ಷೆ ಆಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾನಿರತ ವಿದ್ಯಾರ್ಥಿಗಳು

ಮಹಿಳಾ ದೌರ್ಜನ್ಯ ತಡೆಗೆ ವಿಶೇಷ ಕೋರ್ಟ್ ಸ್ಥಾಪಿಸಬೇಕು. ಇಂತಹ ದೌರ್ಜನ್ಯ ಎಸಗಿದವರಿಗೆ ಸಾರ್ವಜನಿಕವಾಗಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಲಾಯಿತು. ಪ್ರತಿಭಟನೆಯಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಶಿವಮೊಗ್ಗ: ಹೈದರಾಬಾದ್​ನ ಪಶು ವೈದ್ಯಾಧಿಕಾರಿ ಮೇಲೆ ನಡೆದ ಅತ್ಯಾಚಾರ ಹಾಗೂ ನಂತರದ ವಿಕೃತ ಕ್ರೌರ್ಯ, ಮಾನವ ಸಮಾಜ ತಲೆ ತಗ್ಗಿಸುವಂತಹ ಘಟನೆಯಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಎನ್ ಎಸ್ ಯುಐ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.

ಪಶುವೈದ್ಯೆಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ನಡೆಸಿ ಜೀವಂತವಾಗಿ ಸುಟ್ಟುಹಾಕಿದ ನಾಲ್ವರು, ರಕ್ಕಸ ಕೃತ್ಯವೆಸಗಿದ್ದಾರೆ. ಅಲ್ಲದೆ ರಾಜಸ್ಥಾನದ ಜೈಪುರದಲ್ಲಿ‌ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ. ಇತ್ತಿಚೇಗೆ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಎಗ್ಗಿಲ್ಲದೆ ನಡೆಯುತ್ತಿವೆ. ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾಗಿದೆ. ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಕಾಮಾಂಧರಿಗೆ ಕಾನೂನಿನ ಮೂಲಕ ಕಠಿಣ ಶಿಕ್ಷೆ ಆಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾನಿರತ ವಿದ್ಯಾರ್ಥಿಗಳು

ಮಹಿಳಾ ದೌರ್ಜನ್ಯ ತಡೆಗೆ ವಿಶೇಷ ಕೋರ್ಟ್ ಸ್ಥಾಪಿಸಬೇಕು. ಇಂತಹ ದೌರ್ಜನ್ಯ ಎಸಗಿದವರಿಗೆ ಸಾರ್ವಜನಿಕವಾಗಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಲಾಯಿತು. ಪ್ರತಿಭಟನೆಯಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

Intro:ಹೈದರಬಾದ್ ನ ಪಶು ವೈದ್ಯಾಧಿಕಾರಿ ಮೇಲೆ ನಡೆದ ಅತ್ಯಚಾರ ಹಾಗೂ ಕೊಲೆ ಮಾನವ ಸಮಾಜ ತಲೆ ತಗ್ಗಿಸುವಂತಹ ಘಟನೆಯಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಎನ್ ಎಸ್ ಯು ಐ ಸಂಘಟನೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದೆ. ಆಂಧ್ರ ಪ್ರದೇಶದ ರಾಜಧಾನಿ ಹೈದರಬಾದ್ ನ ಕೊಲ್ಲಾಪುರದ ಸರ್ಕಾರಿ ಪಶು ವೈದ್ಯೆಯಾಗಿದ್ದ ಪ್ರಿಯಾಂಕ ರೆಡ್ಡಿರವರನ್ನು ಅಪಹರಿಸಿ, ಸಾಮೂಹಿಕ ಅತ್ಯಚಾರ ನಡೆಸಿ ಜೀವಂತವಾಗಿ ಸುಟ್ಟು ಹಾಕಿ ನಾಲ್ವರು ರಕ್ಕಸ ಕೃತ್ಯವೆಸಗಿದ್ದಾರೆ.


Body:ಅಲ್ಲದೆ ರಾಜಸ್ಥಾನದ ಜೈಪುರದಲ್ಲಿ‌ 15 ವರ್ಷದ ಬಾಲಕಿಯ ಮೇಲೆ ಅತ್ಯಚಾರ ನಡೆಸಲಾಗಿದೆ. ಇತ್ತಿಚೇಗೆ ಮಹಿಳೆಯರ ಮೇಲೆ ಅತ್ಯಚಾರ ಪ್ರಕರಣಗಳು ಎಗ್ಗಿಲ್ಲದೆ ನಡೆಯುತ್ತಿವೆ. ಮಹಿಳಾ ಸುರಕ್ಷತೆ ಇಲ್ಲದಂತೆ ಆಗಿದೆ. ಮಹಿಳೆಯರ ಮೇಲೆ ಅತ್ಯಚಾರ ನಡೆಸಿದ ಕಾಮಾಂಧರಿಗೆ ಕಾನೂನಿನ ಮೂಲಕ ಕಠಿಣ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿ ಎನ್ ಎಸ್ ಯು ಐ ಸಂಘಟನೆ ಪ್ರತಿಭಟನೆ ನಡೆಸಿದೆ.


Conclusion:ಮಹಿಳಾ ದೌರ್ಜನ್ಯ ತಡೆಗೆ ವಿಶೇಷ ಕೋರ್ಟ್ ಸ್ಥಾಪಿಸಬೇಕು ಇಂತಹ ದೌರ್ಜನ್ಯ ಎಸಗಿದವರಿಗೆ ಸಾರ್ವಜನಿಕವಾಗಿ ಶಿಕ್ಷಗೆ ಗುರಿಪಡಿಸಬೇಕು ಎಂದು ಆಗ್ರಹಿಸಲಾಯಿತು. ಪ್ರತಿಭಟನೆಯಲ್ಲಿ ವಿವಿಧ ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ಬೈಟ್: ಬಾಲಾಜಿ. ಅಧ್ಯಕ್ಷ. ಜಿಲ್ಲಾ‌ ಎನ್ ಎಸ್ ಯು ಐ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.