ಶಿವಮೊಗ್ಗ: ಶಾಲಾ -ಕಾಲೇಜುಗಳ ಶುಲ್ಕ ಮನ್ನಾ ಮಾಡಿ ಖಾಸಗಿ ಶಾಲೆಯ ಆಡಳಿತ ಮಂಡಳಿಯವರಿಗೆ ವರ್ಗಾವಣೆ ಪತ್ರ ನೀಡುವಂತೆ ಸರ್ಕಾರ ಆದೇಶ ನೀಡಬೇಕು ಎಂದು ಆಗ್ರಹಿಸಿ ಪೀಸ್ ಆರ್ಗನೈಸೇಷನ್ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದರು.
ಕೊರೊನಾ ವೈರಸ್ ಹಾವಳಿಯಿಂದಾಗಿ ಜನರ ಬದುಕು ಸಂಕಷ್ಟದಲ್ಲಿದೆ. ಇಂತಹ ಸಂದರ್ಭದಲ್ಲಿ ಖಾಸಗಿ ಶಾಲೆಯ ಆಡಳಿತ ಮಂಡಳಿಯವರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಲು ವರ್ಗಾವಣೆ ಪತ್ರ ನೀಡದೇ ಪೋಷಕರಿಗೆ ಅಲೆದಾಡಿಸುತ್ತಿದ್ದಾರೆ. ಹಾಗಾಗಿ ಬಡವರು ಖಾಸಗಿ ಶಾಲೆಗಳಲ್ಲಿ ಶುಲ್ಕ ಕಟ್ಟಲು ಸಾಧ್ಯವಾಗುತ್ತಿಲ್ಲ. ಆದರೆ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳಿಗೆ ಸೇರಿಸಲು ವರ್ಗಾವಣೆ ಪತ್ರ ನೀಡದೆ ಸತಾಯಿಸುತ್ತಿದ್ದಾರೆ.
ಹಾಗಾಗಿ ಸರ್ಕಾರ ಖಾಸಗಿ ಶಾಲೆಯ ಆಡಳಿತ ಮಂಡಳಿಗೆ ವರ್ಗಾವಣೆ ಪತ್ರ ನೀಡುವಂತೆ ಆದೇಶ ನೀಡಬೇಕು. ಜೊತೆಗೆ ಶಾಲಾ ಕಾಲೇಜುಗಳ ಶುಲ್ಕ ಮನ್ನಾ ಮಾಡಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.