ETV Bharat / state

ರಾಜ್ಯ ಅಕ್ಷರ ದಾಸೋಹ ನೌಕರರಿಂದ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

author img

By

Published : Jun 17, 2023, 9:44 PM IST

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ರಾಜ್ಯ ಅಕ್ಷರ ದಾಸೋಹ ನೌಕರರು ಶನಿವಾರ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದರು.

State Akshara Dasoha employees
ರಾಜ್ಯ ಅಕ್ಷರ ದಾಸೋಹ ನೌಕರರಿಂದ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ಜಿಲ್ಲಾ ಬಿಸಿಯೂಟ ನೌಕರರ ಸಂಘದ ಅಧ್ಯಕ್ಷರಾದ ಹುನುಮಕ್ಕ ಮಾತನಾಡಿದರು.

ಶಿವಮೊಗ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ನೌಕರರು ಶನಿವಾರ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಸೇರಿದ್ದ ಅಕ್ಷರ ದಾಸೋಹ ನೌಕರರು ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದರು.

ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಬಿಸಿಯೂಟ ತಯಾರಿಸುವ ಬಿಸಿಯೂಟ ನೌಕರರ ಖಾತೆಗೆ ಹಣ ಜಮೆ ಮಾಡದೇ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಎಸ್​ಡಿಎಂಸಿ ಅಧ್ಯಕ್ಷರ ಜಂಟಿ ಖಾತೆಗೆ ಬಿಸಿಯೂಟ ಕಾಂಟಿಜೆನ್ಸಿ ಹಣ ಜಮೆ ಮಾಡಲು ಆದೇಶ ಮಾಡಿದೆ. ಇದರಿಂದ ಶಾಲಾ ಮುಖ್ಯೋಪಾಧ್ಯಾಯರಿಗೆ ಶಾಲೆಯ ಶೈಕ್ಷಣಿಕ ಅಭಿವೃದ್ಧಿಯ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ತೊಂದರೆ ಆಗುತ್ತದೆ. ಆದ್ದರಿಂದ ಈ ಕಾಂಟಿಜೆನ್ಸಿಯ ಆದೇಶವನ್ನು ಸರ್ಕಾರ ಹಿಂಪಡೆಯಬೇಕೆಂದು ಆಗ್ರಹಿಸಿದರು.

ಚುನಾವಣಾ ಸಿಬ್ಬಂದಿಗೆ ಅಡುಗೆ ಮಾಡಿ ಬಡಿಸಿದ ನೌಕರರರಿಗೆ 3 ಸಾವಿರ ರೂ. ಹಣ ಬಿಡುಗಡೆಗೆ ಒತ್ತಾಯ: ''ಚುನಾವಣಾ ಪೂರ್ವ ಘೋಷಣೆ ಮಾಡಿದಂತೆ ಅಂಗನವಾಡಿ ಹಾಗೂ ಬಿಸಿಯೂಟ ನೌಕರರ ವೇತನವನ್ನು ಹೆಚ್ಚಿಸಬೇಕು. ಕಳೆದ ಸರ್ಕಾರದ ಬಜೆಟ್​ನಲ್ಲಿ ಘೋಷಣೆ ಮಾಡಿದಂತೆ 1 ಸಾವಿರ ರೂ. ಗೌರವಧನವನ್ನು ತಕ್ಷಣ ಜಾರಿ ಮಾಡಬೇಕು. ವಿಧಾನಸಭ ಚುನಾವಣೆಯಲ್ಲಿ ಚುನಾವಣಾ ಸಿಬ್ಬಂದಿಗೆ ಅಡುಗೆ ಮಾಡಿ ಬಡಿಸಿದ ನೌಕರರರಿಗೆ 3 ಸಾವಿರ ರೂ. ಹಣ ಬಿಡುಗಡೆ ಮಾಡಬೇಕು. ಮಕ್ಕಳು ಹೆಚ್ಚಿರುವ ಶಾಲೆಗಳಲ್ಲಿ ಬಿಸಿಯೂಟ ನೌಕರರನ್ನು ತಕ್ಷಣ ನೇಮಕ ಮಾಡಬೇಕು. ಶಾಲಾ ಶಿಕ್ಷಕರು ಹಾಗೂ ಎಸ್​ಡಿ ಎಂಸಿಯವರು ಬಿಸಿಯೂಟ ನೌಕರರಿಗೆ ನೀಡುವ ಕಿರುಕುಳ ತಪ್ಪಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಬಿಸಿಯೂಟ ನೌಕರರ ಸಂಘದ ಅಧ್ಯಕ್ಷರಾದ ಹುನುಮಕ್ಕ, ಕಾರ್ಯದರ್ಶಿ ಸುನೀತ ಸೇರಿ ಇತರರಿದ್ದರು.

ಇದನ್ನೂ ಓದಿ: ಮರಾಠಿಯಲ್ಲಿದ್ದ ಅರ್ಜಿಯನ್ನು ಅಚ್ಚ ಕನ್ನಡದಲ್ಲೇ ತುಂಬಿದ ಭೂಪ.. ಮಹಾರಾಷ್ಟ್ರ ವಿದ್ಯಾರ್ಥಿಯ ಕನ್ನಡ ಟಿಸಿ ವೈರಲ್​!

ಹಿಂದೆ ನಡೆದಿತ್ತು ಅಂಗನವಾಡಿ ನೌಕರರ ಪ್ರತಿಭಟನೆ: ಅಂಗನವಾಡಿ ನೌಕರರ ಅನಿರ್ಧಿಷ್ಟಾವಧಿ ಪ್ರತಿಭಟನೆ ಜನೆವರಿಯಲ್ಲಿ ನಡೆದಿತ್ತು. ಆಗ ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳ ಕೆಲಸವನ್ನು ಸ್ಥಗಿತಗೊಳಿಸಿ 10 ರಿಂದ 15 ಸಾವಿರ ಮಹಿಳೆಯರು ಧರಣಿಯಲ್ಲಿ ಪಾಲ್ಗೊಂಡಿದ್ದರು. ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರಿ ಶಿಕ್ಷಕಿಯರು ಎಂದು ಪರಿಗಣಿಸಬೇಕು. ಗ್ರ್ಯಾಚ್ಯುಟಿ ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡಿದ್ದರು.

ಇದನ್ನೂ ಓದಿ: Anti-Conversion Law: ಮತಾಂತರ ನಿಷೇಧ ಕಾಯ್ದೆ ಹಿಂದಕ್ಕೆ ಪಡೆಯುತ್ತಿರುವುದು ಜನ ವಿರೋಧಿ ಕಾರ್ಯವಲ್ಲ: ಗೃಹ ಸಚಿವ ಪರಮೇಶ್ವರ್

"ರಾಜ್ಯದ ಪ್ರತಿಯೊಂದು ಮಗುವಿಗೆ ಆಹಾರ, ಆರೋಗ್ಯ ಹಾಗೂ ಶಿಕ್ಷಣವನ್ನು ಖಾತ್ರಿಪಡಿಸಲು ಅಂಗನವಾಡಿ ಕೇಂದ್ರದ ಕಾರ್ಯಗಳ ಸ್ವರೂಪ ಬದಲಾಯಿಸಿ ಮೇಲ್ದರ್ಜೆಗೆ ಏರಿಸಬೇಕು ಹಾಗೂ ಅಂಗನವಾಡಿ ನೌಕರರ 48 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಪ್ರಥಮ ಬಾರಿಗೆ ಗ್ರಾಚ್ಯುಟಿ ಕೊಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪನ್ನು ಜಾರಿಗೊಳಿಸಬೇಕು ಎಂದು ಹೋರಾಟದ ಮುಖ್ಯ ಬೇಡಿಕೆಗಳಾಗಿವೆ'' ಎಂದು ಸಿಐಟಿಯು ಸಂಘಟನೆಯ ವರಲಕ್ಷ್ಮಿ ತಿಳಿಸಿದ್ದರು.

ಇದನ್ನೂ ಓದಿ: Brand Bengaluru: ಬ್ರ್ಯಾಂಡ್ ಬೆಂಗಳೂರು ಅಭಿವೃದ್ಧಿಗೆ ಪ್ರಮುಖರ ಸಮಿತಿ ರಚಿಸಿ, ಆರು ತಿಂಗಳಲ್ಲಿ ಮಾಸ್ಟರ್ ಪ್ಲಾನ್ ಸಿದ್ಧ: ಡಿಸಿಎಂ ಡಿಕೆಶಿ

ಜಿಲ್ಲಾ ಬಿಸಿಯೂಟ ನೌಕರರ ಸಂಘದ ಅಧ್ಯಕ್ಷರಾದ ಹುನುಮಕ್ಕ ಮಾತನಾಡಿದರು.

ಶಿವಮೊಗ್ಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅಕ್ಷರ ದಾಸೋಹ ನೌಕರರು ಶನಿವಾರ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಸೇರಿದ್ದ ಅಕ್ಷರ ದಾಸೋಹ ನೌಕರರು ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದರು.

ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಬಿಸಿಯೂಟ ತಯಾರಿಸುವ ಬಿಸಿಯೂಟ ನೌಕರರ ಖಾತೆಗೆ ಹಣ ಜಮೆ ಮಾಡದೇ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಎಸ್​ಡಿಎಂಸಿ ಅಧ್ಯಕ್ಷರ ಜಂಟಿ ಖಾತೆಗೆ ಬಿಸಿಯೂಟ ಕಾಂಟಿಜೆನ್ಸಿ ಹಣ ಜಮೆ ಮಾಡಲು ಆದೇಶ ಮಾಡಿದೆ. ಇದರಿಂದ ಶಾಲಾ ಮುಖ್ಯೋಪಾಧ್ಯಾಯರಿಗೆ ಶಾಲೆಯ ಶೈಕ್ಷಣಿಕ ಅಭಿವೃದ್ಧಿಯ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ತೊಂದರೆ ಆಗುತ್ತದೆ. ಆದ್ದರಿಂದ ಈ ಕಾಂಟಿಜೆನ್ಸಿಯ ಆದೇಶವನ್ನು ಸರ್ಕಾರ ಹಿಂಪಡೆಯಬೇಕೆಂದು ಆಗ್ರಹಿಸಿದರು.

ಚುನಾವಣಾ ಸಿಬ್ಬಂದಿಗೆ ಅಡುಗೆ ಮಾಡಿ ಬಡಿಸಿದ ನೌಕರರರಿಗೆ 3 ಸಾವಿರ ರೂ. ಹಣ ಬಿಡುಗಡೆಗೆ ಒತ್ತಾಯ: ''ಚುನಾವಣಾ ಪೂರ್ವ ಘೋಷಣೆ ಮಾಡಿದಂತೆ ಅಂಗನವಾಡಿ ಹಾಗೂ ಬಿಸಿಯೂಟ ನೌಕರರ ವೇತನವನ್ನು ಹೆಚ್ಚಿಸಬೇಕು. ಕಳೆದ ಸರ್ಕಾರದ ಬಜೆಟ್​ನಲ್ಲಿ ಘೋಷಣೆ ಮಾಡಿದಂತೆ 1 ಸಾವಿರ ರೂ. ಗೌರವಧನವನ್ನು ತಕ್ಷಣ ಜಾರಿ ಮಾಡಬೇಕು. ವಿಧಾನಸಭ ಚುನಾವಣೆಯಲ್ಲಿ ಚುನಾವಣಾ ಸಿಬ್ಬಂದಿಗೆ ಅಡುಗೆ ಮಾಡಿ ಬಡಿಸಿದ ನೌಕರರರಿಗೆ 3 ಸಾವಿರ ರೂ. ಹಣ ಬಿಡುಗಡೆ ಮಾಡಬೇಕು. ಮಕ್ಕಳು ಹೆಚ್ಚಿರುವ ಶಾಲೆಗಳಲ್ಲಿ ಬಿಸಿಯೂಟ ನೌಕರರನ್ನು ತಕ್ಷಣ ನೇಮಕ ಮಾಡಬೇಕು. ಶಾಲಾ ಶಿಕ್ಷಕರು ಹಾಗೂ ಎಸ್​ಡಿ ಎಂಸಿಯವರು ಬಿಸಿಯೂಟ ನೌಕರರಿಗೆ ನೀಡುವ ಕಿರುಕುಳ ತಪ್ಪಿಸಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಅವರಿಗೆ ಮನವಿ ಸಲ್ಲಿಸಿದರು. ಜಿಲ್ಲಾ ಬಿಸಿಯೂಟ ನೌಕರರ ಸಂಘದ ಅಧ್ಯಕ್ಷರಾದ ಹುನುಮಕ್ಕ, ಕಾರ್ಯದರ್ಶಿ ಸುನೀತ ಸೇರಿ ಇತರರಿದ್ದರು.

ಇದನ್ನೂ ಓದಿ: ಮರಾಠಿಯಲ್ಲಿದ್ದ ಅರ್ಜಿಯನ್ನು ಅಚ್ಚ ಕನ್ನಡದಲ್ಲೇ ತುಂಬಿದ ಭೂಪ.. ಮಹಾರಾಷ್ಟ್ರ ವಿದ್ಯಾರ್ಥಿಯ ಕನ್ನಡ ಟಿಸಿ ವೈರಲ್​!

ಹಿಂದೆ ನಡೆದಿತ್ತು ಅಂಗನವಾಡಿ ನೌಕರರ ಪ್ರತಿಭಟನೆ: ಅಂಗನವಾಡಿ ನೌಕರರ ಅನಿರ್ಧಿಷ್ಟಾವಧಿ ಪ್ರತಿಭಟನೆ ಜನೆವರಿಯಲ್ಲಿ ನಡೆದಿತ್ತು. ಆಗ ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳ ಕೆಲಸವನ್ನು ಸ್ಥಗಿತಗೊಳಿಸಿ 10 ರಿಂದ 15 ಸಾವಿರ ಮಹಿಳೆಯರು ಧರಣಿಯಲ್ಲಿ ಪಾಲ್ಗೊಂಡಿದ್ದರು. ಅಂಗನವಾಡಿ ಕಾರ್ಯಕರ್ತೆಯರನ್ನು ಸರ್ಕಾರಿ ಶಿಕ್ಷಕಿಯರು ಎಂದು ಪರಿಗಣಿಸಬೇಕು. ಗ್ರ್ಯಾಚ್ಯುಟಿ ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡಿದ್ದರು.

ಇದನ್ನೂ ಓದಿ: Anti-Conversion Law: ಮತಾಂತರ ನಿಷೇಧ ಕಾಯ್ದೆ ಹಿಂದಕ್ಕೆ ಪಡೆಯುತ್ತಿರುವುದು ಜನ ವಿರೋಧಿ ಕಾರ್ಯವಲ್ಲ: ಗೃಹ ಸಚಿವ ಪರಮೇಶ್ವರ್

"ರಾಜ್ಯದ ಪ್ರತಿಯೊಂದು ಮಗುವಿಗೆ ಆಹಾರ, ಆರೋಗ್ಯ ಹಾಗೂ ಶಿಕ್ಷಣವನ್ನು ಖಾತ್ರಿಪಡಿಸಲು ಅಂಗನವಾಡಿ ಕೇಂದ್ರದ ಕಾರ್ಯಗಳ ಸ್ವರೂಪ ಬದಲಾಯಿಸಿ ಮೇಲ್ದರ್ಜೆಗೆ ಏರಿಸಬೇಕು ಹಾಗೂ ಅಂಗನವಾಡಿ ನೌಕರರ 48 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಪ್ರಥಮ ಬಾರಿಗೆ ಗ್ರಾಚ್ಯುಟಿ ಕೊಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪನ್ನು ಜಾರಿಗೊಳಿಸಬೇಕು ಎಂದು ಹೋರಾಟದ ಮುಖ್ಯ ಬೇಡಿಕೆಗಳಾಗಿವೆ'' ಎಂದು ಸಿಐಟಿಯು ಸಂಘಟನೆಯ ವರಲಕ್ಷ್ಮಿ ತಿಳಿಸಿದ್ದರು.

ಇದನ್ನೂ ಓದಿ: Brand Bengaluru: ಬ್ರ್ಯಾಂಡ್ ಬೆಂಗಳೂರು ಅಭಿವೃದ್ಧಿಗೆ ಪ್ರಮುಖರ ಸಮಿತಿ ರಚಿಸಿ, ಆರು ತಿಂಗಳಲ್ಲಿ ಮಾಸ್ಟರ್ ಪ್ಲಾನ್ ಸಿದ್ಧ: ಡಿಸಿಎಂ ಡಿಕೆಶಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.