ETV Bharat / state

ಪಿಂಚಣಿ ಸೌಲಭ್ಯ ಬೇಡಿಕೆ ಈಡೇರಿಕೆಗೆ ಆಗ್ರಹ: ಅಮರಣಾಂತ ಹೋರಾಟಕ್ಕೆ ನೌಕರರ ಸಂಘ ತೀರ್ಮಾನ - protest For Pension in Shivamogga

ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಪಿಂಚಣಿ ಸೌಲಭ್ಯ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ ಜನವರಿ 10ರಂದು ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ 'ಮಾಡು ಇಲ್ಲವೇ ಮಡಿ’ ಎಂಬ ಅಹೋರಾತ್ರಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮೃತ್ಯುಂಜಯ ಹಿರೇಮಠ್ ತಿಳಿಸಿದರು.

protest For Pension in Shivamogga
ಪಿಂಚಣಿ ಸೌಲಭ್ಯ ಬೇಡಿಕೆ ಈಡೇರಿಕೆಗೆ ಆಗ್ರಹ
author img

By

Published : Jan 8, 2020, 7:56 PM IST

ಶಿವಮೊಗ್ಗ: ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಪಿಂಚಣಿ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ ಜನವರಿ 10ರಂದು ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಹೋರಾಟ ನಡೆಸಲಾಗುತ್ತದೆ. 'ಮಾಡು ಇಲ್ಲವೇ ಮಡಿ’ ಎಂಬ ಅಹೋರಾತ್ರಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮೃತ್ಯುಂಜಯ ಹಿರೇಮಠ್ ತಿಳಿಸಿದರು.

ಪಿಂಚಣಿ ಸೌಲಭ್ಯ ಬೇಡಿಕೆ ಈಡೇರಿಕೆಗೆ ಆಗ್ರಹ

ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, 2006ರ ಎಪ್ರಿಲ್​ಗೂ ಮುನ್ನ ಅನುದಾನ ನೀಡಿರುವ ಮತ್ತು ನಂತರ ನೇಮಕ ಹೊಂದಿ ವೇತನ ಪಡೆಯುತ್ತಿರುವ ಯಾವೊಬ್ಬ ನಿವೃತ್ತ ನೌಕರರಿಗೂ ಹಳೆಯ ನಿಶ್ಚಿತ ಪಿಂಚಣಿಯಾಗಲಿ(ಓಪಿಎಸ್) ಅಥವಾ ವಂತಿಕೆ ಆಧಾರದ ನೂತನ ಪಿಂಚಣಿ(ಎನ್‌ಪಿಎಸ್) ಸೌಲಭ್ಯ ಇಲ್ಲದಿರುವುದನ್ನು ಖಂಡಿಸಿ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.

ಓಪಿಎಸ್ ಅಥವಾ ಎನ್‌ಪಿಎಸ್ ಇವೆರಡರಲ್ಲಿ ಒಂದನ್ನಾದರೂ ಜಾರಿಗೊಳಿಸಲು ಆಗ್ರಹಿಸಿ ರಾಜ್ಯಾದ್ಯಂತ ನಾನಾ ರೀತಿಯ ಹೋರಾಟಗಳನ್ನು ಮಾಡಿ ಸರ್ಕಾರದ ಗಮನ ಸೆಳೆದಿದ್ದರೂ ಹುಸಿ ಭರವಸೆ ನೀಡಿ ಸಾವಿರಾರೂ ನೌಕರರಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು. ಈ ಧೋರಣೆಗೆ ಬೇಸತ್ತು ಹೋರಾಟಕ್ಕೆ ಸಜ್ಜಾಗಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ರೂ ತಮ್ಮ ಬೇಡಿಕೆಗಳಿಗೆ ಸ್ಪಂದಿಸಿಲ್ಲ ಎಂದರು.

ಶಿವಮೊಗ್ಗ: ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಪಿಂಚಣಿ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ ಜನವರಿ 10ರಂದು ಬೆಂಗಳೂರಿನ ಫ್ರೀಡಂಪಾರ್ಕ್​ನಲ್ಲಿ ಹೋರಾಟ ನಡೆಸಲಾಗುತ್ತದೆ. 'ಮಾಡು ಇಲ್ಲವೇ ಮಡಿ’ ಎಂಬ ಅಹೋರಾತ್ರಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮೃತ್ಯುಂಜಯ ಹಿರೇಮಠ್ ತಿಳಿಸಿದರು.

ಪಿಂಚಣಿ ಸೌಲಭ್ಯ ಬೇಡಿಕೆ ಈಡೇರಿಕೆಗೆ ಆಗ್ರಹ

ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, 2006ರ ಎಪ್ರಿಲ್​ಗೂ ಮುನ್ನ ಅನುದಾನ ನೀಡಿರುವ ಮತ್ತು ನಂತರ ನೇಮಕ ಹೊಂದಿ ವೇತನ ಪಡೆಯುತ್ತಿರುವ ಯಾವೊಬ್ಬ ನಿವೃತ್ತ ನೌಕರರಿಗೂ ಹಳೆಯ ನಿಶ್ಚಿತ ಪಿಂಚಣಿಯಾಗಲಿ(ಓಪಿಎಸ್) ಅಥವಾ ವಂತಿಕೆ ಆಧಾರದ ನೂತನ ಪಿಂಚಣಿ(ಎನ್‌ಪಿಎಸ್) ಸೌಲಭ್ಯ ಇಲ್ಲದಿರುವುದನ್ನು ಖಂಡಿಸಿ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.

ಓಪಿಎಸ್ ಅಥವಾ ಎನ್‌ಪಿಎಸ್ ಇವೆರಡರಲ್ಲಿ ಒಂದನ್ನಾದರೂ ಜಾರಿಗೊಳಿಸಲು ಆಗ್ರಹಿಸಿ ರಾಜ್ಯಾದ್ಯಂತ ನಾನಾ ರೀತಿಯ ಹೋರಾಟಗಳನ್ನು ಮಾಡಿ ಸರ್ಕಾರದ ಗಮನ ಸೆಳೆದಿದ್ದರೂ ಹುಸಿ ಭರವಸೆ ನೀಡಿ ಸಾವಿರಾರೂ ನೌಕರರಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು. ಈ ಧೋರಣೆಗೆ ಬೇಸತ್ತು ಹೋರಾಟಕ್ಕೆ ಸಜ್ಜಾಗಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ರೂ ತಮ್ಮ ಬೇಡಿಕೆಗಳಿಗೆ ಸ್ಪಂದಿಸಿಲ್ಲ ಎಂದರು.

Intro:ಶಿವಮೊಗ್ಗ,
ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ನಿವೃತ್ತಿ ಜೀವನದ ಆಸರೆಯಾದ ಪಿಂಚಣಿ ಸೌಲಭ್ಯ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದಿಂದ ಜ.೧೦ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ `ಮಾಡು ಇಲ್ಲವೇ ಮಡಿ’ ಹೋರಾಟದ ಮೂಲಕ ಅಂತಿಮವಾಗಿ ಅಹೋರಾತ್ರಿ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮೃತ್ಯುಂಜಯ ಹಿರೇಮಠ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅವರು ೨೦೦೬ ಏ.೧ಕ್ಕೂ ಮುನ್ನ ಅನುದಾನ ಕೊಳ್ಳಪಟ್ಟಿರುವ ಮತ್ತು ನಂತರ ನೇಮಕ ಹೊಂದಿ ವೇತನ ಪಡೆಯುತ್ತಿರುವ ಯಾವೊಬ್ಬ ನೌಕರರಿಗೂ ಹಳೆಯ ನಿಶ್ಚಿತ ಪಿಂಚಣಿಯಾಗಲಿ(ಓಪಿಎಸ್) ಅಥವಾ ವಂತಿಕೆ ಆಧಾರದ ನೂತನ ಪಿಂಚಣಿ(ಎನ್‌ಪಿಎಸ್) ಸೌಲಭ್ಯ ಇಲ್ಲದಿರುವುದನ್ನು ಖಂಡಿಸಿ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದರು.
ಓಪಿಎಸ್ ಅಥವಾ ಎನ್‌ಪಿಎಸ್ ಇವೆರಡರಲ್ಲಿ ಒಂದನ್ನಾದರೂ ಜಾರಿಗೊಳಿಸಲು ಆಗ್ರಹಿಸಿ ರಾಜ್ಯಾದ್ಯಂತ ನಾನಾ ರೀತಿಯ ಹೋರಾಟಗಳನ್ನು ಮಾಡಿ ಸರ್ಕಾರದ ಗಮನ ಸೆಳೆದಿದ್ದರೂ ಹುಸಿ ಭರವಸೆ ನೀಡಿ ಸಾವಿರಾರೂ ನೌಕರರಿಗೆ ಅನ್ಯಾಯ ಮಾಡುತ್ತಿರುವ ಸರ್ಕಾರಗಳ ಹಠಮಾರಿ ಧೋರಣೆಗೆ ಬೇಸತ್ತು ಕೊನೆಯ ಹೋರಾಟಕ್ಕೆ ಸಜ್ಜಾಗಿದ್ದೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಪಿಂಚಣಿ ಯೋಜನೆಗೆ ಒಳಪಡದೇ ನಿವೃತ್ತಿಯಾಗಿದ್ದರಿಂದ ಸಾವಿರಾರೂ ನೌಕರರು ಕೊನೆಯ ತಿಂಗಳ ಸಂಬಳ ಮಾತ್ರ ಪಡೆದು ಜೀವನ ನಿರ್ವಹಣೆ ಮಾಡಲಾಗದೇ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ ಎಂದರು.
ಕರ್ನಾಟಕ ರಾಜ್ಯ ಹೊರತುಪಡಿಸಿ ಇತರೆ ರಾಜ್ಯಗಳಲ್ಲಿ ಸರ್ಕಾರಿ ಮತ್ತು ಅನುದಾನಿತ ನೌಕರರ ನಡುವೆ ಯಾವುದೇ ತಾರತಮ್ಯವಿಲ್ಲ. ಎಲ್ಲ್ಲರಿಗೂ ಸಮಾನ ಪಿಂಚಣಿ ಸೌಲಭ್ಯ ಜಾರಿಗೊಳಿಸಲಾಗಿದೆ. ಆದರೆ ಕರ್ನಾಟಕದಲ್ಲಿ ಮಾತ್ರ ಅನ್ಯಾಯವಾಗುತ್ತಿದೆ ಎಂದರು.
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಮ್ಮಿಕೊಂಡಿರುವ ಅಹೋರಾತ್ರಿ ಅಮರಣಾಂತ ಉಪವಾಸ ಸತ್ಯಾಗ್ರಹದಲ್ಲಿ ಸುಮಾರು ೧೦ ಸಾವಿರಕ್ಕೂ ಹೆಚ್ಚು ನೌಕರರು ಭಾಗವಹಿಸುತ್ತಿದ್ದು, ಸರ್ಕಾರಿ ನೌಕರರ ಸಂಘ, ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರು ಬೆಂಬಲಿಸಿ ಪಾಲ್ಗೊಳ್ಳುವಂತೆ ಮನವಿ ಮಾಡಿಕೊಂಡರು.
ಸುದ್ದಿಗೋಷ್ಠಿಯಲ್ಲಿ ಎಂ.ಎಲ್.ಶಿವಕುಮಾರ್, ಸಿ.ಪಿ.ರವಿಕುಮಾರ್, ಕೆ.ಎಸ್.ಕುಮಾರಸ್ವಾಮಿ, ತಿಪ್ಪೇಶ್, ಚಂದ್ರು, ರಮೇಶ್ ಉಪಸ್ಥಿತರಿದ್ದರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.