ETV Bharat / state

ಸಿಗಂದೂರು ದೇಗುಲ ಮೇಲ್ವಿಚಾರಣಾ ಸಮಿತಿ ರದ್ದತಿ ಹೋರಾಟಕ್ಕೆ ವೇದಿಕೆ ಸಿದ್ಧ - District Arya Eadigar Association

ಹಿಂದುಳಿದ ವರ್ಗದವರ ಆರಾಧ್ಯ ದೈವವಾಗಿರುವ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಸರ್ಕಾರ ನೇಮಿಸಿರುವ ಸಲಹಾ ಸಮಿತಿಯನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಜಿಲ್ಲಾ ಆರ್ಯ ಈಡಿಗರ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ ಆಗ್ರಹಿಸಿದ್ದಾರೆ.

Request for cancellation of Sigandoor Temple Monitoring Committee
ಜಿಲ್ಲಾ ಆರ್ಯ ಈಡಿಗರ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ
author img

By

Published : Nov 7, 2020, 8:11 PM IST

ಶಿವಮೊಗ್ಗ: ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ವಿವಾದ ವಿಚಾರವಾಗಿ ಸರ್ಕಾರ ರಚಿಸಿರುವ ಮೇಲ್ವಿಚಾರಣಾ ಸಮಿತಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಜಾತ್ಯಾತೀತ ಹೋರಾಟಕ್ಕೆ ವೇದಿಕೆ ಸಿದ್ಧವಾಗುತ್ತಿದೆ ಎಂದು ಜಿಲ್ಲಾ ಆರ್ಯ ಈಡಿಗರ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ ತಿಳಿಸಿದ್ದಾರೆ.

ಆರ್ಯ ಈಡಿಗರ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ ಮಾತನಾಡಿದರು

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದುಳಿದ ವರ್ಗದವರ ಆರಾಧ್ಯ ದೈವವಾಗಿರುವ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಸರ್ಕಾರ ನೇಮಿಸಿರುವ ಸಲಹಾ ಸಮಿತಿಯನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಎಲ್ಲಾ ಸಮುದಾಯಗಳು ಒಕ್ಕೊರಲಿನಿಂದ ಮುಖ್ಯಮಂತ್ರಿ, ಜಿಲ್ಲಾಧಿಕಾರಿ, ಸಚಿವ ಕೆಎಸ್ ಈಶ್ವರಪ್ಪ, ಸಂಸದ ಬಿವೈ ರಾಘವೇಂದ್ರ ಅವರಿಗೆ ಮನವಿ ಸಲ್ಲಿಸಿದ್ದರೂ ಮನ್ನಣೆ ನೀಡಿಲ್ಲ. ಹಾಗಾಗಿ, ಸರ್ಕಾರದ ವಿರುದ್ಧ ಜಾತ್ಯಾತೀತವಾಗಿ ಹೋರಾಟಕ್ಕೆ ವೇದಿಕೆ ಸಿದ್ಧಗೊಳ್ಳುತ್ತಿದೆ ಎಂದರು.

ಸಿಗಂದೂರು ಚೌಡೇಶ್ವರಿ ದೇವಸ್ಥಾನದ ವಿಚಾರವಾಗಿ ರಾಜ್ಯ ಸರ್ಕಾರ ಜಿಲ್ಲಾಡಳಿತದ ಮೂಲಕ ಮೇಲ್ವಿಚಾರಣೆ ಸಮಿತಿ ರಚನೆ ಮಾಡುವ ಮೂಲಕ ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದೆ. ಹಾಗಾಗಿ ಈ ಕೂಡಲೇ ಸಮಿತಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಈಗಾಗಲೇ ಸಮಿತಿ ರದ್ದುಗೊಳಿಸುವಂತೆ ಹಿರಿಯ ನಾಯಕರಾದ ಕಾಗೋಡು ತಿಮ್ಮಪ್ಪನವರು ಸಂಸದರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಆರ್ಯ ಈಡಿಗರ ಸಂಘದಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದೇವೆ. ಆದರೂ, ನಮ್ಮ ಮನವಿಗೆ ಯಾವ ರೀತಿಯಲ್ಲಿಯೂ ಸ್ಪಂದನೆ ದೊರೆತಿಲ್ಲ. ಹಾಗಾಗಿ ಜಾತ್ಯತೀತವಾಗಿ ಹೋರಾಟ ನಡೆಸಲು ನಿರ್ಧರಿಸಿದ್ದೇವೆ ಎಂದರು.

ಶಿವಮೊಗ್ಗ: ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ವಿವಾದ ವಿಚಾರವಾಗಿ ಸರ್ಕಾರ ರಚಿಸಿರುವ ಮೇಲ್ವಿಚಾರಣಾ ಸಮಿತಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಜಾತ್ಯಾತೀತ ಹೋರಾಟಕ್ಕೆ ವೇದಿಕೆ ಸಿದ್ಧವಾಗುತ್ತಿದೆ ಎಂದು ಜಿಲ್ಲಾ ಆರ್ಯ ಈಡಿಗರ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ ತಿಳಿಸಿದ್ದಾರೆ.

ಆರ್ಯ ಈಡಿಗರ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ್ ಹುಲ್ತಿಕೊಪ್ಪ ಮಾತನಾಡಿದರು

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದುಳಿದ ವರ್ಗದವರ ಆರಾಧ್ಯ ದೈವವಾಗಿರುವ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಸರ್ಕಾರ ನೇಮಿಸಿರುವ ಸಲಹಾ ಸಮಿತಿಯನ್ನು ಕೂಡಲೇ ರದ್ದುಗೊಳಿಸಬೇಕು ಎಂದು ಎಲ್ಲಾ ಸಮುದಾಯಗಳು ಒಕ್ಕೊರಲಿನಿಂದ ಮುಖ್ಯಮಂತ್ರಿ, ಜಿಲ್ಲಾಧಿಕಾರಿ, ಸಚಿವ ಕೆಎಸ್ ಈಶ್ವರಪ್ಪ, ಸಂಸದ ಬಿವೈ ರಾಘವೇಂದ್ರ ಅವರಿಗೆ ಮನವಿ ಸಲ್ಲಿಸಿದ್ದರೂ ಮನ್ನಣೆ ನೀಡಿಲ್ಲ. ಹಾಗಾಗಿ, ಸರ್ಕಾರದ ವಿರುದ್ಧ ಜಾತ್ಯಾತೀತವಾಗಿ ಹೋರಾಟಕ್ಕೆ ವೇದಿಕೆ ಸಿದ್ಧಗೊಳ್ಳುತ್ತಿದೆ ಎಂದರು.

ಸಿಗಂದೂರು ಚೌಡೇಶ್ವರಿ ದೇವಸ್ಥಾನದ ವಿಚಾರವಾಗಿ ರಾಜ್ಯ ಸರ್ಕಾರ ಜಿಲ್ಲಾಡಳಿತದ ಮೂಲಕ ಮೇಲ್ವಿಚಾರಣೆ ಸಮಿತಿ ರಚನೆ ಮಾಡುವ ಮೂಲಕ ಅನಗತ್ಯವಾಗಿ ಹಸ್ತಕ್ಷೇಪ ಮಾಡುತ್ತಿದೆ. ಹಾಗಾಗಿ ಈ ಕೂಡಲೇ ಸಮಿತಿ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಈಗಾಗಲೇ ಸಮಿತಿ ರದ್ದುಗೊಳಿಸುವಂತೆ ಹಿರಿಯ ನಾಯಕರಾದ ಕಾಗೋಡು ತಿಮ್ಮಪ್ಪನವರು ಸಂಸದರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಆರ್ಯ ಈಡಿಗರ ಸಂಘದಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದೇವೆ. ಆದರೂ, ನಮ್ಮ ಮನವಿಗೆ ಯಾವ ರೀತಿಯಲ್ಲಿಯೂ ಸ್ಪಂದನೆ ದೊರೆತಿಲ್ಲ. ಹಾಗಾಗಿ ಜಾತ್ಯತೀತವಾಗಿ ಹೋರಾಟ ನಡೆಸಲು ನಿರ್ಧರಿಸಿದ್ದೇವೆ ಎಂದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.