ETV Bharat / state

ಶಿವಮೊಗ್ಗ ಸಿಟಿಯಲ್ಲೇ ಅವ್ಯವಸ್ಥೆ.. ರಸ್ತೆ ಮಧ್ಯೆ ಕುರ್ಚಿಯಲ್ಲಿ ಕುಳಿತು ಜನರ ಪ್ರತಿಭಟನೆ - Residents protest against broken road in Shivamogga

ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯ ಶುಭಮಂಗಳಕ್ಕೆ ಹೋಗುವ ರಸ್ತೆಯಲ್ಲಿ ಗುಂಡಿಗಳು- ಅವ್ಯವಸ್ಥೆಗೆ ಖಂಡನೆ- ರಸ್ತೆ ಮಧ್ಯೆಯೇ ನಿವಾಸಿಗಳಿಂದ ಪ್ರತಿಭಟನೆ

residents-protest-by-sitting-on-chairs-in-the-middle-of-the-road-in-shivamogga
ರಸ್ತೆ ಅವ್ಯವಸ್ಥೆಯ ವಿರುದ್ಧ ರಸ್ತೆ ಮಧ್ಯೆಯೇ ಕುರ್ಚಿ ಹಾಕಿ ಕುಳಿತು ಸ್ಥಳೀಯರ ಪ್ರತಿಭಟನೆ
author img

By

Published : Jul 17, 2022, 8:28 PM IST

ಶಿವಮೊಗ್ಗ : ಮಹಾನಗರ ಪಾಲಿಕೆ ವ್ಯಾಪ್ತಿಯ 18 ನೇ ವಾರ್ಡ್ ವಿನೋಬನಗರದ ಪೃಥ್ವಿ ಮ್ಯಾನ್ಷನ್ ಎದುರಿನ ಶುಭ ಮಂಗಳ ಮಂಟಪಕ್ಕೆ ಹೋಗುವ ಮುಖ್ಯ ರಸ್ತೆಯ ಅವ್ಯವಸ್ಥೆಯ ವಿರುದ್ಧ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಕಾಮಗಾರಿ ವಿರುದ್ಧ ರಸ್ತೆ ಮಧ್ಯೆಯೇ ಕುರ್ಚಿ ಹಾಕಿ ಕುಳಿತು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.

ರಸ್ತೆ ಅವ್ಯವಸ್ಥೆಯ ವಿರುದ್ಧ ರಸ್ತೆ ಮಧ್ಯೆಯೇ ಕುರ್ಚಿ ಹಾಕಿ ಕುಳಿತು ಸ್ಥಳೀಯರ ಪ್ರತಿಭಟನೆ

ಶುಭಮಂಗಳ ಮಂಟಪಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ಜೊತೆಗೆ ಹಲವೆಡೆ ರಸ್ತೆ ಒತ್ತುವರಿಯಾಗಿದ್ದು, ಪಾದಚಾರಿಗಳ ಓಡಾಟಕ್ಕೆ ಫುಟ್​ಪಾತ್ ಇಲ್ಲವಾಗಿದೆ. ಇದರಿಂದಾಗಿ ಜನ ಸಂಚಾರ ಮತ್ತು ವಾಹನ ಸಂಚಾರ ದುಸ್ತರವಾಗಿದ್ದು, ಅಪಘಾತಗಳು ಸಂಭವಿಸುತ್ತಿವೆ. ರಸ್ತೆ ಸಮೀಪದಲ್ಲಿಯೇ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು, ಅದು ಅಪೂರ್ಣವಾಗಿ ಸಮಸ್ಯೆ ತಂದೊಡ್ಡಿದೆ ಎಂದು ಇಲ್ಲಿನ ನಿವಾಸಿಗಳು ದೂರಿದ್ದಾರೆ.

ಇಷ್ಟೆಲ್ಲ ಅವ್ಯವಸ್ಥೆಗಳಿದ್ದರೂ ಈ ಸಮಸ್ಯೆಯ ಪರಿಹಾರಕ್ಕೆ ಪಾಲಿಕೆ ಮುಂದಾಗಿಲ್ಲ. ಇಂತೆಯೇ ನಿರ್ಲಕ್ಷ್ಯ ವಹಿಸಿದರೆ ಸೋಮವಾರವೂ ಪ್ರತಿಭಟನೆ ನಡೆಸುವುದಾಗಿ ಇಲ್ಲಿನ ನಿವಾಸಿಗಳು ಹೇಳಿದ್ದಾರೆ. ಸ್ಥಳಕ್ಕೆ ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳು ಆಗಮಿಸಿ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಶರತ್, ಚಂದ್ರಶೇಖರ್, ಪುನೀತ್, ರಾಜೇಶ್, ಗಿರೀಶ್, ಶ್ರೀನಿವಾಸ್, ರಮೇಶ್, ರಾಮಣ್ಣ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಓದಿ : ಮೂತ್ರ ವಿಸರ್ಜನೆಗೂ ಜಿಎಸ್​ಟಿ ಕಟ್ಟದಿದ್ದರೇ ಅರೆಸ್ಟ್: ವಾಟಾಳ್ ನಾಗರಾಜ್

ಶಿವಮೊಗ್ಗ : ಮಹಾನಗರ ಪಾಲಿಕೆ ವ್ಯಾಪ್ತಿಯ 18 ನೇ ವಾರ್ಡ್ ವಿನೋಬನಗರದ ಪೃಥ್ವಿ ಮ್ಯಾನ್ಷನ್ ಎದುರಿನ ಶುಭ ಮಂಗಳ ಮಂಟಪಕ್ಕೆ ಹೋಗುವ ಮುಖ್ಯ ರಸ್ತೆಯ ಅವ್ಯವಸ್ಥೆಯ ವಿರುದ್ಧ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಕಾಮಗಾರಿ ವಿರುದ್ಧ ರಸ್ತೆ ಮಧ್ಯೆಯೇ ಕುರ್ಚಿ ಹಾಕಿ ಕುಳಿತು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.

ರಸ್ತೆ ಅವ್ಯವಸ್ಥೆಯ ವಿರುದ್ಧ ರಸ್ತೆ ಮಧ್ಯೆಯೇ ಕುರ್ಚಿ ಹಾಕಿ ಕುಳಿತು ಸ್ಥಳೀಯರ ಪ್ರತಿಭಟನೆ

ಶುಭಮಂಗಳ ಮಂಟಪಕ್ಕೆ ಹೋಗುವ ಮುಖ್ಯ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ. ಜೊತೆಗೆ ಹಲವೆಡೆ ರಸ್ತೆ ಒತ್ತುವರಿಯಾಗಿದ್ದು, ಪಾದಚಾರಿಗಳ ಓಡಾಟಕ್ಕೆ ಫುಟ್​ಪಾತ್ ಇಲ್ಲವಾಗಿದೆ. ಇದರಿಂದಾಗಿ ಜನ ಸಂಚಾರ ಮತ್ತು ವಾಹನ ಸಂಚಾರ ದುಸ್ತರವಾಗಿದ್ದು, ಅಪಘಾತಗಳು ಸಂಭವಿಸುತ್ತಿವೆ. ರಸ್ತೆ ಸಮೀಪದಲ್ಲಿಯೇ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು, ಅದು ಅಪೂರ್ಣವಾಗಿ ಸಮಸ್ಯೆ ತಂದೊಡ್ಡಿದೆ ಎಂದು ಇಲ್ಲಿನ ನಿವಾಸಿಗಳು ದೂರಿದ್ದಾರೆ.

ಇಷ್ಟೆಲ್ಲ ಅವ್ಯವಸ್ಥೆಗಳಿದ್ದರೂ ಈ ಸಮಸ್ಯೆಯ ಪರಿಹಾರಕ್ಕೆ ಪಾಲಿಕೆ ಮುಂದಾಗಿಲ್ಲ. ಇಂತೆಯೇ ನಿರ್ಲಕ್ಷ್ಯ ವಹಿಸಿದರೆ ಸೋಮವಾರವೂ ಪ್ರತಿಭಟನೆ ನಡೆಸುವುದಾಗಿ ಇಲ್ಲಿನ ನಿವಾಸಿಗಳು ಹೇಳಿದ್ದಾರೆ. ಸ್ಥಳಕ್ಕೆ ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳು ಆಗಮಿಸಿ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಈ ಸಂದರ್ಭದಲ್ಲಿ ಶರತ್, ಚಂದ್ರಶೇಖರ್, ಪುನೀತ್, ರಾಜೇಶ್, ಗಿರೀಶ್, ಶ್ರೀನಿವಾಸ್, ರಮೇಶ್, ರಾಮಣ್ಣ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

ಓದಿ : ಮೂತ್ರ ವಿಸರ್ಜನೆಗೂ ಜಿಎಸ್​ಟಿ ಕಟ್ಟದಿದ್ದರೇ ಅರೆಸ್ಟ್: ವಾಟಾಳ್ ನಾಗರಾಜ್

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.