ಶಿವಮೊಗ್ಗ : ಸಿಎಂ ಯಡಿಯೂರಪ್ಪನವರ ತವರು ಕ್ಷೇತ್ರ ಶಿಕಾರಿಪುರದಲ್ಲಿ ನದಿಗಳ ಪುನಶ್ಚೇತನ ಕಾರ್ಯಾಗಾರ ನಡೆಸಲಾಯಿತು. ಶಿಕಾರಿಪುರದ ತಾಲೂಕು ಆಡಳಿತ ಭವನದಲ್ಲಿ ಈ ಕಾರ್ಯಾಗಾರವನ್ನು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ ಎಸ್ ಈಶ್ವರಪ್ಪ ಉದ್ಘಾಟಿಸಿದರು.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯು ಆರ್ಟ್ ಆಫ್ ಲೀವಿಂಗ್ ಅಸೋಸಿಯೇಷನ್ ಸಹಯೋಗದಲ್ಲಿ ನದಿಗಳ ಪುನಶ್ವೇತನ ಕಾರ್ಯಾಗಾರವನ್ನು ಆಯ್ದ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕಾರ್ಯಾಗಾರವನ್ನು ನಡೆಸಲಾಗುತ್ತಿದೆ.
ಇದರಿಂದ ಅಂರ್ತಜಲವನ್ನು ಹೇಗೆ ಹೆಚ್ಚಿಸಿಕೊಳ್ಳಬೇಕು ಎಂಬ ಮಾಹಿತಿಯನ್ನು ಆರ್ಟ್ ಆಫ್ ಲೀವಿಂಗ್ನವರು ಅಧಿಕಾರಿಗಳಿಗೆ ನೀಡುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಂಸದ ಬಿ ವೈ ರಾಘವೇಂದ್ರ, ಜಿಪಂ ಸಿಇಒ ಶ್ರೀಮತಿ ವೈಶಾಲಿ, ತಾಪಂ ಅಧ್ಯಕ್ಷರು, ಜಿಪಂ ಹಾಗೂ ತಾಪಂ ಸದಸ್ಯರು ಹಾಜರಿದ್ದರು.