ಶಿವಮೊಗ್ಗ: ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ವತಿಯಿಂದ ರೌಡಿಗಳ ಪರೇಡ್ ನಡೆಸಿ ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಖಡಕ್ ಎಚ್ಚರಿಕೆ ನೀಡಲಾಗಿದೆ.
ಮೂರು ತಿಂಗಳ ಹಿಂದೆ ನಗರದಲ್ಲಿ ನಡೆದ ಸಣ್ಣ ಜಗಳವೊಂದು ಕೋಮು ಗಲಭೆ ಆತಂಕವನ್ನು ಸೃಷ್ಟಿಸಿತ್ತು. ಇದಾದ ಬಳಿಕ ಕೆಲ ದಿನಗಳ ಹಿಂದೆ ಕುಡಿದ ಅಮಲಿನಲ್ಲಿ ಓರ್ವ ಯುವಕನ ಕೊಲೆಯೂ ನಡೆದಿತ್ತು.
ಈ ಹಿನ್ನೆಲೆ 170ಕ್ಕೂ ಹೆಚ್ಚು ರೌಡಿ ಶೀಟರ್ಗಳನ್ನು ಡಿಎಆರ್ ಮೈದಾನದಲ್ಲಿ ಸೇರಿಸಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು, ಯಾರಾದರೂ ಸಣ್ಣ ಗಲಾಟೆ ಮಾಡಿದ್ದು ತಿಳಿದುಬಂದರೂ ಹಳೇ ಪ್ರಕರಣಗಳಲ್ಲಿ ಮತ್ತೆ ಸೇರಿಸಿ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದರು. ಇದೇ ವೇಳೆ ಬಾರ್ ಅಂಡ್ ರೆಸ್ಟೋರೆಂಟ್ಗಳಲ್ಲಿ ಹಾಗೂ ಅಂಗಡಿಗಳ ಎದುರು ಸಿಸಿ ಕ್ಯಾಮರಾ ಅಳವಡಿಸುವಂತೆ ಎಸ್ಪಿ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.