ETV Bharat / state

ಮಾರ್ಕೆಟ್‌ ಗೋವಿಂದ ಹತ್ಯೆ ಪ್ರಕರಣ: ಪ್ರಮುಖ ಆರೋಪಿಗಳ ಬಂಧನ

author img

By

Published : Jun 18, 2019, 6:03 PM IST

ಕುಖ್ಯಾತ ರೌಡಿ ಶೀಟರ್ ಸೀತಾರಾಮ ಎಸ್.ಕೆ. ಅಲಿಯಾಸ್ ಖರಾಬ್ ಶಿವು ಹಾಗೂ ಅತನ ಸಹಚರರನ್ನು ಶಿವಮೊಗ್ಗ ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಎಂ. ಅಶ್ವಿನಿ. ಎಸ್​​ಪಿ

ಶಿವಮೊಗ್ಗ: ರೌಡಿ ಶೀಟರ್ ಮಾರ್ಕೇಟ್ ಗೋವಿಂದನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಖ್ಯಾತ ರೌಡಿಶೀಟರ್ ಸೀತಾರಾಮ ಎಸ್.ಕೆ. ಅಲಿಯಾಸ್ ಖರಾಬ್ ಶಿವು ಹಾಗೂ ಆತನ ಸಹಚರರನ್ನು ಶಿವಮೊಗ್ಗ ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಳೆದ ಜನವರಿ ತಿಂಗಳಿನಲ್ಲಿ ಶಿವಮೊಗ್ಗ ಗಾರ್ಡನ್ ಪ್ರದೇಶದ ಬಳಿಯೇ ಗೋವಿಂದನನ್ನು ಖರಾಬ್ ಶಿವು ಹಾಗೂ ಆತನ ಸಹಚರರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡ ದೊಡ್ಡಪೇಟೆ ಠಾಣೆ ಪೊಲೀಸರು, ತನಿಖೆ ಆರಂಭಿಸಿದಾಗ ಖರಾಬ್ ಶಿವು ಹಾಗೂ ಆತನ ಸಹಚರರು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಗೋವಿಂದನ ಹತ್ಯೆ ಮಾಡಿರುವುದು ತಿಳಿದುಬಂದಿತ್ತು.

ಶಿವಮೊಗ್ಗ ಪೊಲೀಸರು ರೌಡಿ ಶೀಟರ್ ಮಾರ್ಕೇಟ್ ಗೋವಿಂದನ ಹತ್ಯೆ ಪ್ರಕರಣ ಭೇದಿಸಿದ್ದಾರೆ.

ಗೋವಿಂದನ ಕೊಲೆ ಮಾಡಿದ್ದ ಆರೋಪಿಗಳು ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದರು. ಇದೀಗ ಸೀತಾರಾಮ ಅಲಿಯಾಸ್ ಖರಾಬ್ ಶಿವು, ನಾಗರಾಜ್ ಅಲಿಯಾಸ್ ನಾಗಿ, ಸುಬ್ರಹ್ಮಣಿ ಅಲಿಯಾಸ್ ಸುಬ್ಬು ಅವರನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಈ ಹಿಂದೆ ಪ್ರಕರಣದ ಇತರೆ ಆರೋಪಿಗಳಾದ ಚೇತನ್, ಸಂಜಯ್, ಮಂಜುನಾಥ್, ರಿಜ್ವಾನ್, ಸಂದೇಶ್, ಪ್ರೇಮರಾಜ್, ಶಿವರಾಜ್, ಲಕ್ಷ್ಮಮ್ಮ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಇದೀಗ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ.

ಶಿವಮೊಗ್ಗ: ರೌಡಿ ಶೀಟರ್ ಮಾರ್ಕೇಟ್ ಗೋವಿಂದನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಖ್ಯಾತ ರೌಡಿಶೀಟರ್ ಸೀತಾರಾಮ ಎಸ್.ಕೆ. ಅಲಿಯಾಸ್ ಖರಾಬ್ ಶಿವು ಹಾಗೂ ಆತನ ಸಹಚರರನ್ನು ಶಿವಮೊಗ್ಗ ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಳೆದ ಜನವರಿ ತಿಂಗಳಿನಲ್ಲಿ ಶಿವಮೊಗ್ಗ ಗಾರ್ಡನ್ ಪ್ರದೇಶದ ಬಳಿಯೇ ಗೋವಿಂದನನ್ನು ಖರಾಬ್ ಶಿವು ಹಾಗೂ ಆತನ ಸಹಚರರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಪ್ರಕರಣ ದಾಖಲಿಸಿಕೊಂಡ ದೊಡ್ಡಪೇಟೆ ಠಾಣೆ ಪೊಲೀಸರು, ತನಿಖೆ ಆರಂಭಿಸಿದಾಗ ಖರಾಬ್ ಶಿವು ಹಾಗೂ ಆತನ ಸಹಚರರು ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಗೋವಿಂದನ ಹತ್ಯೆ ಮಾಡಿರುವುದು ತಿಳಿದುಬಂದಿತ್ತು.

ಶಿವಮೊಗ್ಗ ಪೊಲೀಸರು ರೌಡಿ ಶೀಟರ್ ಮಾರ್ಕೇಟ್ ಗೋವಿಂದನ ಹತ್ಯೆ ಪ್ರಕರಣ ಭೇದಿಸಿದ್ದಾರೆ.

ಗೋವಿಂದನ ಕೊಲೆ ಮಾಡಿದ್ದ ಆರೋಪಿಗಳು ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದರು. ಇದೀಗ ಸೀತಾರಾಮ ಅಲಿಯಾಸ್ ಖರಾಬ್ ಶಿವು, ನಾಗರಾಜ್ ಅಲಿಯಾಸ್ ನಾಗಿ, ಸುಬ್ರಹ್ಮಣಿ ಅಲಿಯಾಸ್ ಸುಬ್ಬು ಅವರನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಈ ಹಿಂದೆ ಪ್ರಕರಣದ ಇತರೆ ಆರೋಪಿಗಳಾದ ಚೇತನ್, ಸಂಜಯ್, ಮಂಜುನಾಥ್, ರಿಜ್ವಾನ್, ಸಂದೇಶ್, ಪ್ರೇಮರಾಜ್, ಶಿವರಾಜ್, ಲಕ್ಷ್ಮಮ್ಮ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಇದೀಗ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ.

Intro:


ಶಿವಮೊಗ್ಗ,
ಫಾರ್ಮೆಟ್: ಎವಿಬಿ
ಸ್ಲಗ್: ರೌಡಿ ಶೀಟರ್ ಖರಾಬ್ ಶಿವು ಅಂಡ್ ಗ್ಯಾಂಗ್ ಅಂದರ್.

ಆ್ಯಂಕರ್.........
ರೌಡಿ ಶೀಟರ್ ಮಾರ್ಕೆಟ್ ಗೋವಿಂದನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಖ್ಯಾತ ರೌಡಿ ಶೀಟರ್ ಸೀತಾರಾಮ ಎಸ್.ಕೆ.ಅಲಿಯಾಸ್ ಖರಾಬ್ ಶಿವು ಹಾಗೂ ಅತನ ಸಹಚರರನ್ನು ಶಿವಮೊಗ್ಗ ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಳೆದ ಜನವರಿ ತಿಂಗಳಿನಲ್ಲಿ ಶಿವಮೊಗ್ಗ ಗಾರ್ಡನ್ ಏರಿಯಾದ ತನ್ನ ಮನೆಯ ಬಳಿಯೇ ಗೋವಿಂದನನ್ನು ಖರಾಬ್ ಶಿವು ಹಾಗೂ ಆತನ ಸಹಚರರು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು. ಪ್ರಕರಣದ ದಾಖಲಿಸಿಕೊಂಡ ದೊಡ್ಡಪೇಟೆ ಠಾಣೆ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದಾಗ ಖರಾಬ್ ಶಿವು ಹಾಗೂ ಆತನ ಸಹಚರರು ವ್ಯಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಗೊವಿಂದನ ಹತ್ಯೆ ಮಾಡಿರುವುದು ತಿಳಿದುಬಂದಿತ್ತು. ಗೋವಿಂದನ ಕೊಲೆ ಮಾಡಿದ್ದ ಆರೋಪಿಗಳು ಬೆಂಗಳೂರಿನಲ್ಲಿ ತಲೆ ಮರೆಸಿಕೊಂಡಿದ್ದರು. ಇದೀಗ ಸೀತಾರಾಮ ಅಲಿಯಾಸ್ ಖರಾಬ್ ಶಿವು, ನಾಗರಾಜ್ ಅಲಿಯಾಸ್ ನಾಗಿ, ಸುಬ್ರಹ್ಮಣಿ ಅಲಿಯಾಸ್ ಸುಬ್ಬು ಅವರನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಈ ಹಿಂದೆ ಪ್ರಕರಣದ ಇತರೆ ಆರೋಪಿಗಳಾದ ಚೇತನ್, ಸಂಜಯ್, ಮಂಜುನಾಥ್, ರಿಜ್ವಾನ್, ಸಂದೇಶ್, ಪ್ರೇಮರಾಜ್, ಶಿವರಾಜ್, ಲಕ್ಷ್ಮಮ್ಮ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಇದೀಗ ಪ್ರಕರಣದ ಪ್ರಮುಖ ಆರೋಪಿಗಳು ಅಂದರ್ ಆಗಿದ್ದಾರೆ.

ಬೈಟ್..:
ಡಾ. ಎಂ.ಅಶ್ವಿನಿ : ಶಿವಮೊಗ್ಗ ಎಸ್ ಪಿ




Body:ಭೀಮಾನಾಯ್ಕ ಎಸ್ ಶಿವಮೊಗ್ಗ


Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.