ಶಿವಮೊಗ್ಗ: ಜಿಲ್ಲೆಯಲ್ಲಿ ರೌಡಿ ಶೀಟರ್ನ ಬರ್ಬರ ಕೊಲೆಯಾಗಿದೆ. ರೌಡಿ ಶೀಟರ್ ಹಂದಿ ಅಣ್ಣಿಯ ಸಹೋದರ ರೌಡಿ ಶೀಟರ್ ಗಿರೀಶ್ನನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.
ನಗರದ ಗೋಪಾಳ ಬಡಾವಣೆಯ ಸಿದ್ದೇಶ್ವರ ವೃತ್ತದ ಬಳಿಯ ಬರುವಾಗ ಬೈಕ್ನಲ್ಲಿ ಬಂದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ತಕ್ಷಣ ಗಿರೀಶ್ನನ್ನು ಸ್ನೇಹಿತರು ಆಸ್ಪತ್ರೆಗೆ ದಾಖಲು ಮಾಡಿದರೂ ಸಹ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಕೃತ್ಯಕ್ಕೆ ಹಳೇ ವೈಷಮ್ಯವೇ ಕಾರಣ ಎನ್ನಲಾಗಿದೆ.