ETV Bharat / state

ಶಿವಮೊಗ್ಗ: ಜಮೀನಿನ NOC ನೀಡಲು ₹70 ಸಾವಿರ ಲಂಚದ ಬೇಡಿಕೆ ಆರೋಪ.. ಎಸಿಬಿ ಬಲೆಗೆ ಪಿಡಿಓ

author img

By

Published : Jan 11, 2022, 8:30 PM IST

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬಿಳಕಿ ಗ್ರಾಮದಲ್ಲಿ ಪಿಡಿಓ ಲಂಚ ಪಡೆಯುತ್ತಿರುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಜಮೀನಿನ ಎನ್ಓಸಿ ನೀಡಲು 70 ಸಾವಿರ ರೂ. ಲಂಚ ಕೇಳಿದ್ದರು ಎನ್ನಲಾಗ್ತಿದೆ.

bribery Demand by PDO
ಎಸಿಬಿ ಬಲೆಗೆ ಪಿಡಿಓ

ಶಿವಮೊಗ್ಗ: ಗ್ರಾಮ ಪಂಚಾಯತ್​ ಪಿಡಿಓ 70 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಭದ್ರಾವತಿ ತಾಲೂಕಿನ ಬಿಳಕಿ ಗ್ರಾಮದಲ್ಲಿ ನಡೆದಿದೆ. ಬಿಳಕಿ ಗ್ರಾಮ ಪಂಚಾಯತ್​ ಪಿಡಿಓ ಕೇಶವಮೂರ್ತಿ ಎಸಿಬಿ ಬಲೆಗೆ ಬಿದ್ದಿರುವ ಅಧಿಕಾರಿ.

ಜಮೀನು ಎನ್​​ಓಸಿ ನೀಡಲು ಲಂಚ:

ಜಮೀನಿನ ಎನ್ಓಸಿ ನೀಡಲು 70 ಸಾವಿರ ರೂ. ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಿಡಿಓ ಅವರು ಜಮೀನಿನ ಕುರಿತು ಎನ್​ಓಸಿ ನೀಡಲು 75 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗ್ತಿದೆ. ಮೊದಲು 5 ಸಾವಿರ ರೂ. ಲಂಚ ಪಡೆದಿದ್ದರು. ಮಂಗಳವಾರ ದೂರು ನೀಡಿದವನಿಂದ 70 ಸಾವಿರ ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ:ಡಿಕೆ ಬ್ರದರ್ಸ್ ಸೇರಿ 41 ಕಾಂಗ್ರೆಸ್​ ನಾಯಕರ ವಿರುದ್ಧ ಮತ್ತೊಂದು ಎಫ್​ಐಆರ್!

ಶಿವಮೊಗ್ಗ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪಿಡಿಓ ಕೇಶವ‌ಮೂರ್ತಿಯನ್ನು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ‌.

ಶಿವಮೊಗ್ಗ: ಗ್ರಾಮ ಪಂಚಾಯತ್​ ಪಿಡಿಓ 70 ಸಾವಿರ ರೂ. ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿರುವ ಘಟನೆ ಭದ್ರಾವತಿ ತಾಲೂಕಿನ ಬಿಳಕಿ ಗ್ರಾಮದಲ್ಲಿ ನಡೆದಿದೆ. ಬಿಳಕಿ ಗ್ರಾಮ ಪಂಚಾಯತ್​ ಪಿಡಿಓ ಕೇಶವಮೂರ್ತಿ ಎಸಿಬಿ ಬಲೆಗೆ ಬಿದ್ದಿರುವ ಅಧಿಕಾರಿ.

ಜಮೀನು ಎನ್​​ಓಸಿ ನೀಡಲು ಲಂಚ:

ಜಮೀನಿನ ಎನ್ಓಸಿ ನೀಡಲು 70 ಸಾವಿರ ರೂ. ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಿಡಿಓ ಅವರು ಜಮೀನಿನ ಕುರಿತು ಎನ್​ಓಸಿ ನೀಡಲು 75 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗ್ತಿದೆ. ಮೊದಲು 5 ಸಾವಿರ ರೂ. ಲಂಚ ಪಡೆದಿದ್ದರು. ಮಂಗಳವಾರ ದೂರು ನೀಡಿದವನಿಂದ 70 ಸಾವಿರ ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ:ಡಿಕೆ ಬ್ರದರ್ಸ್ ಸೇರಿ 41 ಕಾಂಗ್ರೆಸ್​ ನಾಯಕರ ವಿರುದ್ಧ ಮತ್ತೊಂದು ಎಫ್​ಐಆರ್!

ಶಿವಮೊಗ್ಗ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪಿಡಿಓ ಕೇಶವ‌ಮೂರ್ತಿಯನ್ನು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ‌.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.