ETV Bharat / state

ಮಲೆನಾಡಿನಲ್ಲಿ ಜೋರಾಗಿದೆ ಸಂಕ್ರಾಂತಿ ಖರೀದಿ

author img

By

Published : Jan 14, 2020, 8:09 PM IST

ಶಿವಮೊಗ್ಗ, ಹೊಸ ವರ್ಷದ ಮೊದಲ ಹಬ್ಬ ಸಂಕ್ರಾಂತಿ ಆಚರಣೆಗೆ ನಗರದ ಎಲ್ಲೆಡೆ ಸಡಗರ ಸಂಭ್ರಮದ ಸಿದ್ಧತೆ ನಡೆದಿದೆ. ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಾರುಕಟ್ಟೆಯಲ್ಲಿ ಸಾರ್ವಜನಿಕರು ಅಗತ್ಯ ವಸ್ತುಗಳು, ಪೂಜಾ ಸಾಮಾಗ್ರಿಗಳನ್ನು ಕೊಳುತ್ತಿದ್ದುದು ಸಾಮಾನ್ಯವಾಗಿತ್ತು.

sankranti-purchase-in-shivamogga
ಮಲೆನಾಡಿನಲ್ಲಿ ಜೋರಾಗಿದೆ ಸಂಕ್ರಾಂತಿ ಖರೀದಿ

ಶಿವಮೊಗ್ಗ: ಹೊಸ ವರ್ಷದ ಮೊದಲ ಹಬ್ಬ ಸಂಕ್ರಾಂತಿ ಆಚರಣೆಗೆ ನಗರದ ಎಲ್ಲೆಡೆ ಸಡಗರ ಸಂಭ್ರಮದ ಸಿದ್ಧತೆ ನಡೆದಿದೆ. ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಾರುಕಟ್ಟೆಯಲ್ಲಿ ಸಾರ್ವಜನಿಕರು ಅಗತ್ಯ ವಸ್ತುಗಳು, ಪೂಜಾ ಸಾಮಾಗ್ರಿಗಳನ್ನು ಕೊಳುತ್ತಿದ್ದುದು ಸಾಮಾನ್ಯವಾಗಿತ್ತು.

ಸಂಕ್ರಾಂತಿ ಹಬ್ಬಕ್ಕೆ ಪ್ರಮುಖವಾಗಿ ಬೇಕಾದ ಹೂ, ಕಬ್ಬು ಮತ್ತು ಸಿದ್ಧಪಡಿಸಿದ ಎಳ್ಳು, ಬೆಲ್ಲ ಖರೀದಿ ಭರಾಟೆ ಜೋರಾಗಿತ್ತು. ನಗರದ ಗಾಂಬಜಾರ್, ಶಿವಪ್ಪನಾಯಕ ವೃತ್ತ, ಗೋಪಿ ವೃತ್ತ ಮುಂತಾದ ಕಡೆಗಳಲ್ಲಿ ಕಬ್ಬು ಮಾರಾಟ ಮಾಡುತ್ತಿದ್ದ ದೃಶ್ಯ ಕಂಡುಬಂದಿತು.

ಮಲೆನಾಡಿನಲ್ಲಿ ಜೋರಾಗಿದೆ ಸಂಕ್ರಾಂತಿ ಖರೀದಿ

ಸುಗ್ಗಿ ಹಬ್ಬವಾಗಿರುವ ಸಂಕ್ರಾಂತಿ ಯನ್ನು ಜನ ಸಡಗರದಿಂದ ಆಚರಿಸುತ್ತಾರೆ. ಗ್ರಾಮೀಣ ಭಾಗದಲ್ಲಿ ಎತ್ತುಗಳನ್ನು ಸಿಂಗರಿಸಿ ಮೆರವ ಣಿಗೆ ಮಾಡಲಾಗುತ್ತದೆ. ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತನಾಡುವುದೇ ಮಕರ ಸಂಕ್ರಾಂತಿ ವಿಶೇಷವಾಗಿದೆ. ಹಬ್ಬದ ಪ್ರಯುಕ್ತ ಬೆಲೆಯಲ್ಲಿ ಭಾರೀ ವ್ಯತ್ಯಾಸವೇನು ಕಂಡುಬಂದಿಲ್ಲ.

ಶಿವಮೊಗ್ಗ: ಹೊಸ ವರ್ಷದ ಮೊದಲ ಹಬ್ಬ ಸಂಕ್ರಾಂತಿ ಆಚರಣೆಗೆ ನಗರದ ಎಲ್ಲೆಡೆ ಸಡಗರ ಸಂಭ್ರಮದ ಸಿದ್ಧತೆ ನಡೆದಿದೆ. ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಾರುಕಟ್ಟೆಯಲ್ಲಿ ಸಾರ್ವಜನಿಕರು ಅಗತ್ಯ ವಸ್ತುಗಳು, ಪೂಜಾ ಸಾಮಾಗ್ರಿಗಳನ್ನು ಕೊಳುತ್ತಿದ್ದುದು ಸಾಮಾನ್ಯವಾಗಿತ್ತು.

ಸಂಕ್ರಾಂತಿ ಹಬ್ಬಕ್ಕೆ ಪ್ರಮುಖವಾಗಿ ಬೇಕಾದ ಹೂ, ಕಬ್ಬು ಮತ್ತು ಸಿದ್ಧಪಡಿಸಿದ ಎಳ್ಳು, ಬೆಲ್ಲ ಖರೀದಿ ಭರಾಟೆ ಜೋರಾಗಿತ್ತು. ನಗರದ ಗಾಂಬಜಾರ್, ಶಿವಪ್ಪನಾಯಕ ವೃತ್ತ, ಗೋಪಿ ವೃತ್ತ ಮುಂತಾದ ಕಡೆಗಳಲ್ಲಿ ಕಬ್ಬು ಮಾರಾಟ ಮಾಡುತ್ತಿದ್ದ ದೃಶ್ಯ ಕಂಡುಬಂದಿತು.

ಮಲೆನಾಡಿನಲ್ಲಿ ಜೋರಾಗಿದೆ ಸಂಕ್ರಾಂತಿ ಖರೀದಿ

ಸುಗ್ಗಿ ಹಬ್ಬವಾಗಿರುವ ಸಂಕ್ರಾಂತಿ ಯನ್ನು ಜನ ಸಡಗರದಿಂದ ಆಚರಿಸುತ್ತಾರೆ. ಗ್ರಾಮೀಣ ಭಾಗದಲ್ಲಿ ಎತ್ತುಗಳನ್ನು ಸಿಂಗರಿಸಿ ಮೆರವ ಣಿಗೆ ಮಾಡಲಾಗುತ್ತದೆ. ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತನಾಡುವುದೇ ಮಕರ ಸಂಕ್ರಾಂತಿ ವಿಶೇಷವಾಗಿದೆ. ಹಬ್ಬದ ಪ್ರಯುಕ್ತ ಬೆಲೆಯಲ್ಲಿ ಭಾರೀ ವ್ಯತ್ಯಾಸವೇನು ಕಂಡುಬಂದಿಲ್ಲ.

Intro:ಶಿವಮೊಗ್ಗ,
ಹೊಸ ವರ್ಷದ ಮೊದಲ ಹಬ್ಬ ಸಂಕ್ರಾಂತಿ ಆಚರಣೆಗೆ ನಗರದ ಎಲ್ಲೆಡೆ ಸಡಗರ ಸಂಭ್ರಮದ ಸಿದ್ಧತೆ ನಡೆದಿದೆ. ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಾರುಕಟ್ಟೆಯಲ್ಲಿ ಸಾರ್ವಜನಿಕರು ಅಗತ್ಯ ವಸ್ತುಗಳು, ಪೂಜಾ ಸಾಮಾಗ್ರಿಗಳನ್ನು ಕೊಳುತ್ತಿದ್ದುದು ಸಾಮಾನ್ಯವಾಗಿತ್ತು.
ಸಂಕ್ರಾಂತಿ ಹಬ್ಬಕ್ಕೆ ಪ್ರಮುಖವಾಗಿ ಬೇಕಾದ ಹೂ, ಕಬ್ಬು ಮತ್ತು ಸಿದ್ಧಪಡಿಸಿದ ಎಳ್ಳು, ಬೆಲ್ಲ ಖರೀದಿ ಭರಾಟೆ ಜೋರಾಗಿತ್ತು. ನಗರದ ಗಾಂಬಜಾರ್, ಶಿವಪ್ಪನಾಯಕ ವೃತ್ತ, ಗೋಪಿ ವೃತ್ತ ಮುಂತಾದ ಕಡೆಗಳಲ್ಲಿ ಕಬ್ಬು ಮಾರಾಟ ಮಾಡುತ್ತಿದ್ದ ದೃಶ್ಯ ಕಂಡುಬಂದಿತು.
ಒಂದುಕೋಲು ಕಬ್ಬಿನ ಬೆಲೆ 20 ರಿಂದ 30 ರೂ., ಹೂವು 40 ರಿಂದ 60 ರೂ., ಸೇಬು 100 ರೂ., ಕಿತ್ತಲೆ 60 ರೂ., ಬಾಳೆಹಣ್ಣು 50 ರೂ., ಸಕ್ಕರೆ ಅಚ್ಚು, ಎಳ್ಳು, ಬೆಲ್ಲದ ದರ ಸ್ವಲ್ಪ ಹೆಚ್ಚಾಗಿದೆ. ಒಟ್ಟಾರೆ ಮಕರ ಸಂಕ್ರಾಂತಿ ಅಭಿವೃದ್ಧಿಯ ಸಂಕೇತವಾಗಿದೆ.
ಸುಗ್ಗಿ ಹಬ್ಬವಾಗಿರುವ ಸಂಕ್ರಾಂತಿ ಯನ್ನು ಜನ ಸಡಗರದಿಂದ ಆಚರಿಸುತ್ತಾರೆ. ಗ್ರಾಮೀಣ ಭಾಗದಲ್ಲಿ ಎತ್ತುಗಳನ್ನು ಸಿಂಗರಿಸಿ ಮೆರವ ಣಿಗೆ ಮಾಡಲಾಗುತ್ತದೆ. ಕೊಯ್ಲು ಮುಗಿದು ಸುಗ್ಗಿ ಕಾಲ ಇದಾಗಿರು ವುದರಿಂದ ಎಲ್ಲರೂ ಸಂಭ್ರಮ ದಿಂದ ಹಬ್ಬ ಆಚರಿಸುತ್ತಾರೆ. ತಮಿಳು ಸಮಾಜದವರು ಪೊಂಗಲ್(ಸಂಕ್ರಾಂತಿ) ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ. ಮನೆ ಯ ಮುಂಭಾಗದಲ್ಲಿ ರಂಗೋಲಿ ಹಾಕಿ, ಒಲೆ ಹೂಡಿ ಹಾಲು ಉಕ್ಕಿ ಸುವುದು ವಾಡಿಕೆ. ಸಂಕ್ರಾಂತಿ ದಿನ ದಂದು ಸೂರ್ಯನು ತನ್ನ ಪಥ ಬದಲಿಸುವುದರಿಂದ ಜೀವನದಲ್ಲಿ ಕೆಟ್ಟ ದಾರಿ ಬಿಟ್ಟು ಒಳ್ಳೆಯ ದಾರಿಯಲ್ಲಿ ಸಾಗಬೇಕೆಂಬುದು ಹಿರಿಯರ ಮಾತಾಗಿದೆ.
ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತನಾಡುವುದೇ ಮಕರ ಸಂಕ್ರಾಂತಿ ವಿಶೇಷವಾಗಿದೆ. ಎಲ್ಲ ದೇವಾಲಯಗಳಲ್ಲೂ ಮಕರ ಸಂಕ್ರಾಂತಿ ಪ್ರಯುಕ್ತ ವಿಶೇಷ ಪೂಜೆ ಪುನಸ್ಕಾರಗಳನ್ನು ಹಮ್ಮಿಕೊಳ್ಳಲಾಗಿದೆ. ಹಬ್ಬದ ಪ್ರಯುಕ್ತ ಬೆಲೆಯಲ್ಲಿ ಅಂತಹ ವ್ಯತ್ಯಾಸ ಕಂಡುಬಂದಿಲ್ಲ.

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.