ETV Bharat / state

ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್ ಭಾವಚಿತ್ರ: ಎಸ್​​ಡಿಪಿಐ ಕಾರ್ಯಕರ್ತರ ಆಕ್ರೋಶ, ದೂರು ದಾಖಲು

author img

By

Published : Aug 13, 2022, 7:47 PM IST

Updated : Aug 13, 2022, 8:15 PM IST

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ‌ ಶಿವಮೊಗ್ಗ ನಗರದ ಸಿಟಿ ಸೆಂಟರ್​ ಮಾಲ್​ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಸಾಲಿನಲ್ಲಿ ಸಾವರ್ಕರ್ ಭಾವಚಿತ್ರ ಗಮನಿಸಿ ಎಸ್​​ಡಿಪಿಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.

sdpi-workers-outraged-over-savarkars-picture-at-independence-amrut-mahotsav
ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್ ಭಾವಚಿತ್ರ: ಎಸ್​​ಡಿಪಿಐ ಕಾರ್ಯಕರ್ತರ ಆಕ್ರೋಶ

ಶಿವಮೊಗ್ಗ: ನಗರದ ಸಿಟಿ ಸೆಂಟರ್ ಮಾಲ್​ನಲ್ಲಿ ಸಾವರ್ಕರ್ ಭಾವಚಿತ್ರ ಸಂಬಂಧ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳೊಂದಿಗೆ ಸಾವರ್ಕರ್ ಭಾವಚಿತ್ರ ಇರುವುದನ್ನು ಕಂಡು ಎಸ್​ಡಿಪಿಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ‌ ಮಹಾನಗರ ಪಾಲಿಕೆ ವತಿಯಿಂದ ಸಿಟಿ ಸೆಂಟರ್​ ಮಾಲ್​ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಹಾಕಿ ಅಲಂಕರಿಸಲಾಗಿತ್ತು. ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರೂ, ಆಜಾದ್ ಚಂದ್ರಶೇಖರ್, ಸರ್ದಾರ್ ವಲ್ಲಭಬಾಯಿ ಪಟೇಲ್, ವಿನಾಯಕ ದಾಮೋದರ ಸಾರ್ವರ್ಕರ್, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಸೇರಿದಂತೆ ಹಲವರ ಭಾವಚಿತ್ರಗಳನ್ನು ಅಳವಡಿಸಲಾಗಿತ್ತು.

ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್ ಭಾವಚಿತ್ರ: ಎಸ್​​ಡಿಪಿಐ ಕಾರ್ಯಕರ್ತರ ಆಕ್ರೋಶ

ಈ ಭಾವಚಿತ್ರಗಳ ಮಧ್ಯದಲ್ಲಿ ಸಾವರ್ಕರ್ ಭಾವಚಿತ್ರ ಗಮನಿಸಿದ ಕಾರ್ಪೊರೇಟರ್​​ವೊಬ್ಬರ ಪತಿ ಹಾಗೂ ಎಸ್​​ಡಿಪಿಐ ಕಾರ್ಯಕರ್ತರು, ಸಾಮಾಜಿಕ ಹೋರಾಟಗಾರ ಆಸೀಫ್ ಮತ್ತು ಆತನ ಸಂಗಡಿಗರು ಆಕ್ಷೇಪ ವ್ಯಕ್ತಪಡಿಸಿದರು. ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರೇ ಅಲ್ಲ, ಅವರ ಭಾವಚಿತ್ರ ಏಕೆ ಹಾಕಿದ್ದೀರಿ‌?. ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದುಕೊಟ್ಟು ಬಂದ ಸಾವರ್ಕರ್ ಹೇಗೆ ಸ್ವಾತಂತ್ರ್ಯ ಹೋರಾಟಗಾರನಾಗಲು ಸಾಧ್ಯ ಎಂದು ಕಾರ್ಯಕರ್ತರು ಪ್ರಶ್ನಿಸಿದರು.

ಅಲ್ಲದೇ, ಮುಸ್ಲಿಂ ಹೋರಾಟಗಾರರನ್ನು ಕಡೆಗಣಿಸಲಾಗಿದೆ. ಸ್ವಾತಂತ್ರ್ಯ ಹೋರಾಟಗಾರರ ಸಾಲಿನಿಂದ ಸಾವರ್ಕರ್ ಭಾವಚಿತ್ರ ತೆಗೆಯುವಂತೆ ಹಾಗೂ ಸ್ವಾತಂತ್ರ್ಯಕ್ಕಾಗಿ ಜೀವಕೊಟ್ಟವರ ಭಾವಚಿತ್ರ ಹಾಕುವಂತೆ ಪಟ್ಟು ಹಿಡಿದು ಪ್ರತಿಭಟನೆ ಆರಂಭಿಸಿದರು. ಈ ವೇಳೆ ಸಾವರ್ಕರ್ ಭಾವಚಿತ್ರದೊಂದಿಗೆ ಅಬ್ದುಲ್ ಕಲಾಂ ಮತ್ತು ಆಜಾದ್ ಅವರ ಭಾವಚಿತ್ರ ಹಾಕುವುದಾಗಿ ಹೇಳಿ ಮಾಲ್​ನ ಸಿಬ್ಬಂದಿ​ ಸಮಸ್ಯೆ ಪರಿಹರಿಸಿಕೊಂಡರು.

ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್ ಭಾವಚಿತ್ರ: ಎಸ್​​ಡಿಪಿಐ ಕಾರ್ಯಕರ್ತರ ಆಕ್ರೋಶ

ಸ್ಥಳಕ್ಕಾಗಮಿಸಿ ಬಿಜೆಪಿ, ಸಂಘ ಪರಿವಾರ: ಆದರೆ, ಇತ್ತ ಸಾವರ್ಕರ್ ಭಾವಚಿತ್ರದ ಬಗ್ಗೆ ಆಸಿಫ್ ಮತ್ತು ಆತನ ಸಂಗಡಿಗರು ಆಕ್ಷೇಪ ವ್ಯಕ್ತಪಡಿಸಿದ ವಿಡಿಯೋ ವೈರಲ್ ಆಗಿದೆ. ಫೇಸ್​ಬುಕ್ ವಾಟ್ಸ್​​ಆ್ಯಪ್​ಗಳಲ್ಲಿ ವಿಡಿಯೋ ಹರಿದಾಡಿದ ಪರ-ವಿರೋಧದ ಚರ್ಚೆಗೂ ಕಾರಣವಾಯಿತು. ಇದರ ಬೆನ್ನಿಗೆ ಮಾಲ್​ಗೆ ಸಂಘ ಪರಿವಾರ ಮತ್ತು ಬಿಜೆಪಿ ಮುಖಂಡರು ಆಗಮಿಸಿದರು.

ಜೊತೆಗೆ ಆಸೀಫ್ ಮತ್ತು ಆತನ ಸಂಗಡಿಗರನ್ನು ಬಂಧಿಸಬೇಕು ಆಗ್ರಹಿಸಿ ಬಿಜೆಪಿ ಹಾಗೂ ಸಂಘ ಪರಿವಾರದ ಮುಖಂಡರು, ಕಾರ್ಯಕರ್ತರು ಮಾಲ್ ಮುಂದೆ ಧರಣಿ ನಡೆಸಿದರು. ಅವರ ಬಂಧನ ಆಗುವವರೆಗೆ ತಾವು ಧರಣಿ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಶಾಂತಗೊಳಿಸಿದರು.

ಪಾಲಿಕೆಯಿಂದ ದೂರು ದಾಖಲು: ಭಾವಚಿತ್ರ ಪ್ರದರ್ಶನದ ವೇಳೆ ಆಕ್ಷೇಪ ವ್ಯಕ್ತಪಡಿಸಿದ ಆರೋಪ ಸಂಬಂಧ ಆಸಿಫ್ ಮತ್ತು ಆತನ ಸಹಚರರ ವಿರುದ್ಧ ಪಾಲಿಕೆ ವತಿಯಿಂದ ದೂರು ನೀಡಲಾಗಿದೆ. ಐಪಿಸಿ ಸೆಕ್ಷನ್ 341, 353 ಮತ್ತು 34ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಬಿಜೆಪಿ ನಗರಾಧ್ಯಕ್ಷ ಜಗದೀಶ್ ತಿಳಿಸಿದರು.

ಇನ್ನು, ಸಿಟಿ ಸೆಂಟರ್ ಮಾಲ್​ನಲ್ಲಿ ನಡೆದ ಘಟನೆಯಿಂದ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಹೀಗಾಗಿಯೇ ಮಾಲ್​ನೊಳಗೆ ಮತ್ತು ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಹರ್​ ಘರ್ ತಿರಂಗಾ ಅಭಿಯಾನ ವೇಳೆ ಮಾಜಿ ಡಿಸಿಎಂ ನಿತಿನ್ ಪಟೇಲ್​ಗೆ ಗುದ್ದಿದ ಬಿಡಾಡಿ ದನ

ಶಿವಮೊಗ್ಗ: ನಗರದ ಸಿಟಿ ಸೆಂಟರ್ ಮಾಲ್​ನಲ್ಲಿ ಸಾವರ್ಕರ್ ಭಾವಚಿತ್ರ ಸಂಬಂಧ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳೊಂದಿಗೆ ಸಾವರ್ಕರ್ ಭಾವಚಿತ್ರ ಇರುವುದನ್ನು ಕಂಡು ಎಸ್​ಡಿಪಿಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ‌ ಮಹಾನಗರ ಪಾಲಿಕೆ ವತಿಯಿಂದ ಸಿಟಿ ಸೆಂಟರ್​ ಮಾಲ್​ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳ ಹಾಕಿ ಅಲಂಕರಿಸಲಾಗಿತ್ತು. ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರೂ, ಆಜಾದ್ ಚಂದ್ರಶೇಖರ್, ಸರ್ದಾರ್ ವಲ್ಲಭಬಾಯಿ ಪಟೇಲ್, ವಿನಾಯಕ ದಾಮೋದರ ಸಾರ್ವರ್ಕರ್, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಸೇರಿದಂತೆ ಹಲವರ ಭಾವಚಿತ್ರಗಳನ್ನು ಅಳವಡಿಸಲಾಗಿತ್ತು.

ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್ ಭಾವಚಿತ್ರ: ಎಸ್​​ಡಿಪಿಐ ಕಾರ್ಯಕರ್ತರ ಆಕ್ರೋಶ

ಈ ಭಾವಚಿತ್ರಗಳ ಮಧ್ಯದಲ್ಲಿ ಸಾವರ್ಕರ್ ಭಾವಚಿತ್ರ ಗಮನಿಸಿದ ಕಾರ್ಪೊರೇಟರ್​​ವೊಬ್ಬರ ಪತಿ ಹಾಗೂ ಎಸ್​​ಡಿಪಿಐ ಕಾರ್ಯಕರ್ತರು, ಸಾಮಾಜಿಕ ಹೋರಾಟಗಾರ ಆಸೀಫ್ ಮತ್ತು ಆತನ ಸಂಗಡಿಗರು ಆಕ್ಷೇಪ ವ್ಯಕ್ತಪಡಿಸಿದರು. ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರೇ ಅಲ್ಲ, ಅವರ ಭಾವಚಿತ್ರ ಏಕೆ ಹಾಕಿದ್ದೀರಿ‌?. ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದುಕೊಟ್ಟು ಬಂದ ಸಾವರ್ಕರ್ ಹೇಗೆ ಸ್ವಾತಂತ್ರ್ಯ ಹೋರಾಟಗಾರನಾಗಲು ಸಾಧ್ಯ ಎಂದು ಕಾರ್ಯಕರ್ತರು ಪ್ರಶ್ನಿಸಿದರು.

ಅಲ್ಲದೇ, ಮುಸ್ಲಿಂ ಹೋರಾಟಗಾರರನ್ನು ಕಡೆಗಣಿಸಲಾಗಿದೆ. ಸ್ವಾತಂತ್ರ್ಯ ಹೋರಾಟಗಾರರ ಸಾಲಿನಿಂದ ಸಾವರ್ಕರ್ ಭಾವಚಿತ್ರ ತೆಗೆಯುವಂತೆ ಹಾಗೂ ಸ್ವಾತಂತ್ರ್ಯಕ್ಕಾಗಿ ಜೀವಕೊಟ್ಟವರ ಭಾವಚಿತ್ರ ಹಾಕುವಂತೆ ಪಟ್ಟು ಹಿಡಿದು ಪ್ರತಿಭಟನೆ ಆರಂಭಿಸಿದರು. ಈ ವೇಳೆ ಸಾವರ್ಕರ್ ಭಾವಚಿತ್ರದೊಂದಿಗೆ ಅಬ್ದುಲ್ ಕಲಾಂ ಮತ್ತು ಆಜಾದ್ ಅವರ ಭಾವಚಿತ್ರ ಹಾಕುವುದಾಗಿ ಹೇಳಿ ಮಾಲ್​ನ ಸಿಬ್ಬಂದಿ​ ಸಮಸ್ಯೆ ಪರಿಹರಿಸಿಕೊಂಡರು.

ಸ್ವಾತಂತ್ರ್ಯ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್ ಭಾವಚಿತ್ರ: ಎಸ್​​ಡಿಪಿಐ ಕಾರ್ಯಕರ್ತರ ಆಕ್ರೋಶ

ಸ್ಥಳಕ್ಕಾಗಮಿಸಿ ಬಿಜೆಪಿ, ಸಂಘ ಪರಿವಾರ: ಆದರೆ, ಇತ್ತ ಸಾವರ್ಕರ್ ಭಾವಚಿತ್ರದ ಬಗ್ಗೆ ಆಸಿಫ್ ಮತ್ತು ಆತನ ಸಂಗಡಿಗರು ಆಕ್ಷೇಪ ವ್ಯಕ್ತಪಡಿಸಿದ ವಿಡಿಯೋ ವೈರಲ್ ಆಗಿದೆ. ಫೇಸ್​ಬುಕ್ ವಾಟ್ಸ್​​ಆ್ಯಪ್​ಗಳಲ್ಲಿ ವಿಡಿಯೋ ಹರಿದಾಡಿದ ಪರ-ವಿರೋಧದ ಚರ್ಚೆಗೂ ಕಾರಣವಾಯಿತು. ಇದರ ಬೆನ್ನಿಗೆ ಮಾಲ್​ಗೆ ಸಂಘ ಪರಿವಾರ ಮತ್ತು ಬಿಜೆಪಿ ಮುಖಂಡರು ಆಗಮಿಸಿದರು.

ಜೊತೆಗೆ ಆಸೀಫ್ ಮತ್ತು ಆತನ ಸಂಗಡಿಗರನ್ನು ಬಂಧಿಸಬೇಕು ಆಗ್ರಹಿಸಿ ಬಿಜೆಪಿ ಹಾಗೂ ಸಂಘ ಪರಿವಾರದ ಮುಖಂಡರು, ಕಾರ್ಯಕರ್ತರು ಮಾಲ್ ಮುಂದೆ ಧರಣಿ ನಡೆಸಿದರು. ಅವರ ಬಂಧನ ಆಗುವವರೆಗೆ ತಾವು ಧರಣಿ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಶಾಂತಗೊಳಿಸಿದರು.

ಪಾಲಿಕೆಯಿಂದ ದೂರು ದಾಖಲು: ಭಾವಚಿತ್ರ ಪ್ರದರ್ಶನದ ವೇಳೆ ಆಕ್ಷೇಪ ವ್ಯಕ್ತಪಡಿಸಿದ ಆರೋಪ ಸಂಬಂಧ ಆಸಿಫ್ ಮತ್ತು ಆತನ ಸಹಚರರ ವಿರುದ್ಧ ಪಾಲಿಕೆ ವತಿಯಿಂದ ದೂರು ನೀಡಲಾಗಿದೆ. ಐಪಿಸಿ ಸೆಕ್ಷನ್ 341, 353 ಮತ್ತು 34ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಬಿಜೆಪಿ ನಗರಾಧ್ಯಕ್ಷ ಜಗದೀಶ್ ತಿಳಿಸಿದರು.

ಇನ್ನು, ಸಿಟಿ ಸೆಂಟರ್ ಮಾಲ್​ನಲ್ಲಿ ನಡೆದ ಘಟನೆಯಿಂದ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಹೀಗಾಗಿಯೇ ಮಾಲ್​ನೊಳಗೆ ಮತ್ತು ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಹರ್​ ಘರ್ ತಿರಂಗಾ ಅಭಿಯಾನ ವೇಳೆ ಮಾಜಿ ಡಿಸಿಎಂ ನಿತಿನ್ ಪಟೇಲ್​ಗೆ ಗುದ್ದಿದ ಬಿಡಾಡಿ ದನ

Last Updated : Aug 13, 2022, 8:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.