ETV Bharat / state

ಹೊಸಗುಂದದಲ್ಲಿ ಸೆ.23ಕ್ಕೆ ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ

author img

By

Published : Sep 20, 2019, 9:03 AM IST

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್​​​​​​, ಸಾಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್​​, ಹೊಸಗುಂದ ಮಹೇಶ್ವರ ಸೇವಾ ಟ್ರಸ್ಟ್ ಸಹಯೋಗದಲ್ಲಿ ಸೆ.23ರಂದು ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್​ ಅಧ್ಯಕ್ಷ ಡಿ.ಬಿ. ಶಂಕರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಡಿ.ಬಿ. ಶಂಕರಪ್ಪ

ಶಿವಮೊಗ್ಗ: ಸಾಗರ ತಾಲೂಕಿನ ಹೊಸಗುಂದದ ಶ್ರೀಕ್ಷೇತ್ರ ಉಮ ಮಹೇಶ್ವರ ದೇವಸ್ಥಾನದಲ್ಲಿ ಸೆ.23ರಂದು ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್​ ಅಧ್ಯಕ್ಷ ಡಿ.ಬಿ. ಶಂಕರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್​ ಅಧ್ಯಕ್ಷ ಡಿ.ಬಿ. ಶಂಕರಪ್ಪ

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್​ ಸಾಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್​​ ಹೊಸಗುಂದ ಮಹೇಶ್ವರ ಸೇವಾ ಟ್ರಸ್ಟ್ ಸಹಯೋಗದಲ್ಲಿ ಈ ಸಮ್ಮೇಳನ ನಡೆಯಲಿದೆ. ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸಮ್ಮೇಳನ ಉದ್ಘಾಟಿಸಲಿದ್ದು, ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಇನ್ನು ಶಾಸಕ ಎಚ್.ಹಾಲಪ್ಪ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಸಮ್ಮೇಳನದಲ್ಲಿ 3 ಗೋಷ್ಠಿಗಳು ನಡೆಯಲಿದ್ದು, ಗೋಷ್ಠಿಯ ಅಧ್ಯಕ್ಷತೆ ಮತ್ತು ಉದ್ಘಾಟನೆ ಮಕ್ಕಳೇ ನಡೆಸಿಕೊಡಲಿದ್ದಾರೆ. ಪ್ರತಿ ಗೋಷ್ಠಿಯಲ್ಲಿ ಆಶಯ ನುಡಿಯನ್ನು ಅನುಭವ ಶಿಕ್ಷಕರು ನುಡಿಯಲಿದ್ದಾರೆ ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಹೊಸಗುಂದ ಮಹೇಶ್ವರ ಸೇವಾ ಟ್ರಸ್ಟ್‌ನ ವ್ಯವಸ್ಥಾಪಕ ಗಿರೀಶ್ ಕೋವಿ, ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಎಂ.ಎನ್. ಸುಂದರರಾಜ್, ರುದ್ರಮುನಿ ಎಸ್.ಸಜ್ಜನ್, ಮ.ಸ. ನಂಜುಂಡಸ್ವಾಮಿ, ಸುಮಿತ್ರಮ್ಮ, ಕೆ.ಡಿ.ರಮೇಶ್, ಕೆ.ಬಸವನ ಗೌಡ, ಹಸನ್ ಬೆಳ್ಳಿಗನೋಡು ಮತ್ತಿತರರು ಇದ್ದರು.

ಶಿವಮೊಗ್ಗ: ಸಾಗರ ತಾಲೂಕಿನ ಹೊಸಗುಂದದ ಶ್ರೀಕ್ಷೇತ್ರ ಉಮ ಮಹೇಶ್ವರ ದೇವಸ್ಥಾನದಲ್ಲಿ ಸೆ.23ರಂದು ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್​ ಅಧ್ಯಕ್ಷ ಡಿ.ಬಿ. ಶಂಕರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್​ ಅಧ್ಯಕ್ಷ ಡಿ.ಬಿ. ಶಂಕರಪ್ಪ

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್​ ಸಾಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್​​ ಹೊಸಗುಂದ ಮಹೇಶ್ವರ ಸೇವಾ ಟ್ರಸ್ಟ್ ಸಹಯೋಗದಲ್ಲಿ ಈ ಸಮ್ಮೇಳನ ನಡೆಯಲಿದೆ. ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸಮ್ಮೇಳನ ಉದ್ಘಾಟಿಸಲಿದ್ದು, ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಇನ್ನು ಶಾಸಕ ಎಚ್.ಹಾಲಪ್ಪ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಸಮ್ಮೇಳನದಲ್ಲಿ 3 ಗೋಷ್ಠಿಗಳು ನಡೆಯಲಿದ್ದು, ಗೋಷ್ಠಿಯ ಅಧ್ಯಕ್ಷತೆ ಮತ್ತು ಉದ್ಘಾಟನೆ ಮಕ್ಕಳೇ ನಡೆಸಿಕೊಡಲಿದ್ದಾರೆ. ಪ್ರತಿ ಗೋಷ್ಠಿಯಲ್ಲಿ ಆಶಯ ನುಡಿಯನ್ನು ಅನುಭವ ಶಿಕ್ಷಕರು ನುಡಿಯಲಿದ್ದಾರೆ ಎಂದು ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಹೊಸಗುಂದ ಮಹೇಶ್ವರ ಸೇವಾ ಟ್ರಸ್ಟ್‌ನ ವ್ಯವಸ್ಥಾಪಕ ಗಿರೀಶ್ ಕೋವಿ, ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಎಂ.ಎನ್. ಸುಂದರರಾಜ್, ರುದ್ರಮುನಿ ಎಸ್.ಸಜ್ಜನ್, ಮ.ಸ. ನಂಜುಂಡಸ್ವಾಮಿ, ಸುಮಿತ್ರಮ್ಮ, ಕೆ.ಡಿ.ರಮೇಶ್, ಕೆ.ಬಸವನ ಗೌಡ, ಹಸನ್ ಬೆಳ್ಳಿಗನೋಡು ಮತ್ತಿತರರು ಇದ್ದರು.

Intro:ಶಿವಮೊಗ್ಗ,

ಸಾಗರ ತಾಲೂಕಿನ ಹೊಸಗುಂದದ ಶ್ರೀ ಕ್ಷೇತ್ರ ಉಮಮಹೇಶ್ವರ ದೇವಸ್ಥಾನದಲ್ಲಿ ಸೆ.೨೩ರಂದು ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸಾಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹೊಸಗುಂದ ಮಹೇಶ್ವರ ಸೇವಾ ಟ್ರಸ್ಟ್ ಸಹಯೋಗದಲ್ಲಿ ಈ ಸಮ್ಮೇಳನ ನಡೆಯಲಿದ್ದು, ಸುಮಾರು ೫೦೦ ಮಕ್ಕಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಿ.ಬಿ. ಶಂಕರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಮ್ಮೇಳನಕ್ಕೆ ಪೂರಕವಾಗಿ ಸಾಗರ, ಶಿಕಾರಿಪುರ, ಹೊಸನಗರ ತಾಲೂಕುಗಳಲ್ಲಿ ತಾಲೂಕು ಮಟ್ಟದ ಸಮ್ಮೇಳನಗಳನ್ನು ನಡೆಸಲಾಗಿದೆ. ಉಳಿದ ತಾಲೂಕುಗಳಲ್ಲಿ ತಿವೃಷ್ಠಿ ಕಾರಣಕ್ಕಾಗಿ ಸಮ್ಮೇಳನವನ್ನು ಮುಂದೂಡಿ ನವೆಂಬರ್ ತಿಂಗಳಲ್ಲಿ ಸಮ್ಮೇಳನ ನಡೆಸಲಾಗುವುದು ಎಂದರು.

ಜಿಲ್ಲಾ ಮಕ್ಕಳ ಸಾಹಿತ್ಯ ಸಮ್ಮೇಳನ ನಡೆಸಲು ಎಲ್ಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಅಂದು ಬೆಳಗ್ಗೆ ೧೦ಕ್ಕೆ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಪುಸ್ತಕ ಬಿಡುಗಡೆ ಮಾಡುವರು. ಶಾಸಕ ಎಚ್.ಹಾಲಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ . ಸಮ್ಮೇಳನದ ಸರ್ವಾಧ್ಯಕ್ಷೆ ಸಾಗರ ತಾಲೂಕಿನ ಬಂದಗದ್ದೆ ಗ್ರಾಮದ ಕು.ಸೃಷ್ಠೀಂದ್ರ ಗಾರ್ಗಿ ಅವರು ಸಮ್ಮೇಳನ ನುಡಿಯಲಿದ್ದಾರೆ ಎಂದರು.
ಸಮ್ಮೇಳನದಲ್ಲಿ ೩ ಗೋಷ್ಠಿಗಳು ನಡೆಯಲಿದ್ದು, ಗೋಷ್ಠಿಯ ಅಧ್ಯಕ್ಷತೆ ಮತ್ತು ಉದ್ಘಾಟನೆಯನ್ನು ಮಕ್ಕಳೇ ನಡೆಸಿಕೊಡಲಿದ್ದಾರೆ. ಪ್ರತಿ ಗೋಷ್ಠಿಯಲ್ಲಿ ಆಶಯ ನುಡಿಯನ್ನು ಅನುಭವ ಶಿಕ್ಷಕರು ನುಡಿಯಲಿದ್ದಾರೆ. ಇದೇ ದಿನ ೪.೩೦ಕ್ಕೆ ಅಭಿನಂದನೆ ಹಾಗೂ ಸಮಾರೋಪ ಸಮಾರಂಭ ನಡೆಯಲಿದ್ದು, ಸಾಹಿತಿ ನಾ.ಡಿಸೋಜ ಸಮಾರೋಪ ನುಡಿಗಳನ್ನಾಡಲಿದ್ದಾರೆ ಎಂದರು.
ಸಮ್ಮೇಳನಕ್ಕೆ ಆಗಮಿಸುವ ಪ್ರತಿ ಮಕ್ಕಳು ತಮ್ಮ ಪೋಷಕರೊಂದಿಗೆ, ಶಿಕ್ಷಕರೊಂದಿಗೆ ಭಾಗವಹಿಸುವಂತೆ ಕೇಳಿಕೊಳ್ಳಲಾಗಿದೆ. ಅಂದು ಸಮ್ಮೇಳನದಲ್ಲಿ ಶಿಕಷ್ಕರು ಭಾಗವಹಿಸಲು ಅನುಮತಿ ನೀಡುವಂತೆ ಡಿಡಿಪಿಐ ಅವನ್ನು ಕೇಳಿಕೊಂಡಿದ್ದು, ಆದೇಶದ ನಿರೀಕ್ಷೆಯಲ್ಲಿ ಇದ್ದೇವೆ ಎಂದರು.
ಪ್ರತಿ ತಾಲೂಕಿನಿಂದ ಸಮ್ಮೇಳನಕ್ಕೆ ಬರುವ ಮಕ್ಕಳು ಹಾಗೂ ಪೋಷಕರಿಗೆ ೨ ಬಸ್ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಮಕ್ಕಳು ಪೋಷಕರು ಭಾಗವಹಿಸುವ ನಿರೀಕ್ಷೆ ಇದ್ದರೆ ಹೆಚ್ಚಿನ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗುವುದು. ಈ ಹಿನ್ನೆಲೆ ಸೆ.೨೧ರ ಶನಿವಾರದೊಳಗೆ ಪೊಷಕರು ಹೆಸರನ್ನು ನೊಂದಾಯಿಸಿಕೊಳ್ಳುವಂತೆ ಕೋರಿದ್ದೇವೆ. ಶಿವಮೊಗ್ಗದಿಂದ ಸೋಮವಾರ ಬೆಳಗ್ಗೆ ೭.೧೫ಕ್ಕೆ ಜಿಲ್ಲಾ ಕ.ಸಾ.ಪ. ಕಚೇರಿಯಿಂದ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದರು.
ಸಾಗರದಿಂದ ಹೊಸಗುಂದಕ್ಕೆ ಬೆಳಗ್ಗೆ ೯ಕ್ಕೆ ೩ ಬಸ್ಸುಗಳ ವ್ಯವಸ್ಥೆಯನ್ನು ಸಾಗರ ತಾಲೂಕು ಕ.ಸಾ.ಪ. ಮಾಡಿದೆ. ಶಿಕಾರಿಪುರ, ತೀರ್ಥಹಳ್ಳಿ, ಹೊಸನಗರ, ಸೊರಬ ತಾಲೂಕು ಕ.ಸಾ.ಪದಿಂದ ಮಕ್ಕಳನ್ನು ಕರೆತರಲು ವಾಹನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಗೋಷ್ಠಿಯಲ್ಲಿ ಹೊಸಗುಂದ ಮಹೇಶ್ವರ ಸೇವಾ ಟ್ರಸ್ಟ್‌ನ ವ್ಯವಸ್ಥಾಪಕ ಗಿರೀಶ್ ಕೋವಿ, ಜಿಲ್ಲಾ ಕಸಾಪ ಪದಾಕಾರಿಗಳಾದ ಎಂ.ಎನ್. ಸುಂದರರಾಜ್, ರುದ್ರಮುನಿ ಎಸ್.ಸಜ್ಜನ್, ಮ.ಸ. ನಂಜುಂಡಸ್ವಾಮಿ, ಸುಮಿತ್ರಮ್ಮ, ಕೆ.ಡಿ.ರಮೇಶ್, ಕೆ.ಬಸವನ ಗೌಡ, ಹಸನ್ ಬೆಳ್ಳಿಗನೋಡು ಮತ್ತಿತರರು ಇದ್ದರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.