ETV Bharat / state

ಶರಾವತಿ ನದಿ ನೀರು ಬೆಂಗಳೂರಿಗೆ ಹರಿಸುವುದನ್ನು ವಿರೋಧಿಸಿ ಪ್ರತಿಭಟನೆ - ಶರಾವತಿ ನದಿ ನೀರು

ಸಾಗರದ ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಸರ್ಕಾರದ ಕ್ರಮ ವಿರೋಧಿಸಿ ಶಿವಮೊಗ್ಗ ಜಿಲ್ಲಾ ಬಂದ್ ನಡೆಸಲಾಗಿದ್ದ, ಬಹುತೇಕ ಯಶಸ್ವಿಯಾಗಿದೆ. ಪ್ರತಿಭಟನೆಯಲ್ಲಿ ಸ್ವಾಮೀಜಿಗಳು ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ಭಾಗಿಯಾಗಿದ್ದವು.

ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವುದನ್ನು ವಿರೋಧಿಸಿ ಪ್ರತಿಭಟನೆ
author img

By

Published : Jul 10, 2019, 5:37 PM IST

ಶಿವಮೊಗ್ಗ: ಸಾಗರದ ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಸರ್ಕಾರದ ಕ್ರಮ ವಿರೋಧಿಸಿ ಕರೆ ನೀಡಿದ್ದ ಶಿವಮೊಗ್ಗ ಜಿಲ್ಲಾ ಬಂದ್ ಬಹುತೇಕ ಯಶಸ್ವಿಯಾಗಿದೆ.

ಶಿವಮೊಗ್ಗ ನಗರದಲ್ಲಿ ಬಂದ್​​​ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಹಿನ್ನೆಲೆಯಲ್ಲಿ ನಗರದ ಸೈನ್ಸ್ ಮೈದಾನದಿಂದ ಬಿ.ಹೆಚ್. ರಸ್ತೆಯ ಮೂಲಕ ಶಿವಪ್ಪ ನಾಯಕ ವೃತ್ತ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಲಾಯಿತು.

ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವುದನ್ನು ವಿರೋಧಿಸಿ ಪ್ರತಿಭಟನೆ

ಬಸವ ಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿ, ರೈತ ಸಂಘದ ಕೆ.ಟಿ.ಗಂಗಾಧರ್, ಹೆಚ್.ಆರ್.ಬಸವರಾಜ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಬಂದ್​​ಗೆ ರೈತ ಸಂಘ ಸೇರಿದಂತೆ 40ಕ್ಕೂ ಹೆಚ್ಚು ಸಂಘಟನೆಗಳು ಭಾಗಿಯಾಗಿದ್ದವು. ಇನ್ನು ಪ್ರತಿಭಟನೆಯಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಭಾಗಿಯಾಗಿದ್ದರು. ಪ್ರತಿಭಟನೆ ವೇಳೆ ಮಳೆ ಬಂದ್ರು ಸಹ ಯಾರೂ ಕದಲದೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಸಾಗರ, ಹೊಸನಗರ, ಶಿಕಾರಿಪುರ, ಸೊರಬ ಹಾಗೂ ತೀರ್ಥಹಳ್ಳಿಯಲ್ಲಿ ಬಂದ್​​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳು‌ ಸ್ವಯಂ ಪ್ರೇರಿತ ಬಂದ್ ಆಗಿದ್ದವು. ಇನ್ನು ಬಸ್ ಸಂಚಾರ ಬೆಳಗ್ಗೆಯಿಂದಲೆ ಸ್ಥಗಿತವಾಗಿತ್ತು. ಸಾಗರದಲ್ಲಿ ಸಾಹಿತಿ ನಾ.ಡಿಸೋಜಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ: ಸಾಗರದ ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಸರ್ಕಾರದ ಕ್ರಮ ವಿರೋಧಿಸಿ ಕರೆ ನೀಡಿದ್ದ ಶಿವಮೊಗ್ಗ ಜಿಲ್ಲಾ ಬಂದ್ ಬಹುತೇಕ ಯಶಸ್ವಿಯಾಗಿದೆ.

ಶಿವಮೊಗ್ಗ ನಗರದಲ್ಲಿ ಬಂದ್​​​ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಹಿನ್ನೆಲೆಯಲ್ಲಿ ನಗರದ ಸೈನ್ಸ್ ಮೈದಾನದಿಂದ ಬಿ.ಹೆಚ್. ರಸ್ತೆಯ ಮೂಲಕ ಶಿವಪ್ಪ ನಾಯಕ ವೃತ್ತ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಲಾಯಿತು.

ಶರಾವತಿ ನದಿ ನೀರನ್ನು ಬೆಂಗಳೂರಿಗೆ ಹರಿಸುವುದನ್ನು ವಿರೋಧಿಸಿ ಪ್ರತಿಭಟನೆ

ಬಸವ ಕೇಂದ್ರದ ಬಸವ ಮರುಳಸಿದ್ದ ಸ್ವಾಮೀಜಿ, ರೈತ ಸಂಘದ ಕೆ.ಟಿ.ಗಂಗಾಧರ್, ಹೆಚ್.ಆರ್.ಬಸವರಾಜ್ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಬಂದ್​​ಗೆ ರೈತ ಸಂಘ ಸೇರಿದಂತೆ 40ಕ್ಕೂ ಹೆಚ್ಚು ಸಂಘಟನೆಗಳು ಭಾಗಿಯಾಗಿದ್ದವು. ಇನ್ನು ಪ್ರತಿಭಟನೆಯಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಭಾಗಿಯಾಗಿದ್ದರು. ಪ್ರತಿಭಟನೆ ವೇಳೆ ಮಳೆ ಬಂದ್ರು ಸಹ ಯಾರೂ ಕದಲದೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಸಾಗರ, ಹೊಸನಗರ, ಶಿಕಾರಿಪುರ, ಸೊರಬ ಹಾಗೂ ತೀರ್ಥಹಳ್ಳಿಯಲ್ಲಿ ಬಂದ್​​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳು‌ ಸ್ವಯಂ ಪ್ರೇರಿತ ಬಂದ್ ಆಗಿದ್ದವು. ಇನ್ನು ಬಸ್ ಸಂಚಾರ ಬೆಳಗ್ಗೆಯಿಂದಲೆ ಸ್ಥಗಿತವಾಗಿತ್ತು. ಸಾಗರದಲ್ಲಿ ಸಾಹಿತಿ ನಾ.ಡಿಸೋಜಾ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

Intro:ಶರಾವತಿ ನದಿ ನೀರು ಯೋಜನೆ ಬಂದ್: ಭಾಗಶಃ ಯಶಸ್ವಿ.

ಶಿವಮೊಗ್ಗ: ಸಾಗರದ ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದು ಕೊಂಡು ಹೋಗುವ ಸರ್ಕಾರದ ಕ್ರಮ ವಿರೋಧಿಸಿ ಕರೆ ನೀಡಿದ್ದ ಶಿವಮೊಗ್ಗ ಜಿಲ್ಲಾ ಬಂದ್ ಬಹುತೇಕ ಯಶಸ್ವಿಯಾಗಿದೆ. ಶಿವಮೊಗ್ಗ ನಗರದಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಂದ್ ಹಿನ್ನಲೆಯಲ್ಲಿ ನಗರದ ಸೈನ್ಸ್ ಮೈದಾನದಿಂದ ಬಿ.ಹೆಚ್.ರಸ್ತೆಯ ಮೂಲಕ ಶಿವಪ್ಪ ನಾಯಕ ವೃತ್ತದಿಂದ ನೆಹರು ರಸ್ತೆಯ ಮೂಲಕ ಗೋಪಿ ವೃತದ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತಲುಪಿತು. ಇಲ್ಲಿ ಬಸವ ಕೇಂದ್ರದ ಬಸವ ಮರುಳ ಸಿದ್ದ ಸ್ವಾಮಿಜೀ , ರೈತ ಸಂಘದ ಕೆ.ಟಿ.ಗಂಗಾಧರ್, ಹೆಚ್.ಆರ್.ಬಸವರಾಜ್ ಹಾಜರಾಗಿದ್ದರು. ಬಂದ್ ಗೆ ರೈತ ಸಂಘ ಸೇರಿದಂತೆ 40 ಹೆಚ್ಚು ಸಂಘಟನೆಗಳು ಭಾಗಿಯಾಗಿದ್ದವು. ಇನ್ನೂ ಪ್ರತಿಭಟನೆಯಲ್ಲಿ ಶಾಲಾ-ಕಾಲೇಜುಗಳ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಭಾಗಿಯಾಗಿದ್ದರು.Body:ಪ್ರತಿಭಟನೆಯ ವೇಳೆ ಮಳೆ ಬಂದ್ರು ಸಹ ಯಾರು ಕದಲತೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಇನ್ನೂ ಉಳಿದಂತೆ ಸಾಗರ, ಹೊಸನಗರ, ಶಿಕಾರಿಪುರ, ಸೊರಬ ಹಾಗೂ ತೀರ್ಥಹಳ್ಳಿಯಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೇ ಅಂಗಡಿ ಮುಗ್ಗಟ್ಟುಗಳು‌ ಸ್ವಯಂ ಪ್ರೇರಿತ ಬಂದ್ ಆಗಿದ್ದವು. ಇನ್ನೂ‌ ಬಸ್ ಸಂಚಾರ ಬೆಳಗ್ಗೆಯಿಂದಲೆ ಸ್ಥಗಿತವಾಗಿದ್ದವು. ಸಾಗರದಲ್ಲಿ ಸಾಹಿತಿ ನಾ.ಡಿಸೋಜಾ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಸಾಗರ ಪಟ್ಟಣದ ಗಾಂಧಿ ಮೈದಾನ ದಿಂದ ಹೊರಟು ಪಟ್ಟಣದ ಪ್ರಮುಖ‌ ರಸ್ತೆಯಲ್ಲಿ‌ ಸಾಗಿ ಪುನಃ ಗಾಂಧಿ ಮೈದಾನಕ್ಕೆ ವಾಪಸ್ ಆಯಿತು. ಪ್ರತಿಭಟನೆಯಲ್ಲಿ ಸುಮಾರು‌ 3 ಸಾವಿರ ಜನ ಭಾಗಿಯಾಗಿದ್ದರು. ನಂತ್ರ ಗಾಂಧಿ ಮೈದಾನದಲ್ಲಿ ಸಭೆ ನಡೆಸಿ ಶರಾವತಿ ನೀರು ಬೆಂಗಳೂರಿಗೆ ತೆಗೆದು ಕೊಂಡು ಹೋಗುವ ಸರ್ಕಾರದ ಕ್ರಮ ಅವೈಜ್ಞಾನಿಕ ಕ್ರಮವಾಗಿದೆ.Conclusion:ಸರ್ಕಾರ ಬೆಂಗಳೂರಿನ ನೀರಿಗೆ ಪ್ರಕೃತಿಗೆ ವಿರೋಧವಾಗಿ ನಡೆದು ಕೊಳ್ಳುತ್ತಿದೆ. ಅಲ್ಲದೆ, 2.500 ಕೋಟಿ ರೂ ನಿಗದಿ ಮಾಡಿದೆ. ಹಣದ ಆಸೆಗೆ ನೀರು ತೆಗೆದು ಕೊಂಡು ಹೋಗಲಾಗುತ್ತಿದೆ. ಸರ್ಕಾರ ತಕ್ಷಣ ಡಿಪಿಆರ್ ಅನ್ನು ಕೈ ಬಿಡಬೇಕಿದೆ ಎಂದು ಆಗ್ರಹಿಸಲಾಯಿತು. ಇನ್ನೂ ಹೊಸನಗರದ ನಗರ ಹೋಬಳಿಯಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಶರಾವತಿಗಾಗಿ ಮಲೆನಾಡಿನ ಮೂಲೆ ಮೂಲೆಯಲ್ಲೂ ಸಹ ಧ್ವನಿ ಮಾರ್ದನಿಸಿತು.
ಬಂದ್ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಬಿಗಿ ಬಂದ್ ಬಸ್ತ್ ವ್ಯವಸ್ಥೆ ಮಾಡಿತ್ತು.

ಬೈಟ್: ಬಸವ ಮರಳಸಿದ್ದ ಸ್ವಾಮಿಜೀ. ಬಸವ ಕೇಂದ್ರ. ಶಿವಮೊಗ್ಗ.

ಬೈಟ್: ಕೆ.ಟಿ.ಗಂಗಾಧರ್. ರೈತ ಹೋರಾಟಗಾರರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.