ETV Bharat / state

ಈಶ್ವರಪ್ಪ ಬೈಯ್ಯುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​​ ಅಧ್ಯಕ್ಷ - ಈಶ್ವರಪ್ಪ ವಿರುದ್ಧ ಸುಂದರೇಶ್​ ಆಕ್ರೋಶ

ಕೆ.ಎಸ್.ಈಶ್ವರಪ್ಪನವರು, ಸಿದ್ದರಾಮಯ್ಯ ಸೇರಿದಂತೆ ರಾಷ್ಟ್ರೀಯ ಕಾಂಗ್ರೆಸ್ ನಾಯಕರನ್ನು ಬೈಯ್ಯುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಮಳೆಯಿಂದ ಭತ್ತ, ಜೋಳ, ಅಡಿಕೆ ಸೇರಿದಂತೆ ಅನೇಕ ಬೆಳೆಗಳು ನಾಶವಾಗಿವೆ. ಆದರೂ ಸಹ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಶ್ವರಪ್ಪ ಬೈಯ್ಯುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ:
author img

By

Published : Nov 2, 2019, 5:35 PM IST

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರು ಕಾಂಗ್ರೆಸ್ ನಾಯಕರನ್ನು ಬೈಯ್ಯುವುದನ್ನು ಬಿಟ್ಟು ಜಿಲ್ಲೆಯ ಮಳೆ ಹಾನಿ‌ ಪ್ರದೇಶಗಳಿಗೆ ಭೇಟಿ ನೀಡಲಿ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಸಚಿವ ಕೆ.ಎಸ್.ಈಶ್ವರಪ್ಪನವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜಿಲ್ಲಾ‌ ಕಾಂಗ್ರೆಸ್ ಭವನದಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪನವರು, ಸಿದ್ದರಾಮಯ್ಯ ಸೇರಿದಂತೆ ರಾಷ್ಟ್ರೀಯ ಕಾಂಗ್ರೆಸ್ ನಾಯಕರನ್ನು ಬೈಯ್ಯುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಮಳೆಯಿಂದ ಭತ್ತ, ಜೋಳ, ಅಡಿಕೆ ಸೇರಿದಂತೆ ಅನೇಕ ಬೆಳೆಗಳು ನಾಶವಾಗಿವೆ. ಆದರೂ ಸಹ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ಸುಂದರೇಶ್

ಈಶ್ವರಪ್ಪನವರು ಹಿರಿಯರಿದ್ದಾರೆ. ಅವರು ಐದಾರು ಬಾರಿ ಶಾಸಕರಾಗಿ ಮಂತ್ರಿಗಳಾಗಿದ್ದಾರೆ. ಅವರು ಬೈಯ್ಯುವುದನ್ನೇ ಕೆಲಸ ಮಾಡಿಕೊಳ್ಳಬಾರದು ಎಂದು ಸಲಹೆ ನೀಡಿದರು. ಅವರಂತೆ ನಮಗೂ ಬೈಯ್ಯಲು ಬರುತ್ತದೆ ಎಂದರು.

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರು ಕಾಂಗ್ರೆಸ್ ನಾಯಕರನ್ನು ಬೈಯ್ಯುವುದನ್ನು ಬಿಟ್ಟು ಜಿಲ್ಲೆಯ ಮಳೆ ಹಾನಿ‌ ಪ್ರದೇಶಗಳಿಗೆ ಭೇಟಿ ನೀಡಲಿ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಸಚಿವ ಕೆ.ಎಸ್.ಈಶ್ವರಪ್ಪನವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಜಿಲ್ಲಾ‌ ಕಾಂಗ್ರೆಸ್ ಭವನದಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪನವರು, ಸಿದ್ದರಾಮಯ್ಯ ಸೇರಿದಂತೆ ರಾಷ್ಟ್ರೀಯ ಕಾಂಗ್ರೆಸ್ ನಾಯಕರನ್ನು ಬೈಯ್ಯುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಮಳೆಯಿಂದ ಭತ್ತ, ಜೋಳ, ಅಡಿಕೆ ಸೇರಿದಂತೆ ಅನೇಕ ಬೆಳೆಗಳು ನಾಶವಾಗಿವೆ. ಆದರೂ ಸಹ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್​ ಅಧ್ಯಕ್ಷ ಸುಂದರೇಶ್

ಈಶ್ವರಪ್ಪನವರು ಹಿರಿಯರಿದ್ದಾರೆ. ಅವರು ಐದಾರು ಬಾರಿ ಶಾಸಕರಾಗಿ ಮಂತ್ರಿಗಳಾಗಿದ್ದಾರೆ. ಅವರು ಬೈಯ್ಯುವುದನ್ನೇ ಕೆಲಸ ಮಾಡಿಕೊಳ್ಳಬಾರದು ಎಂದು ಸಲಹೆ ನೀಡಿದರು. ಅವರಂತೆ ನಮಗೂ ಬೈಯ್ಯಲು ಬರುತ್ತದೆ ಎಂದರು.

Intro:ಜಿಲ್ಲಾ ಉಸ್ತುವಾರಿ ಸಚಿವರು ಕಾಂಗ್ರೆಸ್ ನಾಯಕರನ್ನು ಬೈಯುವುದನ್ನು ಬಿಟ್ಟು ಜಿಲ್ಲೆಯ ಮಳೆಹಾನಿ‌ ಪ್ರದೇಶಗಳಿಗೆ ಭೇಟಿ ನೀಡಲಿ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ರವರು ಸಚಿವ ಕೆ.ಎಸ್.ಈಶ್ವರಪ್ಪನವರ ವಿರುದ್ದ ಹರಿಹಾಯ್ದಿದ್ದಾರೆ. ಜಿಲ್ಲಾ‌ ಕಾಂಗ್ರೆಸ್ ಭವನದಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪನವರು ಸಿದ್ದರಾಮಯ್ಯ ಸೇರಿದಂತೆ ರಾಷ್ಟ್ರೀಯ ಕಾಂಗ್ರೆಸ್ ನಾಯಕರನ್ನು ಬೈಯುವುದನ್ನೆ ಕಾಯಕ ಮಾಡಿದ್ದಾರೆ. ಜಿಲ್ಲೆಯಲ್ಲಿ ಮಳೆಯಿಂದ ಭತ್ತ, ಜೋಳ, ಅಡಿಕೆ ಸೇರಿದಂತೆ ಅನೇಕ ಬೆಳೆಗಳು ನಾಶವಾಗಿವೆ.


Body:ಆದರೂ ಸಹ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿಲ್ಲ. ಈಶ್ವರಪ್ಪನವರು ಹಿರಿಯರಿದ್ದಾರೆ. ಅವರು ಐದಾರು ಭಾರಿ ಶಾಸಕರಾಗಿ ಮಂತ್ರಿಗಳಾಗಿದ್ದಾರೆ. ಅವರು ಬೈಯುವುದನ್ನೆ ಕೆಲಸ ಮಾಡಿ ಕೊಳ್ಳಬಾರದು ಎಂದು ಸಲಹೆ ನೀಡಿದರು. ಅವರಂತೆ ನಮಗೂ ಬೈಯಲು ಬರುತ್ತದೆ ಎಂದರು. ಸಚಿವ ಈಶ್ವರಪ್ಪನವರು ಬೈಯುವುದನ್ನು ಬಿಟ್ಟು ಮೊದಲು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ರೈತರ, ಜನರ ಕಣ್ಣಿರು ಒರೆಸಲಿ ಎಂದರು.


Conclusion:ಜಿಲ್ಲಾ ಉಸ್ತುವಾರಿ ಸಚಿವರಾದ ನಂತ್ರ ಒಂದೂ ತಾಲೂಕಿಗೂ ಸಹ ಭೇಟಿ ನೀಡಿಲ್ಲ. ಜಿಲ್ಲೆಯಲ್ಲಿ ಇನ್ನೂ ಮಳೆ ನಿಂತಿಲ್ಲ. ಇದರಿಂದ ತಕ್ಷಣ ಈಶ್ವರಪ್ಪನವರು ಪ್ರತಿ ತಾಲೂಕಿಗೂ ಭೇಟಿ ನೀಡಿ ಜನರ ಕಷ್ಟವನ್ನು ಅಲಿಸಲಿ ಎಂದರು. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಏನೂ ಕೆಲ್ಸ ಆಗುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಕಾರಣ ಬಿಜೆಪಿಯ ಯಾವ ಶಾಸಕರುಗಳು ಸಹ ಭೇಟಿ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಬಿಜೆಪಿಯ ನಾಯಕರುಗಳು ಕೇವಲ ಪತ್ರಿಕಾ ಹೇಳಿಕೆಗೆ ಸಿಮೀತರಾಗಿದ್ದಾರೆ ಎಂದರು. ಈ ವೇಳೆ ಜಿಲ್ಲಾ ಕಾಂಗ್ರೆಸ್ ನ ಹಲವು ಮುಖಂಡರುಗಳು ಹಾಜರಿದ್ದರು.

ಬೈಟ್: ಹೆಚ್.ಎಸ್.ಸುಂದರೇಶ್. ಅಧ್ಯಕ್ಷರು. ಜಿಲ್ಲಾ ಕಾಂಗ್ರೆಸ್.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.