ETV Bharat / state

ಮತದಾರರ ಪಟ್ಟಿ ಪರಿಷ್ಕರಣೆ : ಸಾರ್ವಜನಿಕರು ಸಹಕಾರ ಕೇಳಿದ ಶಿವಮೊಗ್ಗ ಅಪರ ಡಿಸಿ

ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಪರ ಜಿಲ್ಲಾಧಿಕಾರಿ ಜಿ. ಅನುರಾಧಾ, ಪ್ರಜಾಪ್ರಭುತ್ವ ಭದ್ರಗೊಳಿಸಲು ಮತದಾನ ಒಂದು ಮಹತ್ತರ ಕಾರ್ಯವಾಗಿದ್ದು, ಪ್ರತಿಯೊಬ್ಬ ನಾಗರಿಕನೂ ಸಹ ನ್ಯಾಯಯುತವಾದ ಮತದಾನವನ್ನು ಬೆಂಬಲಿಸಬೇಕು ಎಂದರು.

author img

By

Published : Oct 15, 2019, 10:19 PM IST

ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮ

ಶಿವಮೊಗ್ಗ: ಕೇಂದ್ರ ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಕೈಗೊಂಡಿದ್ದು, ಸಾರ್ವಜನಿಕರು ಆಯೋಗದೊಂದಿಗೆ ಸಹಕರಿಸುವಂತೆ ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಜಿ. ಅನುರಾಧ ಮನವಿ ಮಾಡಿದರು.
ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವವನ್ನು ಭದ್ರಗೊಳಿಸಲು ಮತದಾನ ಒಂದು ಮಹತ್ತರ ಕಾರ್ಯವಾಗಿದ್ದು, ಪ್ರತಿಯೊಬ್ಬ ನಾಗರಿಕನೂ ಸಹ ನ್ಯಾಯಯುತವಾದ ಮತದಾನವನ್ನು ಬೆಂಬಲಿಸಬೇಕು ಎಂದರು
.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಇರುವ ಗೊಂದಲಗಳನ್ನು ಬಗೆಹರಿಸಿಕೊಳ್ಳಲು ಬೂತ್ ಮಟ್ಟದ ಅಧಿಕಾರಿಗಳಿಂದ ಮನೆಮನೆಗೆ ಭೇಟಿ ಕಾರ್ಯವನ್ನು ನವಂಬರ್ 18ರವರೆಗೆ ನಡೆಸಲಾಗುವುದು ಎಂದರು. ಈ ವೇಳೆ, ಆಧಾರ್ ಕಾರ್ಡ್, ಚಾಲನಾ ಪರವಾನಗಿ, ಪಡಿತರ ಚೀಟಿ, ಸರ್ಕಾರಿ ನೌಕರರ ಕಾರ್ಡ್ ಅಥವಾ ಚುನಾವಣಾ ಆಯೋಗ ಅನುಮೋದಿಸಿದ ಯಾವುದಾದರೂ ಒಂದು ದಾಖಲೆಯನ್ನು ನೀಡುವ ಮೂಲಕ ಪರಿಷ್ಕರಿಸಿಕೊಳ್ಳುವಂತೆ ಅವರು ತಿಳಿಸಿದರು.

ತಹಶೀಲ್ದಾರ್ ಕಚೇರಿ, ನಗರಸಭೆ ಹಾಗೂ ಪಾಲಿಕೆಗಳ ಕಚೇರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿಕೊಳ್ಳಲು ಕೇಂದ್ರವನ್ನು ತೆರೆಯಲಾಗಿದ್ದು, ಗ್ರಾಮ ಪಂಚಾಯತ್ ಕಚೇರಿಯಲ್ಲಿಯೂ ಸಹ ಮತದಾರರ ನೋಂದಣಿ ಹಾಗೂ ಪರಿಷ್ಕರಣೆ ಕೇಂದ್ರಗಳು ಕಾರ್ಯನಿರತವಾಗಿವೆ ಎಂದರು. ಇದರೊಂದಿಗೆ ಮತದಾರರು ಎನ್‍ವಿಎಸ್‍ಪಿ ಪೋರ್ಟಲ್ ಮೊಬೈಲ್ ಆಪ್ ಮೂಲಕ ಸ್ವತಃ ಪರಿಷ್ಕರಿಸಿಕೊಳ್ಳಲು ಅವಕಾಶವಿದೆ. ಈ ಎಲ್ಲ ಅವಕಾಶಗಳನ್ನು ಬಳಸಿಕೊಂಡು ಮತದಾರರ ಪಟ್ಟಿಯನ್ನು ಪರಿಷ್ಕರಿಸಿಕೊಳುವಂತೆ ಅವರು ಸಲಹೆ ನೀಡಿದರು.

ಇನ್ನು ಕಾಲೇಜಿನ ಪ್ರಾಂಶುಪಾಲರಾದ ವಾಗ್ದೇವಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, ಚುನಾವಣಾ ವಿಭಾಗದ ನೂಡಲ್ ಅಧಿಕಾರಿ ಸಮನ್ವಯ ಕಾಶಿ, ರಿಯಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಶಿವಮೊಗ್ಗ: ಕೇಂದ್ರ ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಕೈಗೊಂಡಿದ್ದು, ಸಾರ್ವಜನಿಕರು ಆಯೋಗದೊಂದಿಗೆ ಸಹಕರಿಸುವಂತೆ ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಜಿ. ಅನುರಾಧ ಮನವಿ ಮಾಡಿದರು.
ನಗರದ ಸಹ್ಯಾದ್ರಿ ಕಾಲೇಜಿನಲ್ಲಿ ಆಯೋಜಿಸಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವವನ್ನು ಭದ್ರಗೊಳಿಸಲು ಮತದಾನ ಒಂದು ಮಹತ್ತರ ಕಾರ್ಯವಾಗಿದ್ದು, ಪ್ರತಿಯೊಬ್ಬ ನಾಗರಿಕನೂ ಸಹ ನ್ಯಾಯಯುತವಾದ ಮತದಾನವನ್ನು ಬೆಂಬಲಿಸಬೇಕು ಎಂದರು
.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಇರುವ ಗೊಂದಲಗಳನ್ನು ಬಗೆಹರಿಸಿಕೊಳ್ಳಲು ಬೂತ್ ಮಟ್ಟದ ಅಧಿಕಾರಿಗಳಿಂದ ಮನೆಮನೆಗೆ ಭೇಟಿ ಕಾರ್ಯವನ್ನು ನವಂಬರ್ 18ರವರೆಗೆ ನಡೆಸಲಾಗುವುದು ಎಂದರು. ಈ ವೇಳೆ, ಆಧಾರ್ ಕಾರ್ಡ್, ಚಾಲನಾ ಪರವಾನಗಿ, ಪಡಿತರ ಚೀಟಿ, ಸರ್ಕಾರಿ ನೌಕರರ ಕಾರ್ಡ್ ಅಥವಾ ಚುನಾವಣಾ ಆಯೋಗ ಅನುಮೋದಿಸಿದ ಯಾವುದಾದರೂ ಒಂದು ದಾಖಲೆಯನ್ನು ನೀಡುವ ಮೂಲಕ ಪರಿಷ್ಕರಿಸಿಕೊಳ್ಳುವಂತೆ ಅವರು ತಿಳಿಸಿದರು.

ತಹಶೀಲ್ದಾರ್ ಕಚೇರಿ, ನಗರಸಭೆ ಹಾಗೂ ಪಾಲಿಕೆಗಳ ಕಚೇರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿಕೊಳ್ಳಲು ಕೇಂದ್ರವನ್ನು ತೆರೆಯಲಾಗಿದ್ದು, ಗ್ರಾಮ ಪಂಚಾಯತ್ ಕಚೇರಿಯಲ್ಲಿಯೂ ಸಹ ಮತದಾರರ ನೋಂದಣಿ ಹಾಗೂ ಪರಿಷ್ಕರಣೆ ಕೇಂದ್ರಗಳು ಕಾರ್ಯನಿರತವಾಗಿವೆ ಎಂದರು. ಇದರೊಂದಿಗೆ ಮತದಾರರು ಎನ್‍ವಿಎಸ್‍ಪಿ ಪೋರ್ಟಲ್ ಮೊಬೈಲ್ ಆಪ್ ಮೂಲಕ ಸ್ವತಃ ಪರಿಷ್ಕರಿಸಿಕೊಳ್ಳಲು ಅವಕಾಶವಿದೆ. ಈ ಎಲ್ಲ ಅವಕಾಶಗಳನ್ನು ಬಳಸಿಕೊಂಡು ಮತದಾರರ ಪಟ್ಟಿಯನ್ನು ಪರಿಷ್ಕರಿಸಿಕೊಳುವಂತೆ ಅವರು ಸಲಹೆ ನೀಡಿದರು.

ಇನ್ನು ಕಾಲೇಜಿನ ಪ್ರಾಂಶುಪಾಲರಾದ ವಾಗ್ದೇವಿಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದು, ಚುನಾವಣಾ ವಿಭಾಗದ ನೂಡಲ್ ಅಧಿಕಾರಿ ಸಮನ್ವಯ ಕಾಶಿ, ರಿಯಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Intro:ಶಿವಮೊಗ್ಗ,

ಚುನಾವಣಾ ಅಕ್ರಮ ತಡೆಗೆ ಪರಿಷ್ಕರಣೆ ಅಗತ್ಯ -ಅಪರ ಜಿಲ್ಲಾಧಿಕಾರಿ

ಮತದಾನದಲ್ಲಿ ನಡೆಸಬಹುದಾದ ಅಕ್ರಮವನ್ನು ತಡೆಯುವ ಹಾಗೂ ಮತದಾರರ ಪಟ್ಟಿಯನ್ನು ನವೀಕರಿಸುವ ಸಲುವಾಗಿ ಕೇಂದ್ರ ಚುನಾವಣಾ ಆಯೋಗವು ಮತದಾರರ ಪಟ್ಟಿ ಪರಿಷ್ಕರಣೆಯ ಕಾರ್ಯವನ್ನು ಕೈಗೊಂಡಿದ್ದು, ಸಾರ್ವಜನಿಕರು ಆಯೋಗದೊಂದಿಗೆ ಸಹಕರಿಸುವಂತೆ ಅಪರ ಜಿಲ್ಲಾಧಿಕಾರಿ ಅನುರಾಧ .ಜಿ ಮನವಿ ಮಾಡಿದರು.
ನಗರದ ಸಹ್ಯಾದ್ರಿ ಕಾಲೇಜಿನ ವಾಣಿಜ್ಯ ವಿಭಾಗದ ಸಭಾಂಗಣದಲ್ಲಿ ಆಯೋಜಿಸಿದ್ದ ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಜಾಪ್ರಭುತ್ವವನ್ನು ಭದ್ರಗೊಳಿಸಲು ಮತದಾನ ಒಂದು ಮಹತ್ತರ ಕಾರ್ಯವಾಗಿದ್ದು, ಪ್ರತಿಯೊಬ್ಬ ನಾಗರಿಕನೂ ಸಹ ನ್ಯಾಯಯುತವಾದ ಮತದಾನವನ್ನು ಬೆಂಬಲಿಸಬೇಕು. ಈ ನಿಟ್ಟಿನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಅಗತ್ಯವಾಗಿದೆ ಎಂದರು.
ಮೃತ ವ್ಯಕ್ತಿಯ ಹೆಸರನ್ನು ಮತದಾರರ ಪಟ್ಟಿಯಿಂದ ಹೊರಗೆ ಹಾಕಬೇಕು ಅದು ಹಾಗೆಯೆ ಉಳಿದುಕೊಂಡರೆ ಆತನ ಹೆಸರಿನಲ್ಲಿ ಬೇರೆಯವರು ಮತ ಚಲಾಯಿಸಿ ದುರ್ಬಳಕೆ ಮಾಡಿಕೊಂಡಲ್ಲಿ ಪ್ರಜಾಪ್ರಭುತ್ವಕ್ಕೆ ಧಕ್ಕೆ ಒದಗುತ್ತದೆ. ಇದಲ್ಲದೆ ಮತದಾರರಿಗೆ ಹಳೆಯ ಪಟ್ಟಿಯಲ್ಲಿ ತೊಡಕಾಗಿ ಬೇರೆಯ ಬೂತ್‍ಗಳಿಗೆ ಸೇರ್ಪಡೆಯಾಗಿ ತೊಂದರೆಯಾಗಿರಬಹುದು. ಇದೆಲ್ಲ ತೊಡಕುಗಳನ್ನು ಸರಿಪಡಿಸಿಕೊಳ್ಳಲು ಈ ಪರಿಷ್ಕರಣಾ ಅವಧಿಯನ್ನು ಬಳಸಿಕೊಳ್ಳುವಂತೆ ಅವರು ತಿಳಿಸಿದರು.
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಇರುವಂತಹ ಗೊಂದಲಗಳನ್ನು ಬಗೆಹರಿಸಿಕೊಳ್ಳಲು ಬೂತ್ ಮಟ್ಟದ ಅಧಿಕಾರಿ (ಬಿಎಲ್‍ಓ) ಗಳಿಂದ ಮನೆಮನೆ ಭೇಟಿ ಕಾರ್ಯವನ್ನು ನ. 18ರ ವರೆಗೆ ನಡೆಸಲಾಗುವುದು. ಈ ವೇಳೆ ಆಧಾರ್ ಕಾರ್ಡ್, ಚಾಲನಾ ಪರವಾನಿಗೆ, ಪಡಿತರ ಚೀಟಿ, ಸರ್ಕಾರಿ ನೌಕರರ ಕಾರ್ಡ್ ಅಥವಾ ಚುನಾವಣಾ ಆಯೋಗ ಅನುಮೋದಿಸಿದ ಯಾವುದಾದರು ಒಂದು ದಾಖಲೆಯನ್ನು ನೀಡುವ ಮೂಲಕ ಪರಿಷ್ಕರಿಸಿಕೊಳ್ಳುವಂತೆ ಅವರು ತಿಳಿಸಿದರು.
ಆಯಾ ತಾಲ್ಲೂಕುಗಳ ತಹಶಿಲ್ದಾರ್ ಕಛೇರಿ, ನಗರ ಸಭೆ ಹಾಗೂ ಪಾಲಿಕೆಗಳ ಕಛೇರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮಾಡಿಕೊಳ್ಳಲು ಕೇಂದ್ರವನ್ನು ತೆರೆಯಲಾಗಿದೆ. ಗ್ರಾಮ ಪಂಚಾಯತ್ ಕಛೇರಿಯಲ್ಲಿಯು ಸಹ ಮತದಾರರ ನೋಂದಣಿ ಹಾಗೂ ಪರಿಷ್ಕರಣೆ ಕೇಂದ್ರಗಳು ಕಾರ್ಯನಿರತವಾಗಿವೆ. ಇದರೊಂದಿಗೆ ಮತದಾರರು ಎನ್‍ವಿಎಸ್‍ಪಿ ಪೋರ್ಟಲ್ ಮೊಬೈಲ್ ಆಪ್ ಮೂಲಕ ಸ್ವತಃ ಪರಿಷ್ಕರಿಸಿಕೊಳ್ಳಲು ಅವಕಾಶವಿದೆ. ಈ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಮತದಾರರ ಪಟ್ಟಿಯನ್ನು ಪರಿಷ್ಕರಿಸಿಕೊಳುವಂತೆ ಅವರು ಸಲಹೆ ನೀಡಿದರು.
ಮತದಾರರ ಚೀಟಿ ಪರಿಷ್ಕರಣೆ ವೇಳೆ ಯಾವುದೇ ಗೊಂದಲಗಳಿದ್ದರು ಸಹ ಅಧಿಕಾರಿಗಳೊಂದಿಗೆ ಅಥವಾ ಸಹಾಯವಾಣಿ ಸಂಖ್ಯೆ 1950ಕ್ಕೆ ಕರೆ ಮಾಡಿ ಮಾಹಿತಿ ಪಡೆಯುವಂತೆ ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ವಾಗ್ದೇವಿ ವಹಿಸಿದ್ದರು. ಚುನಾವಣಾ ವಿಭಾಗದ ನೂಡಲ್ ಅಧಿಕಾರಿ ಸಮನ್ವಯ ಕಾಶಿ, ರಿಯಾಜ್ ಮತ್ತಿತರರು ಉಪಸ್ಥಿತರಿದ್ದರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.