ETV Bharat / state

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​​​​​ ಸಮಿತಿ ವತಿಯಿಂದ ಸಂತ್ರಸ್ತರಿಗೆ ಆಹಾರದ ಕಿಟ್​​​ ವಿತರಣೆ - ಸಂತ್ರಸ್ತರಿಗೆ ಆಹಾರ ಕೀಟ್ ವಿತರಣೆ

ಭೀಕರ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ಸಂತ್ರಸ್ತರಾದ ಕುಟುಂಬಗಳಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಹಾರದ ಕಿಟ್​​​ ವಿತರಿಸಲಾಯಿತು.

ಶಿವಮೊಗ್ಗ ಜಿಲ್ಲಾ ಕಾಂಗ್ರೇಸ್ ಸಮಿತಿ ವತಿಯಿಂದ ಸಂತ್ರಸ್ತರಿಗೆ ಆಹಾರ ಕೀಟ್ ವಿತರಣೆ
author img

By

Published : Aug 15, 2019, 7:44 PM IST

ಶಿವಮೊಗ್ಗ: ಮಳೆಯ ಅಬ್ಬರದಲ್ಲಿ ಮನೆ ಮಠ ಕಳೆದುಕೊಂಡು ಸಂತ್ರಸ್ತರಾದ ಕುಟುಂಬಗಳಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ರಾಮಣ್ಣ ಶೆಟ್ಟಿ ಪಾರ್ಕ್ ಹತ್ತಿರದ ಗಣೇಶ ದೇವಸ್ಥಾನದಲ್ಲಿರುವ ಪರಿಹಾರ ಕೇಂದ್ರದಲ್ಲಿ ಆಹಾರ ಕಿಟ್ ವಿತರಿಸಲಾಯಿತು.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​​​ ಸಮಿತಿ ವತಿಯಿಂದ ಸಂತ್ರಸ್ತರಿಗೆ ಆಹಾರದ ಕಿಟ್ ವಿತರಣೆ

ಅಕ್ಕಿ, ಬೆಳೆ, ಎಣ್ಣೆ, ಬಿಸ್ಕೇಟ್ ಹಾಗೂ ಸೋಪುಗಳು ಇರುವ ಕಿಟ್​ಗಳನ್ನ ನಿರಾಶ್ರಿತರ ಕುಟುಂಗಳಿಗೆ ವಿತರಿಸಲಾಯಿತು. ನಂತರ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದ್ರೇಶ್, ರಾಜ್ಯದಲ್ಲಿ ಭೀಕರ ಪ್ರವಾಹ ಹಾಗೂ ಮಳೆಯಿಂದಾಗಿ ಸಾವಿರಾರು ಕೋಟಿ ನಷ್ಟ ಆಗಿದೆ. ಶಿವಮೊಗ್ಗ ಜಿಲ್ಲೆಯೊಂದರಲ್ಲೇ ಸುಮಾರು ಒಂದು ಸಾವಿರ ಕೋಟಿಗೂ ಹೆಚ್ಚು ನಷ್ಟ ಆಗಿದೆ. ಹಾಗಾಗಿ ಪರಿಹಾರವನ್ನು ತ್ವರಿತವಾಗಿ ನೀಡಬೇಕೆಂದು ಒತ್ತಾಯಿಸಿದರು.

ಪ್ರವಾಹದಿಂದ ರಾಜ್ಯ ತತ್ತರಿಸಿದರೂ ಕೂಡ ಪ್ರಧಾನಮಂತ್ರಿಗಳು ರಾಜ್ಯಕ್ಕೆ ಬಂದು ವೈಮಾನಿಕ ಸಮೀಕ್ಷೆ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಯಾವುದೇ ರಾಜಕೀಯ ಮಾಡದೇ ಮಾನವಿಯ ದೃಷ್ಟಿಯಿಂದ ನಾವು ಸರ್ಕಾರದ ಜೊತೆ ಸೇರಿ ಸಮಸ್ಯೆ ಬಗೆಹರಿಸೋಣ ಎಂದರು.

ಶಿವಮೊಗ್ಗ: ಮಳೆಯ ಅಬ್ಬರದಲ್ಲಿ ಮನೆ ಮಠ ಕಳೆದುಕೊಂಡು ಸಂತ್ರಸ್ತರಾದ ಕುಟುಂಬಗಳಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ರಾಮಣ್ಣ ಶೆಟ್ಟಿ ಪಾರ್ಕ್ ಹತ್ತಿರದ ಗಣೇಶ ದೇವಸ್ಥಾನದಲ್ಲಿರುವ ಪರಿಹಾರ ಕೇಂದ್ರದಲ್ಲಿ ಆಹಾರ ಕಿಟ್ ವಿತರಿಸಲಾಯಿತು.

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​​​ ಸಮಿತಿ ವತಿಯಿಂದ ಸಂತ್ರಸ್ತರಿಗೆ ಆಹಾರದ ಕಿಟ್ ವಿತರಣೆ

ಅಕ್ಕಿ, ಬೆಳೆ, ಎಣ್ಣೆ, ಬಿಸ್ಕೇಟ್ ಹಾಗೂ ಸೋಪುಗಳು ಇರುವ ಕಿಟ್​ಗಳನ್ನ ನಿರಾಶ್ರಿತರ ಕುಟುಂಗಳಿಗೆ ವಿತರಿಸಲಾಯಿತು. ನಂತರ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದ್ರೇಶ್, ರಾಜ್ಯದಲ್ಲಿ ಭೀಕರ ಪ್ರವಾಹ ಹಾಗೂ ಮಳೆಯಿಂದಾಗಿ ಸಾವಿರಾರು ಕೋಟಿ ನಷ್ಟ ಆಗಿದೆ. ಶಿವಮೊಗ್ಗ ಜಿಲ್ಲೆಯೊಂದರಲ್ಲೇ ಸುಮಾರು ಒಂದು ಸಾವಿರ ಕೋಟಿಗೂ ಹೆಚ್ಚು ನಷ್ಟ ಆಗಿದೆ. ಹಾಗಾಗಿ ಪರಿಹಾರವನ್ನು ತ್ವರಿತವಾಗಿ ನೀಡಬೇಕೆಂದು ಒತ್ತಾಯಿಸಿದರು.

ಪ್ರವಾಹದಿಂದ ರಾಜ್ಯ ತತ್ತರಿಸಿದರೂ ಕೂಡ ಪ್ರಧಾನಮಂತ್ರಿಗಳು ರಾಜ್ಯಕ್ಕೆ ಬಂದು ವೈಮಾನಿಕ ಸಮೀಕ್ಷೆ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಯಾವುದೇ ರಾಜಕೀಯ ಮಾಡದೇ ಮಾನವಿಯ ದೃಷ್ಟಿಯಿಂದ ನಾವು ಸರ್ಕಾರದ ಜೊತೆ ಸೇರಿ ಸಮಸ್ಯೆ ಬಗೆಹರಿಸೋಣ ಎಂದರು.

Intro:ಶಿವಮೊಗ್ಗ,
ಜಿಲ್ಲಾ ಕಾಂಗ್ರೇಸ್ ಸಮಿತಿ ವತಿಯಿಂದ ಸಂತ್ರಸ್ತರಿಗೆ ಆಹಾರ ಕೀಟ್ ವಿತರಣೆ

ಮಳೆಯ ಅಬ್ಬರದಲ್ಲಿ ಮನೆ ಮಠ ಕಳೆದುಕೊಂಡು ಸಂತ್ರಸ್ತರಾದ ಕುಟುಂಬ ಗಳಿಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ರಾಮಣ್ಣ ಶೆಟ್ಟಿ ಪಾರ್ಕ್ ಹತ್ತಿರ ಗಣೇಶ ದೇವಸ್ಥಾನ ದಲ್ಲಿರುವ ಕಾಳಜಿ ಕೇಂದ್ರದಲ್ಲಿ ಆಹಾರ ಕೀಟ್ ವಿತರಿಸಲಾಯಿತು.
ಅಕ್ಕಿ, ಬೆಳೆ, ಎಣ್ಣೆ,ಬಿಸ್ಕೇತ್ ಹಾಗೂ ಸೋಪುಗಳು ಇರುವ ಒಂದು ಕೀಟ್ ಗಳನ್ನ ನಿರಾಶ್ರಿತರ ಕುಟುಂಗಳಿಗೆ ವಿತರಿಸಲಾಯಿತು.
ನಂತರದಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್ ಸುಂದ್ರೇಶ್
ರಾಜ್ಯದಲ್ಲಿ ಬಿಕರ ಪ್ರವಾಹ ಹಾಗೂ ಮಳೆಯಿಂದಾಗಿ ಸಾವಿರಾರು ಕೋಟಿ ನಷ್ಟ ಆಗಿರುವಂತಹದ್ದು ಶಿವಮೊಗ್ಗ ಜಿಲ್ಲೆಯಲ್ಲೆ ಒಂದು ಸಾವಿರ ಕೋಟಿಗೂ ಹೆಚ್ಚು ನಷ್ಟ ಆಗಿದೆ. ಹಾಗಾಗಿ ಪರಿಹಾರವನ್ನ ತ್ವರಿತವಾಗಿ ನೀಡಬೇಕು.ಎಂದು ಒತ್ತಾಯಿಸಿದರು.
ಅಷ್ಟಾದರೂ ಸಹ ಪ್ರಧಾನ ಮಂತ್ರಿಗಳು ರಾಜ್ಯಕ್ಕೆ ಬಂದು ವೈಮಾನಿಕ ಸಮೀಕ್ಷೆ ಕೈಗೊಂಡಿಲ್ಲ ಎಂದರು.
ಯಾವುದೇ ರಾಜಕೀಯ ಮಾಡದೇ ಮಾನವಿಯ ದೃಷ್ಟಿಯಿಂದ ನಾವು ಸರ್ಕಾರದ ಜೊತೆ ಸೇರಿ ಸಮಸ್ಯೆ ಬಗೆಹರಿಸೋಣ ಎಂದರು.
ಭೀಮಾನಾಯ್ಕ ಎಸ್ ಶಿವಮೊಗ್ಗ


Body:ಹ


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.