ETV Bharat / state

ಶಿವಮೊಗ್ಗ ತಾಲೂಕಿನಲ್ಲಿ 10,705 ಆಯುಷ್ಮಾನ್ ಭಾರತ್ ಕಾರ್ಡ್​ ವಿತರಣೆ.. - Shimoga Rural BJP President G.E. Virupakshappa statement

ಆಯುಷ್ಮಾನ್ ಭಾರತ್‌, ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಶಿವಮೊಗ್ಗ ತಾಲೂಕಿನಲ್ಲಿ ಒಟ್ಟು 10,705 ಕಾರ್ಡ್​ಗಳನ್ನು ವಿತರಿಸಲಾಗಿದೆ ಎಂದು ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಜಿ ಇ ವಿರುಪಾಕ್ಷಪ್ಪ ತಿಳಿಸಿದರು.

G.E. Virupakshappa
ಜಿ.ಇ. ವಿರುಪಾಕ್ಷಪ್ಪ
author img

By

Published : Jan 6, 2020, 6:20 PM IST

ಶಿವಮೊಗ್ಗ: ಆಯುಷ್ಮಾನ್ ಭಾರತ್,ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಶಿವಮೊಗ್ಗ ತಾಲೂಕಿನಲ್ಲಿ ಒಟ್ಟು 10,705 ಕಾರ್ಡ್​ಗಳನ್ನು ವಿತರಿಸಲಾಗಿದೆ ಎಂದು ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಜಿ ಇ ವಿರುಪಾಕ್ಷಪ್ಪ ತಿಳಿಸಿದರು.

ಅಟಲ್ ಬಿಹಾರಿ ವಾಜಪೇಯಿ ಅವರ ಹುಟ್ಟುಹಬ್ಬದ ನಿಮಿತ್ತ ಹಮ್ಮಿಕೊಂಡಿದ್ದ ಅಭಿಯಾನದಲ್ಲಿ, ಬೈಂದೂರು ಕ್ಷೇತ್ರ ಹೊರತುಪಡಿಸಿ, ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 65,134 ಕಾರ್ಡುಗಳನ್ನು ವಿತರಿಸಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 1.60 ಲಕ್ಷ ಅರ್ಹತಾ ಪತ್ರಗಳನ್ನು ತಲುಪಿಸಲಾಗಿದೆ ಎಂದರು.

ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ್ ಯೋಜನೆ, ವಿಶ್ವದಲ್ಲಿ ಅತಿ ದೊಡ್ಡ ಸರ್ಕಾರಿ ಪ್ರಾಯೋಜಿತ ಆರೋಗ್ಯ ಯೋಜನೆ. ಈಗಾಗಲೇ 50 ಕೋಟಿ ಜನರು ಇದರ ಲಾಭ ಪಡೆದುಕೊಂಡಿದ್ದಾರೆ ಎಂದರು. ಯೋಜನೆ ಜಾರಿಯಾದ ಎರಡು ತಿಂಗಳಲ್ಲಿ ರಾಜ್ಯದ 28,000 ಜನರು ಇದರ ಲಾಭ ಪಡೆದುಕೊಂಡಿದ್ದಾರೆ. ಹೃದಯಾಘಾತ, ಕ್ಯಾನ್ಸರ್ ಹಾಗೂ ಮತ್ತಿತರ ಮಾರಕ ಕಾಯಿಲೆಗಳಿಗೆ ಈ ಕಾರ್ಡ್ ಪ್ರಯೋಜನಕಾರಿ ಎಂದರು.

ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಜಿ ಇ ವಿರುಪಾಕ್ಷಪ್ಪ..

ಈ ವೇಳೆ ಗ್ರಾಮಾಂತರ ಶಾಸಕ ಕೆ ಬಿ ಅಶೋಕ್ ನಾಯಕ್, ಜಿಲ್ಲಾ ಪಂಚಾಯತ್ ಸದಸ್ಯ ಕಾಂತೇಶ್, ಸೌಮ್ಯ ಬೋಜ್ಯಾ ನಾಯಕ್ ಹಾಗೂ ತಮ್ಮಡಿಹಳ್ಳಿ ನಾಗರಾಜ್ ಉಪಸ್ಥಿತರಿದ್ದರು.

ಶಿವಮೊಗ್ಗ: ಆಯುಷ್ಮಾನ್ ಭಾರತ್,ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಶಿವಮೊಗ್ಗ ತಾಲೂಕಿನಲ್ಲಿ ಒಟ್ಟು 10,705 ಕಾರ್ಡ್​ಗಳನ್ನು ವಿತರಿಸಲಾಗಿದೆ ಎಂದು ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಜಿ ಇ ವಿರುಪಾಕ್ಷಪ್ಪ ತಿಳಿಸಿದರು.

ಅಟಲ್ ಬಿಹಾರಿ ವಾಜಪೇಯಿ ಅವರ ಹುಟ್ಟುಹಬ್ಬದ ನಿಮಿತ್ತ ಹಮ್ಮಿಕೊಂಡಿದ್ದ ಅಭಿಯಾನದಲ್ಲಿ, ಬೈಂದೂರು ಕ್ಷೇತ್ರ ಹೊರತುಪಡಿಸಿ, ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 65,134 ಕಾರ್ಡುಗಳನ್ನು ವಿತರಿಸಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 1.60 ಲಕ್ಷ ಅರ್ಹತಾ ಪತ್ರಗಳನ್ನು ತಲುಪಿಸಲಾಗಿದೆ ಎಂದರು.

ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ್ ಯೋಜನೆ, ವಿಶ್ವದಲ್ಲಿ ಅತಿ ದೊಡ್ಡ ಸರ್ಕಾರಿ ಪ್ರಾಯೋಜಿತ ಆರೋಗ್ಯ ಯೋಜನೆ. ಈಗಾಗಲೇ 50 ಕೋಟಿ ಜನರು ಇದರ ಲಾಭ ಪಡೆದುಕೊಂಡಿದ್ದಾರೆ ಎಂದರು. ಯೋಜನೆ ಜಾರಿಯಾದ ಎರಡು ತಿಂಗಳಲ್ಲಿ ರಾಜ್ಯದ 28,000 ಜನರು ಇದರ ಲಾಭ ಪಡೆದುಕೊಂಡಿದ್ದಾರೆ. ಹೃದಯಾಘಾತ, ಕ್ಯಾನ್ಸರ್ ಹಾಗೂ ಮತ್ತಿತರ ಮಾರಕ ಕಾಯಿಲೆಗಳಿಗೆ ಈ ಕಾರ್ಡ್ ಪ್ರಯೋಜನಕಾರಿ ಎಂದರು.

ಶಿವಮೊಗ್ಗ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಜಿ ಇ ವಿರುಪಾಕ್ಷಪ್ಪ..

ಈ ವೇಳೆ ಗ್ರಾಮಾಂತರ ಶಾಸಕ ಕೆ ಬಿ ಅಶೋಕ್ ನಾಯಕ್, ಜಿಲ್ಲಾ ಪಂಚಾಯತ್ ಸದಸ್ಯ ಕಾಂತೇಶ್, ಸೌಮ್ಯ ಬೋಜ್ಯಾ ನಾಯಕ್ ಹಾಗೂ ತಮ್ಮಡಿಹಳ್ಳಿ ನಾಗರಾಜ್ ಉಪಸ್ಥಿತರಿದ್ದರು.

Intro:ಶಿವಮೊಗ್ಗ,
ಆರೋಗ್ಯ ರಕ್ಷಣೆ ನೀಡುವಂತಹ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಅಡಿಯಲ್ಲಿ ಶಿವಮೊಗ್ಗ ತಾಲೂಕಿನಲ್ಲಿ 10705 ಕಾರ್ಡ್ಗಳನ್ನು ವಿತರಿಸಲಾಗಿದೆ ಎಂದು ಬಿಜೆಪಿ ಶಿವಮೊಗ್ಗ ಗ್ರಾಮಾಂತರ ಅಧ್ಯಕ್ಷ ಜಿಇ ವಿರುಪಾಕ್ಷಪ್ಪ ತಿಳಿಸಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಹುಟ್ಟುಹಬ್ಬದ ನಿಮಿತ್ತ ಹಮ್ಮಿಕೊಂಡಿದ್ದ ಅಭಿಯಾನದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ಬೈಂದೂರು ಕ್ಷೇತ್ರ ಹೊರತುಪಡಿಸಿ ಒಟ್ಟು 65,134 ಕಾರ್ಡುಗಳನ್ನು ವಿತರಿಸಲಾಗಿದ್ದು ಜಿಲ್ಲೆಯಲ್ಲಿ ಈಗಾಗಲೇ 1.60 ಲಕ್ಷ ಅರ್ಹತಾಪತ್ರ ತಲುಪಿಸಲಾಗಿದೆ ಎಂದರು.

ಪ್ರಧಾನಿ ಮೋದಿಯವರ ಮಹತ್ವಕಾಂಕ್ಷೆ ಯೋಜನೆ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆ ವಿಶ್ವದಲ್ಲಿ ಅತಿ ದೊಡ್ಡ ಸರಕಾರಿ ಪ್ರಾಯೋಜಿತ ಆರೋಗ್ಯ ಯೋಜನೆಯಾಗಿದೆ ಈಗಾಗಲೇ 50 ಕೋಟಿ ಜನರು ಇದರ ಲಾಭ ಪಡೆದುಕೊಂಡಿದ್ದಾರೆ ಎಂದರು.
ಯೋಜನೆ ಜಾರಿಯಾದ ಎರಡು ತಿಂಗಳಲ್ಲಿ ರಾಜ್ಯದ 28000 ಜನ ಲಾಭ ಪಡೆದುಕೊಂಡಿದ್ದಾರೆ ಹೃದಯಘಾತ ,ಕ್ಯಾನ್ಸರ್ ಮತ್ತಿತರ ಮಾರಕ ಕಾಯಿಲೆಗಳಿಗೆ ಈ ಕಾರ್ಡ್ ಪ್ರಯೋಜನವಾಗಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಗ್ರಾಮಾಂತರ ಶಾಸಕ ಕೆಬಿ ಅಶೋಕ್ ನಾಯಕ್
ಜಿಲ್ಲಾ ಪಂಚಾಯತ್ ಸದಸ್ಯ ಕಾಂತೇಶ್ ಸೌಮ್ಯ ಬೋಜ್ಯಾ ನಾಯಕ್ ತಮ್ಮಡಿಹಳ್ಳಿ ನಾಗರಾಜ್ ಉಪಸ್ಥಿತರಿದ್ದರು


Body:ಭೀಮಾನಾಯ್ಕ ಎಸ್ ಶಿವಮೊಗ್ಗ


Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.