ETV Bharat / state

ರೈತರಿಗೆ ಯೋಜನೆ ಜಾರಿಯಲ್ಲಿ ಶಿವಮೊಗ್ಗ ನಂ.1 ಆಗಬೇಕು: ರಾಜೇಂದ್ರ ಕುಮಾರ್​ - ರಾಜೇಂದ್ರ ಕುಮಾರ್

ಕಿಸಾನ್ ಸಮ್ಮಾನ್, ಫಸಲ್ ಭೀಮಾ ಯೋಜನೆ, ಬೆಳೆ ಸಮೀಕ್ಷೆ ಸೇರಿದಂತೆ ರೈತರಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಅನುಷ್ಠಾನದಲ್ಲಿ ಜಿಲ್ಲೆ ರಾಜ್ಯದಲ್ಲಿಯೇ ನಂಬರ್ ಒನ್ ಆಗಬೇಕು ಎಂದು ಕೃಷಿ, ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣ
author img

By

Published : Aug 28, 2019, 11:37 PM IST

ಶಿವಮೊಗ್ಗ: ಕಿಸಾನ್ ಸಮ್ಮಾನ್, ಫಸಲ್ ಭೀಮಾ ಯೋಜನೆ, ಬೆಳೆ ಸಮೀಕ್ಷೆ ಸೇರಿದಂತೆ ರೈತರಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಅನುಷ್ಠಾನದಲ್ಲಿ ಜಿಲ್ಲೆ ರಾಜ್ಯದಲ್ಲಿಯೇ ನಂಬರ್ ಒನ್ ಆಗಬೇಕು ಎಂದು ಕೃಷಿ, ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 1,54,567 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 1,47,541 ಅರ್ಜಿಗಳನ್ನು ಅಪ್‍ಲೋಡ್ ಮಾಡಲಾಗಿದೆ. ಬಾಕಿ ಉಳಿದಿರುವ ಅರ್ಜಿಗಳನ್ನು ಒಂದು ವಾರದ ಒಳಗಾಗಿ ವಿಲೇವಾರಿ ಮಾಡಿ ಯೋಜನೆಯ ಲಾಭ ಪ್ರತಿ ರೈತರಿಗೂ ತಲುಪುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ರೈತ ಸಂಪರ್ಕ ಕೇಂದ್ರಗಳಿಗೆ ಸ್ವಂತ ಕಟ್ಟಡ
ಜಿಲ್ಲೆಯಲ್ಲಿ ಒಟ್ಟು 39 ರೈತ ಸಂಪರ್ಕ ಕೇಂದ್ರಗಳಿದ್ದು, ಇದರಲ್ಲಿ 31 ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿವೆ. ಬಾಡಿಗೆ ಕಟ್ಟಡದಲ್ಲಿ 6 ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ಎರಡು ವರ್ಷಗಳ ಒಳಗಾಗಿ ಎಲ್ಲಾ ರೈತ ಸಂಪರ್ಕ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಿಸಲಾಗುವುದು. ಈಗಾಗಲೇ ನಿವೇಶನ ಗುರುತಿಸಿ ಕಟ್ಟಡ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿರುವ ಪ್ರಕರಣಗಳಲ್ಲಿ ತಕ್ಷಣ ಕಾಮಗಾರಿಯನ್ನು ಆರಂಭಿಸಬೇಕು ಎಂದು ಹೇಳಿದರು.

ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಫಾರ್ಮ್‍ಗಳನ್ನು ಗರಿಷ್ಠ ಬಳಕೆ ಮಾಡಬೇಕು. ಯಾವುದೇ ಕಾರಣಕ್ಕೂ ಫಾರ್ಮ್‍ಗಳು ಖಾಲಿ ಬೀಳದಂತೆ, ಅತಿಕ್ರಮಣವಾಗದಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿರುವ ಇಲಾಖೆಯ ಎಲ್ಲಾ ಫಾರ್ಮ್‍ಗಳನ್ನು ಸಮೀಕ್ಷೆ ನಡೆಸಿ ಜಿಯೋ ಫೆನ್ಸಿಂಗ್ ಮಾಡಬೇಕು. ಈ ಫಾರ್ಮ್‍ಗಳ ಸದ್ಭಳಕೆ ಬಗ್ಗೆ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಜತೆಯಲ್ಲಿ ಯೋಜನೆ ರೂಪಿಸಿ ಕಾರ್ಯನಿರ್ವಹಿಸುವಂತೆ ಅವರು ಹೇಳಿದರು.

ಬೆಳೆ ಸಮೀಕ್ಷೆ ಪೋಸ್ಟರ್ ಬಿಡುಗಡೆ
ಗ್ರಾಮಗಳ ಬೆಳೆ ಸಮೀಕ್ಷೆ ಕಾರ್ಯ ಸೆ. 1ರಿಂದ ಆರಂಭವಾಗಲಿದ್ದು, ಈ ಬಗ್ಗೆ ಸಮೀಕ್ಷೆಗಾರರಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಬೆಳೆ ಸಮೀಕ್ಷೆ ಆ್ಯಪ್​​​​ ಬಳಕೆ ಬಗ್ಗೆ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಮಾಹಿತಿ ಇರಬೇಕು ಎಂದರು. ಇದೇ ಸಂದರ್ಭದಲ್ಲಿ ಬೆಳೆ ಸಮೀಕ್ಷೆ ಕುರಿತಾದ ಪ್ರಚಾರ ಪೋಸ್ಟರ್ ಬಿಡುಗಡೆ ಮಾಡಿದರು.

ಶಿವಮೊಗ್ಗ: ಕಿಸಾನ್ ಸಮ್ಮಾನ್, ಫಸಲ್ ಭೀಮಾ ಯೋಜನೆ, ಬೆಳೆ ಸಮೀಕ್ಷೆ ಸೇರಿದಂತೆ ರೈತರಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಅನುಷ್ಠಾನದಲ್ಲಿ ಜಿಲ್ಲೆ ರಾಜ್ಯದಲ್ಲಿಯೇ ನಂಬರ್ ಒನ್ ಆಗಬೇಕು ಎಂದು ಕೃಷಿ, ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಹೇಳಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 1,54,567 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 1,47,541 ಅರ್ಜಿಗಳನ್ನು ಅಪ್‍ಲೋಡ್ ಮಾಡಲಾಗಿದೆ. ಬಾಕಿ ಉಳಿದಿರುವ ಅರ್ಜಿಗಳನ್ನು ಒಂದು ವಾರದ ಒಳಗಾಗಿ ವಿಲೇವಾರಿ ಮಾಡಿ ಯೋಜನೆಯ ಲಾಭ ಪ್ರತಿ ರೈತರಿಗೂ ತಲುಪುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ರೈತ ಸಂಪರ್ಕ ಕೇಂದ್ರಗಳಿಗೆ ಸ್ವಂತ ಕಟ್ಟಡ
ಜಿಲ್ಲೆಯಲ್ಲಿ ಒಟ್ಟು 39 ರೈತ ಸಂಪರ್ಕ ಕೇಂದ್ರಗಳಿದ್ದು, ಇದರಲ್ಲಿ 31 ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿವೆ. ಬಾಡಿಗೆ ಕಟ್ಟಡದಲ್ಲಿ 6 ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ಎರಡು ವರ್ಷಗಳ ಒಳಗಾಗಿ ಎಲ್ಲಾ ರೈತ ಸಂಪರ್ಕ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಿಸಲಾಗುವುದು. ಈಗಾಗಲೇ ನಿವೇಶನ ಗುರುತಿಸಿ ಕಟ್ಟಡ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿರುವ ಪ್ರಕರಣಗಳಲ್ಲಿ ತಕ್ಷಣ ಕಾಮಗಾರಿಯನ್ನು ಆರಂಭಿಸಬೇಕು ಎಂದು ಹೇಳಿದರು.

ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಫಾರ್ಮ್‍ಗಳನ್ನು ಗರಿಷ್ಠ ಬಳಕೆ ಮಾಡಬೇಕು. ಯಾವುದೇ ಕಾರಣಕ್ಕೂ ಫಾರ್ಮ್‍ಗಳು ಖಾಲಿ ಬೀಳದಂತೆ, ಅತಿಕ್ರಮಣವಾಗದಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿರುವ ಇಲಾಖೆಯ ಎಲ್ಲಾ ಫಾರ್ಮ್‍ಗಳನ್ನು ಸಮೀಕ್ಷೆ ನಡೆಸಿ ಜಿಯೋ ಫೆನ್ಸಿಂಗ್ ಮಾಡಬೇಕು. ಈ ಫಾರ್ಮ್‍ಗಳ ಸದ್ಭಳಕೆ ಬಗ್ಗೆ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಜತೆಯಲ್ಲಿ ಯೋಜನೆ ರೂಪಿಸಿ ಕಾರ್ಯನಿರ್ವಹಿಸುವಂತೆ ಅವರು ಹೇಳಿದರು.

ಬೆಳೆ ಸಮೀಕ್ಷೆ ಪೋಸ್ಟರ್ ಬಿಡುಗಡೆ
ಗ್ರಾಮಗಳ ಬೆಳೆ ಸಮೀಕ್ಷೆ ಕಾರ್ಯ ಸೆ. 1ರಿಂದ ಆರಂಭವಾಗಲಿದ್ದು, ಈ ಬಗ್ಗೆ ಸಮೀಕ್ಷೆಗಾರರಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಬೆಳೆ ಸಮೀಕ್ಷೆ ಆ್ಯಪ್​​​​ ಬಳಕೆ ಬಗ್ಗೆ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಮಾಹಿತಿ ಇರಬೇಕು ಎಂದರು. ಇದೇ ಸಂದರ್ಭದಲ್ಲಿ ಬೆಳೆ ಸಮೀಕ್ಷೆ ಕುರಿತಾದ ಪ್ರಚಾರ ಪೋಸ್ಟರ್ ಬಿಡುಗಡೆ ಮಾಡಿದರು.

Intro:ಶಿವಮೊಗ್ಗ,

ರೈತರಿಗೆ ಯೋಜನೆಯ ಜಾರಿಯಲ್ಲಿ ಶಿವಮೊಗ್ಗ ನಂಬರ್ ಒನ್ ಆಗಬೇಕು: ರಾಜೇಂದ್ರ ಕುಮಾರ್

ಕಿಸಾನ್ ಸಮ್ಮಾನ್, ಫಸಲ್ ಬಿಮಾ ಯೋಜನೆ, ಬೆಳೆ ಸಮೀಕ್ಷೆ ಸೇರಿದಂತೆ ರೈತರಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಅನುಷ್ಟಾನದಲ್ಲಿ ಶಿವಮೊಗ್ಗ ಜಿಲ್ಲೆ ರಾಜ್ಯದಲ್ಲಿಯೇ ನಂಬರ್ ಒನ್ ಆಗಬೇಕು ಎಂದು ಕೃಷಿ, ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 1,54,567 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 1,47,541 ಅರ್ಜಿಗಳನ್ನು ಅಪ್‍ಲೋಡ್ ಮಾಡಲಾಗಿದೆ. ಬಾಕಿ ಉಳಿದಿರುವ ಅರ್ಜಿಗಳನ್ನು ಒಂದು ವಾರದ ಒಳಗಾಗಿ ವಿಲೇವಾರಿ ಮಾಡಿ ಯೋಜನೆಯ ಲಾಭ ಪ್ರತಿ ರೈತರಿಗೂ ತಲುಪುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ರೈತ ಸಂಪರ್ಕ ಕೇಂದ್ರಗಳಿಗೆ ಸ್ವಂತ ಕಟ್ಟಡ: ಜಿಲ್ಲೆಯಲ್ಲಿ ಒಟ್ಟು 39 ರೈತ ಸಂಪರ್ಕ ಕೇಂದ್ರಗಳಿದ್ದು, ಇದರಲ್ಲಿ 31ಕೇಂದ್ರಗಳಿಗೆ ಸ್ವಂತ ಕಟ್ಟಡಗಳಿವೆ. ಬಾಡಿಗೆ ಕಟ್ಟಡದಲ್ಲಿ 6 ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ಎರಡು ವರ್ಷಗಳ ಒಳಗಾಗಿ ಎಲ್ಲಾ ರೈತ ಸಂಪರ್ಕ ಕೇಂದ್ರಗಳಿಗೆ ಸ್ವಂತ ಕಟ್ಟಡ ನಿರ್ಮಿಸಲಾಗುವುದು. ಈಗಾಗಲೇ ನಿವೇಶನ ಗುರುತಿಸಿ ಕಟ್ಟಡ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿರುವ ಪ್ರಕರಣಗಳಲ್ಲಿ ತಕ್ಷಣ ಕಾಮಗಾರಿಯನ್ನು ಆರಂಭಿಸಬೇಕು ಎಂದು ಹೇಳಿದರು.

ರೈತ ಸಂಪರ್ಕ ಕೇಂದ್ರಗಳಲ್ಲಿ ಯಾರೂ ಇರುವುದಿಲ್ಲ ಎಂಬ ದೂರುಗಳಿದ್ದು, ಇಂತಹ ದೂರುಗಳಿಗೆ ಅವಕಾಶ ನೀಡಬಾರದು ಎಂದರು.

ಕೃಷಿ ಮತ್ತು ತೋಟಗಾರಿಕಾ ಇಲಾಖೆಯ ಫಾರ್ಮ್‍ಗಳನ್ನು ಗರಿಷ್ಟ ಬಳಕೆ ಮಾಡಬೇಕು. ಯಾವುದೇ ಕಾರಣಕ್ಕೂ ಫಾರ್ಮ್‍ಗಳು ಖಾಲಿ ಬೀಳದಂತೆ, ಅತಿಕ್ರಮಣವಾಗದಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿರುವ ಇಲಾಖೆಯ ಎಲ್ಲಾ ಫಾರ್ಮ್‍ಗಳನ್ನು ಸಮೀಕ್ಷೆ ನಡೆಸಿ ಜಿಯೋ ಫೆನ್ಸಿಂಗ್ ಮಾಡಬೇಕು. ಈ ಫಾರ್ಮ್‍ಗಳ ಸದ್ಭಳಕೆ ಬಗ್ಗೆ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಜತೆಯಲ್ಲಿ ಯೋಜನೆ ರೂಪಿಸಿ ಕಾರ್ಯನಿರ್ವಹಿಸುವಂತೆ ಅವರು ಹೇಳಿದರು.

ಬೆಳೆ ಸಮೀಕ್ಷೆ ಪೋಸ್ಟರ್ ಬಿಡುಗಡೆ: ಗ್ರಾಮಗಳ ಬೆಳೆ ಸಮೀಕ್ಷೆ ಕಾರ್ಯ ಸೆಪ್ಟಂಬರ್ ಒಂದರಿಂದ ಆರಂಭವಾಗಲಿದ್ದು, ಈ ಬಗ್ಗೆ ಸಮೀಕ್ಷೆಗಾರರಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಬೆಳೆ ಸಮೀಕ್ಷೆ ಆಪ್ ಬಳಕೆ ಬಗ್ಗೆ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಮಾಹಿತಿ ಇರಬೇಕು. ಎಲ್ಲಾ ಅಧಿಕಾರಿಗಳು ಸ್ವತಃ ಕ್ಷೇತ್ರಕ್ಕೆ ಭೇಟಿ ನೀಡಿ ಸಮೀಕ್ಷೆಯ ಪ್ರಗತಿ ಪರಿಶೀಲನೆ ನಡೆಸಬೇಕು. ಇಲಾಖೆಯಲ್ಲಿ ಪ್ರತಿ ಹಂತದಲ್ಲೂ ಅಧಿಕಾರಿಗಳಿಗೆ ಮಾಸಿಕ ಟಾರ್ಗೆಟ್ ನಿಗದಿಪಡಿಸಿ ಅದರಂತೆ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು. ಅವರು ಈ ಸಂದರ್ಭದಲ್ಲಿ ಬೆಳೆ ಸಮೀಕ್ಷೆ ಕುರಿತಾದ ಪ್ರಚಾರ ಪೋಸ್ಟರ್ ಬಿಡುಗಡೆ ಮಾಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಅನುರಾಧ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕಿರಣ ಕುಮಾರ್, ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಯೋಗೀಶ್, ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.