ETV Bharat / state

ಶಿವಮೊಗ್ಗ ಡಿಸಿಸಿ ಬ್ಯಾಂಕ್​ ಚುನಾವಣೆ: ಆರ್.ಎಂ.ಮಂಜುನಾಥ್ ಗೌಡ ಅಧ್ಯಕ್ಷರಾಗಿ ಅವಿರೋಧ ಆಯ್ಕೆ - undefined

ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್​ನ ನೂತನ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಪ್ರಕಿಯೆ ನಡೆದಿದ್ದು. ಬ್ಯಾಂಕ್​ನ ಅಧ್ಯಕ್ಷರಾಗಿ ಆರ್.ಎಂ.ಮಂಜುನಾಥ್ ಗೌಡರವರು ಸತತ ಹತ್ತನೇ ಬಾರಿಗೆ ಅವಿರೋಧವಾಗಿ ಅಧ್ಯಕ್ಷರಾಗಿ‌ ಆಯ್ಕೆಯಾಗಿದ್ದಾರೆ.

ಆರ್.ಎಂ.ಮಂಜುನಾಥ್ ಗೌಡ
author img

By

Published : May 18, 2019, 3:31 AM IST

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್​ನ ನೂತನ ಅಧ್ಯಕ್ಷರಾಗಿ ಆರ್.ಎಂ.ಮಂಜುನಾಥ್ ಗೌಡ ಅವಿರೋಧ ಆಯ್ಕೆಯಾಗಿದ್ದಾರೆ.

ಇಂದು ಕೇಂದ್ರ ಬ್ಯಾಂಕ್​ನಲ್ಲಿ ಉಪವಿಭಾಗಧಿಕಾರಿ ಪ್ರಕಾಶ್​ರವರ ಸಮ್ಮುಖದಲ್ಲಿ ಅಧ್ಯಕ್ಷರ ಚುನಾವಣೆ ನಡೆಸಲಾಯಿತು. ಅಧ್ಯಕ್ಷರ ಚುನಾವಣೆಗೆ ಒಂದೇ ಒಂದು ನಾಮಪತ್ರ ಸಲ್ಲಿಕೆಯಾದ ಕಾರಣ ಆರ್.ಎಂ.ಮಂಜುನಾಥ್ ಗೌಡರನ್ನು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆ ಘೋಷಣೆ ಮಾಡಲಾಯಿತು.

ಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಡಿಸಿಸಿ ಬ್ಯಾಂಕ್​ನಲ್ಲಿ ಒಟ್ಟು 15 ಸ್ಥಾನಗಳಿವೆ. ಇದರಲ್ಲಿ ಮೈತ್ರಿ ಬೆಂಬಲಿತರು 9 ನಿರ್ದೇಶಕರು ಹಾಗೂ ಬಿಜೆಪಿ ಬೆಂಬಲಿತರು 4 ನಿರ್ದೇಶಕರಿದ್ದಾರೆ. ಸರ್ಕಾರದ ಇಬ್ಬರು ಪ್ರತಿನಿಧಿಗಳು ಇದ್ದಾರೆ.

ನಡೆಯದ ಉಪಾಧ್ಯಕ್ಷರ ಚುನಾವಣೆ
ಡಿಸಿಸಿ ಬ್ಯಾಂಕ್​ನಲ್ಲಿ ಪ್ರತೀ ಬಾರಿಯೂ ಅಧ್ಯಕ್ಷರ ಚುನಾವಣೆಯ ಜೊತೆಗೆ ಉಪಾಧ್ಯಕ್ಷರ ಚುನಾವಣೆ ಸಹ ನಡೆಯುತ್ತದೆ. ಆದ್ರೆ, ಈ ಬಾರಿ ಉಪಾಧ್ಯಕ್ಷರ ಚುನಾವಣೆ ನಡೆಯಲಿಲ್ಲ. ಉಪಾಧ್ಯಕ್ಷ ಸ್ಥಾನಕ್ಕೆ ಮೈತ್ರಿ ಕಡೆಯಿಂದ ಷಡಕ್ಷರಿ ಹಾಗೂ ಬಿಜೆಪಿ‌ ಕಡೆಯಿಂದ ಅಗಡಿ ಅಶೋಕ್ ನಾಮಪತ್ರ ಸಲ್ಲಿಸಿದ್ದರು. ಕಳೆದ ಹದಿನೈದು ವರ್ಷಗಳಿಂದ ಬ್ಯಾಂಕ್​ನಲ್ಲಿ‌ ಅಧ್ಯಕ್ಷ ಸ್ಥಾನ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧ ಅಯ್ಕೆ ನಡೆದುಕೊಂಡು ಬಂದಿದೆ. ಆದ್ರೆ ಕೊನೆ ಗಳಿಗೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಸಲ್ಲಿಕೆಯಾದ ಎರಡು ನಾಮಪತ್ರಗಳು ವಾಪಸ್ ಪಡೆದ ಕಾರಣ ಚುನಾವಣೆ ನಡೆಯಲಿಲ್ಲ. ಇನ್ನೊಂದು ವಾರದಲ್ಲಿ ಚುನಾವಣೆ ನಡೆಸಲಾಗುತ್ತದೆ.

10ನೇ ಬಾರಿ ಆರ್.ಎಂ.ಮಂಜುನಾಥ್ ಗೌಡ ಅವಿರೋಧ ಆಯ್ಕೆ

ಬ್ಯಾಂಕ್​ನ ಅಧ್ಯಕ್ಷರಾಗಿ ಆರ್.ಎಂ.ಮಂಜುನಾಥ್ ಗೌಡರವರು ಸತತ ಹತ್ತನೇ ಬಾರಿಗೆ ಅವಿರೋಧವಾಗಿ ಅಧ್ಯಕ್ಷರಾಗಿ‌ ಆಯ್ಕೆಯಾಗಿದ್ದಾರೆ. ಇದು ಬ್ಯಾಂಕ್​ನ ಇತಿಹಾಸದಲ್ಲಿ ದಾಖಲೆಯಾಗಿದೆ. ಅಧ್ಯಕ್ಷರಾಗಿ‌ ಆಯ್ಕೆಯಾಗುತ್ತಲೇ ಮಂಜುನಾಥ್ ಗೌಡರ ಅಭಿಮಾನಿಗಳು ಹಾರ ಹಾಕಿ, ಶಾಲು ಹೊದಿಸಿ‌ ಸನ್ಮಾನ ಮಾಡಿದರು. ಬ್ಯಾಂಕ್ ನ ಸರ್ವತೋಖ ಅಭಿವೃದ್ದಿ ಹಾಗೂ‌ ದಾಖಲೆಯ‌ ಸಾಲ ಸೌಲಭ್ಯ ನೀಡಿದ ಪರಿಣಾಮ ಮತ್ತೊಮ್ಮೆ ಅಧ್ಯಕ್ಷರಾಗಿ ನಿರ್ದೇಶಕರು‌ ಆಯ್ಕೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ಯಾಂಕ್ ನಿಂದ ರೈತರಿಗೆ ಇನ್ನಷ್ಟು ಸಾಲ ಸೌಲಭ್ಯಗಳನ್ನು ನೀಡಲಾಗುವುದು, ಅವರಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ತಿಳಿಸಿದರು.

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್​ನ ನೂತನ ಅಧ್ಯಕ್ಷರಾಗಿ ಆರ್.ಎಂ.ಮಂಜುನಾಥ್ ಗೌಡ ಅವಿರೋಧ ಆಯ್ಕೆಯಾಗಿದ್ದಾರೆ.

ಇಂದು ಕೇಂದ್ರ ಬ್ಯಾಂಕ್​ನಲ್ಲಿ ಉಪವಿಭಾಗಧಿಕಾರಿ ಪ್ರಕಾಶ್​ರವರ ಸಮ್ಮುಖದಲ್ಲಿ ಅಧ್ಯಕ್ಷರ ಚುನಾವಣೆ ನಡೆಸಲಾಯಿತು. ಅಧ್ಯಕ್ಷರ ಚುನಾವಣೆಗೆ ಒಂದೇ ಒಂದು ನಾಮಪತ್ರ ಸಲ್ಲಿಕೆಯಾದ ಕಾರಣ ಆರ್.ಎಂ.ಮಂಜುನಾಥ್ ಗೌಡರನ್ನು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆ ಘೋಷಣೆ ಮಾಡಲಾಯಿತು.

ಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಡಿಸಿಸಿ ಬ್ಯಾಂಕ್​ನಲ್ಲಿ ಒಟ್ಟು 15 ಸ್ಥಾನಗಳಿವೆ. ಇದರಲ್ಲಿ ಮೈತ್ರಿ ಬೆಂಬಲಿತರು 9 ನಿರ್ದೇಶಕರು ಹಾಗೂ ಬಿಜೆಪಿ ಬೆಂಬಲಿತರು 4 ನಿರ್ದೇಶಕರಿದ್ದಾರೆ. ಸರ್ಕಾರದ ಇಬ್ಬರು ಪ್ರತಿನಿಧಿಗಳು ಇದ್ದಾರೆ.

ನಡೆಯದ ಉಪಾಧ್ಯಕ್ಷರ ಚುನಾವಣೆ
ಡಿಸಿಸಿ ಬ್ಯಾಂಕ್​ನಲ್ಲಿ ಪ್ರತೀ ಬಾರಿಯೂ ಅಧ್ಯಕ್ಷರ ಚುನಾವಣೆಯ ಜೊತೆಗೆ ಉಪಾಧ್ಯಕ್ಷರ ಚುನಾವಣೆ ಸಹ ನಡೆಯುತ್ತದೆ. ಆದ್ರೆ, ಈ ಬಾರಿ ಉಪಾಧ್ಯಕ್ಷರ ಚುನಾವಣೆ ನಡೆಯಲಿಲ್ಲ. ಉಪಾಧ್ಯಕ್ಷ ಸ್ಥಾನಕ್ಕೆ ಮೈತ್ರಿ ಕಡೆಯಿಂದ ಷಡಕ್ಷರಿ ಹಾಗೂ ಬಿಜೆಪಿ‌ ಕಡೆಯಿಂದ ಅಗಡಿ ಅಶೋಕ್ ನಾಮಪತ್ರ ಸಲ್ಲಿಸಿದ್ದರು. ಕಳೆದ ಹದಿನೈದು ವರ್ಷಗಳಿಂದ ಬ್ಯಾಂಕ್​ನಲ್ಲಿ‌ ಅಧ್ಯಕ್ಷ ಸ್ಥಾನ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧ ಅಯ್ಕೆ ನಡೆದುಕೊಂಡು ಬಂದಿದೆ. ಆದ್ರೆ ಕೊನೆ ಗಳಿಗೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಸಲ್ಲಿಕೆಯಾದ ಎರಡು ನಾಮಪತ್ರಗಳು ವಾಪಸ್ ಪಡೆದ ಕಾರಣ ಚುನಾವಣೆ ನಡೆಯಲಿಲ್ಲ. ಇನ್ನೊಂದು ವಾರದಲ್ಲಿ ಚುನಾವಣೆ ನಡೆಸಲಾಗುತ್ತದೆ.

10ನೇ ಬಾರಿ ಆರ್.ಎಂ.ಮಂಜುನಾಥ್ ಗೌಡ ಅವಿರೋಧ ಆಯ್ಕೆ

ಬ್ಯಾಂಕ್​ನ ಅಧ್ಯಕ್ಷರಾಗಿ ಆರ್.ಎಂ.ಮಂಜುನಾಥ್ ಗೌಡರವರು ಸತತ ಹತ್ತನೇ ಬಾರಿಗೆ ಅವಿರೋಧವಾಗಿ ಅಧ್ಯಕ್ಷರಾಗಿ‌ ಆಯ್ಕೆಯಾಗಿದ್ದಾರೆ. ಇದು ಬ್ಯಾಂಕ್​ನ ಇತಿಹಾಸದಲ್ಲಿ ದಾಖಲೆಯಾಗಿದೆ. ಅಧ್ಯಕ್ಷರಾಗಿ‌ ಆಯ್ಕೆಯಾಗುತ್ತಲೇ ಮಂಜುನಾಥ್ ಗೌಡರ ಅಭಿಮಾನಿಗಳು ಹಾರ ಹಾಕಿ, ಶಾಲು ಹೊದಿಸಿ‌ ಸನ್ಮಾನ ಮಾಡಿದರು. ಬ್ಯಾಂಕ್ ನ ಸರ್ವತೋಖ ಅಭಿವೃದ್ದಿ ಹಾಗೂ‌ ದಾಖಲೆಯ‌ ಸಾಲ ಸೌಲಭ್ಯ ನೀಡಿದ ಪರಿಣಾಮ ಮತ್ತೊಮ್ಮೆ ಅಧ್ಯಕ್ಷರಾಗಿ ನಿರ್ದೇಶಕರು‌ ಆಯ್ಕೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ಯಾಂಕ್ ನಿಂದ ರೈತರಿಗೆ ಇನ್ನಷ್ಟು ಸಾಲ ಸೌಲಭ್ಯಗಳನ್ನು ನೀಡಲಾಗುವುದು, ಅವರಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ತಿಳಿಸಿದರು.

Intro:ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ನೂತನ ಅಧ್ಯಕ್ಷರಾಗಿ ಆರ್.ಎಂ.ಮಂಜುನಾಥ್ ಗೌಡ ಅವಿರೋಧ ಆಯ್ಕೆಯಾಗಿದ್ದಾರೆ. ಇಂದು ಕೇಂದ್ರ ಬ್ಯಾಂಕ್ ನಲ್ಲಿ ಉಪವಿಭಗಾಧಿಕಾರಿ ಪ್ರಕಾಶ್ ರವರ ಸಮ್ಮುಖದಲ್ಲಿ ಅಧ್ಯಕ್ಷರ ಚುನಾವಣೆ ನಡೆಸಲಾಯಿತು. ಅಧ್ಯಕ್ಷರ ಚುನಾವಣೆಗೆ ಒಂದೇ ಒಂದು ನಾಮಪತ್ರ ಸಲ್ಲಿಕೆಯಾದ ಕಾರಣ ಆರ್.ಎಂ.ಮಂಜುನಾಥ್ ಗೌಡರನ್ನು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆ ಘೋಷಣೆ ಮಾಡಲಾಯಿತು.


Body:ಡಿಸಿಸಿ ಬ್ಯಾಂಕ್ ನಲ್ಲಿ ಒಟ್ಟು 15 ಸ್ಥಾನಗಳಿವೆ. ಇದರಲ್ಲಿ ಮೈತ್ರಿ ಬೆಂಬಲಿತರು 9 ನಿರ್ದೇಶಕರು ಹಾಗೂ ಬಿಜೆಪಿ ಬೆಂಬಲಿತರು 4 ನಿರ್ದೇಶಕರಿದ್ದಾರೆ. ಸರ್ಕಾರದ ಇಬ್ಬರು ಪ್ರತಿನಿಧಿಗಳು ಇದ್ದಾರೆ.

ನಡೆಯದ ಉಪಾಧ್ಯಕ್ಷರ ಚುನಾವಣೆ-

ಡಿಸಿಸಿ ಬ್ಯಾಂಕ್ ನಲ್ಲಿ ಪ್ರತಿಭಾರಿ ಅಧ್ಯಕ್ಷರ ಚುನಾವಣೆಯ ಜೊತೆಗೆ ಉಪಾಧ್ಯಕ್ಷರ ಚುನಾವಣೆ ಸಹ ನಡೆಯುತ್ತದೆ. ಆದ್ರೆ, ಈ ಭಾರಿ ಉಪಾಧ್ಯಕ್ಷರ ಚುನಾವಣೆ ನಡೆಯಲಿಲ್ಲ. ಉಪಾಧ್ತಕ್ಷ ಸ್ಥಾನಕ್ಕೆ ಮೈತ್ರಿ ಕಡೆಯಿಂದ ಷಡಕ್ಷರಿ ಹಾಗೂ ಬಿಜೆಪಿ‌ ಕಡೆಯಿಂದ ಅಗಡಿ ಅಶೋಕ್ ನಾಮಪತ್ರ ಸಲ್ಲಿಸಿದ್ದರು. ಕಳೆದ ಐದಿನೈದು ವರ್ಷಗಳಿಂದ ಬ್ಯಾಂಕ್ ನಲ್ಲಿ‌ ಅಧ್ಯಕ್ಷ ಸ್ಥಾನ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧ ಅಯ್ಕೆ ನಡೆದು ಕೊಂಡು ಬಂದಿದೆ.


Conclusion:ಆದ್ರೆ ಕೊನೆಗಳಿಗೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಸಲ್ಲಿಕೆಯಾದ ಎರಡು ನಾಮಪತ್ರಗಳು ವಾಪಸ್ ಪಡೆದ ಕಾರಣ ಚುನಾವಣೆ ನಡೆಯಲಿಲ್ಲ. ಇನ್ನೂಂದು ವಾರದಲ್ಲಿ ಚುನಾವಣೆ ನಡೆಸಲಾಗುತ್ತದೆ.

10ನೇ ಬಾರಿ ಆರ್.ಎಂ.ಮಂಜುನಾಥ್ ಗೌಡ ಅವಿರೋಧ ಆಯ್ಕೆ-

ಬ್ಯಾಂಕ್ ನ ಅಧ್ಯಕ್ಷರಾಗಿ ಆರ್.ಎಂ.ಮಂಜುನಾಥ್ ಗೌಡರವರು ಸತತ ಹತ್ತನೆ ಭಾರಿಗೆ ಅವಿರೋಧವಾಗಿ ಅಧ್ಯಕ್ಷರಾಗಿ‌ ಆಯ್ಕೆಯಾಗಿದ್ದಾರೆ.ಇದು ಬ್ಯಾಂಕ್ ನ ಇತಿಹಾಸದಲ್ಲಿ ದಾಖಲೆಯಾಗಿದೆ. ಅಧ್ಯಕ್ಷರಾಗಿ‌ ಆಯ್ಕೆಯಾಗುತ್ತಲೆ ಮಂಜುನಾಥ್ ಗೌಡರ ಅಭಿಮಾನಿಗಳು ಹಾರ ಹಾಕಿ, ಬೊಕ್ಕೆ ನೀಡಿ ಶಾಲು ಹೊದಿಸಿ‌ ಸನ್ಮಾನ ಮಾಡಿದರು. ಬ್ಯಾಂಕ್ ನ ಸರ್ವತೋಖ ಅಭಿವೃದ್ದಿ ಹಾಗೂ‌ ದಾಖಲೆಯ‌ ಸಾಲ ಸೌಲಭ್ಯ‌ ನೀಡಿದ ಪರಿಣಾಮ ಮತ್ತೊಮ್ಮೆ ಅಧ್ಯಕ್ಷರಾಗಿ ನಿರ್ದೇಶಕರು‌ ಆಯ್ಕೆ ಮಾಡಿದ್ದಾರೆ. ಅವರಿಗೆ ಧನ್ಯವಾದಗಳು ತಿಳಿಸಿದರು. ಮುಂದಿನ ದಿನಗಳಲ್ಲಿ ಬ್ಯಾಂಕ್ ನಿಂದ ರೈತರಿಗೆ ಇನ್ನಷ್ಟು ಸಾಲ ಸೌಲಭ್ಯಗಳನ್ನು ನೀಡಲಾಗುವುದು ಎಂದು‌ ತಿಳಿಸಿದರು.

ಬೈಟ್: ಆರ್.ಎಂ.ಮಂಜುನಾಥ್ ಗೌಡ. ಅಧ್ಯಕ್ಷರು.ಡಿಸಿಸಿ ಬ್ಯಾಂಕ್.

ಕಿರಣ್ ಕುಮಾರ್. ಶಿವಮೊಗ್ಗ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.