ಶಿವಮೊಗ್ಗ: ಸಾಲಬಾಧೆಯಿಂದ ಹೋಟೆಲ್ ಮಾಲೀಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಜೋಗದಲ್ಲಿ ನಡೆದಿದೆ.
ರವಿಕುಮಾರ್ (32) ಹೋಟೆಲ್ ನಡೆಸುತ್ತಿದ್ದ. ಸಾಲಬಾಧೆ ತಾಳಲಾರದೆ ತನ್ನದೇ ಹೋಟೆಲ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಅವಿವಾಹಿತ. ಹೋಟೆಲ್ ಉದ್ಯಮದಲ್ಲಿ ಸಾಕಷ್ಟು ನಷ್ಟ ಅನುಭವಿಸಿದ್ದ ಎನ್ನಲಾಗಿದೆ.
ಸ್ಥಳಕ್ಕೆ ಜೋಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.