ಶಿವಮೊಗ್ಗ: ಶಿವಮೊಗ್ಗದ ಕೋವಿಡ್ ಆಸ್ಪತ್ರೆಯಿಂದ ಯಾರೂ ಪರಾರಿಯಾಗಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ತಮ್ಮ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಸ್ಪಷ್ಟನೆ ನೀಡಿದ ಅವರು, ಪರಾರಿಯಾದ ವ್ಯಕ್ತಿ ಬೇರೆ ಜಿಲ್ಲೆಯಿಂದ ಬಂದವರಾಗಿದ್ದು, ಅವರು ಶೀತ, ಜ್ವರಕ್ಕೆ ಬಂದಿದ್ದರು. ಅವರನ್ನು ಸಹ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದ್ರೆ ಅವರ ವರದಿ ನೆಗೆಟಿವ್ ಬಂದಿದೆ.
ಹಿನ್ನೆಲೆ:
ಶೀತ, ಜ್ವರ ಎಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಚಿಕ್ಕಮಗಳೂರು ಮೂಲದ ವ್ಯಕ್ತಿಯೊಬ್ಬ ದಾಖಲಾಗಿದ್ದು, ಇದ್ದಕ್ಕಿದ್ದಂತೆ ಆಸ್ಪತ್ರೆಯಿಂದ ಕಾಣೆಯಾಗಿದ್ದಾನೆ ಎಂಬ ವಿಚಾರ ಹರಿದಾಡಿತ್ತು. ಆದರೆ ಆತನ ಕೋವಿಡ್ ಟೆಸ್ಟ್ ವರದಿ ನೆಗೆಟಿವ್ ಬಂದಿತ್ತು. ಆದರೂ ಈ ಸುದ್ದಿ ಜನರ ಆತಂಕಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆ ಈ ಕುರಿತು ಜಿಲ್ಲಾಧಿಕಾರಿ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.