ETV Bharat / state

ಸಹ್ಯಾದ್ರಿ ಕಾಲೇಜು ಜಾಗ ಪರಭಾರೆಗೆ ಮುಂದಾದ ಜಿಲ್ಲಾಡಳಿತ: ಹಳೇ ವಿದ್ಯಾರ್ಥಿಗಳಿಂದ ಆಕ್ರೋಶ

author img

By

Published : Apr 27, 2021, 9:56 AM IST

ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ್ದ ಶಿವಮೊಗ್ಗದ ಸಹ್ಯಾದ್ರಿ ಕಾಲೇಜು ಆವರಣವನ್ನು ಪರಭಾರೆ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಇದಕ್ಕೆ ಕಾಲೇಜಿನ ಹಳೇ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

shivamogga
ಸಹ್ಯಾದ್ರಿ ಕಾಲೇಜು ಜಾಗ ಪರಭಾರೆಗೆ ಹಳೆ ವಿದ್ಯಾರ್ಥಿಗಳಿಂದ ಆಕ್ರೋಶ

ಶಿವಮೊಗ್ಗ: ಸ್ವಾತಂತ್ರ್ಯ ಪೂರ್ವದಲ್ಲೇ ಆರಂಭವಾದ ಮಲೆನಾಡಿನ ಮೊದಲ ಕಾಲೇಜು ಶಿವಮೊಗ್ಗದ ಸಹ್ಯಾದ್ರಿ ಕಾಲೇಜು. ಈ ಕಾಲೇಜು ಇದುವರೆಗೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯಾದಾನ ನೀಡಿದೆ. ಜೊತೆಗೆ ನಾಡಿನ ಪ್ರಮುಖ ಕವಿಗಳು, ರಾಜಕಾರಣಿಗಳು ಓದಿದ್ದು ಇದೇ ಕಾಲೇಜಿನಲ್ಲಿ ಎನ್ನುವುದು ಇನ್ನೊಂದು ವಿಶೇಷ. ಆದರೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ್ದ ಸಹ್ಯಾದ್ರಿ ಕಾಲೇಜಿಗೆ ಇದೀಗ ಗಂಡಾಂತರ ಎದುರಾಗಿದೆ. ಸಹ್ಯಾದ್ರಿ ಕಾಲೇಜಿನ ಆವರಣವನ್ನು ಪರಭಾರೆ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಇದು ಸಹ್ಯಾದ್ರಿ ಕಾಲೇಜಿನ ಹಳೇ ವಿದ್ಯಾರ್ಥಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಸಹ್ಯಾದ್ರಿ ಕಾಲೇಜು ಜಾಗ ಪರಭಾರೆಗೆ ಹಳೇ ವಿದ್ಯಾರ್ಥಿಗಳಿಂದ ಆಕ್ರೋಶ

ಜಿಲ್ಲೆಗೆ ಕೇಂದ್ರ ಸರ್ಕಾರದ ಸಾಯ್ ಹಾಗೂ ಖೇಲೋ ಇಂಡಿಯಾ ಯೋಜನೆಯಡಿ ಕ್ರೀಡಾ ಸಂಕೀರ್ಣ ಮಂಜೂರಾತಿಯಾಗಿದೆ. ಹೀಗಾಗಿ ಮಲೆನಾಡಿನಲ್ಲಿ ಮೊದಲ ಬಾರಿಗೆ ಕ್ರೀಡಾ ಗ್ರಾಮ ನಿರ್ಮಾಣವಾಗಲಿದೆ. ಇದರಿಂದ ಮಲೆನಾಡಿನ ಮುಡಿಗೆ ಇನ್ನೊಂದು ಗರಿ ಮೂಡಲಿದೆ. ಆದರೆ ಈ ಕ್ರೀಡಾ ಸಂಕೀರ್ಣವನ್ನು ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಆರಂಭಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಇದು ಕಾಲೇಜಿನ ಹಳೇ ವಿದ್ಯಾರ್ಥಿಗಳನ್ನು ಕೆರಳಿಸಿದೆ. ಸಹ್ಯಾದ್ರಿ ಕಾಲೇಜಿನ ಹೊಸ ಕಟ್ಟಡವನ್ನು ಕ್ರೀಡಾ ಹಾಸ್ಟೆಲ್ ಆಗಿ ಪರಿವರ್ತನೆ ಮಾಡುವುದು ಹಾಗೂ ಸಹ್ಯಾದ್ರಿ ಕಾಲೇಜಿನ ಸ್ಟೇಡಿಯಂಅನ್ನು ಕ್ರೀಡಾ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಜಿಲ್ಲಾಡಳಿತ ತೀರ್ಮಾನಿಸಿದೆ. ಒಂದು ವೇಳೆ ಈ ಯೋಜನೆ ಸಹ್ಯಾದ್ರಿ ಕಾಲೇಜಿನಲ್ಲಿ ಅನುಷ್ಠಾನಗೊಂಡಿದ್ದೇ ಆದಲ್ಲಿ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಿಗೆ ಎಲ್ಲಿಗೆ ಹೋಗಬೇಕು ಎಂಬ ಪ್ರಶ್ನೆಯನ್ನು ಹಳೇ ವಿದ್ಯಾರ್ಥಿಗಳು ಎತ್ತಿದ್ದಾರೆ.

ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿಯೇ ಕ್ರೀಡಾ ಸಂಕೀರ್ಣ ನಿರ್ಮಾಣವಾಗಿದ್ದೇ ಆದಲ್ಲಿ ಸಹ್ಯಾದ್ರಿ ಕಾಲೇಜಿನ ಒಂದು ಭಾಗ ನಿಷೇಧಿತ ಪ್ರದೇಶವಾಗಲಿದೆ. ಆಗ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಿಗೆ ಬೇರೆ ಜಾಗವನ್ನು ಅವಲಂಬಿಸಬೇಕಾಗುತ್ತದೆ. ಇದಕ್ಕೆ ಜಿಲ್ಲಾಡಳಿತ ಸಹ್ಯಾದ್ರಿ ಕಾಲೇಜು ಎದುರಿರುವ ಮ್ಯಾಚ್ ಫ್ಯಾಕ್ಟರಿ ಜಾಗದಲ್ಲಿ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗೆ ಅವಕಾಶ ನೀಡುವುದಾಗಿ ಹೇಳಿದೆ. ಆದರೆ ಕಾಲೇಜಿನ ಹಳೇ ವಿದ್ಯಾರ್ಥಿಗಳು ಸಹ್ಯಾದ್ರಿ ಕಾಲೇಜಿನಲ್ಲಿ ಕ್ರೀಡಾ ಸಂಕೀರ್ಣ ಮಾಡಿದ್ದೇ ಆದಲ್ಲಿ ಕಾಲೇಜಿನ ಅಸ್ತಿತ್ವಕ್ಕೆ ಧಕ್ಕೆ ಬರಲಿದೆ. ಹೀಗಾಗಿ ಉದ್ದೇಶಿತ ಕ್ರೀಡಾ ಸಂಕೀರ್ಣವನ್ನು ಬೇರೆ ಕಡೆಯಲ್ಲಿಯೇ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಮೇ 14ರ ಒಳಗಾಗಿ ಕ್ರೀಡಾ ಸಂಕೀರ್ಣ ಬೇರೆಡೆ ಮಾಡದೇ ಇದ್ದಲ್ಲಿ ಹೋರಾಟ ರೂಪಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಈ ಹಿಂದೆ ಶಿವಮೊಗ್ಗದಲ್ಲಿ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಮುದ್ದಿನಕೊಪ್ಪದ ಬಳಿ ಜಾಗವನ್ನು ಗುರುತಿಸಲಾಗಿತ್ತು. ಆದರೆ ಇದೀಗ ಏಕಾಏಕಿ ಸಹ್ಯಾದ್ರಿ ಕಾಲೇಜಿನಲ್ಲೇ ಕ್ರೀಡಾ ಸಂಕೀರ್ಣ ನಿರ್ಮಾಣ ಮಾಡಲು ಜಿಲ್ಲಾಡಳಿತ ಮುಂದಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣದಿಂದಾಗಿ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಶಿವಮೊಗ್ಗ: ಸ್ವಾತಂತ್ರ್ಯ ಪೂರ್ವದಲ್ಲೇ ಆರಂಭವಾದ ಮಲೆನಾಡಿನ ಮೊದಲ ಕಾಲೇಜು ಶಿವಮೊಗ್ಗದ ಸಹ್ಯಾದ್ರಿ ಕಾಲೇಜು. ಈ ಕಾಲೇಜು ಇದುವರೆಗೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯಾದಾನ ನೀಡಿದೆ. ಜೊತೆಗೆ ನಾಡಿನ ಪ್ರಮುಖ ಕವಿಗಳು, ರಾಜಕಾರಣಿಗಳು ಓದಿದ್ದು ಇದೇ ಕಾಲೇಜಿನಲ್ಲಿ ಎನ್ನುವುದು ಇನ್ನೊಂದು ವಿಶೇಷ. ಆದರೆ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ್ದ ಸಹ್ಯಾದ್ರಿ ಕಾಲೇಜಿಗೆ ಇದೀಗ ಗಂಡಾಂತರ ಎದುರಾಗಿದೆ. ಸಹ್ಯಾದ್ರಿ ಕಾಲೇಜಿನ ಆವರಣವನ್ನು ಪರಭಾರೆ ಮಾಡಲು ಜಿಲ್ಲಾಡಳಿತ ಮುಂದಾಗಿದೆ. ಇದು ಸಹ್ಯಾದ್ರಿ ಕಾಲೇಜಿನ ಹಳೇ ವಿದ್ಯಾರ್ಥಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಸಹ್ಯಾದ್ರಿ ಕಾಲೇಜು ಜಾಗ ಪರಭಾರೆಗೆ ಹಳೇ ವಿದ್ಯಾರ್ಥಿಗಳಿಂದ ಆಕ್ರೋಶ

ಜಿಲ್ಲೆಗೆ ಕೇಂದ್ರ ಸರ್ಕಾರದ ಸಾಯ್ ಹಾಗೂ ಖೇಲೋ ಇಂಡಿಯಾ ಯೋಜನೆಯಡಿ ಕ್ರೀಡಾ ಸಂಕೀರ್ಣ ಮಂಜೂರಾತಿಯಾಗಿದೆ. ಹೀಗಾಗಿ ಮಲೆನಾಡಿನಲ್ಲಿ ಮೊದಲ ಬಾರಿಗೆ ಕ್ರೀಡಾ ಗ್ರಾಮ ನಿರ್ಮಾಣವಾಗಲಿದೆ. ಇದರಿಂದ ಮಲೆನಾಡಿನ ಮುಡಿಗೆ ಇನ್ನೊಂದು ಗರಿ ಮೂಡಲಿದೆ. ಆದರೆ ಈ ಕ್ರೀಡಾ ಸಂಕೀರ್ಣವನ್ನು ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಆರಂಭಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಇದು ಕಾಲೇಜಿನ ಹಳೇ ವಿದ್ಯಾರ್ಥಿಗಳನ್ನು ಕೆರಳಿಸಿದೆ. ಸಹ್ಯಾದ್ರಿ ಕಾಲೇಜಿನ ಹೊಸ ಕಟ್ಟಡವನ್ನು ಕ್ರೀಡಾ ಹಾಸ್ಟೆಲ್ ಆಗಿ ಪರಿವರ್ತನೆ ಮಾಡುವುದು ಹಾಗೂ ಸಹ್ಯಾದ್ರಿ ಕಾಲೇಜಿನ ಸ್ಟೇಡಿಯಂಅನ್ನು ಕ್ರೀಡಾ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಜಿಲ್ಲಾಡಳಿತ ತೀರ್ಮಾನಿಸಿದೆ. ಒಂದು ವೇಳೆ ಈ ಯೋಜನೆ ಸಹ್ಯಾದ್ರಿ ಕಾಲೇಜಿನಲ್ಲಿ ಅನುಷ್ಠಾನಗೊಂಡಿದ್ದೇ ಆದಲ್ಲಿ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಿಗೆ ಎಲ್ಲಿಗೆ ಹೋಗಬೇಕು ಎಂಬ ಪ್ರಶ್ನೆಯನ್ನು ಹಳೇ ವಿದ್ಯಾರ್ಥಿಗಳು ಎತ್ತಿದ್ದಾರೆ.

ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿಯೇ ಕ್ರೀಡಾ ಸಂಕೀರ್ಣ ನಿರ್ಮಾಣವಾಗಿದ್ದೇ ಆದಲ್ಲಿ ಸಹ್ಯಾದ್ರಿ ಕಾಲೇಜಿನ ಒಂದು ಭಾಗ ನಿಷೇಧಿತ ಪ್ರದೇಶವಾಗಲಿದೆ. ಆಗ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಿಗೆ ಬೇರೆ ಜಾಗವನ್ನು ಅವಲಂಬಿಸಬೇಕಾಗುತ್ತದೆ. ಇದಕ್ಕೆ ಜಿಲ್ಲಾಡಳಿತ ಸಹ್ಯಾದ್ರಿ ಕಾಲೇಜು ಎದುರಿರುವ ಮ್ಯಾಚ್ ಫ್ಯಾಕ್ಟರಿ ಜಾಗದಲ್ಲಿ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗೆ ಅವಕಾಶ ನೀಡುವುದಾಗಿ ಹೇಳಿದೆ. ಆದರೆ ಕಾಲೇಜಿನ ಹಳೇ ವಿದ್ಯಾರ್ಥಿಗಳು ಸಹ್ಯಾದ್ರಿ ಕಾಲೇಜಿನಲ್ಲಿ ಕ್ರೀಡಾ ಸಂಕೀರ್ಣ ಮಾಡಿದ್ದೇ ಆದಲ್ಲಿ ಕಾಲೇಜಿನ ಅಸ್ತಿತ್ವಕ್ಕೆ ಧಕ್ಕೆ ಬರಲಿದೆ. ಹೀಗಾಗಿ ಉದ್ದೇಶಿತ ಕ್ರೀಡಾ ಸಂಕೀರ್ಣವನ್ನು ಬೇರೆ ಕಡೆಯಲ್ಲಿಯೇ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಮೇ 14ರ ಒಳಗಾಗಿ ಕ್ರೀಡಾ ಸಂಕೀರ್ಣ ಬೇರೆಡೆ ಮಾಡದೇ ಇದ್ದಲ್ಲಿ ಹೋರಾಟ ರೂಪಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಈ ಹಿಂದೆ ಶಿವಮೊಗ್ಗದಲ್ಲಿ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಮುದ್ದಿನಕೊಪ್ಪದ ಬಳಿ ಜಾಗವನ್ನು ಗುರುತಿಸಲಾಗಿತ್ತು. ಆದರೆ ಇದೀಗ ಏಕಾಏಕಿ ಸಹ್ಯಾದ್ರಿ ಕಾಲೇಜಿನಲ್ಲೇ ಕ್ರೀಡಾ ಸಂಕೀರ್ಣ ನಿರ್ಮಾಣ ಮಾಡಲು ಜಿಲ್ಲಾಡಳಿತ ಮುಂದಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದೇ ಕಾರಣದಿಂದಾಗಿ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.