ETV Bharat / state

ಮಳೆಯಿಂದಾದ ನಷ್ಟ ಅಂದಾಜಿಸುವ ಕಾರ್ಯ ನಡೆಯುತ್ತಿದೆ: ಜಿಲ್ಲಾಧಿಕಾರಿ

author img

By

Published : Oct 24, 2019, 11:22 AM IST

ಮಳೆಯಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಉಂಟಾದ ನಷ್ಟ ಅಂದಾಜಿಸುವ ಕಾರ್ಯವನ್ನು ಜಿಲ್ಲಾಡಳಿತ ನಡೆಸುತ್ತಿದೆ ಎಂದು ಜಿಲ್ಲಾಧಿಕಾರಿ ಶಿವಕುಮಾರ್ ಈಟಿವಿ ಭಾರತ್​ಗೆ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಶಿವಕುಮಾರ್

ಶಿವಮೊಗ್ಗ: ಮಲೆನಾಡಲ್ಲೂ ಹಿಂಗಾರು ಮಳೆ ತನ್ನ ಪ್ರತಾಪ ತೋರಿಸುತ್ತಿದೆ. ಕಳೆದೊಂದು ವಾರದಿಂದ ಜಿಲ್ಲೆಯ ಅಲ್ಲಲ್ಲಿ ಭಾರಿ ಮಳೆಯಾಗುತ್ತಿದ್ದು, ವಾಡಿಕೆ ಪ್ರಮಾಣಕ್ಕಿಂತ ಹೆಚ್ಚಾಗಿದೆ. ಇದ್ರಿಂದ ಉಂಟಾಗಿರುವ ನಷ್ಟ ಅಂದಾಜಿಸುವ ಕಾರ್ಯವನ್ನು ಜಿಲ್ಲಾಡಳಿತ ನಡೆಸುತ್ತಿದೆ ಎಂದು ಜಿಲ್ಲಾಧಿಕಾರಿ ಶಿವಕುಮಾರ್ ಈಟಿವಿ ಭಾರತ್​ಗೆ ತಿಳಿಸಿದ್ದಾರೆ.

ಮಳೆಯು ಜಿಲ್ಲೆಯ ಕೆಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಾಗೂ ನಗರ ವ್ಯಾಪ್ತಿಯಲ್ಲಿರುವ ಕೆಲ ವಾರ್ಡ್​ಗಳಲ್ಲಿ ಭಾರಿ ಮಳೆ ಸುರಿದಿದೆ. ಇದ್ರಿಂದ ರಸ್ತೆ, ಮನೆಗಳಿಗೆ ಹಾನಿಯಾಗಿದೆ. ವಾಡಿಕೆಗಿಂತ ಹೆಚ್ಚು ಮಳೆಯಾಗ್ತಿರೋದ್ರಿಂದ ಜನಜೀವನಕ್ಕೆ ಸ್ವಲ್ಪ ಪ್ರಮಾಣದಲ್ಲಿ ಅಡಚಣೆಯಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಕಾರ್ಯಪ್ರವೃತ್ತವಾಗಿದೆ ಎಂದರು.

ಜಿಲ್ಲಾಧಿಕಾರಿ ಶಿವಕುಮಾರ್

ಮಳೆಯಿಂದ ಹಾನಿಗೆ ಒಳಗಾದ ಕುರಿತ ವಿವರ:
ಜಿಲ್ಲೆಯಾದ್ಯಂತ ಮಳೆಯಿಂದ 390 ಮನೆಗಳಿಗೆ ಹಾನಿಯಾಗಿದೆ. ಇದರಲ್ಲಿ 35 ಮನೆಗಳಿಗೆ ತೀವ್ರ ಸ್ವರೂಪದ ತೊಂದರೆಯಾಗಿದೆ. ಮನೆ ಹಾನಿ ಕುರಿತಂತೆ ಕಂದಾಯ ಇಲಾಖೆ ಸರ್ವೆ ನಡೆಸುತ್ತಿದೆ. ಜಿಲ್ಲೆಯಲ್ಲಿ 38 ಕೆರೆಗಳು ಕೋಡಿಯೊಡೆಯುವ ಭೀತಿಯಲ್ಲಿವೆ. ಜನರಜೀವಕ್ಕೆ ಹಾನಿಯಾಗದಂತೆ ನೋಡಿಕೊಳ್ಳುವ ಕುರಿತು ಪಿಡಿಒಗಳಿಗೆ ಸೂಚನೆ ನೀಡಲಾಗಿದೆ. ಸದ್ಯ ಜಿಲ್ಲೆಯಲ್ಲಿ 644 ಹೆಕ್ಟೆರ್ ಕೃಷಿ ಭೂಮಿಯಲ್ಲಿ ನೀರು‌ ನಿಂತಿದೆ. ಹೀಗಾಗಿ ಸದ್ಯಕ್ಕೆ ಯಾವುದೇ ಸಮಸ್ಯೆಗಳಿಲ್ಲ. ನೀರು ಹರಿದು ಹೋಗದೇ ಇದ್ದರೆ ಬೆಳೆಗೆ ಹಾನಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಶಿವಕುಮಾರ್ ತಿಳಿಸಿದ್ದಾರೆ.

ಇನ್ನು ಜಿಲ್ಲೆಯಲ್ಲಿ ನಾಲ್ಕು ದಿನ ನಿರಂತರ ಮಳೆಯಾಗುವ ವರದಿ ಇರುವುದರಿಂದ ಜಿಲ್ಲಾಡಳಿತ‌ ಸಕಲ ರೀತಿಯಲ್ಲೂ ಸನ್ನದ್ದವಾಗಿದೆ. ಮಳೆಯಿಂದ ಮನೆ ಬೀಳುವ ಸ್ಥಿತಿಯಲ್ಲಿದ್ದರೆ, ತಕ್ಷಣ ಜನ ಅದೇ ಮನೆಯಲ್ಲಿ ವಾಸಿಸದೆ ಸಮೀಪದ ಶಾಲೆ, ದೇವಾಲಯ, ಸಮುದಾಯ ಭವನ ಹೀಗೆ ಬೇರೆಡೆ ಹೋಗಿ ಆಶ್ರಯ ಪಡೆದುಕೊಳ್ಳಬೇಕು ಎಂದು ಸಾರ್ವಜನಿಕರಿಗೆ ವಿನಂತಿಸಿ ಕೊಂಡಿದ್ದಾರೆ.

ಶಿವಮೊಗ್ಗ: ಮಲೆನಾಡಲ್ಲೂ ಹಿಂಗಾರು ಮಳೆ ತನ್ನ ಪ್ರತಾಪ ತೋರಿಸುತ್ತಿದೆ. ಕಳೆದೊಂದು ವಾರದಿಂದ ಜಿಲ್ಲೆಯ ಅಲ್ಲಲ್ಲಿ ಭಾರಿ ಮಳೆಯಾಗುತ್ತಿದ್ದು, ವಾಡಿಕೆ ಪ್ರಮಾಣಕ್ಕಿಂತ ಹೆಚ್ಚಾಗಿದೆ. ಇದ್ರಿಂದ ಉಂಟಾಗಿರುವ ನಷ್ಟ ಅಂದಾಜಿಸುವ ಕಾರ್ಯವನ್ನು ಜಿಲ್ಲಾಡಳಿತ ನಡೆಸುತ್ತಿದೆ ಎಂದು ಜಿಲ್ಲಾಧಿಕಾರಿ ಶಿವಕುಮಾರ್ ಈಟಿವಿ ಭಾರತ್​ಗೆ ತಿಳಿಸಿದ್ದಾರೆ.

ಮಳೆಯು ಜಿಲ್ಲೆಯ ಕೆಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಾಗೂ ನಗರ ವ್ಯಾಪ್ತಿಯಲ್ಲಿರುವ ಕೆಲ ವಾರ್ಡ್​ಗಳಲ್ಲಿ ಭಾರಿ ಮಳೆ ಸುರಿದಿದೆ. ಇದ್ರಿಂದ ರಸ್ತೆ, ಮನೆಗಳಿಗೆ ಹಾನಿಯಾಗಿದೆ. ವಾಡಿಕೆಗಿಂತ ಹೆಚ್ಚು ಮಳೆಯಾಗ್ತಿರೋದ್ರಿಂದ ಜನಜೀವನಕ್ಕೆ ಸ್ವಲ್ಪ ಪ್ರಮಾಣದಲ್ಲಿ ಅಡಚಣೆಯಾಗಿದೆ. ಈ ಬಗ್ಗೆ ಜಿಲ್ಲಾಡಳಿತ ಕಾರ್ಯಪ್ರವೃತ್ತವಾಗಿದೆ ಎಂದರು.

ಜಿಲ್ಲಾಧಿಕಾರಿ ಶಿವಕುಮಾರ್

ಮಳೆಯಿಂದ ಹಾನಿಗೆ ಒಳಗಾದ ಕುರಿತ ವಿವರ:
ಜಿಲ್ಲೆಯಾದ್ಯಂತ ಮಳೆಯಿಂದ 390 ಮನೆಗಳಿಗೆ ಹಾನಿಯಾಗಿದೆ. ಇದರಲ್ಲಿ 35 ಮನೆಗಳಿಗೆ ತೀವ್ರ ಸ್ವರೂಪದ ತೊಂದರೆಯಾಗಿದೆ. ಮನೆ ಹಾನಿ ಕುರಿತಂತೆ ಕಂದಾಯ ಇಲಾಖೆ ಸರ್ವೆ ನಡೆಸುತ್ತಿದೆ. ಜಿಲ್ಲೆಯಲ್ಲಿ 38 ಕೆರೆಗಳು ಕೋಡಿಯೊಡೆಯುವ ಭೀತಿಯಲ್ಲಿವೆ. ಜನರಜೀವಕ್ಕೆ ಹಾನಿಯಾಗದಂತೆ ನೋಡಿಕೊಳ್ಳುವ ಕುರಿತು ಪಿಡಿಒಗಳಿಗೆ ಸೂಚನೆ ನೀಡಲಾಗಿದೆ. ಸದ್ಯ ಜಿಲ್ಲೆಯಲ್ಲಿ 644 ಹೆಕ್ಟೆರ್ ಕೃಷಿ ಭೂಮಿಯಲ್ಲಿ ನೀರು‌ ನಿಂತಿದೆ. ಹೀಗಾಗಿ ಸದ್ಯಕ್ಕೆ ಯಾವುದೇ ಸಮಸ್ಯೆಗಳಿಲ್ಲ. ನೀರು ಹರಿದು ಹೋಗದೇ ಇದ್ದರೆ ಬೆಳೆಗೆ ಹಾನಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಶಿವಕುಮಾರ್ ತಿಳಿಸಿದ್ದಾರೆ.

ಇನ್ನು ಜಿಲ್ಲೆಯಲ್ಲಿ ನಾಲ್ಕು ದಿನ ನಿರಂತರ ಮಳೆಯಾಗುವ ವರದಿ ಇರುವುದರಿಂದ ಜಿಲ್ಲಾಡಳಿತ‌ ಸಕಲ ರೀತಿಯಲ್ಲೂ ಸನ್ನದ್ದವಾಗಿದೆ. ಮಳೆಯಿಂದ ಮನೆ ಬೀಳುವ ಸ್ಥಿತಿಯಲ್ಲಿದ್ದರೆ, ತಕ್ಷಣ ಜನ ಅದೇ ಮನೆಯಲ್ಲಿ ವಾಸಿಸದೆ ಸಮೀಪದ ಶಾಲೆ, ದೇವಾಲಯ, ಸಮುದಾಯ ಭವನ ಹೀಗೆ ಬೇರೆಡೆ ಹೋಗಿ ಆಶ್ರಯ ಪಡೆದುಕೊಳ್ಳಬೇಕು ಎಂದು ಸಾರ್ವಜನಿಕರಿಗೆ ವಿನಂತಿಸಿ ಕೊಂಡಿದ್ದಾರೆ.

Intro:ಮಲೆನಾಡಲ್ಲೂ ಹಿಂಗಾರು ಮಳೆ ತನ್ನ ಪ್ರತಾಪವನ್ನು ತೋರಿಸುತ್ತಿದೆ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಅಲ್ಲಲ್ಲಿ ಭಾರಿ ಮಳೆಯಾಗಿದೆ. ಮಳೆಯು ವಾಡಿಕೆ ಪ್ರಮಾಣಕ್ಕಿಂತ ಹೆಚ್ಚಾಗಿ ಆಗಿದೆ.‌ ಇದರಿಂದ ಉಂಟಾಗಿರುವ ನಷ್ಟವನ್ನು ಅಂದಾಜಿಸುವ ಕಾರ್ಯವನ್ನು ಜಿಲ್ಲಾಡಳಿತ ನಡೆಸುತ್ತಿದೆ ಎಂದು ಜಿಲ್ಲಾಧಿಕಾರಿ ಶಿವಕುಮಾರ್ ಈ ಟಿವಿ ಭಾರತ್ ಗೆ ತಿಳಿಸಿದ್ದಾರೆ.
ಮಳೆಯು ಜಿಲ್ಲೆಯ ಕೆಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಹಾಗೂ ನಗರ ವ್ಯಾಪ್ತಿಯಲ್ಲಿ ಕೆಲ ವಾರ್ಡ್ ಗಳಲ್ಲಿ ಭಾರಿ ಮಳೆ ಸುರಿದಿದೆ. ಇದರಿಂದ ರಸ್ತೆ, ಮನೆಗಳಿಗೆ ಹಾನಿಯಾಗಿದೆ. ವಾಡಿಕೆಕ್ಕಿಂತ ಹೆಚ್ಚು ಮಳೆಯಾಗುತ್ತಿರುವುದರಿಂದ ಜನ ಜೀವನಕ್ಕೆ ಸ್ವಲ್ಪ ಪ್ರಮಾಣದಲ್ಲಿ ಅಡಚಣೆಯಾಗಿದೆ. ಇದನ್ನು ನಿವಾರಿಸಲು ಜಿಲ್ಲಾಡಳಿತ ಕಾರ್ಯ ಪ್ರವೃತ್ತವಾಗಿದೆ.


Body:ಮಳೆಯಿಂದ ಹಾನಿಗೆ ಒಳಗಾದ ಕುರಿತ ವಿವರ-

ಕಳೆದ ಒಂದು ವಾರದಿಂದ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ಎರಡು ಜಾನುವಾರುಗಳು ಪ್ರಾಣ ಕಳೆದುಕೊಂಡಿವೆ ಅಲ್ಲದೆ ಓರ್ವ ಸಾವನ್ನಪ್ಪಿದ್ದಾರೆ. ಜಾನುವಾರು ಮಾಲೀಕರಿಗೆ ಹಾಗೂ ಮೃತ ಪಟ್ಟ ಕುಟುಂಬಸ್ಥರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ತೆಗೆದು ಕೊಳ್ಳಲಾಗುತ್ತಿದೆ. ಮಳೆಯಿಂದ ಜಿಲ್ಲೆಯಲ್ಲಿ 390 ಮನೆಗಳಿಗೆ ಹಾನಿಯಾಗಿವೆ. ಇದರಲ್ಲಿ 35 ಮನೆಗಳು ಸಂಪೂರ್ಣ ಹಾನಿಗೆ ಒಳಗಾಗಿವೆ. ಮನೆ ಹಾನಿಯಾದ ಕುರಿತ ಕಂದಾಯ ಇಲಾಖೆ ಸರ್ವೆ ನಡೆಸುತ್ತಿದೆ. ಇವರಿಗೆ ಅದಷ್ಟು ಬೇಗ ಪರಿಹಾರ ಒದಗಿಸಲಾಗುವುದು. ಜಿಲ್ಲೆಯಲ್ಲಿ 38 ಕೆರೆಗಳು ಕೋಡಿ ಹೊಡೆಯುವ ಭೀತಿಯಲ್ಲಿವೆ. ಕೆರೆ ಕೋಡಿ ಹೊಡೆದರೆ ಜನ ಜೀವನಕ್ಕೆ ಹಾನಿಯಾಗದಂತೆ ನೋಡಿ ಕೊಳ್ಳುವ ಕುರಿತು ಪಿಡಿಒಗಳಿಗೆ ಸೂಚನೆ ನೀಡಲಾಗಿದೆ. ಸದ್ಯ ಜಿಲ್ಲೆಯಲ್ಲಿ 644 ಹೆಕ್ಟರ್ ಕೃಷಿ ಭೂಮಿಯಲ್ಲಿ ನೀರು‌ ನಿಂತಿದೆ. ನೀರು ನಿಂತಿರುವುದರಿಂದ ಸದ್ಯಕ್ಕೆ ಯಾವುದೇ ಸಮಸ್ಯೆಗಳಿಲ್ಲ. ನೀರು ಹರಿದು ಹೋಗದೆ ಇದ್ದರೆ ಬೆಳೆ ಹಾನಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಶಿವಕುಮಾರ್ ತಿಳಿಸಿದ್ದಾರೆ.


Conclusion:ಜಿಲ್ಲಾಡಳಿತದಿಂದ ಮುಂಜಾಗ್ರತ ಕ್ರಮ-

ಜಿಲ್ಲೆಯಲ್ಲಿ ಇನ್ನೂ ಮೂರನಾಲ್ಕು ದಿನ ತುಂಬ ಮಳೆಯಾಗುವ ವರದಿ ಇರುವುದರಿಂದ ಜಿಲ್ಲಾಡಳಿತ‌ ಸಕಲ ಸನ್ನದವಾಗಿದೆ. ಮಳೆಯಿಂದ ಮನೆ ಬಿಳುವ ಸ್ಥಿತಿಯಲ್ಲಿದ್ದರೆ, ತಕ್ಷಣ ಜನ ಅದೇ ಮನೆಯಲ್ಲಿ ಇರದೆ ಸಮೀಪದ ಶಾಲೆ, ದೇವಾಲಯ, ಸಮುದಾಯ ಭವನ ಹೀಗೆ ಬೇರೆ ಕಡೆ ಹೋಗಿ ಆಶ್ರಯ ಪಡೆದು ಕೊಳ್ಳಬೇಕು ಎಂದು ಸಾರ್ವಜನಿಕರಿಗೆ ಡಿಸಿ ವಿನಂತಿಸಿ ಕೊಂಡಿದ್ದಾರೆ. ಜಿಲ್ಲಾಡಳಿತದಿಂದ ಮಳೆ ಬಂದರೆ ಮುಂಜಾಗ್ರತ ಕ್ರಮವಾಗಿ 7 ಬೋಟ್ ತಯಾರು ಮಾಡಲಾಗಿದೆ. ಅಲ್ಲದೆ, ಅಗ್ನಿ ಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆ ಸಕಲ ಸನ್ನದರಾಗಿದ್ದಾರೆ. ಸರ್ಕಾರದಿಂದ ಜಿಲ್ಲಾಡಳಿತಕ್ಕೆ ಹಣ ಬಂದಿದೆ. ಸದ್ಯಕ್ಕಂತೂ ಹಣದ ಕೊರತೆ ಇಲ್ಲ ಎಂದು ಡಿಸಿ ಶಿವಕುಮಾರ್ ತಿಳಿಸಿದ್ದಾರೆ.

ಬೈಟ್: ಶಿವಕುಮಾರ್. ಡಿಸಿ.

ಬೈಟ್: ಶಿವಕುಮಾರ್. ಡಿಸಿ.

(ಹಾನಿಗೊಳಗಾದ ವಿಡಿಯೋ wrap ನಲ್ಲಿ ಬಂದಿದೆ)
ETV Bharat Logo

Copyright © 2024 Ushodaya Enterprises Pvt. Ltd., All Rights Reserved.