ETV Bharat / state

ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ತಿರುಕನ ಕನಸು ಕಾಣುತ್ತಿದ್ದಾರೆ: ಕೆ.ಎಸ್.ಈಶ್ವರಪ್ಪ ಲೇವಡಿ - undefined

ತಾನು ಮತ್ತೆ ಸಿಎಂ ಆಗಬೇಕು ಅಂತಾ ಸಿದ್ದರಾಮಯ್ಯನವರೇ ಅವರ ಚೇಲಾಗಳಿಂದ ಹೇಳಿಸುತ್ತಿದ್ದಾರೆ ಎಂದು ಬಿಜೆಪಿ‌ ಶಾಸಕ ಕೆ ಎಸ್‌ ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ತಿರುಕನ ಕನಸು ಕಾಣುತ್ತಿದ್ದಾರೆ ಎಂದ ಕೆ.ಎಸ್.ಈಶ್ವರಪ್ಪ
author img

By

Published : May 11, 2019, 1:14 PM IST

ಶಿವಮೊಗ್ಗ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್‌ ಈಶ್ವರಪ್ಪನವರು, ಕಾಂಗ್ರೆಸ್‌ನವರು ಜೆಡಿಎಸ್​ಗೆ ಬೇಷರತ್ ಬೆಂಬಲ ನೀಡುತ್ತೇವೆ ಎಂದು ಹೇಳಿ ಈಗ ಪ್ರತೀ ದಿನ ಷರತ್ತು ಹಾಕುತ್ತಿದ್ದಾರೆ ಎಂದು ಕಾಲೆಳೆದರು.

ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ತಿರುಕನ ಕನಸು ಕಾಣುತ್ತಿದ್ದಾರೆ- ಈಶ್ವರಪ್ಪ

ಸಿದ್ದರಾಮಯ್ಯ ಮತ್ತೆ ಸಿಎಂ ಖುರ್ಚಿಗೆ ಟವಲ್ ಹಾಕುತ್ತಿದ್ದು, ನಾವೇನೂ ಕಮ್ಮಿ ಅಂತಾ ಡಿ.ಕೆ.ಶಿವಕುಮಾರ್, ಪರಮೇಶ್ವರ್, ಎಂ.ಬಿ.ಪಾಟೀಲ್ ಸಹ ಟವಲ್ ಹಾಕುತ್ತಿದ್ದಾರೆ ಎಂದಿದ್ದಾರೆ. ಅಲ್ಲದೆ ಸಿದ್ದರಾಮಯ್ಯ ಚೇಲಾಗಳಾದ ಡಾ.ಸುಧಾಕರ್, ಪರಮೇಶ್ವರ್ ನಾಯ್ಕ್‌, ಬೈರತಿ ಬಸವರಾಜ, ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂದು ಎಲ್ಲಾ ಕಡೆ ಹೇಳುತ್ತಾ ಬರುತ್ತಿದ್ದಾರೆ. ಆದರೆ, ಇವರುಗಳ ಬಾಯಲ್ಲಿ ಹೇಳಿಸುತ್ತಿರುವುದು ಸಿದ್ದರಾಮಯ್ಯನವರೆ ಎಂದು ಆರೋಪಿಸಿದ್ದಾರೆ.

ಸಮ್ಮಿಶ್ರ ಸರ್ಕಾರವನ್ನು ಅತಂತ್ರ ಮಾಡುವ ಯತ್ನವನ್ನು ಕಾಂಗ್ರೆಸ್‌ನವರೇ ಮಾಡುತ್ತಿದ್ದಾರೆ. ಕಾಂಗ್ರೆಸ್​ನಲ್ಲಿ‌ ಎರಡು ಗುಂಪುಗಳು ನೇರವಾಗಿ ಹೊಡೆದಾಟ ಮಾಡಿ ಕೊಳ್ಳುತ್ತಿವೆ. 23ಕ್ಕೆ ಲೋಕಸಭಾ ಚುನಾವಣೆ ಫಲಿತಾಂಶ ಬಂದ ನಂತರ ಕಾಂಗ್ರೆಸ್​ನ ಬಡಿದಾಟ ಸ್ಟೋಟಗೊಳ್ಳುತ್ತದೆ ಎಂದರು.

ಸರ್ಕಾರ ಬಂದಾಗಿನಿಂದ ಕೈ ಪಕ್ಷದಲ್ಲಿ ಆಂತರಿಕ ಗೊಂದಲ ಮುಂದುವರೆದಿದೆ. ಬಿಎಸ್​ವೈ ಸಿಎಂ ಆಗುವ ಹಗಲುಗನಸು ಕಾಣುತ್ತಿದ್ದು, ಇದಕ್ಕಾಗಿ ಆಪರೇಷನ್ ಕಮಲ ಮಾಮಾಡುತ್ತಿದ್ದಾರೆ ಅಂತಾ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಿಮಗೆ ಮಾನ ಮರ್ಯಾದೆ ಇದ್ದರೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಚೇಲಾಗಳಿಂದ ಹೇಳಿಸುತ್ತಿರುವ ಸಿದ್ದರಾಮಯ್ಯ ಹಾಗೂ ಅವರ ಚೇಲಾಗಳನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಕಾಂಗ್ರೆಸ್​ನಲ್ಲಿ ಸ್ವಲ್ಪ ಶಿಸ್ತು ಉಳಿದಿದೆ ಎಂದು ತೋರಿಸಲಿ ಎಂದರು.

ಎರಡು ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ, ಇಬ್ಬರೂ ಪಕ್ಷೇತರರು ನಮ್ಮೂಂದಿಗಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುತ್ತಾರೆ. ಆಗ ನಾವು‌ ಸರ್ಕಾರ ರಚನೆ ಮಾಡುತ್ತೇವೆ, ಯಡಿಯೂರಪ್ಪ ಸಿಎಂ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಿವಮೊಗ್ಗ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್‌ ಈಶ್ವರಪ್ಪನವರು, ಕಾಂಗ್ರೆಸ್‌ನವರು ಜೆಡಿಎಸ್​ಗೆ ಬೇಷರತ್ ಬೆಂಬಲ ನೀಡುತ್ತೇವೆ ಎಂದು ಹೇಳಿ ಈಗ ಪ್ರತೀ ದಿನ ಷರತ್ತು ಹಾಕುತ್ತಿದ್ದಾರೆ ಎಂದು ಕಾಲೆಳೆದರು.

ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ತಿರುಕನ ಕನಸು ಕಾಣುತ್ತಿದ್ದಾರೆ- ಈಶ್ವರಪ್ಪ

ಸಿದ್ದರಾಮಯ್ಯ ಮತ್ತೆ ಸಿಎಂ ಖುರ್ಚಿಗೆ ಟವಲ್ ಹಾಕುತ್ತಿದ್ದು, ನಾವೇನೂ ಕಮ್ಮಿ ಅಂತಾ ಡಿ.ಕೆ.ಶಿವಕುಮಾರ್, ಪರಮೇಶ್ವರ್, ಎಂ.ಬಿ.ಪಾಟೀಲ್ ಸಹ ಟವಲ್ ಹಾಕುತ್ತಿದ್ದಾರೆ ಎಂದಿದ್ದಾರೆ. ಅಲ್ಲದೆ ಸಿದ್ದರಾಮಯ್ಯ ಚೇಲಾಗಳಾದ ಡಾ.ಸುಧಾಕರ್, ಪರಮೇಶ್ವರ್ ನಾಯ್ಕ್‌, ಬೈರತಿ ಬಸವರಾಜ, ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂದು ಎಲ್ಲಾ ಕಡೆ ಹೇಳುತ್ತಾ ಬರುತ್ತಿದ್ದಾರೆ. ಆದರೆ, ಇವರುಗಳ ಬಾಯಲ್ಲಿ ಹೇಳಿಸುತ್ತಿರುವುದು ಸಿದ್ದರಾಮಯ್ಯನವರೆ ಎಂದು ಆರೋಪಿಸಿದ್ದಾರೆ.

ಸಮ್ಮಿಶ್ರ ಸರ್ಕಾರವನ್ನು ಅತಂತ್ರ ಮಾಡುವ ಯತ್ನವನ್ನು ಕಾಂಗ್ರೆಸ್‌ನವರೇ ಮಾಡುತ್ತಿದ್ದಾರೆ. ಕಾಂಗ್ರೆಸ್​ನಲ್ಲಿ‌ ಎರಡು ಗುಂಪುಗಳು ನೇರವಾಗಿ ಹೊಡೆದಾಟ ಮಾಡಿ ಕೊಳ್ಳುತ್ತಿವೆ. 23ಕ್ಕೆ ಲೋಕಸಭಾ ಚುನಾವಣೆ ಫಲಿತಾಂಶ ಬಂದ ನಂತರ ಕಾಂಗ್ರೆಸ್​ನ ಬಡಿದಾಟ ಸ್ಟೋಟಗೊಳ್ಳುತ್ತದೆ ಎಂದರು.

ಸರ್ಕಾರ ಬಂದಾಗಿನಿಂದ ಕೈ ಪಕ್ಷದಲ್ಲಿ ಆಂತರಿಕ ಗೊಂದಲ ಮುಂದುವರೆದಿದೆ. ಬಿಎಸ್​ವೈ ಸಿಎಂ ಆಗುವ ಹಗಲುಗನಸು ಕಾಣುತ್ತಿದ್ದು, ಇದಕ್ಕಾಗಿ ಆಪರೇಷನ್ ಕಮಲ ಮಾಮಾಡುತ್ತಿದ್ದಾರೆ ಅಂತಾ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಿಮಗೆ ಮಾನ ಮರ್ಯಾದೆ ಇದ್ದರೆ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ಚೇಲಾಗಳಿಂದ ಹೇಳಿಸುತ್ತಿರುವ ಸಿದ್ದರಾಮಯ್ಯ ಹಾಗೂ ಅವರ ಚೇಲಾಗಳನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಕಾಂಗ್ರೆಸ್​ನಲ್ಲಿ ಸ್ವಲ್ಪ ಶಿಸ್ತು ಉಳಿದಿದೆ ಎಂದು ತೋರಿಸಲಿ ಎಂದರು.

ಎರಡು ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ, ಇಬ್ಬರೂ ಪಕ್ಷೇತರರು ನಮ್ಮೂಂದಿಗಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುತ್ತಾರೆ. ಆಗ ನಾವು‌ ಸರ್ಕಾರ ರಚನೆ ಮಾಡುತ್ತೇವೆ, ಯಡಿಯೂರಪ್ಪ ಸಿಎಂ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Intro:ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ತಿರುಕನ ಕನಸು ಕಾಣ್ತಾ ಇದ್ದಾರೆ- ಕೆ.ಎಸ್.ಈಶ್ವರಪ್ಪ.


ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಅಂತ ಸಿದ್ದರಾಮಯ್ಯನವರೇ ಅವರ ಚೇಲಗಳಿಂದ ಹೇಳಿಸುತ್ತಿದ್ದಾರೆ ಎಂದು ಬಿಜೆಪಿ‌ ಶಾಸಕ ಕೆ.ಎಸ್.ಈಶ್ವರಪ್ಪ ಗಂಭೀರ ಆರೋಪ ಮಾಡಿದ್ದಾರೆ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಡಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರು ಜೆಡಿಎಸ್ ಗೆ ಬೇಷರತ್ ಬೆಂಬಲ ನೀಡುತ್ತೆವೆ ಎಂದು ಹೇಳಿ ಈಗ ಪ್ರತಿ ದಿನ ಷರತ್ ಹಾಕ್ತಾ ಇದ್ದಾರೆ. ಸಿದ್ದರಾಮಯ್ಯ ಮತ್ತೆ ಸಿಎಂ ಟವಲ್ ಹಾಕುತ್ತಿದ್ದಾರೆ. ನಾವೇನೂ ಕಮ್ಮಿ ಅಂತ ಡಿ.ಕೆ.ಶಿವಕುಮಾರ್ ,ಪರಮೇಶ್ವರ್, ಎಂ.ಬಿ.ಪಾಟೀಲ್ ಸಹ ಟವಲ್ ಹಾಕ್ತಾ ಇದ್ದಾರೆ. ಸಿದ್ದರಾಮಯ್ಯ ಚೇಲಗಳಾದ ಡಾ.ಸುಧಾಕರ್, ಪರಮೇಶ್ವರ್ ನಾಯ್ಕ್ ರವರು ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂದು ಎಲ್ಲಾ ಕಡೆ ಹೇಳುತ್ತಾ ಬರುತ್ತಿದ್ದಾರೆ. ಹೀಗೆ ಇವರುಗಳ ಬಾಯಲ್ಲಿ ಹೇಳಿಸುತ್ತಾ ಇರುವುದು ಸಿದ್ದರಾಮಯ್ಯನವರೆ ಎಂದರು. ಸಂಮಿಶ್ರ ಸರ್ಕಾರವನ್ನು ಅತಂತ್ರ ಮಾಡುವ ಯತ್ನವನ್ನು ಕಾಂಗ್ರೆಸ್ ನವರೆ ಮಾಡ್ತಾ ಇದ್ದಾರೆ.


Body:ಕಾಂಗ್ರೆಸ್ ನಲ್ಲಿ‌ ಎರಡು ಗುಂಪುಗಳು ನೇರವಾಗಿ ಹೊಡೆದಾಟ ಮಾಡಿ ಕೊಳ್ಳುತ್ತಿವೆ. 23 ರ ಫಲಿತಾಂಶದ ನಂತ್ರ ಕಾಂಗ್ರೆಸ್ ನ ಬಡಿದಾಟ ಸ್ಟೋಟಗೊಳ್ಳುತ್ತದೆ ಎಂದರು. ಸರ್ಕಾರ ಬಂದಾಗಿನಿಂದ ಕಾಂಗ್ರೆಸ್ ನ ಆಂತರಿಕ ಗೊಂದಲ ಮುಂದುವರೆದಿದೆ. ಬಿಎಸ್ ವೈ ಸಿಎಂ ಆಗುವ ಹಗಲುಗನಸು ಕಾಣಲು ಕಾಣ್ತಾ ಇದ್ದು, ಇದಕ್ಕಾಗಿ ಆಪರೇಷನ್ ಕಮಲ ಮಾಡ್ತಾ ಇದ್ದಾರೆ ಅಂತ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಿಮಗೆ ಮಾನಮರ್ಯಾದೆ ಇದ್ದರೆ ಮತ್ತೆ ಸಿಎಂ‌ ಸಿದ್ದರಾಮಯ್ಯ ಚೇಲಗಳಿಂದ ಹೇಳಿಸುತ್ತಿರುವ ಸಿದ್ದರಾಮಯ್ಯ‌ ಹಾಗೂ ಅವರ ಚೇಲಗಳನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಿ ಕಾಂಗ್ರೆಸ್ ನಲ್ಲೂ ಸಹ ಸ್ವಲ್ಪ‌‌ ಶಿಸ್ತು ಉಳಿದಿದೆ ಎಂದು ತೋರಿಸಲಿ ಎಂದು‌ ಆಗ್ರಹಿಸಿದರು. ದಿನೇಶ್ ಗುಂಡೂರಾವ್ ಹಾಗೂ ಪರಮೇಶ್ವರ್ ಬಟ್ಟೆ ಹಾವುಗಳಾಗಿದ್ದಾರೆ ಎಂದು ಕಿಡಿಕಾರಿದರು.


Conclusion:ಎರಡು ಉಪ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ. ಇಬ್ಬರು ಪಕ್ಷೇತರರು ನಮ್ಮೂಂದಿಗೆ ಇದ್ದಾರೆ.ಫಲಿತಾಂಶದ ನಂತ್ರ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುತ್ತಾರೆ ಆಗ ನಾವು‌ ಸರ್ಕಾರ ರಚನೆ ಮಾಡುತ್ತೆವೆ ಯಡಿಯೂರಪ್ಪ‌ ಸಿಎಂ ಹಾಕ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.ಸಿದ್ದರಾಮಯ್ಯ ನಾನು ಸಿಎಂ ಆಗುತ್ತೆನೆ ಅಂತ ಹಗಲುಗನಸು ಕಾಣ್ತಾ ಇದ್ದಾರೆ. ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ, ರಾಹುಲ್‌ ಗಾಂಧಿ ಮದುವೆ ಆಗಲ್ಲ ಎಂದು ಪುನರ್ ಉಚ್ಚರಿಸಿದರು. ಆಪರೇಷನ್ ಜನಕ ಸಿದ್ದರಾಮಯ್ಯ, ಅವರು ಕಾಂಗ್ರೆಸ್ ಗೆ ಹೋಗುವಾಗ ಎಷ್ಟು ಹಣ ತೆಗೆದು ಕೊಂಡು ಹೋಗಿದ್ದರು ಎಂದು‌‌ ಸ್ಪಷ್ಟಪಡಿಸಲಿ ಎಂದರು.ಈ ವೇಳೆ ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ, ಉಪಮೇಯರ್ ಚನ್ನಬಸಪ್ಪ ಹಾಗೂ ಇತರರು ಹಾಜರಿದ್ದರು.

ಬೈಟ್; ಕೆ.ಎಸ್.ಈಶ್ವರಪ್ಪ. ಶಾಸಕರು.

ಕಿರಣ್ ಕುಮಾರ್. ಶಿವಮೊಗ್ಗ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.