ETV Bharat / state

ವಚನಕಾರ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

author img

By

Published : Jan 15, 2020, 6:39 AM IST

ಶಿವಮೊಗ್ಗದಲ್ಲಿ ಶಿವಯೋಗಿ ಸಿದ್ದರಾಮೇಶ್ವರರ ಜಯಂತಿಯನ್ನು ಆಚರಿಸಲಾಯಿತು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಯೋಜನೆ.

Siddarameshwara Jayanti in Shivayogi
ವಚನಕಾರ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

ಶಿವಮೊಗ್ಗ: ಸಿದ್ದರಾಮೇಶ್ವರವರು ಕಾಯಕದ ಜೊತೆ ಸಾಹಿತ್ಯಕ್ಕೂ ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಸಹ್ಯಾದ್ರಿ ಕಾಲೇಜಿನ ಉಪನ್ಯಾಸಕಿ ಡಾ.ಶುಭಾ ಮರವಂತೆ ಹೇಳಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನಡೆದ ಶಿವಶರಣ ಹಾಗೂ ವಚನಕಾರ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ವಚನಕಾರ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

ಶಾಸ್ತ್ರ, ಪುರಾಣ ಮತ್ತು ವೇದ ಹಾಗೂ ತರ್ಕ ವಿರೋಧಿಸಿ ಶಿವಯೋಗಿ ಸಿದ್ದರಾಮೇಶ್ವರರು ಜನರಿಗೆ ಪ್ರಯೋಜನಕಾರಿಯಾಗುವ ಕೆರೆ, ಕಟ್ಟೆ, ಬಾವಿಗಳ ನಿರ್ಮಾಣಕ್ಕೆ ಮುಂದಾದವರು. ಕಲ್ಯಾಣಾಭಿವೃದ್ಧಿಗೆ ಶ್ರಮಿಸಿದವರು ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಜಿಲ್ಲಾ ಪಂಚಾಯತ್ ಸದಸ್ಯ ವೀರಭದ್ರ ಪೂಜಾರಿ ಮಾತನಾಡಿ 12ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಗಮನಾರ್ಹವಾದದು. ಅಸಮಾನತೆ, ವರ್ಣ, ಜಾತಿ, ಲಿಂಗಬೇಧವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದವರು. ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಮೂರನೇ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘ ಅಧ್ಯಕ್ಷ ಎಸ್.ರವಿಕುಮಾರ್, ಮಹಾನಗರ ಪಾಲಿಕೆ ಉಪ ಮಹಾಪೌರರು ಎಸ್.ಎನ್.ಚನ್ನಬಸಪ್ಪ, ತಾ.ಪಂ. ಅಧ್ಯಕ್ಷೆ ಗೀತಾ ಜಯಶೇಖರ್, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಇದ್ದರು.

ಶಿವಮೊಗ್ಗ: ಸಿದ್ದರಾಮೇಶ್ವರವರು ಕಾಯಕದ ಜೊತೆ ಸಾಹಿತ್ಯಕ್ಕೂ ಬಹುದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಸಹ್ಯಾದ್ರಿ ಕಾಲೇಜಿನ ಉಪನ್ಯಾಸಕಿ ಡಾ.ಶುಭಾ ಮರವಂತೆ ಹೇಳಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನಡೆದ ಶಿವಶರಣ ಹಾಗೂ ವಚನಕಾರ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ವಚನಕಾರ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ

ಶಾಸ್ತ್ರ, ಪುರಾಣ ಮತ್ತು ವೇದ ಹಾಗೂ ತರ್ಕ ವಿರೋಧಿಸಿ ಶಿವಯೋಗಿ ಸಿದ್ದರಾಮೇಶ್ವರರು ಜನರಿಗೆ ಪ್ರಯೋಜನಕಾರಿಯಾಗುವ ಕೆರೆ, ಕಟ್ಟೆ, ಬಾವಿಗಳ ನಿರ್ಮಾಣಕ್ಕೆ ಮುಂದಾದವರು. ಕಲ್ಯಾಣಾಭಿವೃದ್ಧಿಗೆ ಶ್ರಮಿಸಿದವರು ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಜಿಲ್ಲಾ ಪಂಚಾಯತ್ ಸದಸ್ಯ ವೀರಭದ್ರ ಪೂಜಾರಿ ಮಾತನಾಡಿ 12ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ದರಾಮೇಶ್ವರರ ಕೊಡುಗೆ ಗಮನಾರ್ಹವಾದದು. ಅಸಮಾನತೆ, ವರ್ಣ, ಜಾತಿ, ಲಿಂಗಬೇಧವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದವರು. ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಮೂರನೇ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನಕುಮಾರ್, ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘ ಅಧ್ಯಕ್ಷ ಎಸ್.ರವಿಕುಮಾರ್, ಮಹಾನಗರ ಪಾಲಿಕೆ ಉಪ ಮಹಾಪೌರರು ಎಸ್.ಎನ್.ಚನ್ನಬಸಪ್ಪ, ತಾ.ಪಂ. ಅಧ್ಯಕ್ಷೆ ಗೀತಾ ಜಯಶೇಖರ್, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಇದ್ದರು.

Intro:ಶಿವಮೊಗ್ಗ,

ಕಾಯಕದ ಜೊತೆ ಸಾಹಿತ್ಯಕ್ಕೂ ಬಹು ದೊಡ್ಡ ಕೊಡುಗೆಯನ್ನು ಸಿದ್ದರಾಮೇಶ್ವರವರು ನೀಡಿದ್ದಾರೆ ಎಂದು ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜು ಉಪನ್ಯಾಸಕಿ ಡಾ. ಶುಭಾ ಮರವಂತೆ ಹೇಳಿದರು.
ಅವರು ಇಂದು ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಕುವೆಂಪು ರಂಗಮAದಿರದಲ್ಲಿ ಏರ್ಪಡಿಸಲಾದ ಶಿವಶರಣ ಹಾಗೂ ವಚನಕಾರ ೮೪೭ನೇ ಶ್ರೀ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.
ಆ ಕಾಲದಲ್ಲೇ ಶಾಸ್ತç ಪುರಾಣ ಮತ್ತು ವೇದ ಹಾಗೂ ತರ್ಕ ಇವುಗಳನ್ನು ವಿರೋಧಿಸಿ ಶಿವಯೋಗಿ ಸಿದ್ದರಾಮೇಶ್ವರವರು ಜನರಿಗೆ ಪ್ರಯೋಜನಕಾರಿಯಾಗುವ ಕೆರೆ, ಕಟ್ಟೆ, ಬಾವಿಗಳ ನಿರ್ಮಾಣಕ್ಕೆ ಮುಂದಾಗಿ ಜನರ ಕಲ್ಯಾಣಾಭಿವೃದ್ಧಿಗೆ ಶ್ರಮಿಸಿದವರು ಎಂದರು.
ಶಿವಯೋಗಿ ಸಿದ್ಧರಾಮೇಶ್ವರರು ೬೮ ಸಾವಿರ ವಚನಗಳನ್ನು ಮಾತ್ರ ಲಭಿಸಿವೆ. ಬಸವಣ್ಣ ಹಾಗೂ ಸಿದ್ಧರಾಮೇಶ್ವರ ಶಿವಯೋಗಿಗಳು ಶ್ರೇಷ್ಠ ವಚನಕಾರರಾಗಿದ್ದಾರೆ. ಬಸವಣ್ಣ ರಾಜಕೀಯ ಮತ್ತು ಸಾಮಾಜಿಕವಾಗಿ ಹೆಚ್ಚು ಒತ್ತು ಕೊಡುತ್ತಿದ್ದರು. ಸಿದ್ಧರಾಮೇಶ್ವರರು ಸಮಾಜ ಸೇವೆಯಲ್ಲಿ ತೃಪ್ತಿ ಪಡೆಯುತ್ತಿದ್ದರು ಎಂದರು. ಆಧ್ಯಾತ್ಮ ಪರಂಪರೆ ಹೊಂದಿರುವ ದೇಶದಲ್ಲಿ ದಿವ್ಯಜ್ಞಾನಿಗಳನ್ನು ಮುಂದಿನ ಜನಾಂಗಕ್ಕೆ ಪರಿಚಯಿಸಲು ಅವರು ಚಿಂತನೆಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಜಿಲ್ಲಾ ಪಂಚಾಯತ್ ಸದಸ್ಯ ವೀರಭದ್ರ ಪೂಜಾರಿ ಮಾತನಾಡಿ ೧೨ನೇ ಶತಮಾನದಲ್ಲಿನ ಸಾಮಾಜಿಕ ಕ್ರಾಂತಿಗೆ ಶಿವಯೋಗಿ ಸಿದ್ಧರಾಮೇಶ್ವರರ ಕೊಡುಗೆ ಗಮನಾರ್ಹವಾದದು. ಅವರು ಅಸಮಾನತೆ, ವರ್ಣ, ಜಾತಿ, ಲಿಂಗಭೇಧವನ್ನು ತೊಡೆದು ಹಾಕುವ ಕೆಲಸವನ್ನು ವಚನಗಳ ಮೂಲಕ ಮಾಡಿದವರು. ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪದ ಮೂರನೇ ಅಧ್ಯಕ್ಷರಾಗಿ ಅವರು ಸಮಾಜದಲ್ಲಿ ಕೆಲಸ ಮಾಡಿದ್ದಾರೆ ಎಂದರು.

ವಿಧಾನ ಪರಿಷತ್ ಸದಸ್ಯರುಗಳಾದ ಆರ್.ಪ್ರಸನ್ನಕುಮಾರ್, ಜಿಲ್ಲಾ ಭೋವಿ ವಿದ್ಯಾವರ್ಧಕ ಸಂಘ ಅಧ್ಯಕ್ಷ ಎಸ್. ರವಿಕುಮಾರ್, ಮಹಾನಗರ ಪಾಲಿಕೆ ಉಪಮಹಾಪೌರರು ಎಸ್.ಎನ್ ಚನ್ನಬಸಪ್ಪ, ತಾ.ಪಂ. ಅಧ್ಯಕ್ಷೆ ಗೀತಾಜಯಶೇಖರ್, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಪೊಲೀಸ್ ಅಧೀಕ್ಷಕ ಕೆ.ಎಂ. ಶಾಂತರಾಜು, ಜಿಲ್ಲಾ ಉಪ ವಿಭಾಗಧಿಕಾರಿ ಪ್ರಕಾಶ್, ಜಿಲ್ಲಾ ಪಂಚಾಯತ್ ಸದಸ್ಯ ವೀರ ರಾಜು, ಜಿಲ್ಲಾ ಪಂಚಾಯತ್ ಸದಸ್ಯೆ ಸುರೇಖಾ ಮುರಳೀಧರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್. ಉಮೇಶ್ , ಮತ್ತು ಬೋವಿ ಸಮೂದಾಯದ ದಾಸಪ್ಪ ಹಾಗೂ ಹಿರಿಯರು ಆಡಳಿತ ಮಂಡಳಿಯ ನಿರ್ದೇಶಕರು , ಮಹಾನಗರ ಪಾಲಿಕೆ ಸದಸ್ಯರು ಉಪಸ್ಥಿತರಿರುವರು.
ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.