ETV Bharat / state

ಶಿವಮೊಗ್ಗ ಜಿಲ್ಲೆಯಾದ್ಯಂತ ಮೊಬೈಲ್ ನೆಟ್‍ವರ್ಕ್ ಸಮಸ್ಯೆ ಬಗೆಹರಿಸಲು ಕ್ರಮ: ಸಂಸದ - ಶಿವಮೊಗ್ಗ ಜಿಲ್ಲೆಯಾದ್ಯಂತ ಮೊಬೈಲ್ ನೆಟ್‍ವರ್ಕ್ ಸಮಸ್ಯೆ ಬಗೆಹರಿಸಲು ಕ್ರಮ

ಶಿವಮೊಗ್ಗ ಜಿಲ್ಲೆಯ ಬಹುತೇಕ ಭಾಗಗಳು ಬೆಟ್ಟ, ಗುಡ್ಡ ಪ್ರದೇಶಗಳಿಂದ ಕೂಡಿದ್ದು, ಮೊಬೈಲ್​ ನೆಟ್​ವರ್ಕ್​ ಸಮಸ್ಯೆ ಹೇರಳವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಲೆಯಾದ್ಯಂತ ಟವರ್​​ ಹಾಗೂ ಮೊಬೈಲ್​ ನೆಟ್​ವರ್ಕ್​ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದ್ದು, ಈ ಕೂಡಲೇ ನೆಟ್​ವರ್ಕ್​ಗೆ ಸಂಬಂಧಪಟ್ಟಂತೆ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.

mobile network problem
ಮೊಬೈಲ್ ನೆಟ್‍ವರ್ಕ್ ಆಪರೇಟರ್​ಗಳ ಸಭೆ
author img

By

Published : Jul 22, 2020, 2:30 AM IST

ಶಿವಮೊಗ್ಗ: ಜಿಲ್ಲೆಯಾದ್ಯಂತ ಮೊಬೈಲ್ ನೆಟ್‍ವರ್ಕ್ ಸಂಪರ್ಕ ಕಲ್ಪಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ಬಾಕಿ ಉಳಿದಿರುವ ಟವರ್ ನಿರ್ಮಾಣ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಸೂಚನೆ ನೀಡಿದರು.

ಸಂಪರ್ಕ ವ್ಯವಸ್ಥೆಯನ್ನು ಉತ್ತಮಪಡಿಸುವ ಉದ್ದೇಶದಿಂದ ಕರೆಯಲಾಗಿದ್ದ ಮೊಬೈಲ್ ನೆಟ್‍ವರ್ಕ್ ಆಪರೇಟರ್​ಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 241 ಬಿಎಸ್‍ಎನ್‍ಎಲ್ ಟವರ್​​ಗಳಿದ್ದು, ಖಾಸಗಿ ಸಂಸ್ಥೆಗಳ ಜೊತೆ 37 ಟವರ್​​ಗಳನ್ನು ಹಂಚಿಕೊಳ್ಳಲಾಗಿದೆ. ಬಿಎಸ್‍ಎನ್‍ಎಲ್ ಟವರ್​ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು, ಫ್ರೀಕ್ವೆನ್ಸಿ ಉತ್ತಮಪಡಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಜಿಲ್ಲೆಯಲ್ಲಿ ಬಿಎಸ್‍ಎನ್‍ಎಲ್ ಸಂಪರ್ಕ ಜಾಲವನ್ನು ಉತ್ತಮಪಡಿಸಲು ಅಗತ್ಯವಿರುವ ನೆರವನ್ನು ಒದಗಿಸುವ ಕುರಿತು ಬೆಂಗಳೂರಿನಲ್ಲಿ ಬಿಎಸ್‍ಎನ್‍ಎಲ್ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಈ ಹಿನ್ನೆಲೆಯಲ್ಲಿ ಸಂಪೂರ್ಣ ಮಾಹಿತಿಯನ್ನು ಒದಗಿಸುವಂತೆ ಅವರು ತಿಳಿಸಿದರು.

ಮೊಬೈಲ್ ನೆಟ್‍ವರ್ಕ್ ಆಪರೇಟರ್​ಗಳ ಸಭೆ

ಕೊರೊನಾದಿಂದಾಗಿ ಹಲವಾರು ಮಂದಿ ವರ್ಕ್ ಫ್ರಮ್ ಹೋಂ ಆಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳು ನಡೆಯುತ್ತಿವೆ. ಈ ಹಿನ್ನೆಲೆ, ಹಲವಾರು ಕಡೆಗಳಿಂದ ನೆಟ್‍ವರ್ಕ್ ಸಮಸ್ಯೆ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಈ ನಿಟ್ಟಿನಲ್ಲಿ ಸಂಪರ್ಕಜಾಲವನ್ನು ಉತ್ತಮಪಡಿಸಿ ಗುಣಮಟ್ಟದ ಸೇವೆಯನ್ನು ಒದಗಿಸಲು ತುರ್ತು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಅವರು ಹೇಳಿದರು.

ಮೊಬೈಲ್ ನೆಟ್‍ವರ್ಕ್ ಇಲ್ಲದ ಕಡೆಗಳಲ್ಲಿ ಟವರ್​​ಗಳನ್ನು ಸ್ಥಾಪಿಸುವ ಕುರಿತಾದ ಸಾಧ್ಯತೆಗಳನ್ನು ಪರಿಶೀಲಿಸಲು ಖಾಸಗಿ ಸಂಸ್ಥೆಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಜಿಯೋ ಸಂಸ್ಥೆ ಅಂತಹ 22ಕಡೆಗಳಲ್ಲಿ ಟವರ್ ನಿರ್ಮಿಸುವುದು ಬಾಕಿಯಿದ್ದು, ಏರ್​ಟೆಲ್​​ 42ಕಡೆಗಳಲ್ಲಿ ಟವರ್ ನಿರ್ಮಿಸಬೇಕಾಗಿದೆ. ಈ ಸಂಸ್ಥೆಗಳಿಗೆ ಟವರ್ ನಿರ್ಮಾಣಕ್ಕೆ ಸ್ಥಳ ಒದಗಿಸಲು ಅಡೆತಡೆಗಳನ್ನು ಜಿಲ್ಲಾಧಿಕಾರಿ ಬಗೆಹರಿಸಲಿದ್ದು, ಆದಷ್ಟು ಬೇಗನೆ ಟವರ್ ನಿರ್ಮಾಣ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು.

ಶಿವಮೊಗ್ಗ: ಜಿಲ್ಲೆಯಾದ್ಯಂತ ಮೊಬೈಲ್ ನೆಟ್‍ವರ್ಕ್ ಸಂಪರ್ಕ ಕಲ್ಪಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ಬಾಕಿ ಉಳಿದಿರುವ ಟವರ್ ನಿರ್ಮಾಣ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಸೂಚನೆ ನೀಡಿದರು.

ಸಂಪರ್ಕ ವ್ಯವಸ್ಥೆಯನ್ನು ಉತ್ತಮಪಡಿಸುವ ಉದ್ದೇಶದಿಂದ ಕರೆಯಲಾಗಿದ್ದ ಮೊಬೈಲ್ ನೆಟ್‍ವರ್ಕ್ ಆಪರೇಟರ್​ಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 241 ಬಿಎಸ್‍ಎನ್‍ಎಲ್ ಟವರ್​​ಗಳಿದ್ದು, ಖಾಸಗಿ ಸಂಸ್ಥೆಗಳ ಜೊತೆ 37 ಟವರ್​​ಗಳನ್ನು ಹಂಚಿಕೊಳ್ಳಲಾಗಿದೆ. ಬಿಎಸ್‍ಎನ್‍ಎಲ್ ಟವರ್​ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು, ಫ್ರೀಕ್ವೆನ್ಸಿ ಉತ್ತಮಪಡಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಜಿಲ್ಲೆಯಲ್ಲಿ ಬಿಎಸ್‍ಎನ್‍ಎಲ್ ಸಂಪರ್ಕ ಜಾಲವನ್ನು ಉತ್ತಮಪಡಿಸಲು ಅಗತ್ಯವಿರುವ ನೆರವನ್ನು ಒದಗಿಸುವ ಕುರಿತು ಬೆಂಗಳೂರಿನಲ್ಲಿ ಬಿಎಸ್‍ಎನ್‍ಎಲ್ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಈ ಹಿನ್ನೆಲೆಯಲ್ಲಿ ಸಂಪೂರ್ಣ ಮಾಹಿತಿಯನ್ನು ಒದಗಿಸುವಂತೆ ಅವರು ತಿಳಿಸಿದರು.

ಮೊಬೈಲ್ ನೆಟ್‍ವರ್ಕ್ ಆಪರೇಟರ್​ಗಳ ಸಭೆ

ಕೊರೊನಾದಿಂದಾಗಿ ಹಲವಾರು ಮಂದಿ ವರ್ಕ್ ಫ್ರಮ್ ಹೋಂ ಆಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳು ನಡೆಯುತ್ತಿವೆ. ಈ ಹಿನ್ನೆಲೆ, ಹಲವಾರು ಕಡೆಗಳಿಂದ ನೆಟ್‍ವರ್ಕ್ ಸಮಸ್ಯೆ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಈ ನಿಟ್ಟಿನಲ್ಲಿ ಸಂಪರ್ಕಜಾಲವನ್ನು ಉತ್ತಮಪಡಿಸಿ ಗುಣಮಟ್ಟದ ಸೇವೆಯನ್ನು ಒದಗಿಸಲು ತುರ್ತು ಕ್ರಮ ಕೈಗೊಳ್ಳಬೇಕಾಗಿದೆ ಎಂದು ಅವರು ಹೇಳಿದರು.

ಮೊಬೈಲ್ ನೆಟ್‍ವರ್ಕ್ ಇಲ್ಲದ ಕಡೆಗಳಲ್ಲಿ ಟವರ್​​ಗಳನ್ನು ಸ್ಥಾಪಿಸುವ ಕುರಿತಾದ ಸಾಧ್ಯತೆಗಳನ್ನು ಪರಿಶೀಲಿಸಲು ಖಾಸಗಿ ಸಂಸ್ಥೆಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಜಿಯೋ ಸಂಸ್ಥೆ ಅಂತಹ 22ಕಡೆಗಳಲ್ಲಿ ಟವರ್ ನಿರ್ಮಿಸುವುದು ಬಾಕಿಯಿದ್ದು, ಏರ್​ಟೆಲ್​​ 42ಕಡೆಗಳಲ್ಲಿ ಟವರ್ ನಿರ್ಮಿಸಬೇಕಾಗಿದೆ. ಈ ಸಂಸ್ಥೆಗಳಿಗೆ ಟವರ್ ನಿರ್ಮಾಣಕ್ಕೆ ಸ್ಥಳ ಒದಗಿಸಲು ಅಡೆತಡೆಗಳನ್ನು ಜಿಲ್ಲಾಧಿಕಾರಿ ಬಗೆಹರಿಸಲಿದ್ದು, ಆದಷ್ಟು ಬೇಗನೆ ಟವರ್ ನಿರ್ಮಾಣ ಪೂರ್ಣಗೊಳಿಸಬೇಕು ಎಂದು ಅವರು ಸೂಚಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.