ETV Bharat / state

ಸಾಲ ಮರುಪಾವತಿ ಮಂದೂಡಿಕೆ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿ ಕರೆ

author img

By

Published : Sep 30, 2019, 6:27 PM IST

ಸಾಲಗಳ ಪುನರ್ ರಚನೆ ಅಥವಾ ಮರುಪಾವತಿಗೆ ಕಂತುಗಳ ಮುಂದೂಡಿಕೆಗೆ ಸರ್ಕಾರ ಅವಕಾಶ ಕಲ್ಪಿಸಿದ್ದು, ಜನರು ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಶಿವಕುಮಾರ್ ಕೆ.ಬಿ.ಕರೆ ನೀಡಿದರು.

ಸಾಲಗಳ ಪುನರ್ ರಚನೆ

ಶಿವಮೊಗ್ಗ: ನೆರೆ ಬಾಧಿತ ಪ್ರದೇಶಗಳಲ್ಲಿ ಸಾರ್ವಜನಿಕರು ಬ್ಯಾಂಕ್‍ಗಳಲ್ಲಿ ಪಡೆದ ಸಾಲಗಳ ಪುನರ್ ರಚನೆ ಅಥವಾ ಮರುಪಾವತಿಗೆ ಕಂತುಗಳ ಮುಂದೂಡಿಕೆಗೆ ಸರ್ಕಾರ ಅವಕಾಶ ಕಲ್ಪಿಸಿದ್ದು, ಜನರು ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಶಿವಕುಮಾರ್ ಕೆ.ಬಿ. ಕರೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸರ್ಕಾರಿ ಯೋಜನೆಗಳ ಸಾಲ ಸೌಲಭ್ಯ ನೀಡಿಕೆಯಲ್ಲಿನ ಬೆಳವಣಿಗೆ ಹಾಗೂ ವಿಳಂಬದ ಕುರಿತು ನಡೆದ ಸಭೆಯಲ್ಲಿ ಜಿಲ್ಲೆಯ ವಿವಿಧ ಬ್ಯಾಂಕ್ ಅಧಿಕಾರಿಗಳೊಂದಿಗೆ ಅವರು ಚರ್ಚಿಸಿ ಕಂತುಗಳ ಮುಂದೂಡಿಕೆ ಹಾಗೂ ಈ ಕುರಿತು ಹೆಚ್ಚಿನ ಮಾಹಿತಿಯನ್ನು ಬ್ಯಾಂಕ್ ಅಧಿಕಾರಿಗಳು ಸಾರ್ವಜನಿಕರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದರು.

ಸಾಲದ ಕಂತುಗಳನ್ನು ಮುಂದೂಡುವುದರ ಜೊತೆಗೆ ಬೆಳೆದ ಬೆಳೆಗೆ ಎಕರೆವಾರು ನಿಗದಿಪಡಿಸಿದ ಸಾಲವನ್ನು ಸಹ ರೈತರು ಪಡೆಯಬಹುದಾಗಿದ್ದು, ಈ ಕುರಿತು ಬ್ಯಾಂಕ್ ಸಿಬ್ಬಂದಿ ರೈತರಿಗೆ ಸರಿಯಾದ ಮಾಹಿತಿ ನೀಡಬೇಕು. ಈ ವಿಷಯದಲ್ಲಿ ವಿಳಂಬ ಮಾಡದಂತೆ ಅವರು ಸೂಚಿಸಿದರು.

ರೈತರು ಸಂಕಷ್ಟಕ್ಕೆ ಸಿಲುಕಿರುವ ಈ ಸಂದರ್ಭದಲ್ಲಿ ಸಾಲ ಮರುಪಾವತಿಗೆ ಕಿರುಕುಳ ನೀಡುವುದು ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಕುರಿತು ದೂರುಗಳು ಬರುತ್ತಿದ್ದು, ಈ ಕುರಿತು ಬ್ಯಾಂಕ್ ಅಧಿಕಾರಿಗಳು ರೈತರಿಗೆ ತೊಂದರೆ ನೀಡುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದರು.

ಶಿವಮೊಗ್ಗ: ನೆರೆ ಬಾಧಿತ ಪ್ರದೇಶಗಳಲ್ಲಿ ಸಾರ್ವಜನಿಕರು ಬ್ಯಾಂಕ್‍ಗಳಲ್ಲಿ ಪಡೆದ ಸಾಲಗಳ ಪುನರ್ ರಚನೆ ಅಥವಾ ಮರುಪಾವತಿಗೆ ಕಂತುಗಳ ಮುಂದೂಡಿಕೆಗೆ ಸರ್ಕಾರ ಅವಕಾಶ ಕಲ್ಪಿಸಿದ್ದು, ಜನರು ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಶಿವಕುಮಾರ್ ಕೆ.ಬಿ. ಕರೆ ನೀಡಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸರ್ಕಾರಿ ಯೋಜನೆಗಳ ಸಾಲ ಸೌಲಭ್ಯ ನೀಡಿಕೆಯಲ್ಲಿನ ಬೆಳವಣಿಗೆ ಹಾಗೂ ವಿಳಂಬದ ಕುರಿತು ನಡೆದ ಸಭೆಯಲ್ಲಿ ಜಿಲ್ಲೆಯ ವಿವಿಧ ಬ್ಯಾಂಕ್ ಅಧಿಕಾರಿಗಳೊಂದಿಗೆ ಅವರು ಚರ್ಚಿಸಿ ಕಂತುಗಳ ಮುಂದೂಡಿಕೆ ಹಾಗೂ ಈ ಕುರಿತು ಹೆಚ್ಚಿನ ಮಾಹಿತಿಯನ್ನು ಬ್ಯಾಂಕ್ ಅಧಿಕಾರಿಗಳು ಸಾರ್ವಜನಿಕರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದರು.

ಸಾಲದ ಕಂತುಗಳನ್ನು ಮುಂದೂಡುವುದರ ಜೊತೆಗೆ ಬೆಳೆದ ಬೆಳೆಗೆ ಎಕರೆವಾರು ನಿಗದಿಪಡಿಸಿದ ಸಾಲವನ್ನು ಸಹ ರೈತರು ಪಡೆಯಬಹುದಾಗಿದ್ದು, ಈ ಕುರಿತು ಬ್ಯಾಂಕ್ ಸಿಬ್ಬಂದಿ ರೈತರಿಗೆ ಸರಿಯಾದ ಮಾಹಿತಿ ನೀಡಬೇಕು. ಈ ವಿಷಯದಲ್ಲಿ ವಿಳಂಬ ಮಾಡದಂತೆ ಅವರು ಸೂಚಿಸಿದರು.

ರೈತರು ಸಂಕಷ್ಟಕ್ಕೆ ಸಿಲುಕಿರುವ ಈ ಸಂದರ್ಭದಲ್ಲಿ ಸಾಲ ಮರುಪಾವತಿಗೆ ಕಿರುಕುಳ ನೀಡುವುದು ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಕುರಿತು ದೂರುಗಳು ಬರುತ್ತಿದ್ದು, ಈ ಕುರಿತು ಬ್ಯಾಂಕ್ ಅಧಿಕಾರಿಗಳು ರೈತರಿಗೆ ತೊಂದರೆ ನೀಡುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದರು.

Intro:ಶಿವಮೊಗ್ಗ,

ಮರುಪಾವತಿ ಮಂದೂಡಿಕೆ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿ ಕರೆ

ನೆರೆ ಬಾಧಿತ ಪ್ರದೇಶಗಳಲ್ಲಿ ಸಾರ್ವಜನಿಕರು ಬ್ಯಾಂಕ್‍ಗಳಲ್ಲಿ ಪಡೆದ ಸಾಲಗಳ ಪುನರ್ ರಚನೆ ಅಥವಾ ಮರುಪಾವತಿಗೆ ಕಂತುಗಳ ಮುಂದೂಡಿಕೆಗೆ ಸರ್ಕಾರ ಅವಕಾಶ ಕಲ್ಪಿಸಿದ್ದು, ಜನರು ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಶಿವಕುಮಾರ್ ಕೆ.ಬಿ ಕರೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸರ್ಕಾರಿ ಯೋಜನೆಗಳ ಸಾಲ ಸೌಲಭ್ಯ ನೀಡಿಕೆಯಲ್ಲಿನ ಬೆಳವಣಿಗೆ ಹಾಗೂ ವಿಳಂಬದ ಕುರಿತು ನಡೆದ ಸಭೆಯಲ್ಲಿ ಜಿಲ್ಲೆಯ ವಿವಿಧ ಬ್ಯಾಂಕ್ ಅಧಿಕಾರಿಗಳೊಂದಿಗೆ ಅವರು ಚರ್ಚಿಸಿ ಕಂತುಗಳ ಮುಂದೂಡಿಕೆ ಹಾಗೂ ಈ ಕುರಿತು ಹೆಚ್ಚಿನ ಮಾಹಿತಿಯನ್ನು ಬ್ಯಾಂಕ್ ಅಧಿಕಾರಿಗಳು ಸಾರ್ವಜನಿಕರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದರು.
ಸಾಲದ ಕಂತುಗಳನ್ನು ಮುಂದೂಡುವುದರ ಜೊತೆಗೆ ಬೆಳೆದ ಬೆಳೆಗೆ ಎಕರೆವಾರು ನಿಗದಿಪಡಿಸಿದ ಸಾಲವನ್ನು ಸಹ ರೈತರು ಪಡೆಯಬಹುದಾಗಿದ್ದು, ಈ ಕುರಿತು ಬ್ಯಾಂಕ್ ಸಿಬ್ಬಂದಿಗಳು ರೈತರಿಗೆ ಸರಿಯಾದ ಮಾಹಿತಿಯನ್ನು ನೀಡಬೇಕು. ಈ ವಿಷಯದಲ್ಲಿ ತಾತ್ಸಾರ ಹಾಗೂ ವಿಳಂಬ ಮಾಡದಂತೆ ಅವರು ಸೂಚಿಸಿದರು.
ರೈತರು ಸಂಕಷ್ಟಕ್ಕೆ ಸಿಲುಕಿರುವ ಈ ಸಂದರ್ಭದಲ್ಲಿ ಸಾಲ ಮರುಪಾವತಿಗೆ ಕಿರುಕುಳ ನೀಡುವುದು ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಕುರಿತು ದೂರುಗಳು ಬರುತ್ತಿದ್ದು, ಈ ಕುರಿತು ಬ್ಯಾಂಕ್ ಅಧಿಕಾರಿಗಳು ರೈತರಿಗೆ ತೊಂದರೆ ನೀಡುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದರು.
ಜಿಲ್ಲೆಯ ವಿವಿಧ ಭಾಗಗಳಲ್ಲಿ ಮುದ್ರಾ, ಪ್ರಧಾನಮಂತ್ರಿ ಜನ್ ಧನ್, ಪ್ರಧಾನಮಂತ್ರಿ ಅವಾಸ್ ಯೋಜನೆ, ಗ್ರೀನ್ ಅಕೌಂಟ್ ಯೋಜನೆಗಳಡಿ ನೀಡಲಾದ ಸಾಲದಲ್ಲಿ ಸಾಧಿಸಿದ ಪ್ರಗತಿ ಹಾಗೂ ಸಾಧಿಸಬೇಕಾದ ಪ್ರಗತಿಯನ್ನು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಬ್ಯಾಂಕ್ ವ್ಯವಹಾರದಲ್ಲಿ ಆಧಾರ್ ತಂತ್ರಾಂಶ ಹಾಗೂ ಪಿಂಚಣಿಯನ್ನು ತಲುಪಿಸುವಲ್ಲಿ ತಂತ್ರಾಂಶದ ತೊಂದರೆಗಳನ್ನು ಬಗೆಹರಿಸಿಕೊಳ್ಳಲು ಸರಿಯಾದ ನಿರ್ಧಾರಗಳನ್ನು ಕೈಗೊಳ್ಳಬೇಕು. ಆಧಾರ್ ತಂತ್ರಾಂಶದ ತೊಂದರೆಗಳನ್ನು ಬಗೆಹರಿಸಲು ಸೇವಾ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸಬೇಕು ಹಾಗೂ ಸಾರ್ವಜನಿಕರಿಗೆ ತಿಳಿಯುವಂತೆ ಸೇವಾ ಕೇಂದ್ರಗಳಲ್ಲಿ ಕನ್ನಡದ ನಾಮ ಫಲಕಗಳನ್ನು ಅಳವಡಿಸುವಂತೆ ಅವರು ತಿಳಿಸಿದರು.
ಕೆನರಾ ಬ್ಯಾಂಕ್ ಎಜಿಎಂ ರಾಘವೇಂದ್ರ ರಾವ್, ಆರ್‍ಬಿಐ ಎಜಿಎಂ ರಾಜ್ ಗೋಪಾಲ್ ಬಿ, ನಬಾರ್ಡ್ ಡಿಡಿಎಂ ರವಿ, ಎಲ್‍ಡಿಡಿಎಂ ಸೋಲೋಮನ್ ಮೆನೆಜೆಸ್ ಉಪಸ್ಥಿತರಿದ್ದರು.

ಭೀಮಾನಾಯ್ಕ ಎಸ್ ಶಿವಮೊಗ್ಗBody:ಭೀಮಾನಾಯ್ಕ ಎಸ್ ಶಿವಮೊಗ್ಗConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.