ಶಿವಮೊಗ್ಗ: ಸರ್ಕಾರದ ಮಹತ್ತರ ಯೋಜನೆ ನಿರಂತರ ಜ್ಯೋತಿಯ ಕಾಮಗಾರಿಗಳು ವಿಳಂಬವಾಗುತ್ತಿದೆ ಎಂದು ಆರೋಪಿಸಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ವೇದ ವಿಜಯಕುಮಾರ್ ನೇತೃತ್ವದಲ್ಲಿ ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ಅವರಿಗೆ ಮನವಿ ಸಲ್ಲಿಸಲಾಗಿದೆ.
ಶಿವಮೊಗ್ಗ ತಾಲೂಕಿನ ಹಸೂಡಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮತ್ತು ತಾಲೂಕಿನಾದ್ಯಂತ ನಿರಂತರ ಜ್ಯೋತಿ ಯೋಜನೆ ಕಾಮಗಾರಿ ಆರಂಭಗೊಂಡು ಒಂದು ವರ್ಷ ಕಳೆದರೂ ಕೂಡ ಇವರೆಗೂ ಪೂರ್ಣಗೊಂಡಿಲ್ಲ. ಅಲ್ಲದೇ ಕೆಲವು ಕಡೆ ವಿದ್ಯುತ್ ಸರಬರಾಜು ಮಾಡುವ ಟ್ರಾನ್ಸ್ಫಾರ್ಮಾರ್ಗಳನ್ನು ರಸ್ತೆಯಂಚಿನಲ್ಲಿಯೇ ಅಳವಡಿಸಿರುವುದರಿಂದ ಓಡಾಡುವುದೂ ಕಷ್ಟವಾಗಿದೆ ಎಂದು ತಿಳಿಸಿದ್ದಾರೆ.
ಈ ಯೋಜನೆಯ ಕಾಮಗಾರಿಗಳನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಬೇಕು. ಮತ್ತು ರಸ್ತೆ ಅಂಚಿನಲ್ಲಿರುವ ವಿದ್ಯುತ್ ಕಂಬಗಳನ್ನು ತಕ್ಷಣವೇ ತೆಗೆದು ದೂರದಲ್ಲಿ ಅಳವಡಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.